Homeಮುಖಪುಟ9 ಶಾಸಕರಿಗೆ ಮೊದಲ ಬಾರಿಗೆ ಸಚಿವ ಸ್ಥಾನ: ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಒತ್ತು

9 ಶಾಸಕರಿಗೆ ಮೊದಲ ಬಾರಿಗೆ ಸಚಿವ ಸ್ಥಾನ: ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಒತ್ತು

- Advertisement -
- Advertisement -

ಸಿದ್ದರಾಮಯ್ಯನವರ ಸಚಿವ ಸಂಪುಟ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿದೆ. ಸಿಎಂ ಸಿದ್ದರಾಮಯ್ಯನವರು ಸೇರಿ 34 ಸಚಿವ ಸ್ಥಾನಗಳನ್ನು ಎರಡು ಹಂತದಲ್ಲಿ ತುಂಬಲಾಗಿದೆ ಮಾತ್ರವಲ್ಲದೇ ಎಲ್ಲರಿಗೂ ಖಾತೆ ಹಂಚಿಕೆ ಮಾಡಿ ಮುಗಿಸಲಾಗಿದೆ. ಆ ಮೂಲಕ ಅತೃಪ್ತ ಶಾಸಕರಿಗೆ ನೀಡುವುದಕ್ಕಾಗಿ ಕೆಲ ಸ್ಥಾನಗಳನ್ನು ಖಾಲಿ ಬಿಟ್ಟುಕೊಳ್ಳುವ ಸಂಪ್ರದಾಯಕ್ಕೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದೆ. ಹೊಸಬರು ಮತ್ತು ಅನುಭವಿಗಳ ಸಮತೋಲನ ಕಾಪಾಡಿಕೊಳ್ಳುವ ದೃಷ್ಟಿಯಿಂದ ಸಚಿವ ಸಂಪುಟ ರಚಿಸಲಾಗಿದ್ದು, 9 ಶಾಸಕರಿಗೆ ಮೊದಲ ಬಾರಿಗೆ ಸಚಿವ ಸ್ಥಾನ ನೀಡಲಾಗಿದೆ. ಒಬ್ಬ ಮಹಿಳೆಗೆ ಮಾತ್ರ ಸಚಿವ ಸ್ಥಾನ ನೀಡಿದ್ದು ಬಿಟ್ಟರೆ ಉಳಿದಂತೆ ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಸಿದ್ದರಾಮಯ್ಯನವರ ಸರ್ಕಾರ ಒತ್ತು ಕೊಟ್ಟಿದೆ.

9 ಶಾಸಕರಿಗೆ ಮೊದಲ ಬಾರಿಗೆ ಸಚಿವರಾಗುವ ಭಾಗ್ಯ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಿಂದ ಕೆ ವೆಂಕಟೇಶ್‌

ತುಮಕೂರು ಜಿಲ್ಲೆಯ ಮಧುಗಿರಿಯಿಂದ ಕೆ ಎನ್ ರಾಜಣ್ಣ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಮಂಕಾಳ್ ವೈದ್ಯ

ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಲಕ್ಷ್ಮಿ ಹೆಬ್ಬಾಳ್ಕರ್‌

ಬೆಂಗಳೂರಿನ ಹೆಬ್ಬಾಳ ಕ್ಷೇತ್ರದ ಬೈರತಿ ಸುರೇಶ್‌

ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದ ಮಧು ಬಂಗಾರಪ್ಪ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಕ್ಷೇತ್ರದ ಡಾ. ಎಂ ಸಿ ಸುಧಾಕರ್‌

ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಬಿ ನಾಗೇಂದ್ರ

ರಾಯಚೂರಿನ ಎನ್ ಎಸ್ ಬೋಸರಾಜುರವರು ಇದೇ ಮೊದಲ ಬಾರಿಗೆ ಸಚಿವರಾಗಿದ್ದಾರೆ.

ಸಾಮಾಜಿಕ ನ್ಯಾಯ

ಕುರುಬರು (2 ಪ್ರಾತಿನಿಧ್ಯ): ಸಿದ್ದರಾಮಯ್ಯ (ಮುಖ್ಯಮಂತ್ರಿ), ಬೈರತಿ ಸುರೇಶ್‌

ಲಿಂಗಾಯತರು (8 ಪ್ರಾತಿನಿಧ್ಯ): ಎಂ.ಬಿ.ಪಾಟೀಲ (ಕೂಡು ಒಕ್ಕಲಿಗ ಲಿಂಗಾಯತರು), ಈಶ್ವರ ಖಂಡ್ರೆ (ಬಣಜಿಗ ಲಿಂಗಾಯತ), ಶರಣಬಸಪ್ಪ ದರ್ಶನಾಪುರ (ರಡ್ಡಿ ಲಿಂಗಾಯತ), ಶಿವಾನಂದ ಪಾಟೀಲ (ಪಂಚಮಸಾಲಿ), ಎಸ್‌.ಎಸ್‌.ಮಲ್ಲಿಕಾರ್ಜುನ (ಸಾದರ ಲಿಂಗಾಯತ), ಶರಣ ಪ್ರಕಾಶ ಪಾಟೀಲ (ಆದಿ ಬಣಜಿಗ ಲಿಂಗಾಯತ), ಲಕ್ಷ್ಮಿ ಹೆಬ್ಬಾಳಕರ್‌ (ಪಂಚಮಸಾಲಿ), ಎಚ್.ಕೆ.ಪಾಟೀಲ (ನಾಮಧಾರಿ ರೆಡ್ಡಿ)

ಒಕ್ಕಲಿಗರು (6 ಪ್ರಾತಿನಿಧ್ಯ): ಡಿ.ಕೆ.ಶಿವಕುಮಾರ್‌, ರಾಮಲಿಂಗ ರೆಡ್ಡಿ (ರೆಡ್ಡಿ ಒಕ್ಕಲಿಗ), ಕೃಷ್ಣ ಬೈರೇಗೌಡ, ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್‌, ಡಾ.ಎಂ.ಸಿ.ಸುಧಾಕರ್‌.

ಪರಿಶಿಷ್ಟ ಜಾತಿಗಳು (6 ಪ್ರಾತಿನಿಧ್ಯ): ಬಲಗೈ (ಹೊಲೆಯ) ಸಮುದಾಯದ ಡಾ.ಎಚ್‌.ಸಿ.ಮಹದೇವಪ್ಪ, ಡಾ.ಜಿ.ಪರಮೇಶ್ವರ, ಪ್ರಿಯಾಂಕ್ ಖರ್ಗೆ, ಎಡಗೈ (ಮಾದಿಗ) ಸಮುದಾಯದ ಆರ್.ಬಿ.ತಿಮ್ಮಾಪುರ, ಕೆ.ಎಚ್.ಮುನಿಯಪ್ಪ, ಭೋವಿ ಸಮುದಾಯದ ಶಿವರಾಜ ತಂಗಡಗಿ.

ಪರಿಶಿಷ್ಟ ಪಂಗಡಗಳು (3 ಪ್ರಾತಿನಿಧ್ಯ): ಸತೀಶ್ ಜಾರಕಿಹೊಳಿ, ಕೆ.ಎನ್‌.ರಾಜಣ್ಣ, ಬಿ.ನಾಗೇಂದ್ರ.

ಅಲ್ಪಸಂಖ್ಯಾತರು (4 ಪ್ರಾತಿನಿಧ್ಯ): ಜಮೀರ್ ಅಹ್ಮದ್ ಖಾನ್- ಮುಸ್ಲಿಂ, ರಹೀಂ ಖಾನ್‌- ಮುಸ್ಲಿಂ, ಕೆ.ಜೆ.ಜಾರ್ಜ್- ಕ್ರಿಶ್ಚಿಯನ್, ಡಿ.ಸುಧಾಕರ್‌- ಜೈನ.

ಇತರೆ ಜಾತಿಗಳಗ ಪ್ರಾತಿನಿಧ್ಯ

ಬ್ರಾಹ್ಮಣ- ದಿನೇಶ್‌ ಗುಂಡೂರಾವ್‌

ಮೊಗವೀರ- ಮಂಕಾಳ ಸುಬ್ಬ ವೈದ್ಯ

ಮರಾಠ- ಸಂತೋಷ್ ಎಸ್.ಲಾಡ್‌

ರಾಜು ಕ್ಷತ್ರೀಯ- ಎನ್‌.ಎಸ್.ಬೋಸರಾಜು

ಈಡಿಗ- ಮಧು ಬಂಗಾರಪ್ಪ

ಪ್ರಾದೇಶಿಕ ಸಮತೋಲನ

ರಾಜ್ಯದ 31 ಜಿಲ್ಲೆಗಳ ಪೈಕಿ 23 ಜಿಲ್ಲೆಗಳಿಗೆ ಸಚಿವ ಸ್ಥಾನ ಲಭಿಸಿದೆ. ಬೆಂಗಳೂರು ನಗರ ಜಿಲ್ಲೆಯ ಆರು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಮೈಸೂರು ಎರಡನೇ ಸ್ಥಾನದಲ್ಲಿದ್ದು, ಸಿದ್ದರಾಮಯ್ಯ ಅವರಲ್ಲದೇ ಇನ್ನೂ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿದೆ.

ತುಮಕೂರು, ವಿಜಯಪುರ, ಕಲಬುರಗಿ, ಬೀದರ್ ಮತ್ತು ಬೆಳಗಾಂ ಜಿಲ್ಲೆಗಳ ತಲಾ ಇಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ. 16 ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ.

ಕೋಲಾರ, ಹಾಸನ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ವಿಜಯನಗರ ಜಿಲ್ಲೆಗಳಲ್ಲಿ ಯಾರೊಬ್ಬರಿಗೂ ಸಚಿವ ಸ್ಥಾನ ಸಿಕ್ಕಿಲ್ಲ.

ಇದನ್ನೂ ಓದಿ: ಜಾತಿ ಪ್ರಾತಿನಿಧ್ಯ: ಬೊಮ್ಮಾಯಿ ಸಂಪುಟಕ್ಕಿಂತ ಸಿದ್ದರಾಮಯ್ಯ ಕ್ಯಾಬಿನೆಟ್ ವೈವಿಧ್ಯಮಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...