Homeಮುಖಪುಟಸೇನೆಯನ್ನು ತೊರೆದ ‘Gay' ಮೇಜರ್‌ ಜೀವನಾಧಾರಿತ ಸಿನಿಮಾ ಚಿತ್ರಕತೆ ತಿರಸ್ಕರಿಸಿದ ರಕ್ಷಣಾ ಸಚಿವಾಲಯ!

ಸೇನೆಯನ್ನು ತೊರೆದ ‘Gay’ ಮೇಜರ್‌ ಜೀವನಾಧಾರಿತ ಸಿನಿಮಾ ಚಿತ್ರಕತೆ ತಿರಸ್ಕರಿಸಿದ ರಕ್ಷಣಾ ಸಚಿವಾಲಯ!

ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿ ರಕ್ಷಣಾ ಸಚಿವಾಲಯ ನಿಲುವು ತಾಳಿದೆ ಎಂಬ ಆಕ್ಷೇಪಗಳು ವ್ಯಕ್ತವಾಗಿವೆ.

- Advertisement -
- Advertisement -

ಸೇವೆಯನ್ನು ತೊರೆದ ಭಾರತೀಯ ಸೇನೆಯ ಮೇಜರ್‌ ಜೀವನ ಕುರಿತ ಚಿತ್ರಕಥೆಯನ್ನು ರಕ್ಷಣಾ ಸಚಿವಾಲಯ ತಿರಸ್ಕರಿಸಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸಲಾಗಿದೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಸೈನ್ಯದಲ್ಲಿ ತನ್ನ ಸ್ಥಾನವನ್ನು ತೊರೆಯಬೇಕಾದ ಸೈನಿಕನ ನೈಜ ಜೀವನದ ಹೋರಾಟ ಕಥನವನ್ನು ಚಿತ್ರನಿರ್ಮಾಪಕ ಓನಿರ್ ಅವರು ಮುಂದಿನ ಚಲನಚಿತ್ರವಾಗಿ ತರಲು ಇಚ್ಛಿಸಿದ್ದಾರೆ. ಲೈಂಗಿಕ ಅಲ್ಪಸಂಖ್ಯಾತರಾಗಿದ್ದಕ್ಕೆ ಅವರು ಸೇನೆಯಲ್ಲಿ ಮುಂದುವರಿಯಲು ಸಾಧ್ಯವಾಗಲಿಲ್ಲ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಹೇಳಿದೆ.

ಈ ಚಲನಚಿತ್ರವು ಓನಿರ್‌ ಅವರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನಚಿತ್ರ ‘ಐ ಆಮ್‌’ನ ಮುಂದುವರಿದ ಭಾಗವಾಗಿರಬಹುದು. ‘ಐ ಆಮ್‌’ ಸಿನಿಮಾವು ಏಕ ತಾಯ್ತನ, ಸಲಿಂಗಕಾಮ ಮತ್ತು ಇತರ ಸಾಮಾಜಿಕ ಸಮಸ್ಯೆಗಳಂತಹ ವಿಷಯಗಳ ಕುರಿತು ಬೆಳಕು ಚೆಲ್ಲುತ್ತದೆ.

ಈ ವಿಷಯದ ಕುರಿತು TOI ವರದಿಗಾರ ಮಾಡಿರುವ ಟ್ವೀಟ್ ಅನ್ನು ಮರುಟ್ವೀಟ್ ಮಾಡಿದ ಓನೀರ್, “ಭಾರತೀಯ ಸೇನೆಯಲ್ಲಿ ಸಲಿಂಗಕಾಮವು ಇನ್ನೂ ಕಾನೂನುಬಾಹಿರವಾಗಿದೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಸಮಾಜ ನಮ್ಮನ್ನು ಸಮಾನವಾಗಿ ಪರಿಗಣಿಸಲು ಬಹಳ ದೂರದಲ್ಲಿದ್ದೇವೆ” ಎಂದು ಮೈ ಬ್ರದರ್ ನಿರ್ದೇಶಕ ನಿಖಿಲ್ ಬರೆದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, “ನನ್ನ ಸೇನೆಯ ಬಗ್ಗೆ ನನಗೆ ಅತ್ಯಂತ ಗೌರವ ಮತ್ತು ಪ್ರೀತಿ ಇದೆ. ದೇಶಕ್ಕೆ ಸೇವೆ ಸಲ್ಲಿಸಲು ಬಯಸುವ ಯಾರನ್ನೂ ಲೈಂಗಿಕತೆಯ ಕಾರಣದಿಂದ ಸೇನೆ ತಾರತಮ್ಯ ಮಾಡಬಾರದು ಎಂದು ನಾನು ಬಯಸುತ್ತೇನೆ” ಎಂದು ಓನಿರ್ ತಿಳಿಸಿದ್ದಾರೆ.

ಜನವರಿ 19ರಂದು ಸೇನೆಯ ಕಾರ್ಯತಂತ್ರದ ಸಂವಹನ ವಿಭಾಗದ ಹೆಚ್ಚುವರಿ ಡೈರೆಕ್ಟರ್ ಜನರಲ್ ಲೆಫ್ಟಿನೆಂಟ್ ಕರ್ನಲ್ ಸಚಿನ್ ಉಜ್ವಾಲ್ ಅವರಿಂದ ಒನಿರ್ ಇಮೇಲ್ ಸ್ವೀಕರಿಸಿದ್ದಾರೆ ಎಂದು ಟೈಮ್ಸ್ ಆಫ್‌ ಇಂಡಿಯಾ ವರದಿ ಹೇಳುತ್ತದೆ.

“ಡಿಸೆಂಬರ್ 16, 2021ರಂದು ಇಮೇಲ್ ಮೂಲಕ ಸ್ವೀಕರಿಸಿದ ಸ್ಕ್ರಿಪ್ಟ್‌ನ ವಿಷಯವನ್ನು ವಿಶ್ಲೇಷಿಸಲಾಗಿದೆ” ಎಂದು ಉಜ್ವಾಲ್‌ ಹೇಳಿದ್ದಾರೆ. “ಸ್ಕ್ರಿಪ್ಟ್ ಅನ್ನು ಆರ್ಮಿಯಿಂದ ತೆರವುಗೊಳಿಸಲಾಗಿಲ್ಲ ಎಂದು ತಿಳಿಸಲು ವಿಷಾದಿಸುತ್ತೇವೆ” ಎಂದು ತಿಳಿಸಿದ್ದಾರೆ.

ಜುಲೈ 2020ರಲ್ಲಿ, ರಕ್ಷಣಾ ಸಚಿವಾಲಯವು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್‌ಗೆ ಪತ್ರ ಬರೆದಿರುವುದಾಗಿ ವರದಿಯಾಗಿತ್ತು. ಸೇನೆಯ ಮೇಲೆ ಯಾವುದೇ ಚಲನಚಿತ್ರ, ಸಾಕ್ಷ್ಯಚಿತ್ರ ಅಥವಾ ವೆಬ್ ಸರಣಿಯನ್ನು ಪ್ರಸಾರ ಮಾಡುವ ಮೊದಲು ರಕ್ಷಣಾ ಸಚಿವಾಲಯದಿಂದ “ನಿರಾಕ್ಷೇಪಣೆ ಪ್ರಮಾಣಪತ್ರ” ಪಡೆಯಲು ಪ್ರೊಡಕ್ಷನ್ ಹೌಸ್‌ಗಳಿಗೆ ಸಲಹೆ ನೀಡಬೇಕೆಂದು ಪತ್ರ ಸೂಚಿಸಿತ್ತು.

ರಕ್ಷಣಾ ಪಡೆಗಳ ಚಿತ್ರಣವನ್ನು ವಿರೂಪಗೊಳಿಸುವ ಮತ್ತು ರಕ್ಷಣಾ ಸಿಬ್ಬಂದಿ, ಅನುಭವಿಗಳ ಭಾವನೆಗಳನ್ನು ಘಾಸಿಗೊಳಿಸುವ ಘಟನೆಗಳನ್ನು ಮೊಟಕುಗೊಳಿಸುವ ಉದ್ದೇಶ ಈ ಸೂಚನೆಯ ಹಿಂದಿದೆ ಎನ್ನಲಾಗಿತ್ತು.

ಭಾರತೀಯ ಸೇನಾ ಸಿಬ್ಬಂದಿ ಮತ್ತು ಸೇನಾ ಸಮವಸ್ತ್ರವನ್ನು “ಅವಮಾನಕರ ರೀತಿಯಲ್ಲಿ” ಚಿತ್ರಿಸಿರುವ ಬಗ್ಗೆ ತೀವ್ರ ಆಕ್ಷೇಪಣೆಗಳನ್ನು ಎತ್ತುವ ಕೆಲವು ದೂರುಗಳನ್ನು ರಕ್ಷಣಾ ಸಚಿವಾಲಯ ಸ್ವೀಕರಿಸಿತ್ತು.

ಹಿಂದೆ ಪ್ರಸಾರವಾದ ವೆಬ್ ಸರಣಿಗಳಲ್ಲಿ ಸೇನೆಗೆ ಸಂಬಂಧಿಸಿದ ದೃಶ್ಯಗಳು ವಾಸ್ತವದಿಂದ ದೂರವಾಗಿದ್ದು ಸಶಸ್ತ್ರ ಪಡೆಗಳ ಕುರಿತು ವಿಕೃತ ಚಿತ್ರಣವನ್ನು ಪ್ರಸ್ತುತಪಡಿಸಲಾಗಿದೆ ಎಂದು  ಮೂಲಗಳು ವರದಿ ಮಾಡಿದ್ದವು.

ಹೀಗಾಗಿ “ಆಕ್ಷೇಪಣೆಯಿಲ್ಲದ ಪ್ರಮಾಣಪತ್ರ” ಪಡೆಯಲು ಓನೀರ್ ಅವರು ಚಲನಚಿತ್ರ ಸ್ಕ್ರಿಪ್ಟ್ ಅನ್ನು ಸೇನೆಗೆ ಸಲ್ಲಿಸಿದ್ದರು. ಸೇನೆಯು ಚಲನಚಿತ್ರ ಚಿತ್ರಕತೆಯನ್ನು ರದ್ದುಗೊಳಿಸಿದ ವರದಿಗೆ ಹಲವು ಜನರು ಪ್ರತಿಕ್ರಿಯೆಗಳನ್ನು ಟ್ವಿಟ್ಟರ್‌ನಲ್ಲಿ ನೀಡಿದ್ದಾರೆ. ಸೇನೆಯ ನಿಲುವು ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿದ್ದಾರೆ.

ಇದನ್ನೂ ಓದಿರಿ: ಅಮರ್‌ ಜವಾನ್ ಜ್ಯೋತಿ ವಿಲೀನ: ಕೆಲವರಿಗೆ ದೇಶಭಕ್ತಿ, ತ್ಯಾಗ ಅರ್ಥವಾಗುವುದಿಲ್ಲ ಎಂದ ರಾಹುಲ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...