Homeಮುಖಪುಟ"ಶ್ರಮಿಕ್ ರೈಲುಗಳ" ಮಾರ್ಗಸೂಚಿ ಮಾರ್ಪಾಡು ಮಾಡಿದ ಸಚಿವಾಲಯ

“ಶ್ರಮಿಕ್ ರೈಲುಗಳ” ಮಾರ್ಗಸೂಚಿ ಮಾರ್ಪಾಡು ಮಾಡಿದ ಸಚಿವಾಲಯ

- Advertisement -
- Advertisement -

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ವಿವಿಧ ರಾಜ್ಯಗಳಿಂದ ವಲಸೆ ಬಂದ ಕಾರ್ಮಿಕರನ್ನು ಕರೆದೊಯ್ಯುವ ‘ಶ್ರಮಿಕ್’ ವಿಶೇಷ ರೈಲುಗಳ ಮಾರ್ಗಸೂಚಿಯನ್ನು ರೈಲ್ವೆ ಸಚಿವಾಲಯ ಮಾರ್ಪಡು ಮಾಡಿದೆ.

ವಿಶೇಷ ರೈಲುಗಳ ಸಾಮರ್ಥ್ಯವನ್ನು ಅಸ್ತಿತ್ವದಲ್ಲಿರುವ 1,200 ಸೀಟುಗಳ ಸಂಖ್ಯೆಯಿಂದ 1,700 ಕ್ಕೆ ಹೆಚ್ಚಿಸಲು ಸಚಿವಾಲಯ ನಿರ್ಧರಿಸಿದೆ. ಪರಿಷ್ಕೃತ ಮಾರ್ಗಸೂಚಿಗಳು ರೈಲುಗಳ ಸಾಮರ್ಥ್ಯವು ಸ್ಲೀಪರ್ ಬೆರ್ತ್‌ಗಳ ಸಂಖ್ಯೆಗೆ ಸಮನಾಗಿರಬೇಕು ಎಂದು ಹೇಳುತ್ತದೆ.

ಅಲ್ಲದೆ, ಕೊನೆ ನಿಲ್ದಾಣವನ್ನು ಹೊರತುಪಡಿಸಿ ಈಗ ಮೂರು ನಿಲುಗಡೆಗಳನ್ನು ಹೊಂದಬಹುದಾಗಿದೆ.

ಜೊತೆಗೆ ತಮ್ಮ ರಾಜ್ಯಗಳಿಗೆ ರೈಲುಗಳು ಬರುವಂತೆ ಧಾರಾಳವಾಗಿ ಅನುಮೋದನೆಗಳನ್ನು ನೀಡುವಂತೆ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಮನವಿ ಮಾಡಿದೆ. ಕೆಲವು ರಾಜ್ಯಗಳು ಕೆಲವೇ ರೈಲುಗಳಿಗೆ ಮಾತ್ರ ತಮ್ಮ ರಾಜ್ಯಕ್ಕೆ ಪ್ರವೇಶಿಸುವಂತೆ ಅವಕಾಶ ಮಾಡಿಕೊಟ್ಟಿವೆ. ಗೃಹ ಕಾರ್ಯದರ್ಶಿ ಭಾನುವಾರ ರಾಜ್ಯಗಳೊಂದಿಗಿನ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಿ ಪತ್ರ ಬರೆದಿದ್ದಾರೆ.

ವಲಸೆ ಕಾರ್ಮಿಕರಿಗಾಗಿ ಹೆಚ್ಚು ‘ಶ್ರಮಿಕ್’ ವಿಶೇಷ ರೈಲುಗಳನ್ನು ಓಡಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ರೈಲ್ವೆಗೆ ಸಹಕರಿಸಬೇಕು ಎಂದು ಗೃಹ ಸಚಿವಾಲಯದ ಅಜಯ್ ಭಲ್ಲಾ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ವಲಸೆ ಕಾರ್ಮಿಕರು ರಸ್ತೆಗಳು, ರೈಲು ಹಳಿಗಳಲ್ಲಿ ನಡೆಯಲು ಆಶ್ರಯಿಸದೆ, ಲಭ್ಯವಿರುವ ವಿಶೇಷ ರೈಲುಗಳನ್ನು ಬಳಸುವಂತೆ ನೋಡಿಕೊಳ್ಳಬೇಕು ಎಂದು ಅವರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಕೇಳಿದ್ದಾರೆ.

ಭಾರತೀಯ ರೈಲ್ವೆ ಮೇ 1 ರಿಂದ 428 ‘ಶ್ರಮಿಕ್’ ವಿಶೇಷ ರೈಲುಗಳನ್ನು ಓಡಿಸಿದ್ದು, ಕೊರೊನಾ ಲಾಕ್‌ಡೌನ್ ಮಧ್ಯೆ ದೇಶದ ವಿವಿಧ ಭಾಗಗಳಲ್ಲಿ ಸಿಲುಕಿರುವ 4.5 ಲಕ್ಷಕ್ಕೂ ಹೆಚ್ಚು ವಲಸಿಗರನ್ನು ಮನೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇ 9 ರವರೆಗೆ ಓಡಿದ 287 ರೈಲುಗಳಲ್ಲಿ ಉತ್ತರ ಪ್ರದೇಶದಲ್ಲಿ 127 ,ಬಿಹಾರದಲ್ಲಿ 87 , ಮಧ್ಯಪ್ರದೇಶದಲ್ಲಿ 24 ಒಡಿಶಾದಲ್ಲಿ 20, ಜಾರ್ಖಂಡ್ನಲ್ಲಿ 16, ರಾಜಸ್ಥಾನದಲ್ಲಿ ನಾಲ್ಕು, ಮಹಾರಾಷ್ಟ್ರದಲ್ಲಿ ಮೂರು, ತೆಲಂಗಾಣ ಮತ್ತು ಪಶ್ಚಿಮದಲ್ಲಿ ತಲಾ ಎರಡು ಬಂಗಾಳ, ಮತ್ತು ಆಂಧ್ರಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ತಲಾ ಒಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಶ್ರಮಿಕ್’ ರೈಲುಗಳು 24 ಬೋಗಿಗಳನ್ನು ಹೊಂದಿದ್ದು, ಪ್ರತಿ ಬೋಗಿಯಲ್ಲಿ 72 ಪ್ರಯಾಣಿಕರನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ. ಪ್ರಸ್ತುತ, ಈ ರೈಲುಗಳು ಪ್ರತಿ ಕೋಚ್‌ನಲ್ಲಿ 54 ಪ್ರಯಾಣಿಕರೊಂದಿಗೆ ಸಾಮಾಜಿಕ ಅಂತರದ ಮಾನದಂಡಗಳಿಂದ ಓಡುತ್ತಿವೆ.


ಇದನ್ನೂ ಓದಿ: ಒತ್ತಡಕ್ಕೆ ಮಣಿದ ಕರ್ನಾಟಕ ಸರ್ಕಾರ ಕಾರ್ಮಿಕರಿಗೆ ರೈಲು ಸೇವೆ ಆರಂಭ


ನಮ್ಮ ಯೂಟ್ಯೂಬ್ ವಾನೆಲ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...