Homeಕರ್ನಾಟಕಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ತನ್ನ ಉದ್ಧಟತನದ ಮಾತನ್ನು ಅವರು ಮತ್ತೇ ಸಮರ್ಥಿಸಿಕೊಂಡಿದ್ದಾರೆ

- Advertisement -
- Advertisement -

ಪಡಿತರ ವ್ಯವಸ್ಥೆಯಲ್ಲಿ ನೀಡುತ್ತಿದ್ದ ಅಕ್ಕಿ ಕಡಿತಗೊಳಿಸಿರುವುದನ್ನು ಪ್ರಶ್ನಿಸಿದ್ದ ರೈತ ಸಂಘದ ಕಾರ್ಯಕರ್ತರೊಬ್ಬರಿಗೆ, ಆಹಾರ ಸಚಿವ ಉಮೇಶ್ ಕತ್ತಿ ಅವರು ‘ಸತ್ತು ಹೋಗು’ ಎಂದು ಹೇಳಿ ಉಡಾಫೆಯಿಂದ ವರ್ತಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.

ರಾಜ್ಯದಲ್ಲಿ ಕೊರೊನಾ ತೀವ್ರ ರೀತಿಯಲ್ಲಿ ಹರಡುತ್ತಿದ್ದು, ರಾಜ್ಯ ಸರ್ಕಾರ ಈಗಾಗಲೆ ಲಾಕ್‌ಡೌನ್‌ ಹೇರಿದೆ. ಕಳೆದ ವರ್ಷ ಮಾಡಿದ ಲಾಕ್‌ಡೌನ್‌ನಿಂದಲೇ ಇನ್ನೂ ಚೇತರಿಸಿಕೊಳ್ಳದ ಜನರಿಗೆ ಮತ್ತೊಂದು ಲಾಕ್‌ಡೌನ್‌ ಹೇರಿರುವುದು ಆಹಾರದ ಪ್ರಶ್ನೆಯನ್ನೂ ತಂದೊಡ್ಡಿದೆ. ಈ ನಡುವೆ ರಾಜ್ಯ ಸರ್ಕಾರವು ಪಡಿತರ ವ್ಯವಸ್ಥೆಯಲ್ಲಿ ಸಿಗುತ್ತಿದ್ದ ಅಕ್ಕಿಯನ್ನು 2 ಕೆ.ಜಿ. ಗೆ ಇಳಿಸಿದೆ. ಇದನ್ನು ಪ್ರಶ್ನಿಸಿದ್ದ ಜನರೊಂದಿಗೆ ರಾಜ್ಯದ ಸಚಿವರು ಜವಾಬ್ದಾರಿ ಮರೆತು ವರ್ತಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಜಿಂದಾಲ್‌ ಮುಂದೆ ಬಿಜೆಪಿ ಸರ್ಕಾರ ಏಕಾಏಕಿ ಮಂಡಿಯೂರಲೂ ಕಾರಣವಿದೆ:ಎಚ್.ಡಿ. ಕುಮಾರಸ್ವಾಮಿ

ಗದಗ ಜಿಲ್ಲೆಯ ರೈತರ ಸಂಘದ ಕಾರ್ಯಕರ್ತರಾದ ಈಶ್ವರ್‌ ಎಂಬವರು ಸಚಿವ ಉಮೇಶ್ ಕತ್ತಿಗೆ ಕರೆ ಮಾಡಿ ಪಡಿತರ ವ್ಯವಸ್ಥೆಯಲ್ಲಿ ಅಕ್ಕಿ ಕಡಿತ ಮಾಡಿದ್ದರ ಬಗ್ಗೆ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಸಚಿವರು ಉತ್ತರ ಕರ್ನಾಟಕದಲ್ಲಿ ಅಕ್ಕಿ ಜೊತೆಗೆ ಜೋಳ ಕೊಡುತ್ತೇವೆ. ಲಾಕ್‍ಡೌನ್ ಸಂದರ್ಭದಲ್ಲಿ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡುತ್ತದೆ. ಮೇ ತಿಂಗಳಿನಿಂದ ಈ ಅಕ್ಕಿಯನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಈ ವೇಳೆ ಮತ್ತೆ ಪ್ರಶ್ನಿಸಿರುವ ರೈತ ಸಂಘದ ಕಾರ್ಯಕರ್ತ, ಮುಂದಿನ ತಿಂಗಳು ಎನ್ನುತ್ತೀರಿ, ಅಲ್ಲಿವರೆಗೂ ಉಪವಾಸ ಇರುವುದಾ, ಸತ್ತೋಗುವುದಾ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಉದ್ದಟತನದಿಂದ ಉತ್ತರಿಸಿದ ಸಚಿವರು, “ಸತ್ತು ಹೋಗು ಒಳ್ಳೆಯದು, ಮೊದಲು ಅಕ್ಕಿ ಮಾರಾಟ ಮಾಡಿವ ದಂಧೆ ನಿಲ್ಲಿಸಿ. ಫೋನ್ ಮಾಡಬೇಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ಅಷ್ಟೆ ಅಲ್ಲದೆ ಈ ಬಗ್ಗೆ ಸ್ಪಷ್ಟೀಕರಣ ಕೇಳಿದ್ದ ಮಾಧ್ಯಮದ ಜೊತೆಗೆ ತಾನಾಡಿದ ಮಾತನ್ನು ಸಚಿವರು ಸಮರ್ಥಿಸಿಕೊಂಡಿದ್ದಾರೆ. “ಅಕ್ಕಿ ಕಡಿತ ಮಾಡಿದ್ದಾರೆ ಸಾಯಬೇಕೋ ಅಂತಾ ಕೇಳಿದ, ಸತ್ತು ಹೋಗಪ್ಪಾ ಅಂದೆ. ಅವನು ಸಾಯ್ತೀನಿ ಅಂದ್ರೆ ನಾನೇನು ಉತ್ತರ ಕೊಡಲಿ” ಎಂದು ಪ್ರಶ್ನಿಸಿದ್ದಾರೆ.

ಸಾಯಬೇಡವೆಂದು ಸಮಾಧಾನ ಹೇಳಿ ದೈರ್ಯ ತುಂಬುವುದು ಜನಪ್ರತಿನಿಧಿಯೊಬ್ಬರ ಕರ್ತವ್ಯ ಅಲ್ಲವೆ ಎಂದು ಮಾಧ್ಯಮದವರ ಮತ್ತೊಂದು ಪ್ರಶ್ನೆಗೆ ಕೂಡಾ ಅವರು, “ನಾನು ಅಷ್ಟು ದೊಡ್ಡ ಮನುಷ್ಯ ಅಲ್ಲ. ಏಪ್ರಿಲ್ ತಿಂಗಳಲ್ಲಿ ಬಂದಿದೆ, ಮೇ ತಿಂಗಳಲ್ಲಿ ನೋಡೋಣ ಅಂತ ಹೇಳಿದ್ದೇನೆ. ಆರೂವರೆ ಕೋಟಿ ಜನರಿಗೆ ಉತ್ತರ ಕೊಡುತ್ತಾ ಎಲ್ಲಿ ಹೋಗಲಿ. ಸತ್ತು ಹೋಗಲಾ ಎಂದರೆ ನಾನೇನು ಉತ್ತರಿಸಲಿ?” ಎಂದು ಮತ್ತೆ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕೋಲಾರದ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಸರ್ಕಾರದ ನಿರ್ಲಕ್ಷ್ಯ: ರೈತ ಹೋರಾಟಗಾರರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...