Homeಮುಖಪುಟಬಿಜೆಪಿ ತೊರೆದು ಸಾಲು ಸಾಲಾಗಿ ಕಾಂಗ್ರೆಸ್ ಸೇರಲು ಸಜ್ಜಾಗಿರುವ ಸಚಿವರು: ಕಾರಣವೇನು?

ಬಿಜೆಪಿ ತೊರೆದು ಸಾಲು ಸಾಲಾಗಿ ಕಾಂಗ್ರೆಸ್ ಸೇರಲು ಸಜ್ಜಾಗಿರುವ ಸಚಿವರು: ಕಾರಣವೇನು?

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಇನ್ನೇನು ಘೋಷಣೆಯಾಗಬೇಕಿದೆ. ಈ ಸಂದರ್ಭದಲ್ಲಿ ಹಲವಾರು ಬಿಜೆಪಿ ಸಚಿವರು, ಮುಖಂಡರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ. ರೇಷ್ಮೆ ಮತ್ತು ಯುವಜನ ಕ್ರೀಡಾ ಸಚಿವ ಕೆ.ಸಿ ನಾರಾಯಣಗೌಡ, ವಸತಿ ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎನ್ನಲಾಗಿದೆ. ಆದರೆ ಪಕ್ಷ ಸೇರ್ಪಡೆಗೆ ಕಾಂಗ್ರೆಸ್‌ನಿಂದ ಗ್ರೀನ್ ಸಿಗ್ನಲ್ ಸಿಗುವ ಮೊದಲೇ ಕೈ ಕಾರ್ಯಕರ್ತರೇ ವಿರೋಧ ವ್ಯಕ್ತಪಡಿಸಿದ್ದಾರೆ.

ಕಳೆದ ತಿಂಗಳು ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಹೆಚ್. ನಾಗೇಶ್ ಕಾಂಗ್ರೆಸ್ ಸೇರಿದ್ದರು. ಈ ತಿಂಗಳು ಕೊಳ್ಳೇಗಾಲದ ಮಾಜಿ ಶಾಸಕ, ಬಿಜೆಪಿ ಮುಖಂಡ ಜಿ.ಎನ್ ನಂಜುಂಡಸ್ವಾಮಿಯವರು ಬಿಜೆಪಿ ಪಕ್ಷ ತೊರದು ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ.

ಇನ್ನು ಸಚಿವ ಕೆ.ಸಿ ನಾರಾಯಣಗೌಡರವರು ಕೆ.ಆರ್ ಪೇಟೆಯಲ್ಲಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದು, ಕಾಂಗ್ರೆಸ್ ಸೇರಿ ಮರು ಆಯ್ಕೆಯಾಗಲು ನಿರ್ಧರಿಸಿದ್ದಾರೆ. ಆದರೆ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕೆ.ಆರ್ ಪೇಟೆ ನಗರಕ್ಕೆ ಆಗಮಿಸಿದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ ಗಂಗಾಧರ್‌ರವರ ಕಾರಿಗೆ ಮೊಟ್ಟೆ ಎಸೆದು ಕಾಂಗ್ರೆಸ್ ಕಾರ್ಯಕರ್ತರು ನಾರಾಯಣಗೌಡ ಪಕ್ಷ ಸೇರ್ಪಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎರಡು ಅವಧಿಗೆ ಮೂರು ಬಾರಿ ಶಾಸಕರಾಗಿರುವ, ಹಾಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ ಹಾಗೂ ಕಾರ್ಯಕ್ರಮ ಸಂಯೋಜನೆ ಸಾಂಖ್ಯಿಕ ಇಲಾಖೆ ಸಚಿವರೂ ಆಗಿರುವ ಕೆ.ಸಿ ನಾರಾಯಣಗೌಡರಿಗೆ ಕೆ.ಆರ್ ಪೇಟೆಯಲ್ಲಿ ಆಡಳಿತ ವಿರೋಧಿ ಅಲೆ ಕಾಡುತ್ತಿದೆ. ಈ ಹಿಂದೆ ಪೌರಾಡಳಿತ ಸಚಿವರಾಗಿದ್ದರೂ ಸಹ ಕೆ.ಆರ್ ಪೇಟೆ ನಗರದ, ಕ್ಷೇತ್ರದ ಅಭಿವೃದ್ದಿಗೆ ಕಿಂಚಿತ್ತೂ ಗಮನ ವಹಿಸಿಲ್ಲ ಎಂಬ ಆರೋಪ ದಟ್ಟವಾಗಿ ಕೇಳಿಬರುತ್ತಿದೆ.

ರಸ್ತೆಗಳನ್ನು ಮಾಡಿಸಿಲ್ಲ, ಆಶ್ರಯ ಮನೆಗಳನ್ನು ನಿರ್ಮಿಸಿಕೊಟ್ಟಿಲ್ಲ, ಒಳಚರಂಡಿ ವ್ಯವಸ್ಥೆ ಸರಿ ಮಾಡಿಸಿಲ್ಲ, ಚಿರತೆ ಹಾವಳಿ ತಡೆಗೆ ಸ್ಪಂದಿಸಿಲ್ಲ, ಅತಿವೃಷ್ಟಿ ನಿರ್ವಹಣೆಗೆ ತಲೆ ಕೆಡಿಸಿಕೊಂಡಿಲ್ಲ, ಸದಾ ಬೆಂಗಳೂರಿನಲ್ಲಿ ವಾಸಿಸುತ್ತಾ ಜನರ ಕೈಗೆ ಸಿಗುತ್ತಿಲ್ಲ, ಸ್ಟೇಡಿಯಂ ಒಳಗೆ ಒಳಾಂಗಣಾ ಕ್ರೀಡಾಂಗಣ ನಿರ್ಮಿಸಿ ಸ್ಟೇಡಿಯಂ ಇಲ್ಲದಂತೆ ಮಾಡಿದರು ಇತ್ಯಾದಿ ದೂರುಗಳು ಅವರ ಮೇಲಿವೆ.

ಕೆ.ಆರ್ ಪೇಟೆಯಲ್ಲಿ ಕಾಂಗ್ರೆಸ್ ಪಕ್ಷವು ಕ್ಷೇತ್ರದಲ್ಲಿ ಸತತವಾಗಿ ಮೂರು ಬಾರಿ ಸೋತರೂ ಸಹ ಪಕ್ಷದ ಟಿಕೆಟ್‌ಗಾಗಿ ಆಕಾಂಕ್ಷಿಗಳ ದಂಡೇ ನೆರೆದಿದೆ. ಅಧಿಕೃತವಾಗಿ 6 ಜನ ಟಿಕೆಟ್‌ಗಾಗಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದು ಮತ್ತಿಬ್ಬರು ಅರ್ಜಿ ಸಲ್ಲಿಸದೇ ಲಾಬಿ ಮಾಡುತ್ತಿದ್ದಾರೆ. ಸತತ ಮೂರು ಬಾರಿ ಸೋತಿದ್ದ ಮಾಜಿ ಶಾಸಕ ಕೆ.ಬಿ ಚಂದ್ರಶೇಖರ್ ತನಗೆ ಚುನಾವಣೆ ಸಾಕು ಎಂಬ ಮಾತುಗಳನ್ನು ಆಡುತ್ತಿದ್ದವರು ಮತ್ತೀಗ ಸಕ್ರಿಯರಾಗಿದ್ದು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಉದ್ಯಮಿ ವಿಜಯ್ ರಾಮೇಗೌಡ, ಮಾಜಿ ಶಾಸಕ ಬಿ.ಪ್ರಕಾಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್, ಎಂ.ಡಿ ಕೃಷ್ಣಮೂರ್ತಿ ಮತ್ತು ಕುರುಬ ಸಮುದಾಯದ ಬಿ.ನಾಗೇಂದ್ರ ಕುಮಾರ್ ಅರ್ಜಿ ಸಲ್ಲಿಸಿದ ಇತರರಾಗಿದ್ದಾರೆ.

ನಾರಾಯಣಗೌಡರ ನಡೆಯೇನು?

ಕ್ಷೇತ್ರದಲ್ಲಿ ತನ್ನ ಕುರಿತು ಹಬ್ಬಿರುವ ವಿರೋಧಿ ಅಲೆಯಿಂದಾಗಿ ಸಚಿವ ನಾರಾಯಣಗೌಡರು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿವೆ. ಅವರು ನನಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಬೇಡ, ಶಿವಮೊಗ್ಗವೇ ಇರಲಿ ಎಂದು ಸ್ಪಷ್ಟಪಡಿಸಿರುವುದು ಬಿಜೆಪಿ ಬಿಡುತ್ತಾರೆ ಎನ್ನುವುದಕ್ಕೆ ಪುಷ್ಠಿ ಕೊಡುವಂತಿದೆ. ಆಡಳಿತ ವಿರೋಧಿ ಅಲೆ ಇರುವ ಸಂದರ್ಭದಲ್ಲಿ ಸಾಕಷ್ಟು ಕಾರ್ಯಕರ್ತರಿಲ್ಲದ ಬಿಜೆಪಿಯಿಂದ ನಿಂತು ಗೆಲ್ಲುವುದು ಕಷ್ಟ ಎಂಬುದು ಅವರ ಅರಿವಿಗೆ ಬಂದಿದೆ. 2019ರ ಉಪಚುನಾವಣೆಯಲ್ಲಿ ಇಡೀ ಮಂತ್ರಿಮಂಡಲ ಅವರ ಪರ ಪ್ರಚಾರಕ್ಕಿಳಿದಿತ್ತು. ಆದರೆ ಈಗಿನ ಚುನಾವಣೆಗೆ ಅವರ್‍ಯಾರು ಬರುವುದಿಲ್ಲ. ಕಾಂಗ್ರೆಸ್ ಸೇರಿದರೆ, ಸದ್ಯ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗುತ್ತಾರೆ ಎಂಬ ಅಲೆ ಇರುವುದರಿಂದ ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳು ಮತ್ತು ಕುರುಬ ಸಮುದಾಯ ಸೇರಿದಂತೆ ಒಬಿಸಿ ಮತಗಳು ತನ್ನನ್ನು ಗೆಲುವಿನ ದಡ ಸೇರಿಸುತ್ತವೆ ಎಂದು ಅವರು ನಂಬಿದ್ದಾರೆ. ಬಿಎಸ್‌ಪಿ, ಜೆಡಿಎಸ್ ಮತ್ತು ಬಿಜೆಪಿ ನೋಡಿರುವ ಅವರು ಕೊನೆ ಆಟವಾಗಿ ಕಾಂಗ್ರೆಸ್‌ನತ್ತ ಆಸೆ ಇಟ್ಟುಕೊಂಡಿದ್ದಾರೆ. ಆದರೆ ಕಾಂಗ್ರೆಸ್‌ನಲ್ಲಿ ಈಗಾಗಲೇ ಟಿಕೆಟ್‌ಗಾಗಿ ಪೈಪೋಟಿಯಿದ್ದು, ನಾರಾಯಣಗೌಡರನ್ನು ಸೇರಿಸಿಕೊಂಡರೆ ಬಂಡಾಯ ಮತ್ತು ಒಳೇಟು ಕೊಡುವ ಸಾಧ್ಯತೆಗಳಿವೆ.

ಸಚಿವ ಸೋಮಣ್ಣ ಕಾಂಗ್ರೆಸ್ ಸೇರುವರೆ?

ವಸತಿ ಸಚಿವ ವಿ. ಸೋಮಣ್ಣನವರು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳ ಸಹ ಕೇಳಿ ಬರುತ್ತಿವೆ. ಸದ್ಯ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಅವರು ಬಿಜೆಪಿ ಅಧಿಕಾರಕ್ಕೆ ಬಂದಾಗ ಒಂದಷ್ಟು ಕಾಲ ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರು. ಆದರೆ ಅವರನ್ನು ಏಕಾಏಕಿ ಉಸ್ತುವಾರಿಯಿಂದ ತೆಗೆದುಹಾಕಲಾಗಿತ್ತು. ಆನಂತರ ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಿಸಲಾಗಿದೆ. ಪಕ್ಷದಲ್ಲಿ ತನಗೇ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಅವರು ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇನ್ನು ವಿ.ಸೋಮಣ್ಣನವರು ಗೋವಿಂದರಾಜ ನಗರದ ಬದಲು ಹನೂರು ಕ್ಷೇತ್ರದಿಂದ ಮುಂಬರುವ ಚುನಾವಣೆ ಎದುರಿಸುವಂತೆ ಬಿಜೆಪಿ ಸೂಚಿಸಿತ್ತು ಎನ್ನಲಾಗಿದೆ. ಅದಕ್ಕೆ ಸೋಮಣ್ಣನವರು ಒಪ್ಪಿರಲಿಲ್ಲ. ಅಲ್ಲದೆ ಇತ್ತೀಚೆಗೆ ಚಾಮರಾಜನಗರದಲ್ಲಿ ನಡೆದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಸೋಮಣ್ಣ ಗೈರಾಗಿದ್ದರು. ಹಾಗಾಗಿ ಜಿಲ್ಲೆಯ ಚುನಾವಣೆಯ ಉಸ್ತುವಾರಿ ಜವಾಬ್ದಾರಿಯನ್ನು ಕೆ.ಎಸ್ ಈಶ್ವರಪ್ಪನವರಿಗೆ ನೀಡಲಾಗಿದೆ. ಈ ಎಲ್ಲಾ ಕಾರಣಗಳಿಂದ ಅವರು ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಭಾನುವಾರ ನಡೆದ ವಿಜಯ ಸಂಕಲ್ಪ ಯಾತ್ರೆ ವೇಳೆ ಸೋಮಣ್ಣ ಮತ್ತು ಆರ್ ಅಶೋಕ್ ನಡವೆ ಮಾತಿನ ಚಕಮಕಿ ನಡೆದು ಸೋಮಣ್ಣ ಅರ್ಧದಲ್ಲಿಯೇ ರ್ಯಾಲಿ ತೊರೆದು ಹೊರನಡೆದಿದ್ದಾರೆ. ಇವೆಲ್ಲವೂ ಅವರು ಪಕ್ಷ ಬಿಡುವ ಸೂಚನೆಗಳು ಎನ್ನಲಾಗಿದೆ.

ಆದರೆ ಕಾಂಗ್ರೆಸ್ ಶಾಸಕ ಕೃಷ್ಣಪ್ಪ ಮತ್ತು ಅವರ ಪುತ್ರ ಪ್ರಿಯಾ ಕೃಷ್ಣರವರು ಸೋಮಣ್ಣ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ. ಇನ್ನೊಂದೆಡೆ ಪ್ರಹ್ಲಾದ್ ಜೋಶಿಯವರು ಸೋಮಣ್ಣನವರು ಬಿಜೆಪಿ ತೊರೆಯುವುದಿಲ್ಲ ಎಂದಿದ್ದಾರೆ.

ವಿಜಯನಗರದ ಸಚಿವ ಆನಂದ್ ಸಿಂಗ್ ಸಿಂಗ್ ಸೇರಿದಂತೆ ಹಲವರು ಸಹ ಬಿಜೆಪಿ ತೊರೆಯುತ್ತಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಚುನಾವಣೆಗೂ ಮುನ್ನವೇ ಸಾಕಷ್ಟು ಪಕ್ಷಾಂತರಗಳು ನಡೆಯುವ ಸಾಧ್ಯತೆಯಂತೂ ಇದ್ದೇ ಇದೆ.

ಇದನ್ನೂ ಓದಿ; ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಕೆ.ಆರ್ ಪೇಟೆ: ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಸಚಿವ ನಾರಾಯಣಗೌಡ ಪಕ್ಷಾಂತರಕ್ಕೆ ಸಜ್ಜು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...