Homeಕರ್ನಾಟಕಎಲ್ಲಾ ಅವ್ರೆ ಸ್ವಾಮಿ, ಗಿಜಿಗಿಜಿ ಅಂತಾರೆ - ಕೊರೊನಾ ರೋಗಿಗಳ ಕುರಿತು ಸಚಿವ ಸೋಮಣ್ಣ ವಿವಾದಾತ್ಮಕ...

ಎಲ್ಲಾ ಅವ್ರೆ ಸ್ವಾಮಿ, ಗಿಜಿಗಿಜಿ ಅಂತಾರೆ – ಕೊರೊನಾ ರೋಗಿಗಳ ಕುರಿತು ಸಚಿವ ಸೋಮಣ್ಣ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಬೆಂಗಳೂರು ಕೋವಿಡ್ ಕೇಂದ್ರಗಳಲ್ಲಿ ಎಲ್ಲಾ ಅವ್ರೆ ಸ್ವಾಮಿ, ಏನ್ ಮಾಡೋದು, ಎಲ್ಲಿ ನೋಡಿದ್ರೂ ಗಿಜಿಗಿಜಿ ಅಂತಾರೆ ಎಂದು ಕೊರೊನಾ ರೋಗಿಗಳ ಕುರಿತು ಸಚಿವ ವಿ.ಸೋಮಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ ‘ಕುರಿಮಂದೆ ಇದ್ದಂಗೆ ಇದಾರೆ ಸ್ವಾಮೀಜಿ, ಎಲ್ಲಿ ನೋಡಿದ್ರೂ ಅವರೆ’ ಎಂದು ಸಚಿವರ ಮಾತಿಗೆ ದನಿಗೂಡಿಸಿದ್ದಾರೆ.

ಇಂದು ಬೆಳಗ್ಗೆ ಸಿದ್ದಗಂಗಾ ಮಠಕ್ಕೆ ಸಚಿವ ವಿ.ಸೋಮಣ್ಣ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿಯವರ ಜೊತೆ ಮಾತನಾಡುತ್ತಾರೆ. ಬೆಂಗಳೂರಿನಲ್ಲಿ ಕೋವಿಡ್ ಸಂದರ್ಭದಲ್ಲಿ ತಾನು ಕೈಗೊಂಡಿರುವ ಕಾರ್ಯಗಳನ್ನು ವಿವರಿಸುತ್ತಾರೆ. ಆ ಸಂದರ್ಭದಲ್ಲಿ ಮೇಲಿನ ವಿವಾದಾತ್ಮಕ ಮಾತುಳನ್ನು ಆಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವಿಡಿಯೋ ನೋಡಿ

ಎಲ್ಲಾ ಅವ್ರೆ ಸ್ವಾಮಿ, ಗಿಜಿಗಿಜಿ ಅಂತಾರೆ – ಕೊರೊನಾ ರೋಗಿಗಳ ಕುರಿತು ಸಚಿವ ಸೋಮಣ್ಣ ವಿವಾದಾತ್ಮಕ ಹೇಳಿಕೆ.. ಅವರೆ ಎಂದರೆ ಯಾರು ಎಂದು ಪ್ರಶ್ನೆ ಉದ್ಭವ??

Posted by Naanu Gauri on Tuesday, July 14, 2020

ಬೆಂಗಳೂರಿನ 53 ವಾರ್ಡ್‌ಗಳಲ್ಲಿ 26 ಕಡೆ ಕೋವಿಡ್ ಆಸ್ಪತ್ರೆಗಳನ್ನು ತೆರೆದಿದ್ದೇನೆ. 24*7 ಸಹಾಯವಾಣಿ, ಆಂಬುಲೆನ್ಸ್, ಒಂದು ಆಕ್ಸಿಜನ್ ಇದ್ದು ಎಲ್ಲಾ ಸೌಲಭ್ಯ ಒದಗಿಸಲಾಗಿದೆ ಎಂದು ಹೇಳುತ್ತಾರೆ.

ಆಗ ಮಾಜಿ ಸಚಿವ ಸೊಗಡು ಶಿವಣ್ಣ ‘ಕುರಿಮಂದೆ ಇದ್ದಂಗೆ ಇದ್ದಾರೆ ಸ್ವಾಮೀಜಿ ಅನ್ನುತ್ತಾರೆ. ಇದರಿಂದ ಉತ್ತೇಜನಗೊಂಡ ಸಚಿವ ಸೋಮಣ್ಣ ‘ಎಲ್ಲಾ ಅವ್ರೆ ಏನ್ ಮಾಡೋದು, ಗಿಜಿಗಿಜಿ ಅಂತಾರೆ ಸ್ವಾಮೀಜಿ’ ಎಂದು ಹೇಳುತ್ತಾರೆ.

ಇಲ್ಲಿ ಎಲ್ಲಾ ಅವರೆ ಎಂದು ಯಾರು? ಒಂದು ಸಮುದಾಯದವರನ್ನು ಹೀಗೆ ಗುರಿ ಮಾಡಬಹುದೇ? ಸಂವಿಧಾನಬದ್ದವಾಗಿ ಆಡಳಿತ ನಡೆಸುತ್ತೇವೆಂದು ಪ್ರತಿಜ್ಞೆ ಸ್ವೀಕರಿಸಿರುವ ಸಚಿವರು ಈಗೆ ಸಾರ್ವಜನಿಕವಾಗಿ ಕೋವಿಡ್ ಸೋಂಕಿತರನ್ನು ಹೀಯಾಳಿಸಬಹುದೇ? ಎಂದು ಹಲವರು ಪ್ರಶ್ನಿಸಿದ್ದಾರೆ.

ಆಂಬುಲೆನ್ಸ್ ನವರು ಕೋವಿಡ್ ಸೋಂಕಿತರನ್ನು ಕರೆತರಲು 3000 ರೂಪಾಯಿ ಕೊಟ್ರೆ ಹೋಗೋದು.. ಇಲ್ಲದಿದ್ದರೆ ಹೋಗೋದೇ ಇಲ್ಲ ಎಂದು ಸಚಿವ ಸೋಮಣ್ಣ ಅಸಹಾಯಕತೆ ವ್ಯಕ್ತಪಡಿಸುತ್ತಾ, ಹಾಗಾಗಿ ನಾವು ದೊಡ್ಡ ಆಸ್ಪತ್ರೆಗಳಲ್ಲಿ 4500 ರೂಪಾಯಿ ಫಿಕ್ಸ್ ಮಾಡಿದ್ದೇವೆ ಎನ್ನುತ್ತಾರೆ. ಇದು ಸಹ ವಿಡಿಯೋದಲ್ಲಿ ದಾಖಲಾಗಿದೆ.

ಪ್ರತಿ ವಾರ್ಡ್‌ನಲ್ಲಿರುವ ಕೌಂಟರ್‌ ಗೆ ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡಿದ್ದೇನೆ. ಅವರು ಆಯಾ ವಾರ್ಡ್‌ನಷ್ಟೇ ನೋಡಿಕೊಳ್ಳುತ್ತಾರೆ. ಹೀಗಾಗಿ ಸೋಂಕು ಕಂಟ್ರೋಲ್ ಗೆ ಬಂದಿದೆ ಎಂದು ಸ್ವಾಮೀಗೆ ವಿವರಿಸಿದ್ದಾರೆ.

ನಿನ್ನೆ ಮಾಜಿ ಸಚಿವ ಜಾರ್ಜ್, ಕಾಂಗ್ರೆಸ್ ಮುಖಂಡ ಹ್ಯಾರೀಸ್ ಮತ್ತು ಶಾಸಕ ರಿಜ್ವನ್  ಅರ್ಷದ್, ಅಖಂಡ ಶ್ರೀನಿವಾಸಮೂರ್ತಿ ಅವರ ಜೊತೆ ಮಾತುಕತೆ ನಡೆಸಿದ್ದೇನೆ. ಸೋಂಕು ನಿಯಂತ್ರಣದ ಸಂಬಂಧ ಚರ್ಚೆಸಿದ್ದೇನೆ ಎಂದೂ ಸಹ ಸೋಮಣ್ಣ ಹೇಳಿದ್ದಾರೆ.


ಇದನ್ನೂ ಓದಿ:

ಒಳಚರಂಡಿ ನಿರ್ಮಾಣ ಕಾಮಗಾರಿ: ಕ್ಯೂರಿಂಗ್‌ಗೆ ಮೊದಲೇ ಹಾಳಾದ ಛೇಂಬರ್‌ಗಳು ತುಮಕೂರಿನಲ್ಲಿ ಹೀಗೊಂದು ಕಳಪೆ ಕಾಮಗಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...