Homeಅಂತರಾಷ್ಟ್ರೀಯಚೀನಾ ಭಾರತದ ಭೂಪ್ರದೇಶ ಅತಿಕ್ರಮಿಸಿದೆಯೆಂದು ಒಪ್ಪಿಕೊಂಡ ರಕ್ಷಣಾ ಸಚಿವಾಲಯ: ದಾಖಲೆ ಡಿಲಿಟ್!

ಚೀನಾ ಭಾರತದ ಭೂಪ್ರದೇಶ ಅತಿಕ್ರಮಿಸಿದೆಯೆಂದು ಒಪ್ಪಿಕೊಂಡ ರಕ್ಷಣಾ ಸಚಿವಾಲಯ: ದಾಖಲೆ ಡಿಲಿಟ್!

ಚೀನಾ ಭಾರತೀಯ ಭೂಪ್ರದೇಶಗಳನ್ನು ಆಕ್ರಮಿಸಿದೆ ಎಂದು ಅಪ್‌ಲೋಡ್‌ ಮಾಡಿದ್ದ ಸುದ್ದಿಯನ್ನು ಎರಡು ದಿನಗಳ ನಂತರ ವೆಬ್‌ಸೈಟಿನಿಂದ ತೆಗೆದು ಹಾಕಲಾಗಿದೆ.

- Advertisement -
- Advertisement -

ಮೇ ಆರಂಭದಲ್ಲಿ ಚೀನಾ ಪೂರ್ವ ಲಡಾಖ್‌ನಲ್ಲಿರುವ ಭಾರತೀಯ ಭೂಪ್ರದೇಶಕ್ಕೆ ನುಸುಳಿದೆ ಎಂದು ರಕ್ಷಣಾ ಸಚಿವಾಲಯ ತನ್ನ ವೆಬ್‌ಸೈಟ್‌ನ ಸುದ್ದಿ ವಿಭಾಗದಲ್ಲಿ ಒಪ್ಪಿಕೊಂಡಿದ್ದು, ಆದರೆ ಪ್ರಸ್ತುತ ಅದನ್ನು ತೆಗೆದು ಹಾಕಲಾಗಿದೆ.

ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಯಲ್ಲಿ ಚೀನಾದ ಆಕ್ರಮಣಶೀಲತೆ ಹೆಚ್ಚುತ್ತಿದೆ ಮತ್ತು ಪ್ರಸ್ತುತ ನಿಲುವು ಧೀರ್ಘ ಕಾಲದವರೆಗೆ ನಿರೀಕ್ಷಿಲಾಗಿದೆ ಎಂದು ರಕ್ಷಣಾ ಸಚಿವಾಲಯದ ದಾಖಲೆಯಲ್ಲಿ ತಿಳಿಸಲಾಗಿದೆ ಎಂದು ಹಿಂದುಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ನಡೆದ ಸಂಘರ್ಷದಲ್ಲಿ 20 ಭಾರತೀಯ ಯೋಧರು ಕೊಲ್ಲಲ್ಪಟ್ಟಿದ್ದರು.

ಜೂನ್‌ನಲ್ಲಿ ರಕ್ಷಣಾ ಇಲಾಖೆಯ ಪ್ರಮುಖ ಚಟುವಟಿಕೆಗಳನ್ನು ಪಟ್ಟಿ ಮಾಡಿರುವ ಅಧಿಕೃತ ದಾಖಲೆಯಲ್ಲಿ, ಸಚಿವಾಲಯವು ಚೀನಾ ಸೇನೆಯು ಮೇ ತಿಂಗಳಿನ 17-18 ರಂದು ಕುಗ್ರಾಂಗ್‌ ನಲಾ, ಗೊಗ್ರಾ ಮತ್ತು ಪಾಂಗೊಂಗ್ ತ್ಸೊದ ಉತ್ತರ ದಂಡೆಯ ಪ್ರದೇಶಗಳಲ್ಲಿ ಭಾರತದ ಕಡೆಗೆ ಅತಿಕ್ರಮಿಸಿದೆ ಎಂದು ಹೇಳಿದೆ. ಇದನ್ನು ಆಗಸ್ಟ್ 4 ರಂದು ಸಚಿವಾಲಯದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಇಂದು ಬೆಳಿಗ್ಗೆ ಅದನ್ನು ಡಿಲೀಟ್ ಮಾಡಲಾಗಿದೆ.

“ಚೀನಾ ಆಕ್ರಮಣದ ಪರಿಣಾಮವಾಗಿ, ಪರಿಸ್ಥಿತಿಯನ್ನು ತಗ್ಗಿಸಲು ಎರಡೂ ಕಡೆಯ ಸಶಸ್ತ್ರ ಪಡೆಗಳ ನಡುವೆ ತಳಮಟ್ಟದ ಸಂವಹನ ನಡೆಸಲಾಯಿತು. ಕಾರ್ಪ್ಸ್ ಕಮಾಂಡರ್ ಮಟ್ಟದ ಧ್ವಜ ಸಭೆ ಜೂನ್ 6, 2020 ರಂದು ನಡೆಯಿತು. ಆದಾಗ್ಯೂ, ಜೂನ್ 15 ರಂದು ಎರಡು ಕಡೆಯವರ ನಡುವೆ ಹಿಂಸಾತ್ಮಕ ಘರ್ಷನೆ ನಡೆದಿದ್ದು, ಇದರ ಪರಿಣಾಮವಾಗಿ ಎರಡೂ ಕಡೆಯವರು ಸಾವನ್ನಪ್ಪಿದ್ದಾರೆ” ಎಂದು ದಾಖಲೆ ಹೇಳಿತ್ತು.

ಜೂನ್ ತಿಂಗಳನ್ನು ಮಾತ್ರ ಉಲ್ಲೇಖಿಸುವ ಡಾಕ್ಯುಮೆಂಟ್ ನಂತರದ ಮಿಲಿಟರಿ ಮಾತುಕತೆ ಜೂನ್ 22 ರಂದು ನಡೆಯಿತು ಎಂದು ಹೇಳಿದೆ. “ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಸಮ್ಮತಿ ಮತ್ತು ಸಂವಾದವು ಪರಸ್ಪರ ಸ್ವೀಕಾರಾರ್ಹ ಒಮ್ಮತಕ್ಕೆ ಬರುತ್ತಲೇ ಇದ್ದರೂ, ಪ್ರಸ್ತುತದ ಘರ್ಷನೆ ದೀರ್ಘಕಾಲದವರೆಗೆ ಇರುತ್ತದೆ” ಎಂದು ಅದು ಹೇಳಿದೆ.

ಪೂರ್ವ ಲಡಾಕ್‌ನಲ್ಲಿ ಚೀನಾದ ಏಕಪಕ್ಷೀಯ ಆಕ್ರಮಣದಿಂದ ಉಂಟಾಗುವ ಪರಿಸ್ಥಿತಿ ಸೂಕ್ಷ್ಮವಾಗಿದೆ ಮತ್ತು ವಿಕಾಸಗೊಳ್ಳುತ್ತಿರುವ ಪರಿಸ್ಥಿತಿಯ ಆಧಾರದ ಮೇಲೆ ನಿಕಟ ಮೇಲ್ವಿಚಾರಣೆ ಮತ್ತು ತ್ವರಿತ ಕ್ರಮ ಅಗತ್ಯ ಎಂದು ಸಚಿವಾಲಯ ಹೇಳಿದೆ.

ಸಚಿವಾಲಯವು ಚೀನಾದ ಆಕ್ರಮಣ ಒಪ್ಪಿಕೊಂಡಿದ್ದ ದಾಖಲೆಯನ್ನು ಅಳಿಸಿರುವುದಕ್ಕೆ ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಚೀನಾ ದಾಳಿ ಮಾಡಿರುವುದರ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಏಕೆ ಸುಳ್ಳು ಹೇಳುತ್ತಿದ್ದಾರೆ ಎಂದು ರಾಹುಲ್ ಕಿಡಿಕಾರಿದ್ದಾರೆ.

ಪಂಗೊಂಗ್ ತ್ಸೊ ಬಳಿಯ ಫಿಂಗರ್ ಪ್ರದೇಶದಲ್ಲಿನ ಎರಡು ಸೇನೆಗಳ ನಡುವಿನ ಗಂಭೀರ ಭಿನ್ನಾಭಿಪ್ರಾಯಗಳು ಮತ್ತು ಚೀನಾ ಸೇನೆ ಖಾಲಿ ಮಾಡಲು ಹಿಂದೇಟು ಹಾಕಿದ್ದರಿಂದಾಗಿ ಭಾರತದ ಮತ್ತು ಚೀನಾದ ಉನ್ನತ ಮಿಲಿಟರಿ ಕಮಾಂಡರ್‌ಗಳು ಭಾನುವಾರ ಪೂರ್ವ ಲಡಾಕ್‌ನಲ್ಲಿ ಸಭೆ ನಡೆಸಿ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಮುಂದಿನ ಹಂತದ ನಿಷ್ಕ್ರಿಯತೆಯ ಬಗ್ಗೆ ಚರ್ಚಿಸಿದ್ದರು ಎನ್ನಲಾಗಿದೆ.


ಓದಿ: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?; ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...