Homeಮುಖಪುಟ23 ಜಿಲ್ಲೆಗಳಿಗೆ ಸಚಿವ ಸ್ಥಾನ: 8 ಜಿಲ್ಲೆಗಳಿಗಿಲ್ಲ ಪ್ರಾತಿನಿಧ್ಯ

23 ಜಿಲ್ಲೆಗಳಿಗೆ ಸಚಿವ ಸ್ಥಾನ: 8 ಜಿಲ್ಲೆಗಳಿಗಿಲ್ಲ ಪ್ರಾತಿನಿಧ್ಯ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್‌ ಸರ್ಕಾರದ ಸಂಪುಟ ವಿಸ್ತರಣೆಯಾಗಿದ್ದು ಸಿಎಂ ಸೇರಿ ಒಟ್ಟು 34 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಪೈಕಿ ರಾಜ್ಯದ 31 ಜಿಲ್ಲೆಗಳ ಪೈಕಿ 23 ಜಿಲ್ಲೆಗಳಿಗೆ ಮಾತ್ರವೇ ಸಚಿವ ಸ್ಥಾನದ ಪ್ರಾತಿನಿಧ್ಯ ಸಿಕ್ಕಿದ್ದು, ಉಳಿದ ಎಂಟು ಜಿಲ್ಲೆಗಳು ಸಚಿವ ಸ್ಥಾನ ಸಿಕ್ಕಿಲ್ಲ.

ಬೆಂಗಳೂರು ನಗರ ಜಿಲ್ಲೆಯ ಆರು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಮೈಸೂರು ಎರಡನೇ ಸ್ಥಾನದಲ್ಲಿದ್ದು, ಸಿದ್ದರಾಮಯ್ಯ ಅವರಲ್ಲದೇ ಇನ್ನೂ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿದೆ.

ತುಮಕೂರು, ವಿಜಯಪುರ, ಕಲಬುರಗಿ, ಬೀದರ್ ಮತ್ತು ಬೆಳಗಾಂ ಜಿಲ್ಲೆಗಳ ತಲಾ ಇಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ. 16 ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ.

ಕೋಲಾರ, ಹಾಸನ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ವಿಜಯನಗರ ಜಿಲ್ಲೆಗಳಲ್ಲಿ ಯಾರೊಬ್ಬರಿಗೂ ಸಚಿವ ಸ್ಥಾನ ಸಿಕ್ಕಿಲ್ಲ.

ವಿಧಾನಸಭೆ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್‌ನತ್ತ ವಲಸೆ ಬಂದಿರುವ ಹಲವರಿಗೆ ಸಚಿವ ಸ್ಥಾನ ನೀಡಿಲ್ಲ. ಪ್ರಮುಖವಾಗಿ ಬಿಜೆಪಿಯಿಂದ ಬಂದ ಮಾಜಿ ಡಿಸಿಎಂ ಲಕ್ಷ್ಮಣ್‌ ಸವದಿ, ಅಶೋಕ್‌ ರೈ ಸೇರಿದಂತೆ ಹಲವರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದರು. ಜೆಡಿಎಸ್‌ನಿಂದ ಕೆ.ಎಂ ಶಿವಲಿಂಗೇಗೌಡ, ಗುಬ್ಬಿ ಶ್ರೀನಿವಾಸ್‌ ಸೇರ್ಪಡೆಯಾಗಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ ಎಲ್ಲರಿಗು ಸಚಿವ ಸ್ಥಾನ ನೀಡುವುದು ಕಷ್ಟವಾದ್ದರಿಂದ ಇವರೆಲ್ಲರೂ ಸಚಿವ ಸ್ಥಾನಿಂದ ವಂಚಿತರಾಗಿದ್ದಾರೆ.

ಇನ್ನು ಸಚಿವ ಸ್ಥಾನ ಸಿಗದವರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡುವುದಾಗಿ ಕಾಂಗ್ರೆಸ್ ಮುಖಂಡರು ಸಮಾಧಾನ ಮಾಡಲು ಯತ್ನಿಸುತ್ತಿದ್ದಾರೆ.

ನೂತನ ಸಚಿವರ ಪಟ್ಟಿ

ಸಿದ್ದರಾಮಯ್ಯ: ಮೈಸೂರು

ಡಿ.ಕೆ ಶಿವಕುಮಾರ್: ರಾಮನಗರ

ಕೆ.ಎಚ್ ಮುನಿಯಪ್ಪ: ಬೆಂಗಳೂರು ಗ್ರಾಮಾಂತರ

ಡಾ.ಜಿ ಪರಮೇಶ್ವರ್: ತುಮಕೂರು

ಸತೀಶ್ ಜಾರಕಿಹೊಳಿ: ಬೆಳಗಾಂ

ಪ್ರಿಯಾಂಕ್ ಖರ್ಗೆ: ಕಲಬುರಗಿ

ರಾಮಲಿಂಗಾರೆಡ್ಡಿ: ಬೆಂಗಳೂರು ನಗರ

ಜಮೀರ್ ಅಹ್ಮದ್ ಖಾನ್: ಬೆಂಗಳೂರು ನಗರ

ಕೆ.ಜೆ ಜಾರ್ಜ್: ಬೆಂಗಳೂರು ನಗರ

ಎಂ.ಬಿ ಪಾಟೀಲ್: ವಿಜಯಪುರ

ಎಚ್.ಕೆ.ಪಾಟೀಲ- ಗದಗ

ಕೃಷ್ಣ ಬೈರೇಗೌಡ- ಬೆಂಗಳೂರು ನಗರ

ಎನ್.ಚಲುವರಾಯಸ್ವಾಮಿ- ಮಂಡ್ಯ

ಕೆ.ವೆಂಕಟೇಶ್‌- ಮೈಸೂರು

ಡಾ.ಎಚ್‌.ಸಿ.ಮಹದೇವಪ್ಪ- ಮೈಸೂರು

ಈಶ್ವರ ಖಂಡ್ರೆ- ಬೀದರ್

ಕೆ.ಎನ್‌.ರಾಜಣ್ಣ- ತುಮಕೂರು

ದಿನೇಶ್‌ ಗುಂಡೂರಾವ್‌- ಬೆಂಗಳೂರು ನಗರ

ಶರಣಬಸಪ್ಪ ದರ್ಶನಾಪುರ- ಯಾದಗಿರಿ

ಶಿವಾನಂದ ಪಾಟೀಲ- ವಿಜಯಪುರ

ಆರ್.ಬಿ.ತಿಮ್ಮಾಪುರ- ಬಾಗಲಕೋಟ

ಎಸ್‌.ಎಸ್‌.ಮಲ್ಲಿಕಾರ್ಜುನ- ದಾವಣಗೆರೆ

ಶಿವರಾಜ ತಂಗಡಗಿ- ಕೊಪ್ಪಳ

ಶರಣ ಪ್ರಕಾಶ ಪಾಟೀಲ- ಕಲಬುರಗಿ

ಮಂಕಾಳ ಸುಬ್ಬ ವೈದ್ಯ- ಉತ್ತರ ಕನ್ನಡ

ಲಕ್ಷ್ಮಿ ಹೆಬ್ಬಾಳ್ಕರ್- ಬೆಳಗಾಂ

ರಹೀಂ ಖಾನ್‌- ಬೀದರ್

ಡಿ.ಸುಧಾಕರ್‌- ಚಿತ್ರದುರ್ಗ

ಸಂತೋಷ್‌ ಎಸ್‌.ಲಾಡ್‌- ಧಾರವಾಡ

ಎನ್‌.ಎಸ್.ಬೋಸರಾಜು- ರಾಯಚೂರು

ಬೈರತಿ ಸುರೇಶ್‌- ಬೆಂಗಳೂರು ನಗರ

ಮಧು ಬಂಗಾರಪ್ಪ- ಶಿವಮೊಗ್ಗ

ಡಾ.ಎಂ.ಸಿ.ಸುಧಾಕರ್‌- ಚಿಕ್ಕಬಳ್ಳಾಪುರ

ಬಿ.ನಾಗೇಂದ್ರ- ಬಳ್ಳಾರಿ

ಇದನ್ನೂ ಓದಿ: ಕರಾವಳಿ ಕೋಮುಹತ್ಯೆಗಳ ತನಿಖೆಗೆ ಎಸ್‌ಐಟಿ ರಚಿಸಿ: ರಮಾನಾಥ್ ರೈ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...