Homeಕರೋನಾ ತಲ್ಲಣಮನೆ ಬಾಗಿಲಿಗೆ ಬಂದು ಕೊರೊನಾ ಟೆಸ್ಟ್ ಮಾಡುವವರಿಗೆ ಸಹಕರಿಸಿ- ಸಚಿವ ಸುಧಾಕರ್‌

ಮನೆ ಬಾಗಿಲಿಗೆ ಬಂದು ಕೊರೊನಾ ಟೆಸ್ಟ್ ಮಾಡುವವರಿಗೆ ಸಹಕರಿಸಿ- ಸಚಿವ ಸುಧಾಕರ್‌

ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಕೊರೊನಾ ರೋಗಿಗಳಿಗೆ ಮೀಸಲಿಡಬೇಕೆಂದು ಸೂಚಿಸಲಾಗಿದೆ

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರತಿ ದಿನ ಬೆಂಗಳೂರಿನಲ್ಲಿ ಹೆಚ್ಚು ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಹಾಗಾಗಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಿಸಲು ಪ್ರತಿ ದಿನ 1 ಲಕ್ಷ ಪರೀಕ್ಷೆ ಮಾಡಲು ಸೂಚಿಸಲಾಗಿದೆ. ಮನೆ ಬಾಗಿಲಿಗೆ ಬಂದು ಕೊರೊನಾ ಟೆಸ್ಟ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಒಂದು ಕೊರೊನಾ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಸಂಪರ್ಕಿತರನ್ನು ಪತ್ತೆ ಮಾಡಲು ಸೂಚಿಸಲಾಗಿದೆ ಎಂದು  ಬಿಬಿಎಂಪಿ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದದ ಬಳಿಕ ತಿಳಿಸಿದ್ದಾರೆ.

“ಬೆಂಗಳೂರಿನಲ್ಲಿ ಕೊರೊನಾ ಪ್ರಕರಣ ಹೆಚ್ಚಿರುವುದರಿಂದ ಕೊರೊನಾ ಪರೀಕ್ಷೆ ಸಂಖ್ಯೆ ಹೆಚ್ಚಿಸಲಾಗಿದೆ. ಅಧಿಕಾರಿಗಳು ಜನರ ಮನೆ ಬಾಗಿಲಿಗೆ ಬಂದು ಕೊರೊನಾ ಪರೀಕ್ಷೆ ಮಾಡಿದರೆ ಸಾರ್ವಜನಿಕರು ಸಹಕರಿಸಬೇಕು. ಯಾರೂ ಗಲಾಟೆ ಮಾಡಬಾರದು” ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಿಂದ ಮೈಸೂರಿಗೆ ಬರುವವರಿಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯ- ಜಿಲ್ಲಾಧಿಕಾರಿ

“ಬಿಬಿಎಂಪಿ ವ್ಯಾಪ್ತಿಯಲ್ಲಿ 8,500 ಬೂತ್ ಇದ್ದು, ಪ್ರತಿ ಬೂತ್‌ನಲ್ಲಿಯೂ ತಂಡಗಳನ್ನು ರಚಿಸಲಾಗುವುದು. ಈ ತಂಡ ಪ್ರತಿ ಮನೆ ಬಾಗಿಲಿಗೆ ಹೋಗಿ ಪರೀಕ್ಷೆ ಮಾಡಲಿದೆ. ಕೊರೊನಾ ರೋಗಿಗಳಿಗೆ ಸಹಾಯ, ಐಸೋಲೇಟ್ ಆದವರ ಸಂಚಾರ, ಅವರಿಗೆ ಆರೋಗ್ಯ ರಕ್ಷಣೆ, ಮುದ್ರೆ ಹಾಕುವುದು, ಆರೋಗ್ಯ ಪರೀಕ್ಷೆ, ಸೋಂಕಿಗೊಳಗಾದವರಿಗೆ ಆಕ್ಸಿಜನ್ ವ್ಯವಸ್ಥೆ ಹೇಗಿದೆ ಎಂಬ ಮೊದಲಾದ ಕೆಲಸಗಳನ್ನು ಈ ತಂಡ ಮಾಡಲಿದೆ” ಎಂದು ಮಾಹಿತಿ ನೀಡಿದ್ದಾರೆ.

’ಕಳೆದ ವರ್ಷವೇ ಈ ಕಾರ್ಯಕ್ರಮ ಹಾಕಿಕೊಂಡಿದ್ದರೂ ನೂರಕ್ಕೆ ನೂರರಷ್ಟು ಆಗಿರಲಿಲ್ಲ. ಈಗ ಕಾರ್ಯರೂಪಕ್ಕೆ ತರಲಾಗುತ್ತಿದೆ. ಪ್ರತಿ ವಾರ್ಡ್ ಗೆ ಒಂದರಂತೆ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡುತ್ತಿದ್ದು, ಒಟ್ಟು 250 ಆಂಬ್ಯುಲೆನ್ಸ್ ಸಿದ್ಧವಿದೆ. ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಕೊರೊನಾ ರೋಗಿಗಳಿಗೆ ಮೀಸಲಿಡಬೇಕೆಂದು ಸೂಚಿಸಲಾಗಿದೆ’ ಎಂದರು.

ಇನ್ನು ದೇಶದಲ್ಲಿ ಮಹಾರಾಷ್ಟ್ರ, ಛತ್ತೀಸ್‌ಘಡ್, ಕರ್ನಾಟಕ, ಉತ್ತರ ಪ್ರದೇಶ, ದೆಹಲಿ, ಮಧ್ಯಪ್ರದೇಶ, ತಮಿಳುನಾಡು, ಗುಜರಾತ್, ಕೇರಳ ಮತ್ತು ಪಂಜಾಬ್ ರಾಜ್ಯಗಳಲ್ಲಿ ಪ್ರತಿದಿನ ಕೊರೊನಾ ಪ್ರಕರಣಗಳ ಸಂಖ್ಯೆ ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿದೆ. ಬುಧವಾರ (ಏಪ್ರಿಲ್ 07) ದಾಖಲಾಗಿರುವ 1,26,789 ಹೊಸ ಪ್ರಕರಣಗಳಲ್ಲಿ ಶೇ .84.21 ರಷ್ಟು ಪ್ರಕರಣಗಳು ಈ 10 ರಾಜ್ಯಗಳಿಂದ ದಾಖಲಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಹೆಚ್ಚು ಪ್ರಕರಣ ದಾಖಲಾಗಿರುವ ರಾಜ್ಯಗಳು

 ರಾಜ್ಯ          ಕೊರೊನಾ ಪ್ರಕರಣಗಳು(ದಿನ)

ಛತ್ತೀಸ್‌ಗಢ –     10,310
ಕರ್ನಾಟಕ –       6,976
ಉತ್ತರ ಪ್ರದೇಶ-   6,023
ದೆಹಲಿ  –           5,506
ಮಧ್ಯಪ್ರದೇಶ-    4,043
ಗುಜರಾತ್-       3,575
ತಮಿಳುನಾಡು – 3,986


ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಬಣ: ಕೇಂದ್ರದ ಜಾಣ ಕುರುಡು, ನೂರಾರು ಲಸಿಕಾ ಕೇಂದ್ರಗಳಿಗೆ ಬೀಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...