Homeಮುಖಪುಟಸೇನೆಯನ್ನು ತೊರೆದ ‘Gay' ಮೇಜರ್‌ ಜೀವನಾಧಾರಿತ ಸಿನಿಮಾ ಚಿತ್ರಕತೆ ತಿರಸ್ಕರಿಸಿದ ರಕ್ಷಣಾ ಸಚಿವಾಲಯ!

ಸೇನೆಯನ್ನು ತೊರೆದ ‘Gay’ ಮೇಜರ್‌ ಜೀವನಾಧಾರಿತ ಸಿನಿಮಾ ಚಿತ್ರಕತೆ ತಿರಸ್ಕರಿಸಿದ ರಕ್ಷಣಾ ಸಚಿವಾಲಯ!

ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿ ರಕ್ಷಣಾ ಸಚಿವಾಲಯ ನಿಲುವು ತಾಳಿದೆ ಎಂಬ ಆಕ್ಷೇಪಗಳು ವ್ಯಕ್ತವಾಗಿವೆ.

- Advertisement -
- Advertisement -

ಸೇವೆಯನ್ನು ತೊರೆದ ಭಾರತೀಯ ಸೇನೆಯ ಮೇಜರ್‌ ಜೀವನ ಕುರಿತ ಚಿತ್ರಕಥೆಯನ್ನು ರಕ್ಷಣಾ ಸಚಿವಾಲಯ ತಿರಸ್ಕರಿಸಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸಲಾಗಿದೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಸೈನ್ಯದಲ್ಲಿ ತನ್ನ ಸ್ಥಾನವನ್ನು ತೊರೆಯಬೇಕಾದ ಸೈನಿಕನ ನೈಜ ಜೀವನದ ಹೋರಾಟ ಕಥನವನ್ನು ಚಿತ್ರನಿರ್ಮಾಪಕ ಓನಿರ್ ಅವರು ಮುಂದಿನ ಚಲನಚಿತ್ರವಾಗಿ ತರಲು ಇಚ್ಛಿಸಿದ್ದಾರೆ. ಲೈಂಗಿಕ ಅಲ್ಪಸಂಖ್ಯಾತರಾಗಿದ್ದಕ್ಕೆ ಅವರು ಸೇನೆಯಲ್ಲಿ ಮುಂದುವರಿಯಲು ಸಾಧ್ಯವಾಗಲಿಲ್ಲ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಹೇಳಿದೆ.

ಈ ಚಲನಚಿತ್ರವು ಓನಿರ್‌ ಅವರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನಚಿತ್ರ ‘ಐ ಆಮ್‌’ನ ಮುಂದುವರಿದ ಭಾಗವಾಗಿರಬಹುದು. ‘ಐ ಆಮ್‌’ ಸಿನಿಮಾವು ಏಕ ತಾಯ್ತನ, ಸಲಿಂಗಕಾಮ ಮತ್ತು ಇತರ ಸಾಮಾಜಿಕ ಸಮಸ್ಯೆಗಳಂತಹ ವಿಷಯಗಳ ಕುರಿತು ಬೆಳಕು ಚೆಲ್ಲುತ್ತದೆ.

ಈ ವಿಷಯದ ಕುರಿತು TOI ವರದಿಗಾರ ಮಾಡಿರುವ ಟ್ವೀಟ್ ಅನ್ನು ಮರುಟ್ವೀಟ್ ಮಾಡಿದ ಓನೀರ್, “ಭಾರತೀಯ ಸೇನೆಯಲ್ಲಿ ಸಲಿಂಗಕಾಮವು ಇನ್ನೂ ಕಾನೂನುಬಾಹಿರವಾಗಿದೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಸಮಾಜ ನಮ್ಮನ್ನು ಸಮಾನವಾಗಿ ಪರಿಗಣಿಸಲು ಬಹಳ ದೂರದಲ್ಲಿದ್ದೇವೆ” ಎಂದು ಮೈ ಬ್ರದರ್ ನಿರ್ದೇಶಕ ನಿಖಿಲ್ ಬರೆದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, “ನನ್ನ ಸೇನೆಯ ಬಗ್ಗೆ ನನಗೆ ಅತ್ಯಂತ ಗೌರವ ಮತ್ತು ಪ್ರೀತಿ ಇದೆ. ದೇಶಕ್ಕೆ ಸೇವೆ ಸಲ್ಲಿಸಲು ಬಯಸುವ ಯಾರನ್ನೂ ಲೈಂಗಿಕತೆಯ ಕಾರಣದಿಂದ ಸೇನೆ ತಾರತಮ್ಯ ಮಾಡಬಾರದು ಎಂದು ನಾನು ಬಯಸುತ್ತೇನೆ” ಎಂದು ಓನಿರ್ ತಿಳಿಸಿದ್ದಾರೆ.

ಜನವರಿ 19ರಂದು ಸೇನೆಯ ಕಾರ್ಯತಂತ್ರದ ಸಂವಹನ ವಿಭಾಗದ ಹೆಚ್ಚುವರಿ ಡೈರೆಕ್ಟರ್ ಜನರಲ್ ಲೆಫ್ಟಿನೆಂಟ್ ಕರ್ನಲ್ ಸಚಿನ್ ಉಜ್ವಾಲ್ ಅವರಿಂದ ಒನಿರ್ ಇಮೇಲ್ ಸ್ವೀಕರಿಸಿದ್ದಾರೆ ಎಂದು ಟೈಮ್ಸ್ ಆಫ್‌ ಇಂಡಿಯಾ ವರದಿ ಹೇಳುತ್ತದೆ.

“ಡಿಸೆಂಬರ್ 16, 2021ರಂದು ಇಮೇಲ್ ಮೂಲಕ ಸ್ವೀಕರಿಸಿದ ಸ್ಕ್ರಿಪ್ಟ್‌ನ ವಿಷಯವನ್ನು ವಿಶ್ಲೇಷಿಸಲಾಗಿದೆ” ಎಂದು ಉಜ್ವಾಲ್‌ ಹೇಳಿದ್ದಾರೆ. “ಸ್ಕ್ರಿಪ್ಟ್ ಅನ್ನು ಆರ್ಮಿಯಿಂದ ತೆರವುಗೊಳಿಸಲಾಗಿಲ್ಲ ಎಂದು ತಿಳಿಸಲು ವಿಷಾದಿಸುತ್ತೇವೆ” ಎಂದು ತಿಳಿಸಿದ್ದಾರೆ.

ಜುಲೈ 2020ರಲ್ಲಿ, ರಕ್ಷಣಾ ಸಚಿವಾಲಯವು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್‌ಗೆ ಪತ್ರ ಬರೆದಿರುವುದಾಗಿ ವರದಿಯಾಗಿತ್ತು. ಸೇನೆಯ ಮೇಲೆ ಯಾವುದೇ ಚಲನಚಿತ್ರ, ಸಾಕ್ಷ್ಯಚಿತ್ರ ಅಥವಾ ವೆಬ್ ಸರಣಿಯನ್ನು ಪ್ರಸಾರ ಮಾಡುವ ಮೊದಲು ರಕ್ಷಣಾ ಸಚಿವಾಲಯದಿಂದ “ನಿರಾಕ್ಷೇಪಣೆ ಪ್ರಮಾಣಪತ್ರ” ಪಡೆಯಲು ಪ್ರೊಡಕ್ಷನ್ ಹೌಸ್‌ಗಳಿಗೆ ಸಲಹೆ ನೀಡಬೇಕೆಂದು ಪತ್ರ ಸೂಚಿಸಿತ್ತು.

ರಕ್ಷಣಾ ಪಡೆಗಳ ಚಿತ್ರಣವನ್ನು ವಿರೂಪಗೊಳಿಸುವ ಮತ್ತು ರಕ್ಷಣಾ ಸಿಬ್ಬಂದಿ, ಅನುಭವಿಗಳ ಭಾವನೆಗಳನ್ನು ಘಾಸಿಗೊಳಿಸುವ ಘಟನೆಗಳನ್ನು ಮೊಟಕುಗೊಳಿಸುವ ಉದ್ದೇಶ ಈ ಸೂಚನೆಯ ಹಿಂದಿದೆ ಎನ್ನಲಾಗಿತ್ತು.

ಭಾರತೀಯ ಸೇನಾ ಸಿಬ್ಬಂದಿ ಮತ್ತು ಸೇನಾ ಸಮವಸ್ತ್ರವನ್ನು “ಅವಮಾನಕರ ರೀತಿಯಲ್ಲಿ” ಚಿತ್ರಿಸಿರುವ ಬಗ್ಗೆ ತೀವ್ರ ಆಕ್ಷೇಪಣೆಗಳನ್ನು ಎತ್ತುವ ಕೆಲವು ದೂರುಗಳನ್ನು ರಕ್ಷಣಾ ಸಚಿವಾಲಯ ಸ್ವೀಕರಿಸಿತ್ತು.

ಹಿಂದೆ ಪ್ರಸಾರವಾದ ವೆಬ್ ಸರಣಿಗಳಲ್ಲಿ ಸೇನೆಗೆ ಸಂಬಂಧಿಸಿದ ದೃಶ್ಯಗಳು ವಾಸ್ತವದಿಂದ ದೂರವಾಗಿದ್ದು ಸಶಸ್ತ್ರ ಪಡೆಗಳ ಕುರಿತು ವಿಕೃತ ಚಿತ್ರಣವನ್ನು ಪ್ರಸ್ತುತಪಡಿಸಲಾಗಿದೆ ಎಂದು  ಮೂಲಗಳು ವರದಿ ಮಾಡಿದ್ದವು.

ಹೀಗಾಗಿ “ಆಕ್ಷೇಪಣೆಯಿಲ್ಲದ ಪ್ರಮಾಣಪತ್ರ” ಪಡೆಯಲು ಓನೀರ್ ಅವರು ಚಲನಚಿತ್ರ ಸ್ಕ್ರಿಪ್ಟ್ ಅನ್ನು ಸೇನೆಗೆ ಸಲ್ಲಿಸಿದ್ದರು. ಸೇನೆಯು ಚಲನಚಿತ್ರ ಚಿತ್ರಕತೆಯನ್ನು ರದ್ದುಗೊಳಿಸಿದ ವರದಿಗೆ ಹಲವು ಜನರು ಪ್ರತಿಕ್ರಿಯೆಗಳನ್ನು ಟ್ವಿಟ್ಟರ್‌ನಲ್ಲಿ ನೀಡಿದ್ದಾರೆ. ಸೇನೆಯ ನಿಲುವು ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿದ್ದಾರೆ.

ಇದನ್ನೂ ಓದಿರಿ: ಅಮರ್‌ ಜವಾನ್ ಜ್ಯೋತಿ ವಿಲೀನ: ಕೆಲವರಿಗೆ ದೇಶಭಕ್ತಿ, ತ್ಯಾಗ ಅರ್ಥವಾಗುವುದಿಲ್ಲ ಎಂದ ರಾಹುಲ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...