Homeಮುಖಪುಟಸಚಿವಾಲಯ ಮುತ್ತಿಗೆ ಹಿಂಸಾಚಾರ ಪ್ರಕರಣ: ಕೇರಳ ಯುವ ಕಾಂಗ್ರೆಸ್ ಮುಖ್ಯಸ್ಥನ ಬಂಧನ

ಸಚಿವಾಲಯ ಮುತ್ತಿಗೆ ಹಿಂಸಾಚಾರ ಪ್ರಕರಣ: ಕೇರಳ ಯುವ ಕಾಂಗ್ರೆಸ್ ಮುಖ್ಯಸ್ಥನ ಬಂಧನ

- Advertisement -
- Advertisement -

ಕೇರಳ ಸಚಿವಾಲಯದ ಬಳಿ ಕಳೆದ ವರ್ಷ ಡಿಸೆಂಬರ್ 21ರಂದು ನಡೆದ ಹಿಂಸಾತ್ಮಕ ಪ್ರತಿಭಟನೆಗೆ ಸಂಬಂಧಿಸಿದಂತೆ ಕೇರಳ ಯುವ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಮಮ್‌ಕೂಟತಿಲ್ ಅವರನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಮಕೂಟತಿಲ್ ಅವರ ಬಂಧನ ವಿರೋಧಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದಾರೆ. ಮಮಕೂಟತಿಲ್ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದ ನಂತರ, ಜನವರಿ 22 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ತಿರುವನಂತಪುರಂನ ಕಂಟೋನ್ಮೆಂಟ್ ಪೊಲೀಸರು ಅಡೂರಿನಲ್ಲಿರುವ ರಾಹುಲ್ ಮನೆಯಿಂದ ಅವರನ್ನು ಮಂಗಳವಾರದಂದು ವಶಕ್ಕೆ ಪಡೆದರು. ‘ನನ್ನ ತಾಯಿಯ ಮುಂದೆ ನನ್ನನ್ನು ಬಂಧಿಸಲು ಸಿಎಂ ಪಿಣರಾಯಿ ವಿಜಯನ್ ನಿರ್ಧಾರ ಮಾಡಿದ್ದಾರೆ. ಆದರೆ, ನಾನು ನನ್ನ ಹೋರಾಟವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ’ ಎಂದು ಯುವ ಕಾಂಗ್ರೆಸ್ ಅಧ್ಯಕ್ಷರು ಪೊಲೀಸ್ ವಾಹನದಲ್ಲಿ ಕುಳಿತು ಮಾಧ್ಯಮಗಳಿಗೆ ಹೇಳಿದರು.

ಕಾಂಗ್ರೆಸ್ ಸಾಂಸ್ಥಿಕ ಚುನಾವಣೆಯ ನಂತರ ಕಳೆದ ವರ್ಷ ನವೆಂಬರ್‌ನಲ್ಲಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದ ಮಮಕೂಟತಿಲ್ ಅವರು ಡಿಸೆಂಬರ್‌ನಲ್ಲಿ ಪಕ್ಷವು ಆಯೋಜಿಸಿದ್ದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾಗಿದ್ದಾರೆ. ಮೊದಲ ಆರೋಪಿ ಪ್ರತಿಪಕ್ಷದ ನಾಯಕ ವಿ.ಡಿ.ಸತೀಶ, ಎರಡು ಮತ್ತು ಮೂರನೇ ಆರೋಪಿ ಶಾಸಕರಾದ ಶಫಿ ಪರಂಬಿಲ್ ಮತ್ತು ಎಂ.ವಿನ್ಸೆಂಟ್.

ಕಾನೂನುಬಾಹಿರ ಸಭೆ, ಗಲಭೆ, ಅಕ್ರಮವಾಗಿ ಸಾರಿಗೆ ತಡೆಹಿಡಿಯುವುದು, ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುವುದು, ಸ್ವಯಂಪ್ರೇರಿತವಾಗಿ ಹಾನಿ ಮಾಡುವುದು ಮತ್ತು ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸುವುದು ಸೇರಿದಂತೆ ಹಲವು ಅಪರಾಧಗಳ ಅಡಿ ರಾಹುಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅನಾಮಧೇಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಹುಲ್ ಬಂಧನ ವಿರೋಧಿಸಿ ಪ್ರತಿಭಟಿಸಿದ ಕೇರಳ ಕಾಂಗ್ರೆಸ್ ಕಾರ್ಯಕರ್ತರು

ರಾಹುಲ್ ಬಂಧನ ವಿರೋಧಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದಲ್ಲಿ ರಸ್ತೆ ಹಾಗೂ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಅಲ್ಲದೇ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪ್ರತಿಕೃತಿ ದಹಿಸಿದರು. ಮಾಮ್ಕೂಟತಿಲ್ ಬಂಧನದ ಸಮಯದಲ್ಲಿ ಅವರ ತಾಯಿ ಮನೆಯಲ್ಲಿದ್ದರು. ಅನೇಕ ಪೊಲೀಸರು ಮನೆಗೆ ಬಂದಿದ್ದರೂ ಏನಾಗುತ್ತಿದೆ ಎಂದು ತಿಳಿದಿರಲಿಲ್ಲ. ಮನೆಯಿಂದಲೇ ರಾಹುಲ್‌ನನ್ನು ಬಂಧಿಸುವಂತೆ ಮೇಲಾಧಿಕಾರಿಗಳಿಂದ ನಿರ್ದೇಶನವಿದೆ ಎಂದು ಅವರ ತಾಯಿ ಆರೋಪಿಸಿದ್ದಾರೆ.

ರಾಹುಲ್ ಹಠಾತ್ ಬಂಧನಕ್ಕಾಗಿ ಸತೀಶನ್ ಪೊಲೀಸರನ್ನು ಟೀಕಿಸಿದ್ದಾರೆ. ‘ಆತ ಅಪರಾಧಿ ಅಥವಾ ಭಯೋತ್ಪಾದಕನಲ್ಲ. ಆರು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಂದ ಆರೋಪಿಗೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅವಕಾಶ ನೀಡಿದ ಅದೇ ಸರ್ಕಾರ ಮತ್ತು ಪೊಲೀಸರು, ರಾಹುಲ್‌ನನ್ನು ಆತನ ಮನೆಯಿಂದ ಮುಂಜಾನೆ ಬಂಧಿಸಿದ್ದಾರೆ’ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕೆ.ಸುಧಾಕರನ್ ಎಲ್‌ಡಿಎಫ್ ಸರ್ಕಾರ ಮತ್ತು ಪೊಲೀಸರಿಗೆ ಪ್ರತೀಕಾರದ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಸಿಪಿಐ (ಎಂ) ಮತ್ತು ಪೊಲೀಸರ ಸಂಚಿನಿಂದ ರಾಹುಲ್ ಅವರನ್ನು ಬಂಧಿಸಲಾಗಿದೆ. ಒಂದು ವೇಳೆ ನೋಟಿಸ್ ನೀಡಿದ್ದರೆ ತಾನಾಗಿಯೇ ಪೊಲೀಸರ ಮುಂದೆ ಹಾಜರಾಗುತ್ತಿದ್ದ. ಬದಲಾಗಿ, ಅಪರಾಧಿಗಳಂತೆ, ಅವರನ್ನು ಮುಂಜಾನೆ ಅವರ ಮನೆಯಿಂದ ಬಂಧಿಸಲಾಗಿದೆ’ ಎಂದು ಕಿಡಿಕಾರಿದರು.

ಬಂಧನವನ್ನು ಸಮರ್ಥಿಸಿಕೊಂಡ ಎಲ್‌ಡಿಎಫ್ ಸಂಚಾಲಕ ಇಪಿ ಜಯರಾಜನ್, ‘ಯುವ ಕಾಂಗ್ರೆಸ್ ಮುಖ್ಯಸ್ಥರಾಗಿರುವ ಅವರಿಗೆ ವಿಶೇಷ ರಕ್ಷಣೆ ಇದೆಯೇ? ಕಾನೂನು ಮತ್ತು ನಿಯಮಗಳು ಅವರಿಗೆ ಅನ್ವಯಿಸುವುದಿಲ್ಲವೇ? ಆತ ಹೋಗಿ ದೊಣ್ಣೆ, ಕಲ್ಲುಗಳಿಂದ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದರೆ ಕ್ರಮ ಎದುರಿಸುವುದಿಲ್ಲವೇ’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಮೋದಿ ಜನಪ್ರಿಯತೆಯನ್ನು ರಾಹುಲ್‌ಗೆ ಹೋಲಿಸಿದ ಕಾರ್ತಿ: ನೋಟಿಸ್ ಕೊಟ್ಟ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...