Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣವನ್ನು ಎನ್‌ಐಎ ವಹಿಸಿದ ಗೃಹ ಸಚಿವಾಲಯದ ನಡೆಗೆ ವ್ಯಾಪಕ ವಿರೋಧ...

ಭೀಮಾ ಕೋರೆಗಾಂವ್ ಪ್ರಕರಣವನ್ನು ಎನ್‌ಐಎ ವಹಿಸಿದ ಗೃಹ ಸಚಿವಾಲಯದ ನಡೆಗೆ ವ್ಯಾಪಕ ವಿರೋಧ…

ಈ ಪ್ರಕರಣವನ್ನು ರಾಜ್ಯದ ಅನುಮತಿಯಿಲ್ಲದೆ ವರ್ಗಾಯಿಸಲಾಗಿದೆ, ಇದು ಅಸಂವಿಧಾನಿಕ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ಹೇಳಿದ್ದಾರೆ.

- Advertisement -
- Advertisement -

2018ರ ಭೀಮಾ ಕೋರೆಗಾಂವ್ ಪ್ರಕರಣದ ತನಿಖೆಯನ್ನು ಗೃಹ ಸಚಿವಾಲಯವು ಇಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವಹಿಸಿದೆ. ಅದರ ಬೆನ್ನಲ್ಲೇ ವ್ಯಾಪಕ ವಿರೋಧ ಕೇಳಿಬಂದಿದೆ.

ಭೀಮಾ ಕೋರೆಗಾಂವ್ ಪ್ರಕರಣದ ತನಿಖೆಯ ಕುರಿತು ಮಹಾರಾಷ್ಟ್ರ ಸರ್ಕಾರವು ಪುಣೆಯ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಒಂದು ದಿನದಲ್ಲಿಯೇ ಕೇಂದ್ರ ಸರ್ಕಾರವು ತನಿಖೆಯನ್ನು ಎನ್‌ಐಎಗೆ ವಹಿಸಿರುವುದರಿಮದ ಮತ್ತೊಮ್ಮೆ ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರದ ನಡುವೆ ಭಿನ್ನಾಭಿಪ್ರಾಯ ಭುಗಿಲೆದ್ದಿದೆ.

ಇದು ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು, ನಿರಪರಾಧಿಗಳ ಮೇಲೆ ಉದ್ದೇಶಪೂರ್ವಕವಾಗಿ ಹಾಕಲಾಗಿದೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವು ಬುದ್ಧಿಜೀವಿಗಳು ಮತ್ತು ಸಾಮಾಜಿಕ ಕಾರ್ಯಕರ್ತರ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ತಯಾರಿ ನಡೆಸುತ್ತಿದ್ದರೆ, ಅದನ್ನು ತಡೆಯಲೇಂದೆ ಕೇಂದ್ರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ.

ಈ ಕುರಿತು ಮಹಾರಾಷ್ಟ್ರ ಗೃಹಸಚಿವ ಅನಿಲ್‌ ದೇಶ್‌ಮುಖ್‌ ಕೇಂದ್ರದ ವಿರುದ್ಧ ಕಿಡಿಕಾರಿದ್ದು “ಈ ಪ್ರಕರಣವನ್ನು ರಾಜ್ಯದ ಅನುಮತಿಯಿಲ್ಲದೆ ವರ್ಗಾಯಿಸಲಾಗಿದೆ, ಇದು ಸಂವಿಧಾನಕ್ಕೆ ವಿರುದ್ಧವಾಗಿದೆ ಮತ್ತು ನಾನು ಅದನ್ನು ಖಂಡಿಸುತ್ತೇನೆ” ಎಂದಿದ್ದಾರೆ.

ಮಹಾರಾಷ್ಟ್ರದ ವಸತಿ ಸಚಿವ ಜಿತೇಂದ್ರ ಅವಾದ್, “ಕಾನೂನು ಸುವ್ಯವಸ್ಥೆ ರಾಜ್ಯ ವಿಷಯವಾಗಿದೆ ಎಂದು ಕೇಂದ್ರಕ್ಕೆ ನೆನಪಿಸಲು ಬಯಸುತ್ತೇನೆ. ಕೇಂದ್ರದ ನೇರ ಕ್ರಮವು ಸಂವಿಧಾನವನ್ನು ಅವಮಾನಿಸುವಂತಿದೆ. ಸಂವಿಧಾನವು ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧವನ್ನು ಸ್ಪಷ್ಟವಾಗಿ ಹೇಳುತ್ತದೆ. ಕಾನೂನು ಮತ್ತು ಸುವ್ಯವಸ್ಥೆ ರಾಜ್ಯದ ವಿಷಯವಾಗಿದ್ದು, ರಕ್ಷಣೆ ಮಾತ್ರ ಕೇಂದ್ರಕ್ಕೆ ಸಂಬಂಧಿಸಿದೆ. ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳ ಮೇಲೆ ಸವಾರಿ ಮಾಡಿದರೆ ಸಂವಿಧಾನಕ್ಕೆ ವಿರುದ್ಧವಿದ್ದೀರಿ ಎಂದರ್ಥ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಮೋದಿ-ಶಾರ ದ್ವೇಷದ ಕಾರ್ಯಸೂಚಿಯನ್ನು ವಿರೋಧಿಸುವವರನ್ನು “ಅರ್ಬನ್ ನಕ್ಸಲ್” ಎಂದು ಹಣೆಪಟ್ಟೆ ಕಟ್ಟಲಾಗುತ್ತದೆ. ಭೀಮಾ-ಕೋರೆಗಾಂವ್ ಪ್ರತಿರೋಧದ ಸಂಕೇತವಾಗಿದ್ದು, ಅದನ್ನು ಸರ್ಕಾರದ ಎನ್‌ಐಎ ತನಿಖೆ ಎಂದಿಗೂ ಅಳಿಸಲಾಗುವುದಿಲ್ಲ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣದ ಪರಿಶೀಲನೆ ನಡೆಸುತ್ತೇವೆ: ಮಹಾರಾಷ್ಟ್ರ ಗೃಹ ಸಚಿವ

ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಕೇಂದ್ರದ ನಿರ್ಧಾರವನ್ನು ಬೆಂಬಲಿಸಿದ್ದಾರೆ. “ಮಹಾರಾಷ್ಟ್ರ ಪೊಲೀಸರು ತನಿಖೆ ನಡೆಸಿ ನಗರ ನಕ್ಸಲರನ್ನು ಕೃತ್ಯವನ್ನು ಬಹಿರಂಗಪಡಿಸಿದೆ. ಸುಪ್ರೀಂ ಕೋರ್ಟ್ ಕೂಡ ಮಹಾರಾಷ್ಟ್ರ ಪೊಲೀಸರ ಪರವಾಗಿ ತೀರ್ಪು ನೀಡಿದೆ. ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ವೋಟ್‌ ಬ್ಯಾಂಕ್‌ ರಾಜಕೀಯಕ್ಕಾಗಿ ಕೇಸುಗಳನ್ನು ಹಿಂಪಡೆಯಲು ಯೋಜಿಸಿದೆ ಎಂದು ದೂರಿದ್ದಾರೆ.

ಏನಿದು ಪ್ರಕರಣ?

ಈ ಪ್ರಕರಣವು 2018ರ ಜನವರಿ 01ರಂದು ಪುಣೆ ಜಿಲ್ಲೆಯ ಭೀಮಾ ಕೋರೆಗಾಂವ್ ಬಳಿ ದಲಿತ ಗುಂಪುಗಳು 200ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸುತ್ತಿದ್ದಾಗ ಹಿಂಸಾಚಾರವನ್ನು ಕಂಡುಬಂದಿತ್ತು. ಡಿಸೆಂಬರ್ 31, 2017 ರಂದು ನಡೆದ ಎಲ್ಗರ್ ಪರಿಷತ್‌ನಲ್ಲಿ ಭಾಷಣ ಮಾಡಿದ ಕಾರ್ಯಕರ್ತರು ಮತ್ತು ಬುದ್ಧಿಜೀವಿಗಳ ವಿರುದ್ಧ ಪುಣೆ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದರು. ಕಾರ್ಯಕರ್ತರ ಮೇಲೆ ಹಿಂಸಾಚಾರವನ್ನು ಪ್ರಚೋದಿಸಲಾಯಿತು ಮತ್ತು ದೇಶಾದ್ಯಂತ ದಾಳಿಗಳಿಗೆ ಕಾರಣರಾಗಿದ್ದರು ಎಂದು ಆರೋಪಿಸಿದ್ದರು. ಅಲ್ಲದೇ ಸಭೆಯ ಸಂಘಟಕರಿಗೆ ನಕ್ಸಲ್ ಸಂಪರ್ಕವಿದೆ ಎಂದು ಪೊಲೀಸರು ಹೇಳಿಕೊಂಡಿದ್ದರು.

1818ರ ಸಮಯದಲ್ಲಿ ಅಸ್ಪೃಶ್ಯರೆಂದು ಪರಿಗಣಿಸಲ್ಪಟ್ಟ ಮಹರ್ ಸಮುದಾಯದ ಸೈನಿಕರು ಜಾತಿ ತಾರತಮ್ಯ, ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದು ಮೇಲ್ಜಾತಿ ಪೇಶ್ವೆಗಳ ವಿರುದ್ಧದ ಮೂರನೇ ಆಂಗ್ಲೋ-ಮರಾಠಾ ಯುದ್ದದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಸೈನ್ಯವನ್ನು ಬೆಂಬಲಿಸಿದರು. ಕೇವಲ 500 ಜನ ದಲಿತ ಸೈನಿಕರು ದಿಟ್ಟ ಹೋರಾಟದ ಮೂಲಕ ಪೇಶ್ವೆ ಸೈನ್ಯವನ್ನು ಮಣಿಸಿದ ನೆನಪಿಗಾಗಿ ಇಲ್ಲಿ ಪ್ರತಿವರ್ಷ ವಿಜಯೋತ್ಸವ ಆಚರಿಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...