Homeಚಳವಳಿಪ್ರಧಾನಿ ಭೇಟಿ ಮಾಡಿದ ಸಚಿವರು: ಇಂದಿನ ಮಾತುಕತೆ ಕೊನೆಯದು ಎಂದ ರೈತರು

ಪ್ರಧಾನಿ ಭೇಟಿ ಮಾಡಿದ ಸಚಿವರು: ಇಂದಿನ ಮಾತುಕತೆ ಕೊನೆಯದು ಎಂದ ರೈತರು

ರೈತರ ಗೊಂದಲಗಳನ್ನು ನಮ್ಮ ಸಚಿವರು ನಿವಾರಿಸಿದ್ದಾರೆ. ಆದರೂ ವಿರೋಧ ಪಕ್ಷಗಳ ರಾಜಕೀಯ ಕುಮ್ಮಕ್ಕಿನಿಂದ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ - ಕೃಷಿ ರಾಜ್ಯ ಸಚಿವ ಕೈಲಾಶ್ ಚೌಧರಿ

- Advertisement -
- Advertisement -

ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ದೇಶದ ರೈತರು ದೆಹಲಿಯ ಗಡಿಗಳಲ್ಲಿ ನಡೆಸುತ್ತಿರುವ ದಿಟ್ಟ ಹೋರಾಟ ಸತತ 9ನೇ ದಿನಕ್ಕೆ ಕಾಲಿಟ್ಟಿದೆ. ಈ ಒಂದು ವಾರದಲ್ಲಿಯೇ ಕೇಂದ್ರ ಸಚಿವರು ಹೋರಾಟನಿರತ ರೈತ ಮುಖಂಡರೊಂದಿಗೆ ಎರಡು ಸುತ್ತಿನ ಸಭೆ ನಡೆಸಿದ್ದು, ಎರಡೂ ವಿಫಲವಾಗಿವೆ. ಈ ಹಿನ್ನೆಲೆಯಲ್ಲಿ ಇಂದು ಮೂರನೇ ಸುತ್ತಿನ ಸಭೆ ನಡೆಯಲಿದ್ದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹಸಚಿವ ಅಮಿತ್‌ ಶಾ ಇಂದು ಸಭೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿಯವರನ್ನು ಅವರ ಮನೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇನ್ನೊಂದು ಕಡೆ ರೈತರು ಇಂದಿನ ಮಾತುಕತೆ ನಮ್ಮ ಕೊನೆ ಮಾತಕತೆಯಾಗಲಿದ್ದು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯದಿದ್ದರೆ ಮಂಗಳವಾರ ಭಾರತ್ ಬಂದ್ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕೃಷಿ ಕಾಯ್ದೆಗಳಲ್ಲಿ ತಿದ್ದುಪಡಿ ತರುವುದಾಗಿ, ಎಂಎಸ್‌ಪಿ ನೀಡುವುದಾಗಿ ಮತ್ತು ಗುತ್ತಿಗೆ ಪದ್ದತಿಯಲ್ಲಿನ ಸಮಸ್ಯೆ ಬಗೆಹರಿಸಲು ಕೋರ್ಟ್‌ಗೆ ಹೋಗಬಹುದು ಎಂಬ ಬದಲಾವಣೆಗೆ ಕೇಂದ್ರ ಒಪ್ಪಿಕೊಂಡಿದೆ. ಆದರೆ ಮೂರು ಕಾಯ್ದೆಗಳನ್ನು ಹಿಂಪಡೆಯದ ಹೊರತು ಕೇಂದ್ರದ ಯಾವುದೇ ಬದಲಾವಣೆಗೆ ನಮ್ಮ ಒಪ್ಪಿಗೆಯಿಲ್ಲ ಎಂದು ಹೋರಾಟನಿರತ ರೈತರು ಪಟ್ಟು ಹಿಡಿದಿದ್ದಾರೆ.

ರೈತರ ಗೊಂದಲಗಳನ್ನು ನಮ್ಮ ಸಚಿವರು ನಿವಾರಿಸಿದ್ದಾರೆ. ಆದರೂ ವಿರೋಧ ಪಕ್ಷಗಳ ರಾಜಕೀಯ ಕುಮ್ಮಕ್ಕಿನಿಂದ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ ಎಂದು ಕೃಷಿ ರಾಜ್ಯ ಸಚಿವ ಕೈಲಾಶ್ ಚೌಧರಿ ಆರೋಪಿಸಿದ್ದಾರೆ.

ಸರ್ಕಾರದ ಜೊತೆ ಮಾತುಕತೆಯಿಂದ ಪ್ರಯೋಜನವಿಲ್ಲ. ಅವರು ಕಾಯ್ದೆಗಳನ್ನು ವಾಪಸ್ ಪಡೆಯಲು ಮುಂದಾಗುತ್ತಿಲ್ಲ. ಹಾಗಾಗಿ ಹೋರಾಟ ತೀವ್ರಗೊಳಿಸುವುದು ಅನಿವಾರ್ಯ. ಹಾಗಾಗಿ ಮಂಗಳವಾರ ಭಾರತ್ ಬಂದ್ ನಡೆಸಲಿದ್ದೇವೆ. ದೆಹಲಿಯ ಪ್ರತಿ ರಸ್ತೆಗಳನ್ನು, ಪ್ರತಿ ಟೋಲ್‌ಗಳನ್ನು ಬಂದ್ ಮಾಡುತ್ತೇವೆ ಎಂದು ರೈತರು ಘೋಷಿಸಿದ್ದಾರೆ.


ಇದನ್ನೂ ಓದಿ: ಡಿಸೆಂಬರ್ 8 ರ ಮಂಗಳವಾರ ಭಾರತ್‌ ಬಂದ್‌ಗೆ ಕರೆ ನೀಡಿದ ಹೋರಾಟನಿರತ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...