Homeಮುಖಪುಟಬಿಜೆಪಿ ತೊರೆದು ಸಾಲು ಸಾಲಾಗಿ ಕಾಂಗ್ರೆಸ್ ಸೇರಲು ಸಜ್ಜಾಗಿರುವ ಸಚಿವರು: ಕಾರಣವೇನು?

ಬಿಜೆಪಿ ತೊರೆದು ಸಾಲು ಸಾಲಾಗಿ ಕಾಂಗ್ರೆಸ್ ಸೇರಲು ಸಜ್ಜಾಗಿರುವ ಸಚಿವರು: ಕಾರಣವೇನು?

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಇನ್ನೇನು ಘೋಷಣೆಯಾಗಬೇಕಿದೆ. ಈ ಸಂದರ್ಭದಲ್ಲಿ ಹಲವಾರು ಬಿಜೆಪಿ ಸಚಿವರು, ಮುಖಂಡರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ. ರೇಷ್ಮೆ ಮತ್ತು ಯುವಜನ ಕ್ರೀಡಾ ಸಚಿವ ಕೆ.ಸಿ ನಾರಾಯಣಗೌಡ, ವಸತಿ ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎನ್ನಲಾಗಿದೆ. ಆದರೆ ಪಕ್ಷ ಸೇರ್ಪಡೆಗೆ ಕಾಂಗ್ರೆಸ್‌ನಿಂದ ಗ್ರೀನ್ ಸಿಗ್ನಲ್ ಸಿಗುವ ಮೊದಲೇ ಕೈ ಕಾರ್ಯಕರ್ತರೇ ವಿರೋಧ ವ್ಯಕ್ತಪಡಿಸಿದ್ದಾರೆ.

ಕಳೆದ ತಿಂಗಳು ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಹೆಚ್. ನಾಗೇಶ್ ಕಾಂಗ್ರೆಸ್ ಸೇರಿದ್ದರು. ಈ ತಿಂಗಳು ಕೊಳ್ಳೇಗಾಲದ ಮಾಜಿ ಶಾಸಕ, ಬಿಜೆಪಿ ಮುಖಂಡ ಜಿ.ಎನ್ ನಂಜುಂಡಸ್ವಾಮಿಯವರು ಬಿಜೆಪಿ ಪಕ್ಷ ತೊರದು ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ.

ಇನ್ನು ಸಚಿವ ಕೆ.ಸಿ ನಾರಾಯಣಗೌಡರವರು ಕೆ.ಆರ್ ಪೇಟೆಯಲ್ಲಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದು, ಕಾಂಗ್ರೆಸ್ ಸೇರಿ ಮರು ಆಯ್ಕೆಯಾಗಲು ನಿರ್ಧರಿಸಿದ್ದಾರೆ. ಆದರೆ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕೆ.ಆರ್ ಪೇಟೆ ನಗರಕ್ಕೆ ಆಗಮಿಸಿದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ ಗಂಗಾಧರ್‌ರವರ ಕಾರಿಗೆ ಮೊಟ್ಟೆ ಎಸೆದು ಕಾಂಗ್ರೆಸ್ ಕಾರ್ಯಕರ್ತರು ನಾರಾಯಣಗೌಡ ಪಕ್ಷ ಸೇರ್ಪಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎರಡು ಅವಧಿಗೆ ಮೂರು ಬಾರಿ ಶಾಸಕರಾಗಿರುವ, ಹಾಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ ಹಾಗೂ ಕಾರ್ಯಕ್ರಮ ಸಂಯೋಜನೆ ಸಾಂಖ್ಯಿಕ ಇಲಾಖೆ ಸಚಿವರೂ ಆಗಿರುವ ಕೆ.ಸಿ ನಾರಾಯಣಗೌಡರಿಗೆ ಕೆ.ಆರ್ ಪೇಟೆಯಲ್ಲಿ ಆಡಳಿತ ವಿರೋಧಿ ಅಲೆ ಕಾಡುತ್ತಿದೆ. ಈ ಹಿಂದೆ ಪೌರಾಡಳಿತ ಸಚಿವರಾಗಿದ್ದರೂ ಸಹ ಕೆ.ಆರ್ ಪೇಟೆ ನಗರದ, ಕ್ಷೇತ್ರದ ಅಭಿವೃದ್ದಿಗೆ ಕಿಂಚಿತ್ತೂ ಗಮನ ವಹಿಸಿಲ್ಲ ಎಂಬ ಆರೋಪ ದಟ್ಟವಾಗಿ ಕೇಳಿಬರುತ್ತಿದೆ.

ರಸ್ತೆಗಳನ್ನು ಮಾಡಿಸಿಲ್ಲ, ಆಶ್ರಯ ಮನೆಗಳನ್ನು ನಿರ್ಮಿಸಿಕೊಟ್ಟಿಲ್ಲ, ಒಳಚರಂಡಿ ವ್ಯವಸ್ಥೆ ಸರಿ ಮಾಡಿಸಿಲ್ಲ, ಚಿರತೆ ಹಾವಳಿ ತಡೆಗೆ ಸ್ಪಂದಿಸಿಲ್ಲ, ಅತಿವೃಷ್ಟಿ ನಿರ್ವಹಣೆಗೆ ತಲೆ ಕೆಡಿಸಿಕೊಂಡಿಲ್ಲ, ಸದಾ ಬೆಂಗಳೂರಿನಲ್ಲಿ ವಾಸಿಸುತ್ತಾ ಜನರ ಕೈಗೆ ಸಿಗುತ್ತಿಲ್ಲ, ಸ್ಟೇಡಿಯಂ ಒಳಗೆ ಒಳಾಂಗಣಾ ಕ್ರೀಡಾಂಗಣ ನಿರ್ಮಿಸಿ ಸ್ಟೇಡಿಯಂ ಇಲ್ಲದಂತೆ ಮಾಡಿದರು ಇತ್ಯಾದಿ ದೂರುಗಳು ಅವರ ಮೇಲಿವೆ.

ಕೆ.ಆರ್ ಪೇಟೆಯಲ್ಲಿ ಕಾಂಗ್ರೆಸ್ ಪಕ್ಷವು ಕ್ಷೇತ್ರದಲ್ಲಿ ಸತತವಾಗಿ ಮೂರು ಬಾರಿ ಸೋತರೂ ಸಹ ಪಕ್ಷದ ಟಿಕೆಟ್‌ಗಾಗಿ ಆಕಾಂಕ್ಷಿಗಳ ದಂಡೇ ನೆರೆದಿದೆ. ಅಧಿಕೃತವಾಗಿ 6 ಜನ ಟಿಕೆಟ್‌ಗಾಗಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದು ಮತ್ತಿಬ್ಬರು ಅರ್ಜಿ ಸಲ್ಲಿಸದೇ ಲಾಬಿ ಮಾಡುತ್ತಿದ್ದಾರೆ. ಸತತ ಮೂರು ಬಾರಿ ಸೋತಿದ್ದ ಮಾಜಿ ಶಾಸಕ ಕೆ.ಬಿ ಚಂದ್ರಶೇಖರ್ ತನಗೆ ಚುನಾವಣೆ ಸಾಕು ಎಂಬ ಮಾತುಗಳನ್ನು ಆಡುತ್ತಿದ್ದವರು ಮತ್ತೀಗ ಸಕ್ರಿಯರಾಗಿದ್ದು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಉದ್ಯಮಿ ವಿಜಯ್ ರಾಮೇಗೌಡ, ಮಾಜಿ ಶಾಸಕ ಬಿ.ಪ್ರಕಾಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್, ಎಂ.ಡಿ ಕೃಷ್ಣಮೂರ್ತಿ ಮತ್ತು ಕುರುಬ ಸಮುದಾಯದ ಬಿ.ನಾಗೇಂದ್ರ ಕುಮಾರ್ ಅರ್ಜಿ ಸಲ್ಲಿಸಿದ ಇತರರಾಗಿದ್ದಾರೆ.

ನಾರಾಯಣಗೌಡರ ನಡೆಯೇನು?

ಕ್ಷೇತ್ರದಲ್ಲಿ ತನ್ನ ಕುರಿತು ಹಬ್ಬಿರುವ ವಿರೋಧಿ ಅಲೆಯಿಂದಾಗಿ ಸಚಿವ ನಾರಾಯಣಗೌಡರು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿವೆ. ಅವರು ನನಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಬೇಡ, ಶಿವಮೊಗ್ಗವೇ ಇರಲಿ ಎಂದು ಸ್ಪಷ್ಟಪಡಿಸಿರುವುದು ಬಿಜೆಪಿ ಬಿಡುತ್ತಾರೆ ಎನ್ನುವುದಕ್ಕೆ ಪುಷ್ಠಿ ಕೊಡುವಂತಿದೆ. ಆಡಳಿತ ವಿರೋಧಿ ಅಲೆ ಇರುವ ಸಂದರ್ಭದಲ್ಲಿ ಸಾಕಷ್ಟು ಕಾರ್ಯಕರ್ತರಿಲ್ಲದ ಬಿಜೆಪಿಯಿಂದ ನಿಂತು ಗೆಲ್ಲುವುದು ಕಷ್ಟ ಎಂಬುದು ಅವರ ಅರಿವಿಗೆ ಬಂದಿದೆ. 2019ರ ಉಪಚುನಾವಣೆಯಲ್ಲಿ ಇಡೀ ಮಂತ್ರಿಮಂಡಲ ಅವರ ಪರ ಪ್ರಚಾರಕ್ಕಿಳಿದಿತ್ತು. ಆದರೆ ಈಗಿನ ಚುನಾವಣೆಗೆ ಅವರ್‍ಯಾರು ಬರುವುದಿಲ್ಲ. ಕಾಂಗ್ರೆಸ್ ಸೇರಿದರೆ, ಸದ್ಯ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗುತ್ತಾರೆ ಎಂಬ ಅಲೆ ಇರುವುದರಿಂದ ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳು ಮತ್ತು ಕುರುಬ ಸಮುದಾಯ ಸೇರಿದಂತೆ ಒಬಿಸಿ ಮತಗಳು ತನ್ನನ್ನು ಗೆಲುವಿನ ದಡ ಸೇರಿಸುತ್ತವೆ ಎಂದು ಅವರು ನಂಬಿದ್ದಾರೆ. ಬಿಎಸ್‌ಪಿ, ಜೆಡಿಎಸ್ ಮತ್ತು ಬಿಜೆಪಿ ನೋಡಿರುವ ಅವರು ಕೊನೆ ಆಟವಾಗಿ ಕಾಂಗ್ರೆಸ್‌ನತ್ತ ಆಸೆ ಇಟ್ಟುಕೊಂಡಿದ್ದಾರೆ. ಆದರೆ ಕಾಂಗ್ರೆಸ್‌ನಲ್ಲಿ ಈಗಾಗಲೇ ಟಿಕೆಟ್‌ಗಾಗಿ ಪೈಪೋಟಿಯಿದ್ದು, ನಾರಾಯಣಗೌಡರನ್ನು ಸೇರಿಸಿಕೊಂಡರೆ ಬಂಡಾಯ ಮತ್ತು ಒಳೇಟು ಕೊಡುವ ಸಾಧ್ಯತೆಗಳಿವೆ.

ಸಚಿವ ಸೋಮಣ್ಣ ಕಾಂಗ್ರೆಸ್ ಸೇರುವರೆ?

ವಸತಿ ಸಚಿವ ವಿ. ಸೋಮಣ್ಣನವರು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳ ಸಹ ಕೇಳಿ ಬರುತ್ತಿವೆ. ಸದ್ಯ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಅವರು ಬಿಜೆಪಿ ಅಧಿಕಾರಕ್ಕೆ ಬಂದಾಗ ಒಂದಷ್ಟು ಕಾಲ ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರು. ಆದರೆ ಅವರನ್ನು ಏಕಾಏಕಿ ಉಸ್ತುವಾರಿಯಿಂದ ತೆಗೆದುಹಾಕಲಾಗಿತ್ತು. ಆನಂತರ ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಿಸಲಾಗಿದೆ. ಪಕ್ಷದಲ್ಲಿ ತನಗೇ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಅವರು ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇನ್ನು ವಿ.ಸೋಮಣ್ಣನವರು ಗೋವಿಂದರಾಜ ನಗರದ ಬದಲು ಹನೂರು ಕ್ಷೇತ್ರದಿಂದ ಮುಂಬರುವ ಚುನಾವಣೆ ಎದುರಿಸುವಂತೆ ಬಿಜೆಪಿ ಸೂಚಿಸಿತ್ತು ಎನ್ನಲಾಗಿದೆ. ಅದಕ್ಕೆ ಸೋಮಣ್ಣನವರು ಒಪ್ಪಿರಲಿಲ್ಲ. ಅಲ್ಲದೆ ಇತ್ತೀಚೆಗೆ ಚಾಮರಾಜನಗರದಲ್ಲಿ ನಡೆದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಸೋಮಣ್ಣ ಗೈರಾಗಿದ್ದರು. ಹಾಗಾಗಿ ಜಿಲ್ಲೆಯ ಚುನಾವಣೆಯ ಉಸ್ತುವಾರಿ ಜವಾಬ್ದಾರಿಯನ್ನು ಕೆ.ಎಸ್ ಈಶ್ವರಪ್ಪನವರಿಗೆ ನೀಡಲಾಗಿದೆ. ಈ ಎಲ್ಲಾ ಕಾರಣಗಳಿಂದ ಅವರು ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಭಾನುವಾರ ನಡೆದ ವಿಜಯ ಸಂಕಲ್ಪ ಯಾತ್ರೆ ವೇಳೆ ಸೋಮಣ್ಣ ಮತ್ತು ಆರ್ ಅಶೋಕ್ ನಡವೆ ಮಾತಿನ ಚಕಮಕಿ ನಡೆದು ಸೋಮಣ್ಣ ಅರ್ಧದಲ್ಲಿಯೇ ರ್ಯಾಲಿ ತೊರೆದು ಹೊರನಡೆದಿದ್ದಾರೆ. ಇವೆಲ್ಲವೂ ಅವರು ಪಕ್ಷ ಬಿಡುವ ಸೂಚನೆಗಳು ಎನ್ನಲಾಗಿದೆ.

ಆದರೆ ಕಾಂಗ್ರೆಸ್ ಶಾಸಕ ಕೃಷ್ಣಪ್ಪ ಮತ್ತು ಅವರ ಪುತ್ರ ಪ್ರಿಯಾ ಕೃಷ್ಣರವರು ಸೋಮಣ್ಣ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ. ಇನ್ನೊಂದೆಡೆ ಪ್ರಹ್ಲಾದ್ ಜೋಶಿಯವರು ಸೋಮಣ್ಣನವರು ಬಿಜೆಪಿ ತೊರೆಯುವುದಿಲ್ಲ ಎಂದಿದ್ದಾರೆ.

ವಿಜಯನಗರದ ಸಚಿವ ಆನಂದ್ ಸಿಂಗ್ ಸಿಂಗ್ ಸೇರಿದಂತೆ ಹಲವರು ಸಹ ಬಿಜೆಪಿ ತೊರೆಯುತ್ತಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಚುನಾವಣೆಗೂ ಮುನ್ನವೇ ಸಾಕಷ್ಟು ಪಕ್ಷಾಂತರಗಳು ನಡೆಯುವ ಸಾಧ್ಯತೆಯಂತೂ ಇದ್ದೇ ಇದೆ.

ಇದನ್ನೂ ಓದಿ; ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಕೆ.ಆರ್ ಪೇಟೆ: ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಸಚಿವ ನಾರಾಯಣಗೌಡ ಪಕ್ಷಾಂತರಕ್ಕೆ ಸಜ್ಜು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...