Homeಮುಖಪುಟ9 ಶಾಸಕರಿಗೆ ಮೊದಲ ಬಾರಿಗೆ ಸಚಿವ ಸ್ಥಾನ: ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಒತ್ತು

9 ಶಾಸಕರಿಗೆ ಮೊದಲ ಬಾರಿಗೆ ಸಚಿವ ಸ್ಥಾನ: ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಒತ್ತು

- Advertisement -
- Advertisement -

ಸಿದ್ದರಾಮಯ್ಯನವರ ಸಚಿವ ಸಂಪುಟ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿದೆ. ಸಿಎಂ ಸಿದ್ದರಾಮಯ್ಯನವರು ಸೇರಿ 34 ಸಚಿವ ಸ್ಥಾನಗಳನ್ನು ಎರಡು ಹಂತದಲ್ಲಿ ತುಂಬಲಾಗಿದೆ ಮಾತ್ರವಲ್ಲದೇ ಎಲ್ಲರಿಗೂ ಖಾತೆ ಹಂಚಿಕೆ ಮಾಡಿ ಮುಗಿಸಲಾಗಿದೆ. ಆ ಮೂಲಕ ಅತೃಪ್ತ ಶಾಸಕರಿಗೆ ನೀಡುವುದಕ್ಕಾಗಿ ಕೆಲ ಸ್ಥಾನಗಳನ್ನು ಖಾಲಿ ಬಿಟ್ಟುಕೊಳ್ಳುವ ಸಂಪ್ರದಾಯಕ್ಕೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದೆ. ಹೊಸಬರು ಮತ್ತು ಅನುಭವಿಗಳ ಸಮತೋಲನ ಕಾಪಾಡಿಕೊಳ್ಳುವ ದೃಷ್ಟಿಯಿಂದ ಸಚಿವ ಸಂಪುಟ ರಚಿಸಲಾಗಿದ್ದು, 9 ಶಾಸಕರಿಗೆ ಮೊದಲ ಬಾರಿಗೆ ಸಚಿವ ಸ್ಥಾನ ನೀಡಲಾಗಿದೆ. ಒಬ್ಬ ಮಹಿಳೆಗೆ ಮಾತ್ರ ಸಚಿವ ಸ್ಥಾನ ನೀಡಿದ್ದು ಬಿಟ್ಟರೆ ಉಳಿದಂತೆ ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಸಿದ್ದರಾಮಯ್ಯನವರ ಸರ್ಕಾರ ಒತ್ತು ಕೊಟ್ಟಿದೆ.

9 ಶಾಸಕರಿಗೆ ಮೊದಲ ಬಾರಿಗೆ ಸಚಿವರಾಗುವ ಭಾಗ್ಯ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಿಂದ ಕೆ ವೆಂಕಟೇಶ್‌

ತುಮಕೂರು ಜಿಲ್ಲೆಯ ಮಧುಗಿರಿಯಿಂದ ಕೆ ಎನ್ ರಾಜಣ್ಣ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಮಂಕಾಳ್ ವೈದ್ಯ

ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಲಕ್ಷ್ಮಿ ಹೆಬ್ಬಾಳ್ಕರ್‌

ಬೆಂಗಳೂರಿನ ಹೆಬ್ಬಾಳ ಕ್ಷೇತ್ರದ ಬೈರತಿ ಸುರೇಶ್‌

ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದ ಮಧು ಬಂಗಾರಪ್ಪ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಕ್ಷೇತ್ರದ ಡಾ. ಎಂ ಸಿ ಸುಧಾಕರ್‌

ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಬಿ ನಾಗೇಂದ್ರ

ರಾಯಚೂರಿನ ಎನ್ ಎಸ್ ಬೋಸರಾಜುರವರು ಇದೇ ಮೊದಲ ಬಾರಿಗೆ ಸಚಿವರಾಗಿದ್ದಾರೆ.

ಸಾಮಾಜಿಕ ನ್ಯಾಯ

ಕುರುಬರು (2 ಪ್ರಾತಿನಿಧ್ಯ): ಸಿದ್ದರಾಮಯ್ಯ (ಮುಖ್ಯಮಂತ್ರಿ), ಬೈರತಿ ಸುರೇಶ್‌

ಲಿಂಗಾಯತರು (8 ಪ್ರಾತಿನಿಧ್ಯ): ಎಂ.ಬಿ.ಪಾಟೀಲ (ಕೂಡು ಒಕ್ಕಲಿಗ ಲಿಂಗಾಯತರು), ಈಶ್ವರ ಖಂಡ್ರೆ (ಬಣಜಿಗ ಲಿಂಗಾಯತ), ಶರಣಬಸಪ್ಪ ದರ್ಶನಾಪುರ (ರಡ್ಡಿ ಲಿಂಗಾಯತ), ಶಿವಾನಂದ ಪಾಟೀಲ (ಪಂಚಮಸಾಲಿ), ಎಸ್‌.ಎಸ್‌.ಮಲ್ಲಿಕಾರ್ಜುನ (ಸಾದರ ಲಿಂಗಾಯತ), ಶರಣ ಪ್ರಕಾಶ ಪಾಟೀಲ (ಆದಿ ಬಣಜಿಗ ಲಿಂಗಾಯತ), ಲಕ್ಷ್ಮಿ ಹೆಬ್ಬಾಳಕರ್‌ (ಪಂಚಮಸಾಲಿ), ಎಚ್.ಕೆ.ಪಾಟೀಲ (ನಾಮಧಾರಿ ರೆಡ್ಡಿ)

ಒಕ್ಕಲಿಗರು (6 ಪ್ರಾತಿನಿಧ್ಯ): ಡಿ.ಕೆ.ಶಿವಕುಮಾರ್‌, ರಾಮಲಿಂಗ ರೆಡ್ಡಿ (ರೆಡ್ಡಿ ಒಕ್ಕಲಿಗ), ಕೃಷ್ಣ ಬೈರೇಗೌಡ, ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್‌, ಡಾ.ಎಂ.ಸಿ.ಸುಧಾಕರ್‌.

ಪರಿಶಿಷ್ಟ ಜಾತಿಗಳು (6 ಪ್ರಾತಿನಿಧ್ಯ): ಬಲಗೈ (ಹೊಲೆಯ) ಸಮುದಾಯದ ಡಾ.ಎಚ್‌.ಸಿ.ಮಹದೇವಪ್ಪ, ಡಾ.ಜಿ.ಪರಮೇಶ್ವರ, ಪ್ರಿಯಾಂಕ್ ಖರ್ಗೆ, ಎಡಗೈ (ಮಾದಿಗ) ಸಮುದಾಯದ ಆರ್.ಬಿ.ತಿಮ್ಮಾಪುರ, ಕೆ.ಎಚ್.ಮುನಿಯಪ್ಪ, ಭೋವಿ ಸಮುದಾಯದ ಶಿವರಾಜ ತಂಗಡಗಿ.

ಪರಿಶಿಷ್ಟ ಪಂಗಡಗಳು (3 ಪ್ರಾತಿನಿಧ್ಯ): ಸತೀಶ್ ಜಾರಕಿಹೊಳಿ, ಕೆ.ಎನ್‌.ರಾಜಣ್ಣ, ಬಿ.ನಾಗೇಂದ್ರ.

ಅಲ್ಪಸಂಖ್ಯಾತರು (4 ಪ್ರಾತಿನಿಧ್ಯ): ಜಮೀರ್ ಅಹ್ಮದ್ ಖಾನ್- ಮುಸ್ಲಿಂ, ರಹೀಂ ಖಾನ್‌- ಮುಸ್ಲಿಂ, ಕೆ.ಜೆ.ಜಾರ್ಜ್- ಕ್ರಿಶ್ಚಿಯನ್, ಡಿ.ಸುಧಾಕರ್‌- ಜೈನ.

ಇತರೆ ಜಾತಿಗಳಗ ಪ್ರಾತಿನಿಧ್ಯ

ಬ್ರಾಹ್ಮಣ- ದಿನೇಶ್‌ ಗುಂಡೂರಾವ್‌

ಮೊಗವೀರ- ಮಂಕಾಳ ಸುಬ್ಬ ವೈದ್ಯ

ಮರಾಠ- ಸಂತೋಷ್ ಎಸ್.ಲಾಡ್‌

ರಾಜು ಕ್ಷತ್ರೀಯ- ಎನ್‌.ಎಸ್.ಬೋಸರಾಜು

ಈಡಿಗ- ಮಧು ಬಂಗಾರಪ್ಪ

ಪ್ರಾದೇಶಿಕ ಸಮತೋಲನ

ರಾಜ್ಯದ 31 ಜಿಲ್ಲೆಗಳ ಪೈಕಿ 23 ಜಿಲ್ಲೆಗಳಿಗೆ ಸಚಿವ ಸ್ಥಾನ ಲಭಿಸಿದೆ. ಬೆಂಗಳೂರು ನಗರ ಜಿಲ್ಲೆಯ ಆರು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಮೈಸೂರು ಎರಡನೇ ಸ್ಥಾನದಲ್ಲಿದ್ದು, ಸಿದ್ದರಾಮಯ್ಯ ಅವರಲ್ಲದೇ ಇನ್ನೂ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿದೆ.

ತುಮಕೂರು, ವಿಜಯಪುರ, ಕಲಬುರಗಿ, ಬೀದರ್ ಮತ್ತು ಬೆಳಗಾಂ ಜಿಲ್ಲೆಗಳ ತಲಾ ಇಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ. 16 ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ.

ಕೋಲಾರ, ಹಾಸನ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ವಿಜಯನಗರ ಜಿಲ್ಲೆಗಳಲ್ಲಿ ಯಾರೊಬ್ಬರಿಗೂ ಸಚಿವ ಸ್ಥಾನ ಸಿಕ್ಕಿಲ್ಲ.

ಇದನ್ನೂ ಓದಿ: ಜಾತಿ ಪ್ರಾತಿನಿಧ್ಯ: ಬೊಮ್ಮಾಯಿ ಸಂಪುಟಕ್ಕಿಂತ ಸಿದ್ದರಾಮಯ್ಯ ಕ್ಯಾಬಿನೆಟ್ ವೈವಿಧ್ಯಮಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...