Homeಮುಖಪುಟ'ಬಾಲಕಿ ಆಘಾತಗೊಂಡಿಲ್ಲ' ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

‘ಬಾಲಕಿ ಆಘಾತಗೊಂಡಿಲ್ಲ’ ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

"ದೌರ್ಜನ್ಯ ನಡೆದಿದ್ದರೆ ಬಾಲಕಿ ಭಯಭೀತಳಾಗಬೇಕಿತ್ತು, ಸಹಜವಾಗಿ ವರ್ತಿಸುತ್ತಿರಲಿಲ್ಲ" ಎಂದ ನ್ಯಾಯಾಲಯ

- Advertisement -
- Advertisement -

“ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದರೆ, ಆಕೆ ಭಯಭೀತಳಾಗಬೇಕಿತ್ತು. ಸಹಜವಾಗಿ ವರ್ತಿಸುತ್ತಿರಲಿಲ್ಲ ಮತ್ತು ಆಟವಾಡುತ್ತಿರಲಿಲ್ಲ” ಎಂದಿರುವ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ, ಅಪ್ರಾಪ್ತ ಬಾಲಕಿಯ ಅತ್ಯಾಚಾರ ಆರೋಪಿಯನ್ನು ಇತ್ತೀಚೆಗೆ ದೋಷಮುಕ್ತಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ನ್ಯಾಯಮೂರ್ತಿ ಗೋವಿಂದ್ ಸನಪ್ ಅವರ ಏಕ ಸದಸ್ಯ ಪೀಠ ಬಾಲಕಿಯ ತಾಯಿಯ ಆರೋಪವನ್ನು ಗಮನಿಸಿದೆ. ಆಕೆ (ತಾಯಿ) ಹೇಳಿದಂತೆ ಸಮಾಜ ಮಂದಿರದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಆಕೆ (ತಾಯಿ) ಘಟನಾ ಸ್ಥಳಕ್ಕೆ ಹೋದಾಗ ಬಾಲಕಿ ಆಟವಾಡುತ್ತಿದ್ದಳು.

“ತಾನು ಘಟನಾ ಸ್ಥಳಕ್ಕೆ ಹೋದಾಗ ಸಂತ್ರಸ್ಥೆ ಆಟವಾಡುತ್ತಿದ್ದಳು ಎಂದು ಬಾಲಕಿಯ ತಾಯಿ ಹೇಳಿದ್ದಾರೆ. ಒಂದು ವೇಳೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದರೆ, ಅದು ಗಂಭೀರ ವಿಷಯವಾಗಿದೆ. ಅಂತಹ ಕೃತ್ಯ ನಿಸ್ಸಂಶಯವಾಗಿ ಆಕೆಯನ್ನು ಭಯಭೀತಗೊಳಿಸಬೇಕಿತ್ತು. ಅಲ್ಲದೆ, ಭಾರೀ ನೋವು, ಸಂಕಟ ಮತ್ತು ಆಘಾತ ಉಂಟುಮಾಡಬೇಕಿತ್ತು” ಎಂದು ಆಗಸ್ಟ್ 14 ರಂದು ನೀಡಿದ ಆದೇಶದಲ್ಲಿ ನ್ಯಾಯಾಧೀಶರು ಹೇಳಿದ್ದಾರೆ. ಈ ಆದೇಶ ಪ್ರತಿ ಕಳೆದ ಗುರುವಾರ ಲಭ್ಯವಾಗಿದೆ ಎಂದು ಲೈವ್ ಲಾ ವರದಿ ಹೇಳಿದೆ.

ಸಾಮಾನ್ಯವಾಗಿ, ಇಂತಹ ಕೃತ್ಯದ (ಲೈಂಗಿಕ ದೌರ್ಜನ್ಯ) ನಂತರ ಸಂತ್ರಸ್ತೆ ಘಟನಾ ಸ್ಥಳದಿಂದ ಮನೆಗೆ ಓಡಿ ಹೋಗಿ ತನ್ನ ತಾಯಿಗೆ ಘಟನೆಯನ್ನು ವಿವರಿಸುತ್ತಾಳೆ ಎಂದೂ ನ್ಯಾಯಾಧೀಶರು ಹೇಳಿದ್ದಾರೆ.

2019ರ ಮಾರ್ಚ್‍ನಲ್ಲಿ ನಡೆದ ಪ್ರಕರಣದಲ್ಲಿ ಎಂಟು ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಅಮರಾವತಿ ಜಿಲ್ಲೆಯ ಅಚಲಪುರ ನಿವಾಸಿ ವಿಜಯ್ ಜವಾಂಜಲ್ ಮೇಲಿತ್ತು. ಪೋಕ್ಸೊ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376ಎಬಿ ಅಡಿಯಲ್ಲಿ ವಿಚಾರಣಾ ನ್ಯಾಯಾಲಯ, ಆರೋಪಿಗೆ 20 ವರ್ಷಗಳ ಕಠಿಣ ಜೈಲುಶಿಕ್ಷೆ ವಿಧಿಸಿತ್ತು.

ಪ್ರಾಸಿಕ್ಯೂಷನ್ ಪ್ರಕಾರ, 3ನೇ ತರಗತಿ ವಿದ್ಯಾರ್ಥಿನಿ ಮನೆ ಪಕ್ಕದ ಸಮುದಾಯದ ಮಂದಿರದ ಬಳಿಗೆ ಆಟವಾಡಲು ಹೋಗಿದ್ದಳು. ದೂರು ನೀಡಿದ ತಾಯಿಗೆ ಮಗಳು ಪತ್ತೆಯಾಗಿರಲಿಲ್ಲ. ಸ್ವಲ್ಪಹೊತ್ತಿನ ಬಳಿಕ, ಬಾಲಕಿ ಅದೇ ಆವರಣದಲ್ಲಿ ಆಟವಾಡುವುದು ಕಂಡುಬಂದಿತ್ತು. ತಾಯಿ ಆಕೆಯನ್ನು ಶಾಲೆಗೆ ಬಿಟ್ಟು ಬಂದಿದ್ದರು. ಶಾಲೆಯಿಂದ ಮರಳಿದ ಬಳಿಕ ಬಾಲಕಿ ಮಂಕು ಕವಿದಂತಿದ್ದಳು ಹಾಗೂ ಸಹಜವಾಗಿರಲಿಲ್ಲ. ಆರೋಪಿ ಸಿಹಿತಿಂಡಿ ನೀಡುವ ನೆಪದಲ್ಲಿ ಕರೆದೊಯ್ದು ಗುಪ್ತಾಂಗವನ್ನು ಸ್ಪರ್ಶಿಸಿದ ಹಾಗೂ ಆಗ ಅತೀವ ನೋವು ಆಗಿತ್ತು ಎಂದು ಬಾಲಕಿ ತಾಯಿಗೆ ಹೇಳಿದ್ದಳು. ತಾಯಿ ಅಸೇಗಾಂವ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದರು.

“ಆರೋಪಿ ನನ್ನ ಮಗಳು ಆಟವಾಡುತ್ತಿದ್ದಾಗ ಪಕ್ಕದಲ್ಲೇ ಕುಳಿತಿದ್ದ” ಎಂದು ತಾಯಿ ಸಾಕ್ಷ್ಯ ನುಡಿದಿದ್ದರು. ಆದರೆ ಈ ಬಗ್ಗೆ ಎಚ್ಚರಿಕೆಯಿಂದ ಪರಿಶೀಲನೆ ನಡೆಸಿ ಮಗುವಿಗೆ ಯಾವುದೇ ಬಗೆಯ ಕಿರುಕುಳ ನೀಡಿಲ್ಲ ಎನ್ನುವ ನಿರ್ಧಾರಕ್ಕೆ ಕೋರ್ಟ್ ಬಂದಿದೆ. ಏಕೆಂದರೆ, ಆರೋಪಿಯ ಹೆಸರನ್ನು ಹೇಳುವಂತೆ ತಾಯಿ ತನಗೆ ಕಿರುಕುಳ ನೀಡಿದ್ದಾಗಿ ಬಾಲಕಿ ಸಾಕ್ಷ್ಯ ನುಡಿದಿರುವುದೇ ತಾಯಿಯ ಸಾಕ್ಷ್ಯವನ್ನು ನಾಶಪಡಿಸಿದಂತಾಗಿದೆ” ಎಂದು ನ್ಯಾಯಮೂರ್ತಿ ಸನಪ್ ಹೇಳಿದ್ದಾರೆ.

ತಮ್ಮ ಜಮೀನಿನಲ್ಲಿ ಹುಲ್ಲು ಕಟಾವು ಮಾಡಿದ್ದಕ್ಕಾಗಿ ಬಾಲಕಿಯ ತಂದೆಗೆ ಕಪಾಳಮೋಕ್ಷ ಮಾಡಿದ್ದೆ. ಆ ಕಾರಣಕ್ಕೆ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂಬ ಮೇಲ್ಮನವಿದಾರ ಅಥವಾ ಆರೋಪಿಯ ಪ್ರತಿವಾದವನ್ನು ಪೀಠವು ಪರಿಗಣಿಸಿದೆ. ವಿಚಾರಣಾ ನ್ಯಾಯಾಲಯವು ಪ್ರಮುಖ ಸಂಗತಿಗಳನ್ನು ಪರಿಗಣಿಸಲು ವಿಫಲವಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಕೃಪೆ : ಲೈವ್ ಲಾ

ಇದನ್ನೂ ಓದಿ : ನಗರಗಳಲ್ಲಿ ಒಳಚರಂಡಿ, ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಶೇ.92ರಷ್ಟು ಕಾರ್ಮಿಕರು ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗದವರು : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...