Homeಮುಖಪುಟ23 ಜಿಲ್ಲೆಗಳಿಗೆ ಸಚಿವ ಸ್ಥಾನ: 8 ಜಿಲ್ಲೆಗಳಿಗಿಲ್ಲ ಪ್ರಾತಿನಿಧ್ಯ

23 ಜಿಲ್ಲೆಗಳಿಗೆ ಸಚಿವ ಸ್ಥಾನ: 8 ಜಿಲ್ಲೆಗಳಿಗಿಲ್ಲ ಪ್ರಾತಿನಿಧ್ಯ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್‌ ಸರ್ಕಾರದ ಸಂಪುಟ ವಿಸ್ತರಣೆಯಾಗಿದ್ದು ಸಿಎಂ ಸೇರಿ ಒಟ್ಟು 34 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಪೈಕಿ ರಾಜ್ಯದ 31 ಜಿಲ್ಲೆಗಳ ಪೈಕಿ 23 ಜಿಲ್ಲೆಗಳಿಗೆ ಮಾತ್ರವೇ ಸಚಿವ ಸ್ಥಾನದ ಪ್ರಾತಿನಿಧ್ಯ ಸಿಕ್ಕಿದ್ದು, ಉಳಿದ ಎಂಟು ಜಿಲ್ಲೆಗಳು ಸಚಿವ ಸ್ಥಾನ ಸಿಕ್ಕಿಲ್ಲ.

ಬೆಂಗಳೂರು ನಗರ ಜಿಲ್ಲೆಯ ಆರು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಮೈಸೂರು ಎರಡನೇ ಸ್ಥಾನದಲ್ಲಿದ್ದು, ಸಿದ್ದರಾಮಯ್ಯ ಅವರಲ್ಲದೇ ಇನ್ನೂ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿದೆ.

ತುಮಕೂರು, ವಿಜಯಪುರ, ಕಲಬುರಗಿ, ಬೀದರ್ ಮತ್ತು ಬೆಳಗಾಂ ಜಿಲ್ಲೆಗಳ ತಲಾ ಇಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ. 16 ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ.

ಕೋಲಾರ, ಹಾಸನ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ವಿಜಯನಗರ ಜಿಲ್ಲೆಗಳಲ್ಲಿ ಯಾರೊಬ್ಬರಿಗೂ ಸಚಿವ ಸ್ಥಾನ ಸಿಕ್ಕಿಲ್ಲ.

ವಿಧಾನಸಭೆ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್‌ನತ್ತ ವಲಸೆ ಬಂದಿರುವ ಹಲವರಿಗೆ ಸಚಿವ ಸ್ಥಾನ ನೀಡಿಲ್ಲ. ಪ್ರಮುಖವಾಗಿ ಬಿಜೆಪಿಯಿಂದ ಬಂದ ಮಾಜಿ ಡಿಸಿಎಂ ಲಕ್ಷ್ಮಣ್‌ ಸವದಿ, ಅಶೋಕ್‌ ರೈ ಸೇರಿದಂತೆ ಹಲವರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದರು. ಜೆಡಿಎಸ್‌ನಿಂದ ಕೆ.ಎಂ ಶಿವಲಿಂಗೇಗೌಡ, ಗುಬ್ಬಿ ಶ್ರೀನಿವಾಸ್‌ ಸೇರ್ಪಡೆಯಾಗಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ ಎಲ್ಲರಿಗು ಸಚಿವ ಸ್ಥಾನ ನೀಡುವುದು ಕಷ್ಟವಾದ್ದರಿಂದ ಇವರೆಲ್ಲರೂ ಸಚಿವ ಸ್ಥಾನಿಂದ ವಂಚಿತರಾಗಿದ್ದಾರೆ.

ಇನ್ನು ಸಚಿವ ಸ್ಥಾನ ಸಿಗದವರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡುವುದಾಗಿ ಕಾಂಗ್ರೆಸ್ ಮುಖಂಡರು ಸಮಾಧಾನ ಮಾಡಲು ಯತ್ನಿಸುತ್ತಿದ್ದಾರೆ.

ನೂತನ ಸಚಿವರ ಪಟ್ಟಿ

ಸಿದ್ದರಾಮಯ್ಯ: ಮೈಸೂರು

ಡಿ.ಕೆ ಶಿವಕುಮಾರ್: ರಾಮನಗರ

ಕೆ.ಎಚ್ ಮುನಿಯಪ್ಪ: ಬೆಂಗಳೂರು ಗ್ರಾಮಾಂತರ

ಡಾ.ಜಿ ಪರಮೇಶ್ವರ್: ತುಮಕೂರು

ಸತೀಶ್ ಜಾರಕಿಹೊಳಿ: ಬೆಳಗಾಂ

ಪ್ರಿಯಾಂಕ್ ಖರ್ಗೆ: ಕಲಬುರಗಿ

ರಾಮಲಿಂಗಾರೆಡ್ಡಿ: ಬೆಂಗಳೂರು ನಗರ

ಜಮೀರ್ ಅಹ್ಮದ್ ಖಾನ್: ಬೆಂಗಳೂರು ನಗರ

ಕೆ.ಜೆ ಜಾರ್ಜ್: ಬೆಂಗಳೂರು ನಗರ

ಎಂ.ಬಿ ಪಾಟೀಲ್: ವಿಜಯಪುರ

ಎಚ್.ಕೆ.ಪಾಟೀಲ- ಗದಗ

ಕೃಷ್ಣ ಬೈರೇಗೌಡ- ಬೆಂಗಳೂರು ನಗರ

ಎನ್.ಚಲುವರಾಯಸ್ವಾಮಿ- ಮಂಡ್ಯ

ಕೆ.ವೆಂಕಟೇಶ್‌- ಮೈಸೂರು

ಡಾ.ಎಚ್‌.ಸಿ.ಮಹದೇವಪ್ಪ- ಮೈಸೂರು

ಈಶ್ವರ ಖಂಡ್ರೆ- ಬೀದರ್

ಕೆ.ಎನ್‌.ರಾಜಣ್ಣ- ತುಮಕೂರು

ದಿನೇಶ್‌ ಗುಂಡೂರಾವ್‌- ಬೆಂಗಳೂರು ನಗರ

ಶರಣಬಸಪ್ಪ ದರ್ಶನಾಪುರ- ಯಾದಗಿರಿ

ಶಿವಾನಂದ ಪಾಟೀಲ- ವಿಜಯಪುರ

ಆರ್.ಬಿ.ತಿಮ್ಮಾಪುರ- ಬಾಗಲಕೋಟ

ಎಸ್‌.ಎಸ್‌.ಮಲ್ಲಿಕಾರ್ಜುನ- ದಾವಣಗೆರೆ

ಶಿವರಾಜ ತಂಗಡಗಿ- ಕೊಪ್ಪಳ

ಶರಣ ಪ್ರಕಾಶ ಪಾಟೀಲ- ಕಲಬುರಗಿ

ಮಂಕಾಳ ಸುಬ್ಬ ವೈದ್ಯ- ಉತ್ತರ ಕನ್ನಡ

ಲಕ್ಷ್ಮಿ ಹೆಬ್ಬಾಳ್ಕರ್- ಬೆಳಗಾಂ

ರಹೀಂ ಖಾನ್‌- ಬೀದರ್

ಡಿ.ಸುಧಾಕರ್‌- ಚಿತ್ರದುರ್ಗ

ಸಂತೋಷ್‌ ಎಸ್‌.ಲಾಡ್‌- ಧಾರವಾಡ

ಎನ್‌.ಎಸ್.ಬೋಸರಾಜು- ರಾಯಚೂರು

ಬೈರತಿ ಸುರೇಶ್‌- ಬೆಂಗಳೂರು ನಗರ

ಮಧು ಬಂಗಾರಪ್ಪ- ಶಿವಮೊಗ್ಗ

ಡಾ.ಎಂ.ಸಿ.ಸುಧಾಕರ್‌- ಚಿಕ್ಕಬಳ್ಳಾಪುರ

ಬಿ.ನಾಗೇಂದ್ರ- ಬಳ್ಳಾರಿ

ಇದನ್ನೂ ಓದಿ: ಕರಾವಳಿ ಕೋಮುಹತ್ಯೆಗಳ ತನಿಖೆಗೆ ಎಸ್‌ಐಟಿ ರಚಿಸಿ: ರಮಾನಾಥ್ ರೈ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...