Homeಅಂತರಾಷ್ಟ್ರೀಯಚೀನಾ ಭಾರತದ ಭೂಪ್ರದೇಶ ಅತಿಕ್ರಮಿಸಿದೆಯೆಂದು ಒಪ್ಪಿಕೊಂಡ ರಕ್ಷಣಾ ಸಚಿವಾಲಯ: ದಾಖಲೆ ಡಿಲಿಟ್!

ಚೀನಾ ಭಾರತದ ಭೂಪ್ರದೇಶ ಅತಿಕ್ರಮಿಸಿದೆಯೆಂದು ಒಪ್ಪಿಕೊಂಡ ರಕ್ಷಣಾ ಸಚಿವಾಲಯ: ದಾಖಲೆ ಡಿಲಿಟ್!

ಚೀನಾ ಭಾರತೀಯ ಭೂಪ್ರದೇಶಗಳನ್ನು ಆಕ್ರಮಿಸಿದೆ ಎಂದು ಅಪ್‌ಲೋಡ್‌ ಮಾಡಿದ್ದ ಸುದ್ದಿಯನ್ನು ಎರಡು ದಿನಗಳ ನಂತರ ವೆಬ್‌ಸೈಟಿನಿಂದ ತೆಗೆದು ಹಾಕಲಾಗಿದೆ.

- Advertisement -
- Advertisement -

ಮೇ ಆರಂಭದಲ್ಲಿ ಚೀನಾ ಪೂರ್ವ ಲಡಾಖ್‌ನಲ್ಲಿರುವ ಭಾರತೀಯ ಭೂಪ್ರದೇಶಕ್ಕೆ ನುಸುಳಿದೆ ಎಂದು ರಕ್ಷಣಾ ಸಚಿವಾಲಯ ತನ್ನ ವೆಬ್‌ಸೈಟ್‌ನ ಸುದ್ದಿ ವಿಭಾಗದಲ್ಲಿ ಒಪ್ಪಿಕೊಂಡಿದ್ದು, ಆದರೆ ಪ್ರಸ್ತುತ ಅದನ್ನು ತೆಗೆದು ಹಾಕಲಾಗಿದೆ.

ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಯಲ್ಲಿ ಚೀನಾದ ಆಕ್ರಮಣಶೀಲತೆ ಹೆಚ್ಚುತ್ತಿದೆ ಮತ್ತು ಪ್ರಸ್ತುತ ನಿಲುವು ಧೀರ್ಘ ಕಾಲದವರೆಗೆ ನಿರೀಕ್ಷಿಲಾಗಿದೆ ಎಂದು ರಕ್ಷಣಾ ಸಚಿವಾಲಯದ ದಾಖಲೆಯಲ್ಲಿ ತಿಳಿಸಲಾಗಿದೆ ಎಂದು ಹಿಂದುಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ನಡೆದ ಸಂಘರ್ಷದಲ್ಲಿ 20 ಭಾರತೀಯ ಯೋಧರು ಕೊಲ್ಲಲ್ಪಟ್ಟಿದ್ದರು.

ಜೂನ್‌ನಲ್ಲಿ ರಕ್ಷಣಾ ಇಲಾಖೆಯ ಪ್ರಮುಖ ಚಟುವಟಿಕೆಗಳನ್ನು ಪಟ್ಟಿ ಮಾಡಿರುವ ಅಧಿಕೃತ ದಾಖಲೆಯಲ್ಲಿ, ಸಚಿವಾಲಯವು ಚೀನಾ ಸೇನೆಯು ಮೇ ತಿಂಗಳಿನ 17-18 ರಂದು ಕುಗ್ರಾಂಗ್‌ ನಲಾ, ಗೊಗ್ರಾ ಮತ್ತು ಪಾಂಗೊಂಗ್ ತ್ಸೊದ ಉತ್ತರ ದಂಡೆಯ ಪ್ರದೇಶಗಳಲ್ಲಿ ಭಾರತದ ಕಡೆಗೆ ಅತಿಕ್ರಮಿಸಿದೆ ಎಂದು ಹೇಳಿದೆ. ಇದನ್ನು ಆಗಸ್ಟ್ 4 ರಂದು ಸಚಿವಾಲಯದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಇಂದು ಬೆಳಿಗ್ಗೆ ಅದನ್ನು ಡಿಲೀಟ್ ಮಾಡಲಾಗಿದೆ.

“ಚೀನಾ ಆಕ್ರಮಣದ ಪರಿಣಾಮವಾಗಿ, ಪರಿಸ್ಥಿತಿಯನ್ನು ತಗ್ಗಿಸಲು ಎರಡೂ ಕಡೆಯ ಸಶಸ್ತ್ರ ಪಡೆಗಳ ನಡುವೆ ತಳಮಟ್ಟದ ಸಂವಹನ ನಡೆಸಲಾಯಿತು. ಕಾರ್ಪ್ಸ್ ಕಮಾಂಡರ್ ಮಟ್ಟದ ಧ್ವಜ ಸಭೆ ಜೂನ್ 6, 2020 ರಂದು ನಡೆಯಿತು. ಆದಾಗ್ಯೂ, ಜೂನ್ 15 ರಂದು ಎರಡು ಕಡೆಯವರ ನಡುವೆ ಹಿಂಸಾತ್ಮಕ ಘರ್ಷನೆ ನಡೆದಿದ್ದು, ಇದರ ಪರಿಣಾಮವಾಗಿ ಎರಡೂ ಕಡೆಯವರು ಸಾವನ್ನಪ್ಪಿದ್ದಾರೆ” ಎಂದು ದಾಖಲೆ ಹೇಳಿತ್ತು.

ಜೂನ್ ತಿಂಗಳನ್ನು ಮಾತ್ರ ಉಲ್ಲೇಖಿಸುವ ಡಾಕ್ಯುಮೆಂಟ್ ನಂತರದ ಮಿಲಿಟರಿ ಮಾತುಕತೆ ಜೂನ್ 22 ರಂದು ನಡೆಯಿತು ಎಂದು ಹೇಳಿದೆ. “ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಸಮ್ಮತಿ ಮತ್ತು ಸಂವಾದವು ಪರಸ್ಪರ ಸ್ವೀಕಾರಾರ್ಹ ಒಮ್ಮತಕ್ಕೆ ಬರುತ್ತಲೇ ಇದ್ದರೂ, ಪ್ರಸ್ತುತದ ಘರ್ಷನೆ ದೀರ್ಘಕಾಲದವರೆಗೆ ಇರುತ್ತದೆ” ಎಂದು ಅದು ಹೇಳಿದೆ.

ಪೂರ್ವ ಲಡಾಕ್‌ನಲ್ಲಿ ಚೀನಾದ ಏಕಪಕ್ಷೀಯ ಆಕ್ರಮಣದಿಂದ ಉಂಟಾಗುವ ಪರಿಸ್ಥಿತಿ ಸೂಕ್ಷ್ಮವಾಗಿದೆ ಮತ್ತು ವಿಕಾಸಗೊಳ್ಳುತ್ತಿರುವ ಪರಿಸ್ಥಿತಿಯ ಆಧಾರದ ಮೇಲೆ ನಿಕಟ ಮೇಲ್ವಿಚಾರಣೆ ಮತ್ತು ತ್ವರಿತ ಕ್ರಮ ಅಗತ್ಯ ಎಂದು ಸಚಿವಾಲಯ ಹೇಳಿದೆ.

ಸಚಿವಾಲಯವು ಚೀನಾದ ಆಕ್ರಮಣ ಒಪ್ಪಿಕೊಂಡಿದ್ದ ದಾಖಲೆಯನ್ನು ಅಳಿಸಿರುವುದಕ್ಕೆ ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಚೀನಾ ದಾಳಿ ಮಾಡಿರುವುದರ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಏಕೆ ಸುಳ್ಳು ಹೇಳುತ್ತಿದ್ದಾರೆ ಎಂದು ರಾಹುಲ್ ಕಿಡಿಕಾರಿದ್ದಾರೆ.

ಪಂಗೊಂಗ್ ತ್ಸೊ ಬಳಿಯ ಫಿಂಗರ್ ಪ್ರದೇಶದಲ್ಲಿನ ಎರಡು ಸೇನೆಗಳ ನಡುವಿನ ಗಂಭೀರ ಭಿನ್ನಾಭಿಪ್ರಾಯಗಳು ಮತ್ತು ಚೀನಾ ಸೇನೆ ಖಾಲಿ ಮಾಡಲು ಹಿಂದೇಟು ಹಾಕಿದ್ದರಿಂದಾಗಿ ಭಾರತದ ಮತ್ತು ಚೀನಾದ ಉನ್ನತ ಮಿಲಿಟರಿ ಕಮಾಂಡರ್‌ಗಳು ಭಾನುವಾರ ಪೂರ್ವ ಲಡಾಕ್‌ನಲ್ಲಿ ಸಭೆ ನಡೆಸಿ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಮುಂದಿನ ಹಂತದ ನಿಷ್ಕ್ರಿಯತೆಯ ಬಗ್ಗೆ ಚರ್ಚಿಸಿದ್ದರು ಎನ್ನಲಾಗಿದೆ.


ಓದಿ: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?; ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...