Homeಮುಖಪುಟತಿಂಗಳಿಗೆ 100 ಕೋಟಿ ಲಂಚ ಸಂಗ್ರಹಕ್ಕೆ ಗೃಹ ಸಚಿವರ ಸೂಚನೆ- ಪರಮ್ ಬೀರ್ ಸಿಂಗ್ ಆರೋಪ

ತಿಂಗಳಿಗೆ 100 ಕೋಟಿ ಲಂಚ ಸಂಗ್ರಹಕ್ಕೆ ಗೃಹ ಸಚಿವರ ಸೂಚನೆ- ಪರಮ್ ಬೀರ್ ಸಿಂಗ್ ಆರೋಪ

- Advertisement -
- Advertisement -

ಮುಂಬೈನ ನಿರ್ಗಮಿತ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್, ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಗೃಹ ಸಚಿವರು “ತಿಂಗಳಿಗೆ 100 ಕೋಟಿ ರೂಪಾಯಿ ಸಂಗ್ರಹಿಸುವ ಗುರಿ ಹೊಂದಿದ್ದಾರೆ” ಎಂದು ಆರೋಪಿಸಿ ಐಪಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮನೆಯ ಬಳಿ ಪತ್ತೆಯಾದ ಸ್ಫೋಟಕ ಕಾರಿನ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಪೊಲೀಸ್ ಅಧಿಕಾರಿ ಸಚಿನ್ ವಾಜೆ ವಿರುದ್ಧದ ತನಿಖೆಯಲ್ಲಿ, ಅಸಮರ್ಪಕ ತನಿಖೆ ಎಂದು ಐಪಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಅವರನ್ನು ಗೃಹ ರಕ್ಷಕ ದಳಕ್ಕೆ ವರ್ಗಾಯಿಸಲಾಗಿದೆ.

“ಮುಂಬೈ ಪೊಲೀಸರ ಅಪರಾಧ ವಿಭಾಗದ ಅಪರಾಧ ಗುಪ್ತಚರ ಘಟಕದ ಮುಖ್ಯಸ್ಥರಾಗಿದ್ದ ಸಚಿನ್ ವಾಜೆ ಅವರನ್ನು ಮಹಾರಾಷ್ಟ್ರದ ಗೌರವಾನ್ವಿತ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರು ಕಳೆದ ಕೆಲವು ತಿಂಗಳುಗಳಲ್ಲಿ ಹಲವಾರು ಬಾರಿ ತಮ್ಮ ಅಧಿಕೃತ ನಿವಾಸ ದಯಾನೇಶ್ವರಕ್ಕೆ ಕರೆದಿದ್ದರು. ಗೃಹ ಸಚಿವರು ಹಣ ಸಂಗ್ರಹಿಸಲು ಪದೇ ಪದೇ ಸೂಚನೆ ನೀಡುತ್ತಿದ್ದರು” ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ: ಅಂಬಾನಿಗಾಗಿ NIA ತನಿಖೆ – ಪುಲ್ವಾಮಾ ದಾಳಿ ಹೇಗೆಂಬುದು ಪತ್ತೆಯಾಗಲಿಲ್ಲ?: ಶಿವಸೇನೆ ಪ್ರಶ್ನೆ

“ಮಾನ್ಯ ಗೃಹ ಸಚಿವರು ಸಚಿನ್ ವಾಜೆ ಅವರಿಗೆ ತಿಂಗಳಿಗೆ 100 ಕೋಟಿಗಳನ್ನು ಸಂಗ್ರಹಿಸುವ ಗುರಿ ನೀಡಿದ್ದರು. ಗುರಿ ಸಾಧಿಸಲು, ಮಾನ್ಯ ಗೃಹ ಸಚಿವರು ವಾಜೆ ಅವರಿಗೆ ಸುಮಾರು 1,750 ಬಾರ್, ರೆಸ್ಟೋರೆಂಟ್ ಮತ್ತು ಇತರ ಅಂಗಡಿ ಮುಂಗಟ್ಟುಗಳನ್ನು ಗುರಿಯಾಗಿಸಿಕೊಳ್ಳಲು ಹೇಳಿದ್ದರು. ಮುಂಬೈನಲ್ಲಿ ಮತ್ತು ಪ್ರತಿಯೊಂದರಿಂದ ತಲಾ 2-3 ಲಕ್ಷವನ್ನು ಸಂಗ್ರಹಿಸಿದರೆ, ಮಾಸಿಕ-40-50 ಕೋಟಿ ಸಂಗ್ರಹವನ್ನು ಸಾಧಿಸಬಹುದಾಗಿದೆ. ಉಳಿದ ಸಂಗ್ರಹವನ್ನು ಇತರರಿಂದ ಮಾಡಬಹುದೆಂದು ಮಾನ್ಯ ಗೃಹ ಸಚಿವರು ಸೂಚಿಸಿದ್ದರು” ಎಂದು ಪರಮ್ ಬೀರ್‌ ಸಿಂಗ್ ಆರೋಪಿಸಿದ್ದಾರೆ.

“ವಾಜೆ ಅದೇ ದಿನ ನನ್ನ ಕಚೇರಿಗೆ ಬಂದು ಎಲ್ಲವನ್ನು ನನಗೆ ತಿಳಿಸಿದರು. ಈ ಚರ್ಚೆಯಿಂದ ನಾನು ಆಘಾತಕ್ಕೊಳಗಾಗಿದ್ದೆ ಮತ್ತು ಪರಿಸ್ಥಿತಿಯನ್ನು ಹೇಗೆ ಎದುರಿಸಬೇಕೆಂದು ಯೋಚಿಸುತ್ತಿದ್ದೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಐಪಿಎಸ್ ಅಧಿಕಾರಿ ಪರಮ್ ಬೀರ್‌ ಸಿಂಗ್ ಆರೋಪವನ್ನು ಸುಲ್ಳೂ ಎಂದಿರುವ ಗೃಹ ಸಚಿವ ಅನಿಲ್ ದೇಶ್‌ಮುಖ್, ಮಾನನಷ್ಟ ಮೊಕ್ಕದಮೆ ಹೂಡುವುದಾಗಿ ತಿಳಿಸಿದ್ದಾರೆ.

“ಪರಮ್ ಬೀರ್ ಸಿಂಗ್, ತನ್ನನ್ನು ಉಳಿಸಿಕೊಳ್ಳಲು ಈ ಸುಳ್ಳು ಆರೋಪವನ್ನು ಮಾಡಿದ್ದಾರೆ. ಮುಂದಿನ ಕಾನೂನು ಕ್ರಮಗಳಿಂದ ತನ್ನನ್ನು ರಕ್ಷಿಸಿಕೊಳ್ಳಲು ಇಂತಹ ಮಾತುಗಳನ್ನು ಆಡಿದ್ದಾರೆ ಎಂದಿದ್ದಾರೆ.


ಇದನ್ನೂ ಓದಿ: ಅಂಬಾನಿ ಮನೆ ಬಳಿ ಸ್ಪೋಟಕ ಪತ್ತೆ ಪ್ರಕರಣ: ಸಹಾಯಕ ಪೊಲೀಸ್ ಇನ್ಸ್‌‌ಪೆಕ್ಟರ್‌‌ ಎನ್‌ಐಎ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...