Homeಅಂತರಾಷ್ಟ್ರೀಯಚೀನಾ ಭಾರತದ ಭೂಪ್ರದೇಶ ಅತಿಕ್ರಮಿಸಿದೆಯೆಂದು ಒಪ್ಪಿಕೊಂಡ ರಕ್ಷಣಾ ಸಚಿವಾಲಯ: ದಾಖಲೆ ಡಿಲಿಟ್!

ಚೀನಾ ಭಾರತದ ಭೂಪ್ರದೇಶ ಅತಿಕ್ರಮಿಸಿದೆಯೆಂದು ಒಪ್ಪಿಕೊಂಡ ರಕ್ಷಣಾ ಸಚಿವಾಲಯ: ದಾಖಲೆ ಡಿಲಿಟ್!

ಚೀನಾ ಭಾರತೀಯ ಭೂಪ್ರದೇಶಗಳನ್ನು ಆಕ್ರಮಿಸಿದೆ ಎಂದು ಅಪ್‌ಲೋಡ್‌ ಮಾಡಿದ್ದ ಸುದ್ದಿಯನ್ನು ಎರಡು ದಿನಗಳ ನಂತರ ವೆಬ್‌ಸೈಟಿನಿಂದ ತೆಗೆದು ಹಾಕಲಾಗಿದೆ.

- Advertisement -
- Advertisement -

ಮೇ ಆರಂಭದಲ್ಲಿ ಚೀನಾ ಪೂರ್ವ ಲಡಾಖ್‌ನಲ್ಲಿರುವ ಭಾರತೀಯ ಭೂಪ್ರದೇಶಕ್ಕೆ ನುಸುಳಿದೆ ಎಂದು ರಕ್ಷಣಾ ಸಚಿವಾಲಯ ತನ್ನ ವೆಬ್‌ಸೈಟ್‌ನ ಸುದ್ದಿ ವಿಭಾಗದಲ್ಲಿ ಒಪ್ಪಿಕೊಂಡಿದ್ದು, ಆದರೆ ಪ್ರಸ್ತುತ ಅದನ್ನು ತೆಗೆದು ಹಾಕಲಾಗಿದೆ.

ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಯಲ್ಲಿ ಚೀನಾದ ಆಕ್ರಮಣಶೀಲತೆ ಹೆಚ್ಚುತ್ತಿದೆ ಮತ್ತು ಪ್ರಸ್ತುತ ನಿಲುವು ಧೀರ್ಘ ಕಾಲದವರೆಗೆ ನಿರೀಕ್ಷಿಲಾಗಿದೆ ಎಂದು ರಕ್ಷಣಾ ಸಚಿವಾಲಯದ ದಾಖಲೆಯಲ್ಲಿ ತಿಳಿಸಲಾಗಿದೆ ಎಂದು ಹಿಂದುಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ನಡೆದ ಸಂಘರ್ಷದಲ್ಲಿ 20 ಭಾರತೀಯ ಯೋಧರು ಕೊಲ್ಲಲ್ಪಟ್ಟಿದ್ದರು.

ಜೂನ್‌ನಲ್ಲಿ ರಕ್ಷಣಾ ಇಲಾಖೆಯ ಪ್ರಮುಖ ಚಟುವಟಿಕೆಗಳನ್ನು ಪಟ್ಟಿ ಮಾಡಿರುವ ಅಧಿಕೃತ ದಾಖಲೆಯಲ್ಲಿ, ಸಚಿವಾಲಯವು ಚೀನಾ ಸೇನೆಯು ಮೇ ತಿಂಗಳಿನ 17-18 ರಂದು ಕುಗ್ರಾಂಗ್‌ ನಲಾ, ಗೊಗ್ರಾ ಮತ್ತು ಪಾಂಗೊಂಗ್ ತ್ಸೊದ ಉತ್ತರ ದಂಡೆಯ ಪ್ರದೇಶಗಳಲ್ಲಿ ಭಾರತದ ಕಡೆಗೆ ಅತಿಕ್ರಮಿಸಿದೆ ಎಂದು ಹೇಳಿದೆ. ಇದನ್ನು ಆಗಸ್ಟ್ 4 ರಂದು ಸಚಿವಾಲಯದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಇಂದು ಬೆಳಿಗ್ಗೆ ಅದನ್ನು ಡಿಲೀಟ್ ಮಾಡಲಾಗಿದೆ.

“ಚೀನಾ ಆಕ್ರಮಣದ ಪರಿಣಾಮವಾಗಿ, ಪರಿಸ್ಥಿತಿಯನ್ನು ತಗ್ಗಿಸಲು ಎರಡೂ ಕಡೆಯ ಸಶಸ್ತ್ರ ಪಡೆಗಳ ನಡುವೆ ತಳಮಟ್ಟದ ಸಂವಹನ ನಡೆಸಲಾಯಿತು. ಕಾರ್ಪ್ಸ್ ಕಮಾಂಡರ್ ಮಟ್ಟದ ಧ್ವಜ ಸಭೆ ಜೂನ್ 6, 2020 ರಂದು ನಡೆಯಿತು. ಆದಾಗ್ಯೂ, ಜೂನ್ 15 ರಂದು ಎರಡು ಕಡೆಯವರ ನಡುವೆ ಹಿಂಸಾತ್ಮಕ ಘರ್ಷನೆ ನಡೆದಿದ್ದು, ಇದರ ಪರಿಣಾಮವಾಗಿ ಎರಡೂ ಕಡೆಯವರು ಸಾವನ್ನಪ್ಪಿದ್ದಾರೆ” ಎಂದು ದಾಖಲೆ ಹೇಳಿತ್ತು.

ಜೂನ್ ತಿಂಗಳನ್ನು ಮಾತ್ರ ಉಲ್ಲೇಖಿಸುವ ಡಾಕ್ಯುಮೆಂಟ್ ನಂತರದ ಮಿಲಿಟರಿ ಮಾತುಕತೆ ಜೂನ್ 22 ರಂದು ನಡೆಯಿತು ಎಂದು ಹೇಳಿದೆ. “ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಸಮ್ಮತಿ ಮತ್ತು ಸಂವಾದವು ಪರಸ್ಪರ ಸ್ವೀಕಾರಾರ್ಹ ಒಮ್ಮತಕ್ಕೆ ಬರುತ್ತಲೇ ಇದ್ದರೂ, ಪ್ರಸ್ತುತದ ಘರ್ಷನೆ ದೀರ್ಘಕಾಲದವರೆಗೆ ಇರುತ್ತದೆ” ಎಂದು ಅದು ಹೇಳಿದೆ.

ಪೂರ್ವ ಲಡಾಕ್‌ನಲ್ಲಿ ಚೀನಾದ ಏಕಪಕ್ಷೀಯ ಆಕ್ರಮಣದಿಂದ ಉಂಟಾಗುವ ಪರಿಸ್ಥಿತಿ ಸೂಕ್ಷ್ಮವಾಗಿದೆ ಮತ್ತು ವಿಕಾಸಗೊಳ್ಳುತ್ತಿರುವ ಪರಿಸ್ಥಿತಿಯ ಆಧಾರದ ಮೇಲೆ ನಿಕಟ ಮೇಲ್ವಿಚಾರಣೆ ಮತ್ತು ತ್ವರಿತ ಕ್ರಮ ಅಗತ್ಯ ಎಂದು ಸಚಿವಾಲಯ ಹೇಳಿದೆ.

ಸಚಿವಾಲಯವು ಚೀನಾದ ಆಕ್ರಮಣ ಒಪ್ಪಿಕೊಂಡಿದ್ದ ದಾಖಲೆಯನ್ನು ಅಳಿಸಿರುವುದಕ್ಕೆ ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಚೀನಾ ದಾಳಿ ಮಾಡಿರುವುದರ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಏಕೆ ಸುಳ್ಳು ಹೇಳುತ್ತಿದ್ದಾರೆ ಎಂದು ರಾಹುಲ್ ಕಿಡಿಕಾರಿದ್ದಾರೆ.

ಪಂಗೊಂಗ್ ತ್ಸೊ ಬಳಿಯ ಫಿಂಗರ್ ಪ್ರದೇಶದಲ್ಲಿನ ಎರಡು ಸೇನೆಗಳ ನಡುವಿನ ಗಂಭೀರ ಭಿನ್ನಾಭಿಪ್ರಾಯಗಳು ಮತ್ತು ಚೀನಾ ಸೇನೆ ಖಾಲಿ ಮಾಡಲು ಹಿಂದೇಟು ಹಾಕಿದ್ದರಿಂದಾಗಿ ಭಾರತದ ಮತ್ತು ಚೀನಾದ ಉನ್ನತ ಮಿಲಿಟರಿ ಕಮಾಂಡರ್‌ಗಳು ಭಾನುವಾರ ಪೂರ್ವ ಲಡಾಕ್‌ನಲ್ಲಿ ಸಭೆ ನಡೆಸಿ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಮುಂದಿನ ಹಂತದ ನಿಷ್ಕ್ರಿಯತೆಯ ಬಗ್ಗೆ ಚರ್ಚಿಸಿದ್ದರು ಎನ್ನಲಾಗಿದೆ.


ಓದಿ: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?; ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...