Homeಮುಖಪುಟಸೇನೆಯನ್ನು ತೊರೆದ ‘Gay' ಮೇಜರ್‌ ಜೀವನಾಧಾರಿತ ಸಿನಿಮಾ ಚಿತ್ರಕತೆ ತಿರಸ್ಕರಿಸಿದ ರಕ್ಷಣಾ ಸಚಿವಾಲಯ!

ಸೇನೆಯನ್ನು ತೊರೆದ ‘Gay’ ಮೇಜರ್‌ ಜೀವನಾಧಾರಿತ ಸಿನಿಮಾ ಚಿತ್ರಕತೆ ತಿರಸ್ಕರಿಸಿದ ರಕ್ಷಣಾ ಸಚಿವಾಲಯ!

ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿ ರಕ್ಷಣಾ ಸಚಿವಾಲಯ ನಿಲುವು ತಾಳಿದೆ ಎಂಬ ಆಕ್ಷೇಪಗಳು ವ್ಯಕ್ತವಾಗಿವೆ.

- Advertisement -
- Advertisement -

ಸೇವೆಯನ್ನು ತೊರೆದ ಭಾರತೀಯ ಸೇನೆಯ ಮೇಜರ್‌ ಜೀವನ ಕುರಿತ ಚಿತ್ರಕಥೆಯನ್ನು ರಕ್ಷಣಾ ಸಚಿವಾಲಯ ತಿರಸ್ಕರಿಸಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸಲಾಗಿದೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಸೈನ್ಯದಲ್ಲಿ ತನ್ನ ಸ್ಥಾನವನ್ನು ತೊರೆಯಬೇಕಾದ ಸೈನಿಕನ ನೈಜ ಜೀವನದ ಹೋರಾಟ ಕಥನವನ್ನು ಚಿತ್ರನಿರ್ಮಾಪಕ ಓನಿರ್ ಅವರು ಮುಂದಿನ ಚಲನಚಿತ್ರವಾಗಿ ತರಲು ಇಚ್ಛಿಸಿದ್ದಾರೆ. ಲೈಂಗಿಕ ಅಲ್ಪಸಂಖ್ಯಾತರಾಗಿದ್ದಕ್ಕೆ ಅವರು ಸೇನೆಯಲ್ಲಿ ಮುಂದುವರಿಯಲು ಸಾಧ್ಯವಾಗಲಿಲ್ಲ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಹೇಳಿದೆ.

ಈ ಚಲನಚಿತ್ರವು ಓನಿರ್‌ ಅವರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನಚಿತ್ರ ‘ಐ ಆಮ್‌’ನ ಮುಂದುವರಿದ ಭಾಗವಾಗಿರಬಹುದು. ‘ಐ ಆಮ್‌’ ಸಿನಿಮಾವು ಏಕ ತಾಯ್ತನ, ಸಲಿಂಗಕಾಮ ಮತ್ತು ಇತರ ಸಾಮಾಜಿಕ ಸಮಸ್ಯೆಗಳಂತಹ ವಿಷಯಗಳ ಕುರಿತು ಬೆಳಕು ಚೆಲ್ಲುತ್ತದೆ.

ಈ ವಿಷಯದ ಕುರಿತು TOI ವರದಿಗಾರ ಮಾಡಿರುವ ಟ್ವೀಟ್ ಅನ್ನು ಮರುಟ್ವೀಟ್ ಮಾಡಿದ ಓನೀರ್, “ಭಾರತೀಯ ಸೇನೆಯಲ್ಲಿ ಸಲಿಂಗಕಾಮವು ಇನ್ನೂ ಕಾನೂನುಬಾಹಿರವಾಗಿದೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಸಮಾಜ ನಮ್ಮನ್ನು ಸಮಾನವಾಗಿ ಪರಿಗಣಿಸಲು ಬಹಳ ದೂರದಲ್ಲಿದ್ದೇವೆ” ಎಂದು ಮೈ ಬ್ರದರ್ ನಿರ್ದೇಶಕ ನಿಖಿಲ್ ಬರೆದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, “ನನ್ನ ಸೇನೆಯ ಬಗ್ಗೆ ನನಗೆ ಅತ್ಯಂತ ಗೌರವ ಮತ್ತು ಪ್ರೀತಿ ಇದೆ. ದೇಶಕ್ಕೆ ಸೇವೆ ಸಲ್ಲಿಸಲು ಬಯಸುವ ಯಾರನ್ನೂ ಲೈಂಗಿಕತೆಯ ಕಾರಣದಿಂದ ಸೇನೆ ತಾರತಮ್ಯ ಮಾಡಬಾರದು ಎಂದು ನಾನು ಬಯಸುತ್ತೇನೆ” ಎಂದು ಓನಿರ್ ತಿಳಿಸಿದ್ದಾರೆ.

ಜನವರಿ 19ರಂದು ಸೇನೆಯ ಕಾರ್ಯತಂತ್ರದ ಸಂವಹನ ವಿಭಾಗದ ಹೆಚ್ಚುವರಿ ಡೈರೆಕ್ಟರ್ ಜನರಲ್ ಲೆಫ್ಟಿನೆಂಟ್ ಕರ್ನಲ್ ಸಚಿನ್ ಉಜ್ವಾಲ್ ಅವರಿಂದ ಒನಿರ್ ಇಮೇಲ್ ಸ್ವೀಕರಿಸಿದ್ದಾರೆ ಎಂದು ಟೈಮ್ಸ್ ಆಫ್‌ ಇಂಡಿಯಾ ವರದಿ ಹೇಳುತ್ತದೆ.

“ಡಿಸೆಂಬರ್ 16, 2021ರಂದು ಇಮೇಲ್ ಮೂಲಕ ಸ್ವೀಕರಿಸಿದ ಸ್ಕ್ರಿಪ್ಟ್‌ನ ವಿಷಯವನ್ನು ವಿಶ್ಲೇಷಿಸಲಾಗಿದೆ” ಎಂದು ಉಜ್ವಾಲ್‌ ಹೇಳಿದ್ದಾರೆ. “ಸ್ಕ್ರಿಪ್ಟ್ ಅನ್ನು ಆರ್ಮಿಯಿಂದ ತೆರವುಗೊಳಿಸಲಾಗಿಲ್ಲ ಎಂದು ತಿಳಿಸಲು ವಿಷಾದಿಸುತ್ತೇವೆ” ಎಂದು ತಿಳಿಸಿದ್ದಾರೆ.

ಜುಲೈ 2020ರಲ್ಲಿ, ರಕ್ಷಣಾ ಸಚಿವಾಲಯವು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್‌ಗೆ ಪತ್ರ ಬರೆದಿರುವುದಾಗಿ ವರದಿಯಾಗಿತ್ತು. ಸೇನೆಯ ಮೇಲೆ ಯಾವುದೇ ಚಲನಚಿತ್ರ, ಸಾಕ್ಷ್ಯಚಿತ್ರ ಅಥವಾ ವೆಬ್ ಸರಣಿಯನ್ನು ಪ್ರಸಾರ ಮಾಡುವ ಮೊದಲು ರಕ್ಷಣಾ ಸಚಿವಾಲಯದಿಂದ “ನಿರಾಕ್ಷೇಪಣೆ ಪ್ರಮಾಣಪತ್ರ” ಪಡೆಯಲು ಪ್ರೊಡಕ್ಷನ್ ಹೌಸ್‌ಗಳಿಗೆ ಸಲಹೆ ನೀಡಬೇಕೆಂದು ಪತ್ರ ಸೂಚಿಸಿತ್ತು.

ರಕ್ಷಣಾ ಪಡೆಗಳ ಚಿತ್ರಣವನ್ನು ವಿರೂಪಗೊಳಿಸುವ ಮತ್ತು ರಕ್ಷಣಾ ಸಿಬ್ಬಂದಿ, ಅನುಭವಿಗಳ ಭಾವನೆಗಳನ್ನು ಘಾಸಿಗೊಳಿಸುವ ಘಟನೆಗಳನ್ನು ಮೊಟಕುಗೊಳಿಸುವ ಉದ್ದೇಶ ಈ ಸೂಚನೆಯ ಹಿಂದಿದೆ ಎನ್ನಲಾಗಿತ್ತು.

ಭಾರತೀಯ ಸೇನಾ ಸಿಬ್ಬಂದಿ ಮತ್ತು ಸೇನಾ ಸಮವಸ್ತ್ರವನ್ನು “ಅವಮಾನಕರ ರೀತಿಯಲ್ಲಿ” ಚಿತ್ರಿಸಿರುವ ಬಗ್ಗೆ ತೀವ್ರ ಆಕ್ಷೇಪಣೆಗಳನ್ನು ಎತ್ತುವ ಕೆಲವು ದೂರುಗಳನ್ನು ರಕ್ಷಣಾ ಸಚಿವಾಲಯ ಸ್ವೀಕರಿಸಿತ್ತು.

ಹಿಂದೆ ಪ್ರಸಾರವಾದ ವೆಬ್ ಸರಣಿಗಳಲ್ಲಿ ಸೇನೆಗೆ ಸಂಬಂಧಿಸಿದ ದೃಶ್ಯಗಳು ವಾಸ್ತವದಿಂದ ದೂರವಾಗಿದ್ದು ಸಶಸ್ತ್ರ ಪಡೆಗಳ ಕುರಿತು ವಿಕೃತ ಚಿತ್ರಣವನ್ನು ಪ್ರಸ್ತುತಪಡಿಸಲಾಗಿದೆ ಎಂದು  ಮೂಲಗಳು ವರದಿ ಮಾಡಿದ್ದವು.

ಹೀಗಾಗಿ “ಆಕ್ಷೇಪಣೆಯಿಲ್ಲದ ಪ್ರಮಾಣಪತ್ರ” ಪಡೆಯಲು ಓನೀರ್ ಅವರು ಚಲನಚಿತ್ರ ಸ್ಕ್ರಿಪ್ಟ್ ಅನ್ನು ಸೇನೆಗೆ ಸಲ್ಲಿಸಿದ್ದರು. ಸೇನೆಯು ಚಲನಚಿತ್ರ ಚಿತ್ರಕತೆಯನ್ನು ರದ್ದುಗೊಳಿಸಿದ ವರದಿಗೆ ಹಲವು ಜನರು ಪ್ರತಿಕ್ರಿಯೆಗಳನ್ನು ಟ್ವಿಟ್ಟರ್‌ನಲ್ಲಿ ನೀಡಿದ್ದಾರೆ. ಸೇನೆಯ ನಿಲುವು ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿದ್ದಾರೆ.

ಇದನ್ನೂ ಓದಿರಿ: ಅಮರ್‌ ಜವಾನ್ ಜ್ಯೋತಿ ವಿಲೀನ: ಕೆಲವರಿಗೆ ದೇಶಭಕ್ತಿ, ತ್ಯಾಗ ಅರ್ಥವಾಗುವುದಿಲ್ಲ ಎಂದ ರಾಹುಲ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...