Homeಮುಖಪುಟಬಿಜೆಪಿ ತೊರೆದು ಸಾಲು ಸಾಲಾಗಿ ಕಾಂಗ್ರೆಸ್ ಸೇರಲು ಸಜ್ಜಾಗಿರುವ ಸಚಿವರು: ಕಾರಣವೇನು?

ಬಿಜೆಪಿ ತೊರೆದು ಸಾಲು ಸಾಲಾಗಿ ಕಾಂಗ್ರೆಸ್ ಸೇರಲು ಸಜ್ಜಾಗಿರುವ ಸಚಿವರು: ಕಾರಣವೇನು?

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಇನ್ನೇನು ಘೋಷಣೆಯಾಗಬೇಕಿದೆ. ಈ ಸಂದರ್ಭದಲ್ಲಿ ಹಲವಾರು ಬಿಜೆಪಿ ಸಚಿವರು, ಮುಖಂಡರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ. ರೇಷ್ಮೆ ಮತ್ತು ಯುವಜನ ಕ್ರೀಡಾ ಸಚಿವ ಕೆ.ಸಿ ನಾರಾಯಣಗೌಡ, ವಸತಿ ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎನ್ನಲಾಗಿದೆ. ಆದರೆ ಪಕ್ಷ ಸೇರ್ಪಡೆಗೆ ಕಾಂಗ್ರೆಸ್‌ನಿಂದ ಗ್ರೀನ್ ಸಿಗ್ನಲ್ ಸಿಗುವ ಮೊದಲೇ ಕೈ ಕಾರ್ಯಕರ್ತರೇ ವಿರೋಧ ವ್ಯಕ್ತಪಡಿಸಿದ್ದಾರೆ.

ಕಳೆದ ತಿಂಗಳು ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಹೆಚ್. ನಾಗೇಶ್ ಕಾಂಗ್ರೆಸ್ ಸೇರಿದ್ದರು. ಈ ತಿಂಗಳು ಕೊಳ್ಳೇಗಾಲದ ಮಾಜಿ ಶಾಸಕ, ಬಿಜೆಪಿ ಮುಖಂಡ ಜಿ.ಎನ್ ನಂಜುಂಡಸ್ವಾಮಿಯವರು ಬಿಜೆಪಿ ಪಕ್ಷ ತೊರದು ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ.

ಇನ್ನು ಸಚಿವ ಕೆ.ಸಿ ನಾರಾಯಣಗೌಡರವರು ಕೆ.ಆರ್ ಪೇಟೆಯಲ್ಲಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದು, ಕಾಂಗ್ರೆಸ್ ಸೇರಿ ಮರು ಆಯ್ಕೆಯಾಗಲು ನಿರ್ಧರಿಸಿದ್ದಾರೆ. ಆದರೆ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕೆ.ಆರ್ ಪೇಟೆ ನಗರಕ್ಕೆ ಆಗಮಿಸಿದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ ಗಂಗಾಧರ್‌ರವರ ಕಾರಿಗೆ ಮೊಟ್ಟೆ ಎಸೆದು ಕಾಂಗ್ರೆಸ್ ಕಾರ್ಯಕರ್ತರು ನಾರಾಯಣಗೌಡ ಪಕ್ಷ ಸೇರ್ಪಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎರಡು ಅವಧಿಗೆ ಮೂರು ಬಾರಿ ಶಾಸಕರಾಗಿರುವ, ಹಾಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ ಹಾಗೂ ಕಾರ್ಯಕ್ರಮ ಸಂಯೋಜನೆ ಸಾಂಖ್ಯಿಕ ಇಲಾಖೆ ಸಚಿವರೂ ಆಗಿರುವ ಕೆ.ಸಿ ನಾರಾಯಣಗೌಡರಿಗೆ ಕೆ.ಆರ್ ಪೇಟೆಯಲ್ಲಿ ಆಡಳಿತ ವಿರೋಧಿ ಅಲೆ ಕಾಡುತ್ತಿದೆ. ಈ ಹಿಂದೆ ಪೌರಾಡಳಿತ ಸಚಿವರಾಗಿದ್ದರೂ ಸಹ ಕೆ.ಆರ್ ಪೇಟೆ ನಗರದ, ಕ್ಷೇತ್ರದ ಅಭಿವೃದ್ದಿಗೆ ಕಿಂಚಿತ್ತೂ ಗಮನ ವಹಿಸಿಲ್ಲ ಎಂಬ ಆರೋಪ ದಟ್ಟವಾಗಿ ಕೇಳಿಬರುತ್ತಿದೆ.

ರಸ್ತೆಗಳನ್ನು ಮಾಡಿಸಿಲ್ಲ, ಆಶ್ರಯ ಮನೆಗಳನ್ನು ನಿರ್ಮಿಸಿಕೊಟ್ಟಿಲ್ಲ, ಒಳಚರಂಡಿ ವ್ಯವಸ್ಥೆ ಸರಿ ಮಾಡಿಸಿಲ್ಲ, ಚಿರತೆ ಹಾವಳಿ ತಡೆಗೆ ಸ್ಪಂದಿಸಿಲ್ಲ, ಅತಿವೃಷ್ಟಿ ನಿರ್ವಹಣೆಗೆ ತಲೆ ಕೆಡಿಸಿಕೊಂಡಿಲ್ಲ, ಸದಾ ಬೆಂಗಳೂರಿನಲ್ಲಿ ವಾಸಿಸುತ್ತಾ ಜನರ ಕೈಗೆ ಸಿಗುತ್ತಿಲ್ಲ, ಸ್ಟೇಡಿಯಂ ಒಳಗೆ ಒಳಾಂಗಣಾ ಕ್ರೀಡಾಂಗಣ ನಿರ್ಮಿಸಿ ಸ್ಟೇಡಿಯಂ ಇಲ್ಲದಂತೆ ಮಾಡಿದರು ಇತ್ಯಾದಿ ದೂರುಗಳು ಅವರ ಮೇಲಿವೆ.

ಕೆ.ಆರ್ ಪೇಟೆಯಲ್ಲಿ ಕಾಂಗ್ರೆಸ್ ಪಕ್ಷವು ಕ್ಷೇತ್ರದಲ್ಲಿ ಸತತವಾಗಿ ಮೂರು ಬಾರಿ ಸೋತರೂ ಸಹ ಪಕ್ಷದ ಟಿಕೆಟ್‌ಗಾಗಿ ಆಕಾಂಕ್ಷಿಗಳ ದಂಡೇ ನೆರೆದಿದೆ. ಅಧಿಕೃತವಾಗಿ 6 ಜನ ಟಿಕೆಟ್‌ಗಾಗಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದು ಮತ್ತಿಬ್ಬರು ಅರ್ಜಿ ಸಲ್ಲಿಸದೇ ಲಾಬಿ ಮಾಡುತ್ತಿದ್ದಾರೆ. ಸತತ ಮೂರು ಬಾರಿ ಸೋತಿದ್ದ ಮಾಜಿ ಶಾಸಕ ಕೆ.ಬಿ ಚಂದ್ರಶೇಖರ್ ತನಗೆ ಚುನಾವಣೆ ಸಾಕು ಎಂಬ ಮಾತುಗಳನ್ನು ಆಡುತ್ತಿದ್ದವರು ಮತ್ತೀಗ ಸಕ್ರಿಯರಾಗಿದ್ದು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಉದ್ಯಮಿ ವಿಜಯ್ ರಾಮೇಗೌಡ, ಮಾಜಿ ಶಾಸಕ ಬಿ.ಪ್ರಕಾಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್, ಎಂ.ಡಿ ಕೃಷ್ಣಮೂರ್ತಿ ಮತ್ತು ಕುರುಬ ಸಮುದಾಯದ ಬಿ.ನಾಗೇಂದ್ರ ಕುಮಾರ್ ಅರ್ಜಿ ಸಲ್ಲಿಸಿದ ಇತರರಾಗಿದ್ದಾರೆ.

ನಾರಾಯಣಗೌಡರ ನಡೆಯೇನು?

ಕ್ಷೇತ್ರದಲ್ಲಿ ತನ್ನ ಕುರಿತು ಹಬ್ಬಿರುವ ವಿರೋಧಿ ಅಲೆಯಿಂದಾಗಿ ಸಚಿವ ನಾರಾಯಣಗೌಡರು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿವೆ. ಅವರು ನನಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಬೇಡ, ಶಿವಮೊಗ್ಗವೇ ಇರಲಿ ಎಂದು ಸ್ಪಷ್ಟಪಡಿಸಿರುವುದು ಬಿಜೆಪಿ ಬಿಡುತ್ತಾರೆ ಎನ್ನುವುದಕ್ಕೆ ಪುಷ್ಠಿ ಕೊಡುವಂತಿದೆ. ಆಡಳಿತ ವಿರೋಧಿ ಅಲೆ ಇರುವ ಸಂದರ್ಭದಲ್ಲಿ ಸಾಕಷ್ಟು ಕಾರ್ಯಕರ್ತರಿಲ್ಲದ ಬಿಜೆಪಿಯಿಂದ ನಿಂತು ಗೆಲ್ಲುವುದು ಕಷ್ಟ ಎಂಬುದು ಅವರ ಅರಿವಿಗೆ ಬಂದಿದೆ. 2019ರ ಉಪಚುನಾವಣೆಯಲ್ಲಿ ಇಡೀ ಮಂತ್ರಿಮಂಡಲ ಅವರ ಪರ ಪ್ರಚಾರಕ್ಕಿಳಿದಿತ್ತು. ಆದರೆ ಈಗಿನ ಚುನಾವಣೆಗೆ ಅವರ್‍ಯಾರು ಬರುವುದಿಲ್ಲ. ಕಾಂಗ್ರೆಸ್ ಸೇರಿದರೆ, ಸದ್ಯ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗುತ್ತಾರೆ ಎಂಬ ಅಲೆ ಇರುವುದರಿಂದ ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳು ಮತ್ತು ಕುರುಬ ಸಮುದಾಯ ಸೇರಿದಂತೆ ಒಬಿಸಿ ಮತಗಳು ತನ್ನನ್ನು ಗೆಲುವಿನ ದಡ ಸೇರಿಸುತ್ತವೆ ಎಂದು ಅವರು ನಂಬಿದ್ದಾರೆ. ಬಿಎಸ್‌ಪಿ, ಜೆಡಿಎಸ್ ಮತ್ತು ಬಿಜೆಪಿ ನೋಡಿರುವ ಅವರು ಕೊನೆ ಆಟವಾಗಿ ಕಾಂಗ್ರೆಸ್‌ನತ್ತ ಆಸೆ ಇಟ್ಟುಕೊಂಡಿದ್ದಾರೆ. ಆದರೆ ಕಾಂಗ್ರೆಸ್‌ನಲ್ಲಿ ಈಗಾಗಲೇ ಟಿಕೆಟ್‌ಗಾಗಿ ಪೈಪೋಟಿಯಿದ್ದು, ನಾರಾಯಣಗೌಡರನ್ನು ಸೇರಿಸಿಕೊಂಡರೆ ಬಂಡಾಯ ಮತ್ತು ಒಳೇಟು ಕೊಡುವ ಸಾಧ್ಯತೆಗಳಿವೆ.

ಸಚಿವ ಸೋಮಣ್ಣ ಕಾಂಗ್ರೆಸ್ ಸೇರುವರೆ?

ವಸತಿ ಸಚಿವ ವಿ. ಸೋಮಣ್ಣನವರು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳ ಸಹ ಕೇಳಿ ಬರುತ್ತಿವೆ. ಸದ್ಯ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಅವರು ಬಿಜೆಪಿ ಅಧಿಕಾರಕ್ಕೆ ಬಂದಾಗ ಒಂದಷ್ಟು ಕಾಲ ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರು. ಆದರೆ ಅವರನ್ನು ಏಕಾಏಕಿ ಉಸ್ತುವಾರಿಯಿಂದ ತೆಗೆದುಹಾಕಲಾಗಿತ್ತು. ಆನಂತರ ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಿಸಲಾಗಿದೆ. ಪಕ್ಷದಲ್ಲಿ ತನಗೇ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಅವರು ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇನ್ನು ವಿ.ಸೋಮಣ್ಣನವರು ಗೋವಿಂದರಾಜ ನಗರದ ಬದಲು ಹನೂರು ಕ್ಷೇತ್ರದಿಂದ ಮುಂಬರುವ ಚುನಾವಣೆ ಎದುರಿಸುವಂತೆ ಬಿಜೆಪಿ ಸೂಚಿಸಿತ್ತು ಎನ್ನಲಾಗಿದೆ. ಅದಕ್ಕೆ ಸೋಮಣ್ಣನವರು ಒಪ್ಪಿರಲಿಲ್ಲ. ಅಲ್ಲದೆ ಇತ್ತೀಚೆಗೆ ಚಾಮರಾಜನಗರದಲ್ಲಿ ನಡೆದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಸೋಮಣ್ಣ ಗೈರಾಗಿದ್ದರು. ಹಾಗಾಗಿ ಜಿಲ್ಲೆಯ ಚುನಾವಣೆಯ ಉಸ್ತುವಾರಿ ಜವಾಬ್ದಾರಿಯನ್ನು ಕೆ.ಎಸ್ ಈಶ್ವರಪ್ಪನವರಿಗೆ ನೀಡಲಾಗಿದೆ. ಈ ಎಲ್ಲಾ ಕಾರಣಗಳಿಂದ ಅವರು ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಭಾನುವಾರ ನಡೆದ ವಿಜಯ ಸಂಕಲ್ಪ ಯಾತ್ರೆ ವೇಳೆ ಸೋಮಣ್ಣ ಮತ್ತು ಆರ್ ಅಶೋಕ್ ನಡವೆ ಮಾತಿನ ಚಕಮಕಿ ನಡೆದು ಸೋಮಣ್ಣ ಅರ್ಧದಲ್ಲಿಯೇ ರ್ಯಾಲಿ ತೊರೆದು ಹೊರನಡೆದಿದ್ದಾರೆ. ಇವೆಲ್ಲವೂ ಅವರು ಪಕ್ಷ ಬಿಡುವ ಸೂಚನೆಗಳು ಎನ್ನಲಾಗಿದೆ.

ಆದರೆ ಕಾಂಗ್ರೆಸ್ ಶಾಸಕ ಕೃಷ್ಣಪ್ಪ ಮತ್ತು ಅವರ ಪುತ್ರ ಪ್ರಿಯಾ ಕೃಷ್ಣರವರು ಸೋಮಣ್ಣ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ. ಇನ್ನೊಂದೆಡೆ ಪ್ರಹ್ಲಾದ್ ಜೋಶಿಯವರು ಸೋಮಣ್ಣನವರು ಬಿಜೆಪಿ ತೊರೆಯುವುದಿಲ್ಲ ಎಂದಿದ್ದಾರೆ.

ವಿಜಯನಗರದ ಸಚಿವ ಆನಂದ್ ಸಿಂಗ್ ಸಿಂಗ್ ಸೇರಿದಂತೆ ಹಲವರು ಸಹ ಬಿಜೆಪಿ ತೊರೆಯುತ್ತಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಚುನಾವಣೆಗೂ ಮುನ್ನವೇ ಸಾಕಷ್ಟು ಪಕ್ಷಾಂತರಗಳು ನಡೆಯುವ ಸಾಧ್ಯತೆಯಂತೂ ಇದ್ದೇ ಇದೆ.

ಇದನ್ನೂ ಓದಿ; ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಕೆ.ಆರ್ ಪೇಟೆ: ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಸಚಿವ ನಾರಾಯಣಗೌಡ ಪಕ್ಷಾಂತರಕ್ಕೆ ಸಜ್ಜು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...