Homeಅಂತರಾಷ್ಟ್ರೀಯಚೀನಾ ಭಾರತದ ಭೂಪ್ರದೇಶ ಅತಿಕ್ರಮಿಸಿದೆಯೆಂದು ಒಪ್ಪಿಕೊಂಡ ರಕ್ಷಣಾ ಸಚಿವಾಲಯ: ದಾಖಲೆ ಡಿಲಿಟ್!

ಚೀನಾ ಭಾರತದ ಭೂಪ್ರದೇಶ ಅತಿಕ್ರಮಿಸಿದೆಯೆಂದು ಒಪ್ಪಿಕೊಂಡ ರಕ್ಷಣಾ ಸಚಿವಾಲಯ: ದಾಖಲೆ ಡಿಲಿಟ್!

ಚೀನಾ ಭಾರತೀಯ ಭೂಪ್ರದೇಶಗಳನ್ನು ಆಕ್ರಮಿಸಿದೆ ಎಂದು ಅಪ್‌ಲೋಡ್‌ ಮಾಡಿದ್ದ ಸುದ್ದಿಯನ್ನು ಎರಡು ದಿನಗಳ ನಂತರ ವೆಬ್‌ಸೈಟಿನಿಂದ ತೆಗೆದು ಹಾಕಲಾಗಿದೆ.

- Advertisement -
- Advertisement -

ಮೇ ಆರಂಭದಲ್ಲಿ ಚೀನಾ ಪೂರ್ವ ಲಡಾಖ್‌ನಲ್ಲಿರುವ ಭಾರತೀಯ ಭೂಪ್ರದೇಶಕ್ಕೆ ನುಸುಳಿದೆ ಎಂದು ರಕ್ಷಣಾ ಸಚಿವಾಲಯ ತನ್ನ ವೆಬ್‌ಸೈಟ್‌ನ ಸುದ್ದಿ ವಿಭಾಗದಲ್ಲಿ ಒಪ್ಪಿಕೊಂಡಿದ್ದು, ಆದರೆ ಪ್ರಸ್ತುತ ಅದನ್ನು ತೆಗೆದು ಹಾಕಲಾಗಿದೆ.

ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಯಲ್ಲಿ ಚೀನಾದ ಆಕ್ರಮಣಶೀಲತೆ ಹೆಚ್ಚುತ್ತಿದೆ ಮತ್ತು ಪ್ರಸ್ತುತ ನಿಲುವು ಧೀರ್ಘ ಕಾಲದವರೆಗೆ ನಿರೀಕ್ಷಿಲಾಗಿದೆ ಎಂದು ರಕ್ಷಣಾ ಸಚಿವಾಲಯದ ದಾಖಲೆಯಲ್ಲಿ ತಿಳಿಸಲಾಗಿದೆ ಎಂದು ಹಿಂದುಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ನಡೆದ ಸಂಘರ್ಷದಲ್ಲಿ 20 ಭಾರತೀಯ ಯೋಧರು ಕೊಲ್ಲಲ್ಪಟ್ಟಿದ್ದರು.

ಜೂನ್‌ನಲ್ಲಿ ರಕ್ಷಣಾ ಇಲಾಖೆಯ ಪ್ರಮುಖ ಚಟುವಟಿಕೆಗಳನ್ನು ಪಟ್ಟಿ ಮಾಡಿರುವ ಅಧಿಕೃತ ದಾಖಲೆಯಲ್ಲಿ, ಸಚಿವಾಲಯವು ಚೀನಾ ಸೇನೆಯು ಮೇ ತಿಂಗಳಿನ 17-18 ರಂದು ಕುಗ್ರಾಂಗ್‌ ನಲಾ, ಗೊಗ್ರಾ ಮತ್ತು ಪಾಂಗೊಂಗ್ ತ್ಸೊದ ಉತ್ತರ ದಂಡೆಯ ಪ್ರದೇಶಗಳಲ್ಲಿ ಭಾರತದ ಕಡೆಗೆ ಅತಿಕ್ರಮಿಸಿದೆ ಎಂದು ಹೇಳಿದೆ. ಇದನ್ನು ಆಗಸ್ಟ್ 4 ರಂದು ಸಚಿವಾಲಯದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಇಂದು ಬೆಳಿಗ್ಗೆ ಅದನ್ನು ಡಿಲೀಟ್ ಮಾಡಲಾಗಿದೆ.

“ಚೀನಾ ಆಕ್ರಮಣದ ಪರಿಣಾಮವಾಗಿ, ಪರಿಸ್ಥಿತಿಯನ್ನು ತಗ್ಗಿಸಲು ಎರಡೂ ಕಡೆಯ ಸಶಸ್ತ್ರ ಪಡೆಗಳ ನಡುವೆ ತಳಮಟ್ಟದ ಸಂವಹನ ನಡೆಸಲಾಯಿತು. ಕಾರ್ಪ್ಸ್ ಕಮಾಂಡರ್ ಮಟ್ಟದ ಧ್ವಜ ಸಭೆ ಜೂನ್ 6, 2020 ರಂದು ನಡೆಯಿತು. ಆದಾಗ್ಯೂ, ಜೂನ್ 15 ರಂದು ಎರಡು ಕಡೆಯವರ ನಡುವೆ ಹಿಂಸಾತ್ಮಕ ಘರ್ಷನೆ ನಡೆದಿದ್ದು, ಇದರ ಪರಿಣಾಮವಾಗಿ ಎರಡೂ ಕಡೆಯವರು ಸಾವನ್ನಪ್ಪಿದ್ದಾರೆ” ಎಂದು ದಾಖಲೆ ಹೇಳಿತ್ತು.

ಜೂನ್ ತಿಂಗಳನ್ನು ಮಾತ್ರ ಉಲ್ಲೇಖಿಸುವ ಡಾಕ್ಯುಮೆಂಟ್ ನಂತರದ ಮಿಲಿಟರಿ ಮಾತುಕತೆ ಜೂನ್ 22 ರಂದು ನಡೆಯಿತು ಎಂದು ಹೇಳಿದೆ. “ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಸಮ್ಮತಿ ಮತ್ತು ಸಂವಾದವು ಪರಸ್ಪರ ಸ್ವೀಕಾರಾರ್ಹ ಒಮ್ಮತಕ್ಕೆ ಬರುತ್ತಲೇ ಇದ್ದರೂ, ಪ್ರಸ್ತುತದ ಘರ್ಷನೆ ದೀರ್ಘಕಾಲದವರೆಗೆ ಇರುತ್ತದೆ” ಎಂದು ಅದು ಹೇಳಿದೆ.

ಪೂರ್ವ ಲಡಾಕ್‌ನಲ್ಲಿ ಚೀನಾದ ಏಕಪಕ್ಷೀಯ ಆಕ್ರಮಣದಿಂದ ಉಂಟಾಗುವ ಪರಿಸ್ಥಿತಿ ಸೂಕ್ಷ್ಮವಾಗಿದೆ ಮತ್ತು ವಿಕಾಸಗೊಳ್ಳುತ್ತಿರುವ ಪರಿಸ್ಥಿತಿಯ ಆಧಾರದ ಮೇಲೆ ನಿಕಟ ಮೇಲ್ವಿಚಾರಣೆ ಮತ್ತು ತ್ವರಿತ ಕ್ರಮ ಅಗತ್ಯ ಎಂದು ಸಚಿವಾಲಯ ಹೇಳಿದೆ.

ಸಚಿವಾಲಯವು ಚೀನಾದ ಆಕ್ರಮಣ ಒಪ್ಪಿಕೊಂಡಿದ್ದ ದಾಖಲೆಯನ್ನು ಅಳಿಸಿರುವುದಕ್ಕೆ ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಚೀನಾ ದಾಳಿ ಮಾಡಿರುವುದರ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಏಕೆ ಸುಳ್ಳು ಹೇಳುತ್ತಿದ್ದಾರೆ ಎಂದು ರಾಹುಲ್ ಕಿಡಿಕಾರಿದ್ದಾರೆ.

ಪಂಗೊಂಗ್ ತ್ಸೊ ಬಳಿಯ ಫಿಂಗರ್ ಪ್ರದೇಶದಲ್ಲಿನ ಎರಡು ಸೇನೆಗಳ ನಡುವಿನ ಗಂಭೀರ ಭಿನ್ನಾಭಿಪ್ರಾಯಗಳು ಮತ್ತು ಚೀನಾ ಸೇನೆ ಖಾಲಿ ಮಾಡಲು ಹಿಂದೇಟು ಹಾಕಿದ್ದರಿಂದಾಗಿ ಭಾರತದ ಮತ್ತು ಚೀನಾದ ಉನ್ನತ ಮಿಲಿಟರಿ ಕಮಾಂಡರ್‌ಗಳು ಭಾನುವಾರ ಪೂರ್ವ ಲಡಾಕ್‌ನಲ್ಲಿ ಸಭೆ ನಡೆಸಿ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಮುಂದಿನ ಹಂತದ ನಿಷ್ಕ್ರಿಯತೆಯ ಬಗ್ಗೆ ಚರ್ಚಿಸಿದ್ದರು ಎನ್ನಲಾಗಿದೆ.


ಓದಿ: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?; ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...