Homeಅಂತರಾಷ್ಟ್ರೀಯಚೀನಾ ಭಾರತದ ಭೂಪ್ರದೇಶ ಅತಿಕ್ರಮಿಸಿದೆಯೆಂದು ಒಪ್ಪಿಕೊಂಡ ರಕ್ಷಣಾ ಸಚಿವಾಲಯ: ದಾಖಲೆ ಡಿಲಿಟ್!

ಚೀನಾ ಭಾರತದ ಭೂಪ್ರದೇಶ ಅತಿಕ್ರಮಿಸಿದೆಯೆಂದು ಒಪ್ಪಿಕೊಂಡ ರಕ್ಷಣಾ ಸಚಿವಾಲಯ: ದಾಖಲೆ ಡಿಲಿಟ್!

ಚೀನಾ ಭಾರತೀಯ ಭೂಪ್ರದೇಶಗಳನ್ನು ಆಕ್ರಮಿಸಿದೆ ಎಂದು ಅಪ್‌ಲೋಡ್‌ ಮಾಡಿದ್ದ ಸುದ್ದಿಯನ್ನು ಎರಡು ದಿನಗಳ ನಂತರ ವೆಬ್‌ಸೈಟಿನಿಂದ ತೆಗೆದು ಹಾಕಲಾಗಿದೆ.

- Advertisement -
- Advertisement -

ಮೇ ಆರಂಭದಲ್ಲಿ ಚೀನಾ ಪೂರ್ವ ಲಡಾಖ್‌ನಲ್ಲಿರುವ ಭಾರತೀಯ ಭೂಪ್ರದೇಶಕ್ಕೆ ನುಸುಳಿದೆ ಎಂದು ರಕ್ಷಣಾ ಸಚಿವಾಲಯ ತನ್ನ ವೆಬ್‌ಸೈಟ್‌ನ ಸುದ್ದಿ ವಿಭಾಗದಲ್ಲಿ ಒಪ್ಪಿಕೊಂಡಿದ್ದು, ಆದರೆ ಪ್ರಸ್ತುತ ಅದನ್ನು ತೆಗೆದು ಹಾಕಲಾಗಿದೆ.

ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಯಲ್ಲಿ ಚೀನಾದ ಆಕ್ರಮಣಶೀಲತೆ ಹೆಚ್ಚುತ್ತಿದೆ ಮತ್ತು ಪ್ರಸ್ತುತ ನಿಲುವು ಧೀರ್ಘ ಕಾಲದವರೆಗೆ ನಿರೀಕ್ಷಿಲಾಗಿದೆ ಎಂದು ರಕ್ಷಣಾ ಸಚಿವಾಲಯದ ದಾಖಲೆಯಲ್ಲಿ ತಿಳಿಸಲಾಗಿದೆ ಎಂದು ಹಿಂದುಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ನಡೆದ ಸಂಘರ್ಷದಲ್ಲಿ 20 ಭಾರತೀಯ ಯೋಧರು ಕೊಲ್ಲಲ್ಪಟ್ಟಿದ್ದರು.

ಜೂನ್‌ನಲ್ಲಿ ರಕ್ಷಣಾ ಇಲಾಖೆಯ ಪ್ರಮುಖ ಚಟುವಟಿಕೆಗಳನ್ನು ಪಟ್ಟಿ ಮಾಡಿರುವ ಅಧಿಕೃತ ದಾಖಲೆಯಲ್ಲಿ, ಸಚಿವಾಲಯವು ಚೀನಾ ಸೇನೆಯು ಮೇ ತಿಂಗಳಿನ 17-18 ರಂದು ಕುಗ್ರಾಂಗ್‌ ನಲಾ, ಗೊಗ್ರಾ ಮತ್ತು ಪಾಂಗೊಂಗ್ ತ್ಸೊದ ಉತ್ತರ ದಂಡೆಯ ಪ್ರದೇಶಗಳಲ್ಲಿ ಭಾರತದ ಕಡೆಗೆ ಅತಿಕ್ರಮಿಸಿದೆ ಎಂದು ಹೇಳಿದೆ. ಇದನ್ನು ಆಗಸ್ಟ್ 4 ರಂದು ಸಚಿವಾಲಯದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಇಂದು ಬೆಳಿಗ್ಗೆ ಅದನ್ನು ಡಿಲೀಟ್ ಮಾಡಲಾಗಿದೆ.

“ಚೀನಾ ಆಕ್ರಮಣದ ಪರಿಣಾಮವಾಗಿ, ಪರಿಸ್ಥಿತಿಯನ್ನು ತಗ್ಗಿಸಲು ಎರಡೂ ಕಡೆಯ ಸಶಸ್ತ್ರ ಪಡೆಗಳ ನಡುವೆ ತಳಮಟ್ಟದ ಸಂವಹನ ನಡೆಸಲಾಯಿತು. ಕಾರ್ಪ್ಸ್ ಕಮಾಂಡರ್ ಮಟ್ಟದ ಧ್ವಜ ಸಭೆ ಜೂನ್ 6, 2020 ರಂದು ನಡೆಯಿತು. ಆದಾಗ್ಯೂ, ಜೂನ್ 15 ರಂದು ಎರಡು ಕಡೆಯವರ ನಡುವೆ ಹಿಂಸಾತ್ಮಕ ಘರ್ಷನೆ ನಡೆದಿದ್ದು, ಇದರ ಪರಿಣಾಮವಾಗಿ ಎರಡೂ ಕಡೆಯವರು ಸಾವನ್ನಪ್ಪಿದ್ದಾರೆ” ಎಂದು ದಾಖಲೆ ಹೇಳಿತ್ತು.

ಜೂನ್ ತಿಂಗಳನ್ನು ಮಾತ್ರ ಉಲ್ಲೇಖಿಸುವ ಡಾಕ್ಯುಮೆಂಟ್ ನಂತರದ ಮಿಲಿಟರಿ ಮಾತುಕತೆ ಜೂನ್ 22 ರಂದು ನಡೆಯಿತು ಎಂದು ಹೇಳಿದೆ. “ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಸಮ್ಮತಿ ಮತ್ತು ಸಂವಾದವು ಪರಸ್ಪರ ಸ್ವೀಕಾರಾರ್ಹ ಒಮ್ಮತಕ್ಕೆ ಬರುತ್ತಲೇ ಇದ್ದರೂ, ಪ್ರಸ್ತುತದ ಘರ್ಷನೆ ದೀರ್ಘಕಾಲದವರೆಗೆ ಇರುತ್ತದೆ” ಎಂದು ಅದು ಹೇಳಿದೆ.

ಪೂರ್ವ ಲಡಾಕ್‌ನಲ್ಲಿ ಚೀನಾದ ಏಕಪಕ್ಷೀಯ ಆಕ್ರಮಣದಿಂದ ಉಂಟಾಗುವ ಪರಿಸ್ಥಿತಿ ಸೂಕ್ಷ್ಮವಾಗಿದೆ ಮತ್ತು ವಿಕಾಸಗೊಳ್ಳುತ್ತಿರುವ ಪರಿಸ್ಥಿತಿಯ ಆಧಾರದ ಮೇಲೆ ನಿಕಟ ಮೇಲ್ವಿಚಾರಣೆ ಮತ್ತು ತ್ವರಿತ ಕ್ರಮ ಅಗತ್ಯ ಎಂದು ಸಚಿವಾಲಯ ಹೇಳಿದೆ.

ಸಚಿವಾಲಯವು ಚೀನಾದ ಆಕ್ರಮಣ ಒಪ್ಪಿಕೊಂಡಿದ್ದ ದಾಖಲೆಯನ್ನು ಅಳಿಸಿರುವುದಕ್ಕೆ ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಚೀನಾ ದಾಳಿ ಮಾಡಿರುವುದರ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಏಕೆ ಸುಳ್ಳು ಹೇಳುತ್ತಿದ್ದಾರೆ ಎಂದು ರಾಹುಲ್ ಕಿಡಿಕಾರಿದ್ದಾರೆ.

ಪಂಗೊಂಗ್ ತ್ಸೊ ಬಳಿಯ ಫಿಂಗರ್ ಪ್ರದೇಶದಲ್ಲಿನ ಎರಡು ಸೇನೆಗಳ ನಡುವಿನ ಗಂಭೀರ ಭಿನ್ನಾಭಿಪ್ರಾಯಗಳು ಮತ್ತು ಚೀನಾ ಸೇನೆ ಖಾಲಿ ಮಾಡಲು ಹಿಂದೇಟು ಹಾಕಿದ್ದರಿಂದಾಗಿ ಭಾರತದ ಮತ್ತು ಚೀನಾದ ಉನ್ನತ ಮಿಲಿಟರಿ ಕಮಾಂಡರ್‌ಗಳು ಭಾನುವಾರ ಪೂರ್ವ ಲಡಾಕ್‌ನಲ್ಲಿ ಸಭೆ ನಡೆಸಿ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಮುಂದಿನ ಹಂತದ ನಿಷ್ಕ್ರಿಯತೆಯ ಬಗ್ಗೆ ಚರ್ಚಿಸಿದ್ದರು ಎನ್ನಲಾಗಿದೆ.


ಓದಿ: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?; ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....