Homeಮುಖಪುಟ9 ಶಾಸಕರಿಗೆ ಮೊದಲ ಬಾರಿಗೆ ಸಚಿವ ಸ್ಥಾನ: ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಒತ್ತು

9 ಶಾಸಕರಿಗೆ ಮೊದಲ ಬಾರಿಗೆ ಸಚಿವ ಸ್ಥಾನ: ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಒತ್ತು

- Advertisement -
- Advertisement -

ಸಿದ್ದರಾಮಯ್ಯನವರ ಸಚಿವ ಸಂಪುಟ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿದೆ. ಸಿಎಂ ಸಿದ್ದರಾಮಯ್ಯನವರು ಸೇರಿ 34 ಸಚಿವ ಸ್ಥಾನಗಳನ್ನು ಎರಡು ಹಂತದಲ್ಲಿ ತುಂಬಲಾಗಿದೆ ಮಾತ್ರವಲ್ಲದೇ ಎಲ್ಲರಿಗೂ ಖಾತೆ ಹಂಚಿಕೆ ಮಾಡಿ ಮುಗಿಸಲಾಗಿದೆ. ಆ ಮೂಲಕ ಅತೃಪ್ತ ಶಾಸಕರಿಗೆ ನೀಡುವುದಕ್ಕಾಗಿ ಕೆಲ ಸ್ಥಾನಗಳನ್ನು ಖಾಲಿ ಬಿಟ್ಟುಕೊಳ್ಳುವ ಸಂಪ್ರದಾಯಕ್ಕೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದೆ. ಹೊಸಬರು ಮತ್ತು ಅನುಭವಿಗಳ ಸಮತೋಲನ ಕಾಪಾಡಿಕೊಳ್ಳುವ ದೃಷ್ಟಿಯಿಂದ ಸಚಿವ ಸಂಪುಟ ರಚಿಸಲಾಗಿದ್ದು, 9 ಶಾಸಕರಿಗೆ ಮೊದಲ ಬಾರಿಗೆ ಸಚಿವ ಸ್ಥಾನ ನೀಡಲಾಗಿದೆ. ಒಬ್ಬ ಮಹಿಳೆಗೆ ಮಾತ್ರ ಸಚಿವ ಸ್ಥಾನ ನೀಡಿದ್ದು ಬಿಟ್ಟರೆ ಉಳಿದಂತೆ ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಸಿದ್ದರಾಮಯ್ಯನವರ ಸರ್ಕಾರ ಒತ್ತು ಕೊಟ್ಟಿದೆ.

9 ಶಾಸಕರಿಗೆ ಮೊದಲ ಬಾರಿಗೆ ಸಚಿವರಾಗುವ ಭಾಗ್ಯ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಿಂದ ಕೆ ವೆಂಕಟೇಶ್‌

ತುಮಕೂರು ಜಿಲ್ಲೆಯ ಮಧುಗಿರಿಯಿಂದ ಕೆ ಎನ್ ರಾಜಣ್ಣ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಮಂಕಾಳ್ ವೈದ್ಯ

ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಲಕ್ಷ್ಮಿ ಹೆಬ್ಬಾಳ್ಕರ್‌

ಬೆಂಗಳೂರಿನ ಹೆಬ್ಬಾಳ ಕ್ಷೇತ್ರದ ಬೈರತಿ ಸುರೇಶ್‌

ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದ ಮಧು ಬಂಗಾರಪ್ಪ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಕ್ಷೇತ್ರದ ಡಾ. ಎಂ ಸಿ ಸುಧಾಕರ್‌

ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಬಿ ನಾಗೇಂದ್ರ

ರಾಯಚೂರಿನ ಎನ್ ಎಸ್ ಬೋಸರಾಜುರವರು ಇದೇ ಮೊದಲ ಬಾರಿಗೆ ಸಚಿವರಾಗಿದ್ದಾರೆ.

ಸಾಮಾಜಿಕ ನ್ಯಾಯ

ಕುರುಬರು (2 ಪ್ರಾತಿನಿಧ್ಯ): ಸಿದ್ದರಾಮಯ್ಯ (ಮುಖ್ಯಮಂತ್ರಿ), ಬೈರತಿ ಸುರೇಶ್‌

ಲಿಂಗಾಯತರು (8 ಪ್ರಾತಿನಿಧ್ಯ): ಎಂ.ಬಿ.ಪಾಟೀಲ (ಕೂಡು ಒಕ್ಕಲಿಗ ಲಿಂಗಾಯತರು), ಈಶ್ವರ ಖಂಡ್ರೆ (ಬಣಜಿಗ ಲಿಂಗಾಯತ), ಶರಣಬಸಪ್ಪ ದರ್ಶನಾಪುರ (ರಡ್ಡಿ ಲಿಂಗಾಯತ), ಶಿವಾನಂದ ಪಾಟೀಲ (ಪಂಚಮಸಾಲಿ), ಎಸ್‌.ಎಸ್‌.ಮಲ್ಲಿಕಾರ್ಜುನ (ಸಾದರ ಲಿಂಗಾಯತ), ಶರಣ ಪ್ರಕಾಶ ಪಾಟೀಲ (ಆದಿ ಬಣಜಿಗ ಲಿಂಗಾಯತ), ಲಕ್ಷ್ಮಿ ಹೆಬ್ಬಾಳಕರ್‌ (ಪಂಚಮಸಾಲಿ), ಎಚ್.ಕೆ.ಪಾಟೀಲ (ನಾಮಧಾರಿ ರೆಡ್ಡಿ)

ಒಕ್ಕಲಿಗರು (6 ಪ್ರಾತಿನಿಧ್ಯ): ಡಿ.ಕೆ.ಶಿವಕುಮಾರ್‌, ರಾಮಲಿಂಗ ರೆಡ್ಡಿ (ರೆಡ್ಡಿ ಒಕ್ಕಲಿಗ), ಕೃಷ್ಣ ಬೈರೇಗೌಡ, ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್‌, ಡಾ.ಎಂ.ಸಿ.ಸುಧಾಕರ್‌.

ಪರಿಶಿಷ್ಟ ಜಾತಿಗಳು (6 ಪ್ರಾತಿನಿಧ್ಯ): ಬಲಗೈ (ಹೊಲೆಯ) ಸಮುದಾಯದ ಡಾ.ಎಚ್‌.ಸಿ.ಮಹದೇವಪ್ಪ, ಡಾ.ಜಿ.ಪರಮೇಶ್ವರ, ಪ್ರಿಯಾಂಕ್ ಖರ್ಗೆ, ಎಡಗೈ (ಮಾದಿಗ) ಸಮುದಾಯದ ಆರ್.ಬಿ.ತಿಮ್ಮಾಪುರ, ಕೆ.ಎಚ್.ಮುನಿಯಪ್ಪ, ಭೋವಿ ಸಮುದಾಯದ ಶಿವರಾಜ ತಂಗಡಗಿ.

ಪರಿಶಿಷ್ಟ ಪಂಗಡಗಳು (3 ಪ್ರಾತಿನಿಧ್ಯ): ಸತೀಶ್ ಜಾರಕಿಹೊಳಿ, ಕೆ.ಎನ್‌.ರಾಜಣ್ಣ, ಬಿ.ನಾಗೇಂದ್ರ.

ಅಲ್ಪಸಂಖ್ಯಾತರು (4 ಪ್ರಾತಿನಿಧ್ಯ): ಜಮೀರ್ ಅಹ್ಮದ್ ಖಾನ್- ಮುಸ್ಲಿಂ, ರಹೀಂ ಖಾನ್‌- ಮುಸ್ಲಿಂ, ಕೆ.ಜೆ.ಜಾರ್ಜ್- ಕ್ರಿಶ್ಚಿಯನ್, ಡಿ.ಸುಧಾಕರ್‌- ಜೈನ.

ಇತರೆ ಜಾತಿಗಳಗ ಪ್ರಾತಿನಿಧ್ಯ

ಬ್ರಾಹ್ಮಣ- ದಿನೇಶ್‌ ಗುಂಡೂರಾವ್‌

ಮೊಗವೀರ- ಮಂಕಾಳ ಸುಬ್ಬ ವೈದ್ಯ

ಮರಾಠ- ಸಂತೋಷ್ ಎಸ್.ಲಾಡ್‌

ರಾಜು ಕ್ಷತ್ರೀಯ- ಎನ್‌.ಎಸ್.ಬೋಸರಾಜು

ಈಡಿಗ- ಮಧು ಬಂಗಾರಪ್ಪ

ಪ್ರಾದೇಶಿಕ ಸಮತೋಲನ

ರಾಜ್ಯದ 31 ಜಿಲ್ಲೆಗಳ ಪೈಕಿ 23 ಜಿಲ್ಲೆಗಳಿಗೆ ಸಚಿವ ಸ್ಥಾನ ಲಭಿಸಿದೆ. ಬೆಂಗಳೂರು ನಗರ ಜಿಲ್ಲೆಯ ಆರು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಮೈಸೂರು ಎರಡನೇ ಸ್ಥಾನದಲ್ಲಿದ್ದು, ಸಿದ್ದರಾಮಯ್ಯ ಅವರಲ್ಲದೇ ಇನ್ನೂ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿದೆ.

ತುಮಕೂರು, ವಿಜಯಪುರ, ಕಲಬುರಗಿ, ಬೀದರ್ ಮತ್ತು ಬೆಳಗಾಂ ಜಿಲ್ಲೆಗಳ ತಲಾ ಇಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ. 16 ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ.

ಕೋಲಾರ, ಹಾಸನ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ವಿಜಯನಗರ ಜಿಲ್ಲೆಗಳಲ್ಲಿ ಯಾರೊಬ್ಬರಿಗೂ ಸಚಿವ ಸ್ಥಾನ ಸಿಕ್ಕಿಲ್ಲ.

ಇದನ್ನೂ ಓದಿ: ಜಾತಿ ಪ್ರಾತಿನಿಧ್ಯ: ಬೊಮ್ಮಾಯಿ ಸಂಪುಟಕ್ಕಿಂತ ಸಿದ್ದರಾಮಯ್ಯ ಕ್ಯಾಬಿನೆಟ್ ವೈವಿಧ್ಯಮಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...