Homeಕರೋನಾ ತಲ್ಲಣಮನೆ ಬಾಗಿಲಿಗೆ ಬಂದು ಕೊರೊನಾ ಟೆಸ್ಟ್ ಮಾಡುವವರಿಗೆ ಸಹಕರಿಸಿ- ಸಚಿವ ಸುಧಾಕರ್‌

ಮನೆ ಬಾಗಿಲಿಗೆ ಬಂದು ಕೊರೊನಾ ಟೆಸ್ಟ್ ಮಾಡುವವರಿಗೆ ಸಹಕರಿಸಿ- ಸಚಿವ ಸುಧಾಕರ್‌

ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಕೊರೊನಾ ರೋಗಿಗಳಿಗೆ ಮೀಸಲಿಡಬೇಕೆಂದು ಸೂಚಿಸಲಾಗಿದೆ

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರತಿ ದಿನ ಬೆಂಗಳೂರಿನಲ್ಲಿ ಹೆಚ್ಚು ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಹಾಗಾಗಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಿಸಲು ಪ್ರತಿ ದಿನ 1 ಲಕ್ಷ ಪರೀಕ್ಷೆ ಮಾಡಲು ಸೂಚಿಸಲಾಗಿದೆ. ಮನೆ ಬಾಗಿಲಿಗೆ ಬಂದು ಕೊರೊನಾ ಟೆಸ್ಟ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಒಂದು ಕೊರೊನಾ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಸಂಪರ್ಕಿತರನ್ನು ಪತ್ತೆ ಮಾಡಲು ಸೂಚಿಸಲಾಗಿದೆ ಎಂದು  ಬಿಬಿಎಂಪಿ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದದ ಬಳಿಕ ತಿಳಿಸಿದ್ದಾರೆ.

“ಬೆಂಗಳೂರಿನಲ್ಲಿ ಕೊರೊನಾ ಪ್ರಕರಣ ಹೆಚ್ಚಿರುವುದರಿಂದ ಕೊರೊನಾ ಪರೀಕ್ಷೆ ಸಂಖ್ಯೆ ಹೆಚ್ಚಿಸಲಾಗಿದೆ. ಅಧಿಕಾರಿಗಳು ಜನರ ಮನೆ ಬಾಗಿಲಿಗೆ ಬಂದು ಕೊರೊನಾ ಪರೀಕ್ಷೆ ಮಾಡಿದರೆ ಸಾರ್ವಜನಿಕರು ಸಹಕರಿಸಬೇಕು. ಯಾರೂ ಗಲಾಟೆ ಮಾಡಬಾರದು” ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಿಂದ ಮೈಸೂರಿಗೆ ಬರುವವರಿಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯ- ಜಿಲ್ಲಾಧಿಕಾರಿ

“ಬಿಬಿಎಂಪಿ ವ್ಯಾಪ್ತಿಯಲ್ಲಿ 8,500 ಬೂತ್ ಇದ್ದು, ಪ್ರತಿ ಬೂತ್‌ನಲ್ಲಿಯೂ ತಂಡಗಳನ್ನು ರಚಿಸಲಾಗುವುದು. ಈ ತಂಡ ಪ್ರತಿ ಮನೆ ಬಾಗಿಲಿಗೆ ಹೋಗಿ ಪರೀಕ್ಷೆ ಮಾಡಲಿದೆ. ಕೊರೊನಾ ರೋಗಿಗಳಿಗೆ ಸಹಾಯ, ಐಸೋಲೇಟ್ ಆದವರ ಸಂಚಾರ, ಅವರಿಗೆ ಆರೋಗ್ಯ ರಕ್ಷಣೆ, ಮುದ್ರೆ ಹಾಕುವುದು, ಆರೋಗ್ಯ ಪರೀಕ್ಷೆ, ಸೋಂಕಿಗೊಳಗಾದವರಿಗೆ ಆಕ್ಸಿಜನ್ ವ್ಯವಸ್ಥೆ ಹೇಗಿದೆ ಎಂಬ ಮೊದಲಾದ ಕೆಲಸಗಳನ್ನು ಈ ತಂಡ ಮಾಡಲಿದೆ” ಎಂದು ಮಾಹಿತಿ ನೀಡಿದ್ದಾರೆ.

’ಕಳೆದ ವರ್ಷವೇ ಈ ಕಾರ್ಯಕ್ರಮ ಹಾಕಿಕೊಂಡಿದ್ದರೂ ನೂರಕ್ಕೆ ನೂರರಷ್ಟು ಆಗಿರಲಿಲ್ಲ. ಈಗ ಕಾರ್ಯರೂಪಕ್ಕೆ ತರಲಾಗುತ್ತಿದೆ. ಪ್ರತಿ ವಾರ್ಡ್ ಗೆ ಒಂದರಂತೆ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡುತ್ತಿದ್ದು, ಒಟ್ಟು 250 ಆಂಬ್ಯುಲೆನ್ಸ್ ಸಿದ್ಧವಿದೆ. ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಕೊರೊನಾ ರೋಗಿಗಳಿಗೆ ಮೀಸಲಿಡಬೇಕೆಂದು ಸೂಚಿಸಲಾಗಿದೆ’ ಎಂದರು.

ಇನ್ನು ದೇಶದಲ್ಲಿ ಮಹಾರಾಷ್ಟ್ರ, ಛತ್ತೀಸ್‌ಘಡ್, ಕರ್ನಾಟಕ, ಉತ್ತರ ಪ್ರದೇಶ, ದೆಹಲಿ, ಮಧ್ಯಪ್ರದೇಶ, ತಮಿಳುನಾಡು, ಗುಜರಾತ್, ಕೇರಳ ಮತ್ತು ಪಂಜಾಬ್ ರಾಜ್ಯಗಳಲ್ಲಿ ಪ್ರತಿದಿನ ಕೊರೊನಾ ಪ್ರಕರಣಗಳ ಸಂಖ್ಯೆ ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿದೆ. ಬುಧವಾರ (ಏಪ್ರಿಲ್ 07) ದಾಖಲಾಗಿರುವ 1,26,789 ಹೊಸ ಪ್ರಕರಣಗಳಲ್ಲಿ ಶೇ .84.21 ರಷ್ಟು ಪ್ರಕರಣಗಳು ಈ 10 ರಾಜ್ಯಗಳಿಂದ ದಾಖಲಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಹೆಚ್ಚು ಪ್ರಕರಣ ದಾಖಲಾಗಿರುವ ರಾಜ್ಯಗಳು

 ರಾಜ್ಯ          ಕೊರೊನಾ ಪ್ರಕರಣಗಳು(ದಿನ)

ಛತ್ತೀಸ್‌ಗಢ –     10,310
ಕರ್ನಾಟಕ –       6,976
ಉತ್ತರ ಪ್ರದೇಶ-   6,023
ದೆಹಲಿ  –           5,506
ಮಧ್ಯಪ್ರದೇಶ-    4,043
ಗುಜರಾತ್-       3,575
ತಮಿಳುನಾಡು – 3,986


ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಬಣ: ಕೇಂದ್ರದ ಜಾಣ ಕುರುಡು, ನೂರಾರು ಲಸಿಕಾ ಕೇಂದ್ರಗಳಿಗೆ ಬೀಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...