Homeಮುಖಪುಟ'ಬಾಲಕಿ ಆಘಾತಗೊಂಡಿಲ್ಲ' ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

‘ಬಾಲಕಿ ಆಘಾತಗೊಂಡಿಲ್ಲ’ ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

"ದೌರ್ಜನ್ಯ ನಡೆದಿದ್ದರೆ ಬಾಲಕಿ ಭಯಭೀತಳಾಗಬೇಕಿತ್ತು, ಸಹಜವಾಗಿ ವರ್ತಿಸುತ್ತಿರಲಿಲ್ಲ" ಎಂದ ನ್ಯಾಯಾಲಯ

- Advertisement -
- Advertisement -

“ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದರೆ, ಆಕೆ ಭಯಭೀತಳಾಗಬೇಕಿತ್ತು. ಸಹಜವಾಗಿ ವರ್ತಿಸುತ್ತಿರಲಿಲ್ಲ ಮತ್ತು ಆಟವಾಡುತ್ತಿರಲಿಲ್ಲ” ಎಂದಿರುವ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ, ಅಪ್ರಾಪ್ತ ಬಾಲಕಿಯ ಅತ್ಯಾಚಾರ ಆರೋಪಿಯನ್ನು ಇತ್ತೀಚೆಗೆ ದೋಷಮುಕ್ತಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ನ್ಯಾಯಮೂರ್ತಿ ಗೋವಿಂದ್ ಸನಪ್ ಅವರ ಏಕ ಸದಸ್ಯ ಪೀಠ ಬಾಲಕಿಯ ತಾಯಿಯ ಆರೋಪವನ್ನು ಗಮನಿಸಿದೆ. ಆಕೆ (ತಾಯಿ) ಹೇಳಿದಂತೆ ಸಮಾಜ ಮಂದಿರದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಆಕೆ (ತಾಯಿ) ಘಟನಾ ಸ್ಥಳಕ್ಕೆ ಹೋದಾಗ ಬಾಲಕಿ ಆಟವಾಡುತ್ತಿದ್ದಳು.

“ತಾನು ಘಟನಾ ಸ್ಥಳಕ್ಕೆ ಹೋದಾಗ ಸಂತ್ರಸ್ಥೆ ಆಟವಾಡುತ್ತಿದ್ದಳು ಎಂದು ಬಾಲಕಿಯ ತಾಯಿ ಹೇಳಿದ್ದಾರೆ. ಒಂದು ವೇಳೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದರೆ, ಅದು ಗಂಭೀರ ವಿಷಯವಾಗಿದೆ. ಅಂತಹ ಕೃತ್ಯ ನಿಸ್ಸಂಶಯವಾಗಿ ಆಕೆಯನ್ನು ಭಯಭೀತಗೊಳಿಸಬೇಕಿತ್ತು. ಅಲ್ಲದೆ, ಭಾರೀ ನೋವು, ಸಂಕಟ ಮತ್ತು ಆಘಾತ ಉಂಟುಮಾಡಬೇಕಿತ್ತು” ಎಂದು ಆಗಸ್ಟ್ 14 ರಂದು ನೀಡಿದ ಆದೇಶದಲ್ಲಿ ನ್ಯಾಯಾಧೀಶರು ಹೇಳಿದ್ದಾರೆ. ಈ ಆದೇಶ ಪ್ರತಿ ಕಳೆದ ಗುರುವಾರ ಲಭ್ಯವಾಗಿದೆ ಎಂದು ಲೈವ್ ಲಾ ವರದಿ ಹೇಳಿದೆ.

ಸಾಮಾನ್ಯವಾಗಿ, ಇಂತಹ ಕೃತ್ಯದ (ಲೈಂಗಿಕ ದೌರ್ಜನ್ಯ) ನಂತರ ಸಂತ್ರಸ್ತೆ ಘಟನಾ ಸ್ಥಳದಿಂದ ಮನೆಗೆ ಓಡಿ ಹೋಗಿ ತನ್ನ ತಾಯಿಗೆ ಘಟನೆಯನ್ನು ವಿವರಿಸುತ್ತಾಳೆ ಎಂದೂ ನ್ಯಾಯಾಧೀಶರು ಹೇಳಿದ್ದಾರೆ.

2019ರ ಮಾರ್ಚ್‍ನಲ್ಲಿ ನಡೆದ ಪ್ರಕರಣದಲ್ಲಿ ಎಂಟು ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಅಮರಾವತಿ ಜಿಲ್ಲೆಯ ಅಚಲಪುರ ನಿವಾಸಿ ವಿಜಯ್ ಜವಾಂಜಲ್ ಮೇಲಿತ್ತು. ಪೋಕ್ಸೊ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376ಎಬಿ ಅಡಿಯಲ್ಲಿ ವಿಚಾರಣಾ ನ್ಯಾಯಾಲಯ, ಆರೋಪಿಗೆ 20 ವರ್ಷಗಳ ಕಠಿಣ ಜೈಲುಶಿಕ್ಷೆ ವಿಧಿಸಿತ್ತು.

ಪ್ರಾಸಿಕ್ಯೂಷನ್ ಪ್ರಕಾರ, 3ನೇ ತರಗತಿ ವಿದ್ಯಾರ್ಥಿನಿ ಮನೆ ಪಕ್ಕದ ಸಮುದಾಯದ ಮಂದಿರದ ಬಳಿಗೆ ಆಟವಾಡಲು ಹೋಗಿದ್ದಳು. ದೂರು ನೀಡಿದ ತಾಯಿಗೆ ಮಗಳು ಪತ್ತೆಯಾಗಿರಲಿಲ್ಲ. ಸ್ವಲ್ಪಹೊತ್ತಿನ ಬಳಿಕ, ಬಾಲಕಿ ಅದೇ ಆವರಣದಲ್ಲಿ ಆಟವಾಡುವುದು ಕಂಡುಬಂದಿತ್ತು. ತಾಯಿ ಆಕೆಯನ್ನು ಶಾಲೆಗೆ ಬಿಟ್ಟು ಬಂದಿದ್ದರು. ಶಾಲೆಯಿಂದ ಮರಳಿದ ಬಳಿಕ ಬಾಲಕಿ ಮಂಕು ಕವಿದಂತಿದ್ದಳು ಹಾಗೂ ಸಹಜವಾಗಿರಲಿಲ್ಲ. ಆರೋಪಿ ಸಿಹಿತಿಂಡಿ ನೀಡುವ ನೆಪದಲ್ಲಿ ಕರೆದೊಯ್ದು ಗುಪ್ತಾಂಗವನ್ನು ಸ್ಪರ್ಶಿಸಿದ ಹಾಗೂ ಆಗ ಅತೀವ ನೋವು ಆಗಿತ್ತು ಎಂದು ಬಾಲಕಿ ತಾಯಿಗೆ ಹೇಳಿದ್ದಳು. ತಾಯಿ ಅಸೇಗಾಂವ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದರು.

“ಆರೋಪಿ ನನ್ನ ಮಗಳು ಆಟವಾಡುತ್ತಿದ್ದಾಗ ಪಕ್ಕದಲ್ಲೇ ಕುಳಿತಿದ್ದ” ಎಂದು ತಾಯಿ ಸಾಕ್ಷ್ಯ ನುಡಿದಿದ್ದರು. ಆದರೆ ಈ ಬಗ್ಗೆ ಎಚ್ಚರಿಕೆಯಿಂದ ಪರಿಶೀಲನೆ ನಡೆಸಿ ಮಗುವಿಗೆ ಯಾವುದೇ ಬಗೆಯ ಕಿರುಕುಳ ನೀಡಿಲ್ಲ ಎನ್ನುವ ನಿರ್ಧಾರಕ್ಕೆ ಕೋರ್ಟ್ ಬಂದಿದೆ. ಏಕೆಂದರೆ, ಆರೋಪಿಯ ಹೆಸರನ್ನು ಹೇಳುವಂತೆ ತಾಯಿ ತನಗೆ ಕಿರುಕುಳ ನೀಡಿದ್ದಾಗಿ ಬಾಲಕಿ ಸಾಕ್ಷ್ಯ ನುಡಿದಿರುವುದೇ ತಾಯಿಯ ಸಾಕ್ಷ್ಯವನ್ನು ನಾಶಪಡಿಸಿದಂತಾಗಿದೆ” ಎಂದು ನ್ಯಾಯಮೂರ್ತಿ ಸನಪ್ ಹೇಳಿದ್ದಾರೆ.

ತಮ್ಮ ಜಮೀನಿನಲ್ಲಿ ಹುಲ್ಲು ಕಟಾವು ಮಾಡಿದ್ದಕ್ಕಾಗಿ ಬಾಲಕಿಯ ತಂದೆಗೆ ಕಪಾಳಮೋಕ್ಷ ಮಾಡಿದ್ದೆ. ಆ ಕಾರಣಕ್ಕೆ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂಬ ಮೇಲ್ಮನವಿದಾರ ಅಥವಾ ಆರೋಪಿಯ ಪ್ರತಿವಾದವನ್ನು ಪೀಠವು ಪರಿಗಣಿಸಿದೆ. ವಿಚಾರಣಾ ನ್ಯಾಯಾಲಯವು ಪ್ರಮುಖ ಸಂಗತಿಗಳನ್ನು ಪರಿಗಣಿಸಲು ವಿಫಲವಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಕೃಪೆ : ಲೈವ್ ಲಾ

ಇದನ್ನೂ ಓದಿ : ನಗರಗಳಲ್ಲಿ ಒಳಚರಂಡಿ, ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಶೇ.92ರಷ್ಟು ಕಾರ್ಮಿಕರು ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗದವರು : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...