Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣವನ್ನು ಎನ್‌ಐಎ ವಹಿಸಿದ ಗೃಹ ಸಚಿವಾಲಯದ ನಡೆಗೆ ವ್ಯಾಪಕ ವಿರೋಧ...

ಭೀಮಾ ಕೋರೆಗಾಂವ್ ಪ್ರಕರಣವನ್ನು ಎನ್‌ಐಎ ವಹಿಸಿದ ಗೃಹ ಸಚಿವಾಲಯದ ನಡೆಗೆ ವ್ಯಾಪಕ ವಿರೋಧ…

ಈ ಪ್ರಕರಣವನ್ನು ರಾಜ್ಯದ ಅನುಮತಿಯಿಲ್ಲದೆ ವರ್ಗಾಯಿಸಲಾಗಿದೆ, ಇದು ಅಸಂವಿಧಾನಿಕ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ಹೇಳಿದ್ದಾರೆ.

- Advertisement -
- Advertisement -

2018ರ ಭೀಮಾ ಕೋರೆಗಾಂವ್ ಪ್ರಕರಣದ ತನಿಖೆಯನ್ನು ಗೃಹ ಸಚಿವಾಲಯವು ಇಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ವಹಿಸಿದೆ. ಅದರ ಬೆನ್ನಲ್ಲೇ ವ್ಯಾಪಕ ವಿರೋಧ ಕೇಳಿಬಂದಿದೆ.

ಭೀಮಾ ಕೋರೆಗಾಂವ್ ಪ್ರಕರಣದ ತನಿಖೆಯ ಕುರಿತು ಮಹಾರಾಷ್ಟ್ರ ಸರ್ಕಾರವು ಪುಣೆಯ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಒಂದು ದಿನದಲ್ಲಿಯೇ ಕೇಂದ್ರ ಸರ್ಕಾರವು ತನಿಖೆಯನ್ನು ಎನ್‌ಐಎಗೆ ವಹಿಸಿರುವುದರಿಮದ ಮತ್ತೊಮ್ಮೆ ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರದ ನಡುವೆ ಭಿನ್ನಾಭಿಪ್ರಾಯ ಭುಗಿಲೆದ್ದಿದೆ.

ಇದು ರಾಜಕೀಯ ಪ್ರೇರಿತ ಪ್ರಕರಣವಾಗಿದ್ದು, ನಿರಪರಾಧಿಗಳ ಮೇಲೆ ಉದ್ದೇಶಪೂರ್ವಕವಾಗಿ ಹಾಕಲಾಗಿದೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವು ಬುದ್ಧಿಜೀವಿಗಳು ಮತ್ತು ಸಾಮಾಜಿಕ ಕಾರ್ಯಕರ್ತರ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ತಯಾರಿ ನಡೆಸುತ್ತಿದ್ದರೆ, ಅದನ್ನು ತಡೆಯಲೇಂದೆ ಕೇಂದ್ರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ.

ಈ ಕುರಿತು ಮಹಾರಾಷ್ಟ್ರ ಗೃಹಸಚಿವ ಅನಿಲ್‌ ದೇಶ್‌ಮುಖ್‌ ಕೇಂದ್ರದ ವಿರುದ್ಧ ಕಿಡಿಕಾರಿದ್ದು “ಈ ಪ್ರಕರಣವನ್ನು ರಾಜ್ಯದ ಅನುಮತಿಯಿಲ್ಲದೆ ವರ್ಗಾಯಿಸಲಾಗಿದೆ, ಇದು ಸಂವಿಧಾನಕ್ಕೆ ವಿರುದ್ಧವಾಗಿದೆ ಮತ್ತು ನಾನು ಅದನ್ನು ಖಂಡಿಸುತ್ತೇನೆ” ಎಂದಿದ್ದಾರೆ.

ಮಹಾರಾಷ್ಟ್ರದ ವಸತಿ ಸಚಿವ ಜಿತೇಂದ್ರ ಅವಾದ್, “ಕಾನೂನು ಸುವ್ಯವಸ್ಥೆ ರಾಜ್ಯ ವಿಷಯವಾಗಿದೆ ಎಂದು ಕೇಂದ್ರಕ್ಕೆ ನೆನಪಿಸಲು ಬಯಸುತ್ತೇನೆ. ಕೇಂದ್ರದ ನೇರ ಕ್ರಮವು ಸಂವಿಧಾನವನ್ನು ಅವಮಾನಿಸುವಂತಿದೆ. ಸಂವಿಧಾನವು ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧವನ್ನು ಸ್ಪಷ್ಟವಾಗಿ ಹೇಳುತ್ತದೆ. ಕಾನೂನು ಮತ್ತು ಸುವ್ಯವಸ್ಥೆ ರಾಜ್ಯದ ವಿಷಯವಾಗಿದ್ದು, ರಕ್ಷಣೆ ಮಾತ್ರ ಕೇಂದ್ರಕ್ಕೆ ಸಂಬಂಧಿಸಿದೆ. ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳ ಮೇಲೆ ಸವಾರಿ ಮಾಡಿದರೆ ಸಂವಿಧಾನಕ್ಕೆ ವಿರುದ್ಧವಿದ್ದೀರಿ ಎಂದರ್ಥ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಮೋದಿ-ಶಾರ ದ್ವೇಷದ ಕಾರ್ಯಸೂಚಿಯನ್ನು ವಿರೋಧಿಸುವವರನ್ನು “ಅರ್ಬನ್ ನಕ್ಸಲ್” ಎಂದು ಹಣೆಪಟ್ಟೆ ಕಟ್ಟಲಾಗುತ್ತದೆ. ಭೀಮಾ-ಕೋರೆಗಾಂವ್ ಪ್ರತಿರೋಧದ ಸಂಕೇತವಾಗಿದ್ದು, ಅದನ್ನು ಸರ್ಕಾರದ ಎನ್‌ಐಎ ತನಿಖೆ ಎಂದಿಗೂ ಅಳಿಸಲಾಗುವುದಿಲ್ಲ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣದ ಪರಿಶೀಲನೆ ನಡೆಸುತ್ತೇವೆ: ಮಹಾರಾಷ್ಟ್ರ ಗೃಹ ಸಚಿವ

ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಕೇಂದ್ರದ ನಿರ್ಧಾರವನ್ನು ಬೆಂಬಲಿಸಿದ್ದಾರೆ. “ಮಹಾರಾಷ್ಟ್ರ ಪೊಲೀಸರು ತನಿಖೆ ನಡೆಸಿ ನಗರ ನಕ್ಸಲರನ್ನು ಕೃತ್ಯವನ್ನು ಬಹಿರಂಗಪಡಿಸಿದೆ. ಸುಪ್ರೀಂ ಕೋರ್ಟ್ ಕೂಡ ಮಹಾರಾಷ್ಟ್ರ ಪೊಲೀಸರ ಪರವಾಗಿ ತೀರ್ಪು ನೀಡಿದೆ. ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ವೋಟ್‌ ಬ್ಯಾಂಕ್‌ ರಾಜಕೀಯಕ್ಕಾಗಿ ಕೇಸುಗಳನ್ನು ಹಿಂಪಡೆಯಲು ಯೋಜಿಸಿದೆ ಎಂದು ದೂರಿದ್ದಾರೆ.

ಏನಿದು ಪ್ರಕರಣ?

ಈ ಪ್ರಕರಣವು 2018ರ ಜನವರಿ 01ರಂದು ಪುಣೆ ಜಿಲ್ಲೆಯ ಭೀಮಾ ಕೋರೆಗಾಂವ್ ಬಳಿ ದಲಿತ ಗುಂಪುಗಳು 200ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸುತ್ತಿದ್ದಾಗ ಹಿಂಸಾಚಾರವನ್ನು ಕಂಡುಬಂದಿತ್ತು. ಡಿಸೆಂಬರ್ 31, 2017 ರಂದು ನಡೆದ ಎಲ್ಗರ್ ಪರಿಷತ್‌ನಲ್ಲಿ ಭಾಷಣ ಮಾಡಿದ ಕಾರ್ಯಕರ್ತರು ಮತ್ತು ಬುದ್ಧಿಜೀವಿಗಳ ವಿರುದ್ಧ ಪುಣೆ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದರು. ಕಾರ್ಯಕರ್ತರ ಮೇಲೆ ಹಿಂಸಾಚಾರವನ್ನು ಪ್ರಚೋದಿಸಲಾಯಿತು ಮತ್ತು ದೇಶಾದ್ಯಂತ ದಾಳಿಗಳಿಗೆ ಕಾರಣರಾಗಿದ್ದರು ಎಂದು ಆರೋಪಿಸಿದ್ದರು. ಅಲ್ಲದೇ ಸಭೆಯ ಸಂಘಟಕರಿಗೆ ನಕ್ಸಲ್ ಸಂಪರ್ಕವಿದೆ ಎಂದು ಪೊಲೀಸರು ಹೇಳಿಕೊಂಡಿದ್ದರು.

1818ರ ಸಮಯದಲ್ಲಿ ಅಸ್ಪೃಶ್ಯರೆಂದು ಪರಿಗಣಿಸಲ್ಪಟ್ಟ ಮಹರ್ ಸಮುದಾಯದ ಸೈನಿಕರು ಜಾತಿ ತಾರತಮ್ಯ, ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದು ಮೇಲ್ಜಾತಿ ಪೇಶ್ವೆಗಳ ವಿರುದ್ಧದ ಮೂರನೇ ಆಂಗ್ಲೋ-ಮರಾಠಾ ಯುದ್ದದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಸೈನ್ಯವನ್ನು ಬೆಂಬಲಿಸಿದರು. ಕೇವಲ 500 ಜನ ದಲಿತ ಸೈನಿಕರು ದಿಟ್ಟ ಹೋರಾಟದ ಮೂಲಕ ಪೇಶ್ವೆ ಸೈನ್ಯವನ್ನು ಮಣಿಸಿದ ನೆನಪಿಗಾಗಿ ಇಲ್ಲಿ ಪ್ರತಿವರ್ಷ ವಿಜಯೋತ್ಸವ ಆಚರಿಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...