Homeಮುಖಪುಟ"ಶ್ರಮಿಕ್ ರೈಲುಗಳ" ಮಾರ್ಗಸೂಚಿ ಮಾರ್ಪಾಡು ಮಾಡಿದ ಸಚಿವಾಲಯ

“ಶ್ರಮಿಕ್ ರೈಲುಗಳ” ಮಾರ್ಗಸೂಚಿ ಮಾರ್ಪಾಡು ಮಾಡಿದ ಸಚಿವಾಲಯ

- Advertisement -
- Advertisement -

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ವಿವಿಧ ರಾಜ್ಯಗಳಿಂದ ವಲಸೆ ಬಂದ ಕಾರ್ಮಿಕರನ್ನು ಕರೆದೊಯ್ಯುವ ‘ಶ್ರಮಿಕ್’ ವಿಶೇಷ ರೈಲುಗಳ ಮಾರ್ಗಸೂಚಿಯನ್ನು ರೈಲ್ವೆ ಸಚಿವಾಲಯ ಮಾರ್ಪಡು ಮಾಡಿದೆ.

ವಿಶೇಷ ರೈಲುಗಳ ಸಾಮರ್ಥ್ಯವನ್ನು ಅಸ್ತಿತ್ವದಲ್ಲಿರುವ 1,200 ಸೀಟುಗಳ ಸಂಖ್ಯೆಯಿಂದ 1,700 ಕ್ಕೆ ಹೆಚ್ಚಿಸಲು ಸಚಿವಾಲಯ ನಿರ್ಧರಿಸಿದೆ. ಪರಿಷ್ಕೃತ ಮಾರ್ಗಸೂಚಿಗಳು ರೈಲುಗಳ ಸಾಮರ್ಥ್ಯವು ಸ್ಲೀಪರ್ ಬೆರ್ತ್‌ಗಳ ಸಂಖ್ಯೆಗೆ ಸಮನಾಗಿರಬೇಕು ಎಂದು ಹೇಳುತ್ತದೆ.

ಅಲ್ಲದೆ, ಕೊನೆ ನಿಲ್ದಾಣವನ್ನು ಹೊರತುಪಡಿಸಿ ಈಗ ಮೂರು ನಿಲುಗಡೆಗಳನ್ನು ಹೊಂದಬಹುದಾಗಿದೆ.

ಜೊತೆಗೆ ತಮ್ಮ ರಾಜ್ಯಗಳಿಗೆ ರೈಲುಗಳು ಬರುವಂತೆ ಧಾರಾಳವಾಗಿ ಅನುಮೋದನೆಗಳನ್ನು ನೀಡುವಂತೆ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಮನವಿ ಮಾಡಿದೆ. ಕೆಲವು ರಾಜ್ಯಗಳು ಕೆಲವೇ ರೈಲುಗಳಿಗೆ ಮಾತ್ರ ತಮ್ಮ ರಾಜ್ಯಕ್ಕೆ ಪ್ರವೇಶಿಸುವಂತೆ ಅವಕಾಶ ಮಾಡಿಕೊಟ್ಟಿವೆ. ಗೃಹ ಕಾರ್ಯದರ್ಶಿ ಭಾನುವಾರ ರಾಜ್ಯಗಳೊಂದಿಗಿನ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಿ ಪತ್ರ ಬರೆದಿದ್ದಾರೆ.

ವಲಸೆ ಕಾರ್ಮಿಕರಿಗಾಗಿ ಹೆಚ್ಚು ‘ಶ್ರಮಿಕ್’ ವಿಶೇಷ ರೈಲುಗಳನ್ನು ಓಡಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ರೈಲ್ವೆಗೆ ಸಹಕರಿಸಬೇಕು ಎಂದು ಗೃಹ ಸಚಿವಾಲಯದ ಅಜಯ್ ಭಲ್ಲಾ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ವಲಸೆ ಕಾರ್ಮಿಕರು ರಸ್ತೆಗಳು, ರೈಲು ಹಳಿಗಳಲ್ಲಿ ನಡೆಯಲು ಆಶ್ರಯಿಸದೆ, ಲಭ್ಯವಿರುವ ವಿಶೇಷ ರೈಲುಗಳನ್ನು ಬಳಸುವಂತೆ ನೋಡಿಕೊಳ್ಳಬೇಕು ಎಂದು ಅವರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಕೇಳಿದ್ದಾರೆ.

ಭಾರತೀಯ ರೈಲ್ವೆ ಮೇ 1 ರಿಂದ 428 ‘ಶ್ರಮಿಕ್’ ವಿಶೇಷ ರೈಲುಗಳನ್ನು ಓಡಿಸಿದ್ದು, ಕೊರೊನಾ ಲಾಕ್‌ಡೌನ್ ಮಧ್ಯೆ ದೇಶದ ವಿವಿಧ ಭಾಗಗಳಲ್ಲಿ ಸಿಲುಕಿರುವ 4.5 ಲಕ್ಷಕ್ಕೂ ಹೆಚ್ಚು ವಲಸಿಗರನ್ನು ಮನೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇ 9 ರವರೆಗೆ ಓಡಿದ 287 ರೈಲುಗಳಲ್ಲಿ ಉತ್ತರ ಪ್ರದೇಶದಲ್ಲಿ 127 ,ಬಿಹಾರದಲ್ಲಿ 87 , ಮಧ್ಯಪ್ರದೇಶದಲ್ಲಿ 24 ಒಡಿಶಾದಲ್ಲಿ 20, ಜಾರ್ಖಂಡ್ನಲ್ಲಿ 16, ರಾಜಸ್ಥಾನದಲ್ಲಿ ನಾಲ್ಕು, ಮಹಾರಾಷ್ಟ್ರದಲ್ಲಿ ಮೂರು, ತೆಲಂಗಾಣ ಮತ್ತು ಪಶ್ಚಿಮದಲ್ಲಿ ತಲಾ ಎರಡು ಬಂಗಾಳ, ಮತ್ತು ಆಂಧ್ರಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ತಲಾ ಒಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಶ್ರಮಿಕ್’ ರೈಲುಗಳು 24 ಬೋಗಿಗಳನ್ನು ಹೊಂದಿದ್ದು, ಪ್ರತಿ ಬೋಗಿಯಲ್ಲಿ 72 ಪ್ರಯಾಣಿಕರನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ. ಪ್ರಸ್ತುತ, ಈ ರೈಲುಗಳು ಪ್ರತಿ ಕೋಚ್‌ನಲ್ಲಿ 54 ಪ್ರಯಾಣಿಕರೊಂದಿಗೆ ಸಾಮಾಜಿಕ ಅಂತರದ ಮಾನದಂಡಗಳಿಂದ ಓಡುತ್ತಿವೆ.


ಇದನ್ನೂ ಓದಿ: ಒತ್ತಡಕ್ಕೆ ಮಣಿದ ಕರ್ನಾಟಕ ಸರ್ಕಾರ ಕಾರ್ಮಿಕರಿಗೆ ರೈಲು ಸೇವೆ ಆರಂಭ


ನಮ್ಮ ಯೂಟ್ಯೂಬ್ ವಾನೆಲ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...