Homeಮುಖಪುಟಸಚಿವಾಲಯ ಮುತ್ತಿಗೆ ಹಿಂಸಾಚಾರ ಪ್ರಕರಣ: ಕೇರಳ ಯುವ ಕಾಂಗ್ರೆಸ್ ಮುಖ್ಯಸ್ಥನ ಬಂಧನ

ಸಚಿವಾಲಯ ಮುತ್ತಿಗೆ ಹಿಂಸಾಚಾರ ಪ್ರಕರಣ: ಕೇರಳ ಯುವ ಕಾಂಗ್ರೆಸ್ ಮುಖ್ಯಸ್ಥನ ಬಂಧನ

- Advertisement -
- Advertisement -

ಕೇರಳ ಸಚಿವಾಲಯದ ಬಳಿ ಕಳೆದ ವರ್ಷ ಡಿಸೆಂಬರ್ 21ರಂದು ನಡೆದ ಹಿಂಸಾತ್ಮಕ ಪ್ರತಿಭಟನೆಗೆ ಸಂಬಂಧಿಸಿದಂತೆ ಕೇರಳ ಯುವ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಮಮ್‌ಕೂಟತಿಲ್ ಅವರನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಮಕೂಟತಿಲ್ ಅವರ ಬಂಧನ ವಿರೋಧಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದಾರೆ. ಮಮಕೂಟತಿಲ್ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದ ನಂತರ, ಜನವರಿ 22 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ತಿರುವನಂತಪುರಂನ ಕಂಟೋನ್ಮೆಂಟ್ ಪೊಲೀಸರು ಅಡೂರಿನಲ್ಲಿರುವ ರಾಹುಲ್ ಮನೆಯಿಂದ ಅವರನ್ನು ಮಂಗಳವಾರದಂದು ವಶಕ್ಕೆ ಪಡೆದರು. ‘ನನ್ನ ತಾಯಿಯ ಮುಂದೆ ನನ್ನನ್ನು ಬಂಧಿಸಲು ಸಿಎಂ ಪಿಣರಾಯಿ ವಿಜಯನ್ ನಿರ್ಧಾರ ಮಾಡಿದ್ದಾರೆ. ಆದರೆ, ನಾನು ನನ್ನ ಹೋರಾಟವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ’ ಎಂದು ಯುವ ಕಾಂಗ್ರೆಸ್ ಅಧ್ಯಕ್ಷರು ಪೊಲೀಸ್ ವಾಹನದಲ್ಲಿ ಕುಳಿತು ಮಾಧ್ಯಮಗಳಿಗೆ ಹೇಳಿದರು.

ಕಾಂಗ್ರೆಸ್ ಸಾಂಸ್ಥಿಕ ಚುನಾವಣೆಯ ನಂತರ ಕಳೆದ ವರ್ಷ ನವೆಂಬರ್‌ನಲ್ಲಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದ ಮಮಕೂಟತಿಲ್ ಅವರು ಡಿಸೆಂಬರ್‌ನಲ್ಲಿ ಪಕ್ಷವು ಆಯೋಜಿಸಿದ್ದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾಗಿದ್ದಾರೆ. ಮೊದಲ ಆರೋಪಿ ಪ್ರತಿಪಕ್ಷದ ನಾಯಕ ವಿ.ಡಿ.ಸತೀಶ, ಎರಡು ಮತ್ತು ಮೂರನೇ ಆರೋಪಿ ಶಾಸಕರಾದ ಶಫಿ ಪರಂಬಿಲ್ ಮತ್ತು ಎಂ.ವಿನ್ಸೆಂಟ್.

ಕಾನೂನುಬಾಹಿರ ಸಭೆ, ಗಲಭೆ, ಅಕ್ರಮವಾಗಿ ಸಾರಿಗೆ ತಡೆಹಿಡಿಯುವುದು, ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುವುದು, ಸ್ವಯಂಪ್ರೇರಿತವಾಗಿ ಹಾನಿ ಮಾಡುವುದು ಮತ್ತು ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸುವುದು ಸೇರಿದಂತೆ ಹಲವು ಅಪರಾಧಗಳ ಅಡಿ ರಾಹುಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅನಾಮಧೇಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಹುಲ್ ಬಂಧನ ವಿರೋಧಿಸಿ ಪ್ರತಿಭಟಿಸಿದ ಕೇರಳ ಕಾಂಗ್ರೆಸ್ ಕಾರ್ಯಕರ್ತರು

ರಾಹುಲ್ ಬಂಧನ ವಿರೋಧಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದಲ್ಲಿ ರಸ್ತೆ ಹಾಗೂ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಅಲ್ಲದೇ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪ್ರತಿಕೃತಿ ದಹಿಸಿದರು. ಮಾಮ್ಕೂಟತಿಲ್ ಬಂಧನದ ಸಮಯದಲ್ಲಿ ಅವರ ತಾಯಿ ಮನೆಯಲ್ಲಿದ್ದರು. ಅನೇಕ ಪೊಲೀಸರು ಮನೆಗೆ ಬಂದಿದ್ದರೂ ಏನಾಗುತ್ತಿದೆ ಎಂದು ತಿಳಿದಿರಲಿಲ್ಲ. ಮನೆಯಿಂದಲೇ ರಾಹುಲ್‌ನನ್ನು ಬಂಧಿಸುವಂತೆ ಮೇಲಾಧಿಕಾರಿಗಳಿಂದ ನಿರ್ದೇಶನವಿದೆ ಎಂದು ಅವರ ತಾಯಿ ಆರೋಪಿಸಿದ್ದಾರೆ.

ರಾಹುಲ್ ಹಠಾತ್ ಬಂಧನಕ್ಕಾಗಿ ಸತೀಶನ್ ಪೊಲೀಸರನ್ನು ಟೀಕಿಸಿದ್ದಾರೆ. ‘ಆತ ಅಪರಾಧಿ ಅಥವಾ ಭಯೋತ್ಪಾದಕನಲ್ಲ. ಆರು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಂದ ಆರೋಪಿಗೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅವಕಾಶ ನೀಡಿದ ಅದೇ ಸರ್ಕಾರ ಮತ್ತು ಪೊಲೀಸರು, ರಾಹುಲ್‌ನನ್ನು ಆತನ ಮನೆಯಿಂದ ಮುಂಜಾನೆ ಬಂಧಿಸಿದ್ದಾರೆ’ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕೆ.ಸುಧಾಕರನ್ ಎಲ್‌ಡಿಎಫ್ ಸರ್ಕಾರ ಮತ್ತು ಪೊಲೀಸರಿಗೆ ಪ್ರತೀಕಾರದ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಸಿಪಿಐ (ಎಂ) ಮತ್ತು ಪೊಲೀಸರ ಸಂಚಿನಿಂದ ರಾಹುಲ್ ಅವರನ್ನು ಬಂಧಿಸಲಾಗಿದೆ. ಒಂದು ವೇಳೆ ನೋಟಿಸ್ ನೀಡಿದ್ದರೆ ತಾನಾಗಿಯೇ ಪೊಲೀಸರ ಮುಂದೆ ಹಾಜರಾಗುತ್ತಿದ್ದ. ಬದಲಾಗಿ, ಅಪರಾಧಿಗಳಂತೆ, ಅವರನ್ನು ಮುಂಜಾನೆ ಅವರ ಮನೆಯಿಂದ ಬಂಧಿಸಲಾಗಿದೆ’ ಎಂದು ಕಿಡಿಕಾರಿದರು.

ಬಂಧನವನ್ನು ಸಮರ್ಥಿಸಿಕೊಂಡ ಎಲ್‌ಡಿಎಫ್ ಸಂಚಾಲಕ ಇಪಿ ಜಯರಾಜನ್, ‘ಯುವ ಕಾಂಗ್ರೆಸ್ ಮುಖ್ಯಸ್ಥರಾಗಿರುವ ಅವರಿಗೆ ವಿಶೇಷ ರಕ್ಷಣೆ ಇದೆಯೇ? ಕಾನೂನು ಮತ್ತು ನಿಯಮಗಳು ಅವರಿಗೆ ಅನ್ವಯಿಸುವುದಿಲ್ಲವೇ? ಆತ ಹೋಗಿ ದೊಣ್ಣೆ, ಕಲ್ಲುಗಳಿಂದ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದರೆ ಕ್ರಮ ಎದುರಿಸುವುದಿಲ್ಲವೇ’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಮೋದಿ ಜನಪ್ರಿಯತೆಯನ್ನು ರಾಹುಲ್‌ಗೆ ಹೋಲಿಸಿದ ಕಾರ್ತಿ: ನೋಟಿಸ್ ಕೊಟ್ಟ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...