Homeಮುಖಪುಟ9 ಶಾಸಕರಿಗೆ ಮೊದಲ ಬಾರಿಗೆ ಸಚಿವ ಸ್ಥಾನ: ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಒತ್ತು

9 ಶಾಸಕರಿಗೆ ಮೊದಲ ಬಾರಿಗೆ ಸಚಿವ ಸ್ಥಾನ: ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಒತ್ತು

- Advertisement -
- Advertisement -

ಸಿದ್ದರಾಮಯ್ಯನವರ ಸಚಿವ ಸಂಪುಟ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿದೆ. ಸಿಎಂ ಸಿದ್ದರಾಮಯ್ಯನವರು ಸೇರಿ 34 ಸಚಿವ ಸ್ಥಾನಗಳನ್ನು ಎರಡು ಹಂತದಲ್ಲಿ ತುಂಬಲಾಗಿದೆ ಮಾತ್ರವಲ್ಲದೇ ಎಲ್ಲರಿಗೂ ಖಾತೆ ಹಂಚಿಕೆ ಮಾಡಿ ಮುಗಿಸಲಾಗಿದೆ. ಆ ಮೂಲಕ ಅತೃಪ್ತ ಶಾಸಕರಿಗೆ ನೀಡುವುದಕ್ಕಾಗಿ ಕೆಲ ಸ್ಥಾನಗಳನ್ನು ಖಾಲಿ ಬಿಟ್ಟುಕೊಳ್ಳುವ ಸಂಪ್ರದಾಯಕ್ಕೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದೆ. ಹೊಸಬರು ಮತ್ತು ಅನುಭವಿಗಳ ಸಮತೋಲನ ಕಾಪಾಡಿಕೊಳ್ಳುವ ದೃಷ್ಟಿಯಿಂದ ಸಚಿವ ಸಂಪುಟ ರಚಿಸಲಾಗಿದ್ದು, 9 ಶಾಸಕರಿಗೆ ಮೊದಲ ಬಾರಿಗೆ ಸಚಿವ ಸ್ಥಾನ ನೀಡಲಾಗಿದೆ. ಒಬ್ಬ ಮಹಿಳೆಗೆ ಮಾತ್ರ ಸಚಿವ ಸ್ಥಾನ ನೀಡಿದ್ದು ಬಿಟ್ಟರೆ ಉಳಿದಂತೆ ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಸಿದ್ದರಾಮಯ್ಯನವರ ಸರ್ಕಾರ ಒತ್ತು ಕೊಟ್ಟಿದೆ.

9 ಶಾಸಕರಿಗೆ ಮೊದಲ ಬಾರಿಗೆ ಸಚಿವರಾಗುವ ಭಾಗ್ಯ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಿಂದ ಕೆ ವೆಂಕಟೇಶ್‌

ತುಮಕೂರು ಜಿಲ್ಲೆಯ ಮಧುಗಿರಿಯಿಂದ ಕೆ ಎನ್ ರಾಜಣ್ಣ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಮಂಕಾಳ್ ವೈದ್ಯ

ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಲಕ್ಷ್ಮಿ ಹೆಬ್ಬಾಳ್ಕರ್‌

ಬೆಂಗಳೂರಿನ ಹೆಬ್ಬಾಳ ಕ್ಷೇತ್ರದ ಬೈರತಿ ಸುರೇಶ್‌

ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದ ಮಧು ಬಂಗಾರಪ್ಪ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಕ್ಷೇತ್ರದ ಡಾ. ಎಂ ಸಿ ಸುಧಾಕರ್‌

ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಬಿ ನಾಗೇಂದ್ರ

ರಾಯಚೂರಿನ ಎನ್ ಎಸ್ ಬೋಸರಾಜುರವರು ಇದೇ ಮೊದಲ ಬಾರಿಗೆ ಸಚಿವರಾಗಿದ್ದಾರೆ.

ಸಾಮಾಜಿಕ ನ್ಯಾಯ

ಕುರುಬರು (2 ಪ್ರಾತಿನಿಧ್ಯ): ಸಿದ್ದರಾಮಯ್ಯ (ಮುಖ್ಯಮಂತ್ರಿ), ಬೈರತಿ ಸುರೇಶ್‌

ಲಿಂಗಾಯತರು (8 ಪ್ರಾತಿನಿಧ್ಯ): ಎಂ.ಬಿ.ಪಾಟೀಲ (ಕೂಡು ಒಕ್ಕಲಿಗ ಲಿಂಗಾಯತರು), ಈಶ್ವರ ಖಂಡ್ರೆ (ಬಣಜಿಗ ಲಿಂಗಾಯತ), ಶರಣಬಸಪ್ಪ ದರ್ಶನಾಪುರ (ರಡ್ಡಿ ಲಿಂಗಾಯತ), ಶಿವಾನಂದ ಪಾಟೀಲ (ಪಂಚಮಸಾಲಿ), ಎಸ್‌.ಎಸ್‌.ಮಲ್ಲಿಕಾರ್ಜುನ (ಸಾದರ ಲಿಂಗಾಯತ), ಶರಣ ಪ್ರಕಾಶ ಪಾಟೀಲ (ಆದಿ ಬಣಜಿಗ ಲಿಂಗಾಯತ), ಲಕ್ಷ್ಮಿ ಹೆಬ್ಬಾಳಕರ್‌ (ಪಂಚಮಸಾಲಿ), ಎಚ್.ಕೆ.ಪಾಟೀಲ (ನಾಮಧಾರಿ ರೆಡ್ಡಿ)

ಒಕ್ಕಲಿಗರು (6 ಪ್ರಾತಿನಿಧ್ಯ): ಡಿ.ಕೆ.ಶಿವಕುಮಾರ್‌, ರಾಮಲಿಂಗ ರೆಡ್ಡಿ (ರೆಡ್ಡಿ ಒಕ್ಕಲಿಗ), ಕೃಷ್ಣ ಬೈರೇಗೌಡ, ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್‌, ಡಾ.ಎಂ.ಸಿ.ಸುಧಾಕರ್‌.

ಪರಿಶಿಷ್ಟ ಜಾತಿಗಳು (6 ಪ್ರಾತಿನಿಧ್ಯ): ಬಲಗೈ (ಹೊಲೆಯ) ಸಮುದಾಯದ ಡಾ.ಎಚ್‌.ಸಿ.ಮಹದೇವಪ್ಪ, ಡಾ.ಜಿ.ಪರಮೇಶ್ವರ, ಪ್ರಿಯಾಂಕ್ ಖರ್ಗೆ, ಎಡಗೈ (ಮಾದಿಗ) ಸಮುದಾಯದ ಆರ್.ಬಿ.ತಿಮ್ಮಾಪುರ, ಕೆ.ಎಚ್.ಮುನಿಯಪ್ಪ, ಭೋವಿ ಸಮುದಾಯದ ಶಿವರಾಜ ತಂಗಡಗಿ.

ಪರಿಶಿಷ್ಟ ಪಂಗಡಗಳು (3 ಪ್ರಾತಿನಿಧ್ಯ): ಸತೀಶ್ ಜಾರಕಿಹೊಳಿ, ಕೆ.ಎನ್‌.ರಾಜಣ್ಣ, ಬಿ.ನಾಗೇಂದ್ರ.

ಅಲ್ಪಸಂಖ್ಯಾತರು (4 ಪ್ರಾತಿನಿಧ್ಯ): ಜಮೀರ್ ಅಹ್ಮದ್ ಖಾನ್- ಮುಸ್ಲಿಂ, ರಹೀಂ ಖಾನ್‌- ಮುಸ್ಲಿಂ, ಕೆ.ಜೆ.ಜಾರ್ಜ್- ಕ್ರಿಶ್ಚಿಯನ್, ಡಿ.ಸುಧಾಕರ್‌- ಜೈನ.

ಇತರೆ ಜಾತಿಗಳಗ ಪ್ರಾತಿನಿಧ್ಯ

ಬ್ರಾಹ್ಮಣ- ದಿನೇಶ್‌ ಗುಂಡೂರಾವ್‌

ಮೊಗವೀರ- ಮಂಕಾಳ ಸುಬ್ಬ ವೈದ್ಯ

ಮರಾಠ- ಸಂತೋಷ್ ಎಸ್.ಲಾಡ್‌

ರಾಜು ಕ್ಷತ್ರೀಯ- ಎನ್‌.ಎಸ್.ಬೋಸರಾಜು

ಈಡಿಗ- ಮಧು ಬಂಗಾರಪ್ಪ

ಪ್ರಾದೇಶಿಕ ಸಮತೋಲನ

ರಾಜ್ಯದ 31 ಜಿಲ್ಲೆಗಳ ಪೈಕಿ 23 ಜಿಲ್ಲೆಗಳಿಗೆ ಸಚಿವ ಸ್ಥಾನ ಲಭಿಸಿದೆ. ಬೆಂಗಳೂರು ನಗರ ಜಿಲ್ಲೆಯ ಆರು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಮೈಸೂರು ಎರಡನೇ ಸ್ಥಾನದಲ್ಲಿದ್ದು, ಸಿದ್ದರಾಮಯ್ಯ ಅವರಲ್ಲದೇ ಇನ್ನೂ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿದೆ.

ತುಮಕೂರು, ವಿಜಯಪುರ, ಕಲಬುರಗಿ, ಬೀದರ್ ಮತ್ತು ಬೆಳಗಾಂ ಜಿಲ್ಲೆಗಳ ತಲಾ ಇಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ. 16 ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ.

ಕೋಲಾರ, ಹಾಸನ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ವಿಜಯನಗರ ಜಿಲ್ಲೆಗಳಲ್ಲಿ ಯಾರೊಬ್ಬರಿಗೂ ಸಚಿವ ಸ್ಥಾನ ಸಿಕ್ಕಿಲ್ಲ.

ಇದನ್ನೂ ಓದಿ: ಜಾತಿ ಪ್ರಾತಿನಿಧ್ಯ: ಬೊಮ್ಮಾಯಿ ಸಂಪುಟಕ್ಕಿಂತ ಸಿದ್ದರಾಮಯ್ಯ ಕ್ಯಾಬಿನೆಟ್ ವೈವಿಧ್ಯಮಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...