Homeಮುಖಪುಟ'ಬಾಲಕಿ ಆಘಾತಗೊಂಡಿಲ್ಲ' ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

‘ಬಾಲಕಿ ಆಘಾತಗೊಂಡಿಲ್ಲ’ ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

"ದೌರ್ಜನ್ಯ ನಡೆದಿದ್ದರೆ ಬಾಲಕಿ ಭಯಭೀತಳಾಗಬೇಕಿತ್ತು, ಸಹಜವಾಗಿ ವರ್ತಿಸುತ್ತಿರಲಿಲ್ಲ" ಎಂದ ನ್ಯಾಯಾಲಯ

- Advertisement -
- Advertisement -

“ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದರೆ, ಆಕೆ ಭಯಭೀತಳಾಗಬೇಕಿತ್ತು. ಸಹಜವಾಗಿ ವರ್ತಿಸುತ್ತಿರಲಿಲ್ಲ ಮತ್ತು ಆಟವಾಡುತ್ತಿರಲಿಲ್ಲ” ಎಂದಿರುವ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ, ಅಪ್ರಾಪ್ತ ಬಾಲಕಿಯ ಅತ್ಯಾಚಾರ ಆರೋಪಿಯನ್ನು ಇತ್ತೀಚೆಗೆ ದೋಷಮುಕ್ತಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ನ್ಯಾಯಮೂರ್ತಿ ಗೋವಿಂದ್ ಸನಪ್ ಅವರ ಏಕ ಸದಸ್ಯ ಪೀಠ ಬಾಲಕಿಯ ತಾಯಿಯ ಆರೋಪವನ್ನು ಗಮನಿಸಿದೆ. ಆಕೆ (ತಾಯಿ) ಹೇಳಿದಂತೆ ಸಮಾಜ ಮಂದಿರದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಆಕೆ (ತಾಯಿ) ಘಟನಾ ಸ್ಥಳಕ್ಕೆ ಹೋದಾಗ ಬಾಲಕಿ ಆಟವಾಡುತ್ತಿದ್ದಳು.

“ತಾನು ಘಟನಾ ಸ್ಥಳಕ್ಕೆ ಹೋದಾಗ ಸಂತ್ರಸ್ಥೆ ಆಟವಾಡುತ್ತಿದ್ದಳು ಎಂದು ಬಾಲಕಿಯ ತಾಯಿ ಹೇಳಿದ್ದಾರೆ. ಒಂದು ವೇಳೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದರೆ, ಅದು ಗಂಭೀರ ವಿಷಯವಾಗಿದೆ. ಅಂತಹ ಕೃತ್ಯ ನಿಸ್ಸಂಶಯವಾಗಿ ಆಕೆಯನ್ನು ಭಯಭೀತಗೊಳಿಸಬೇಕಿತ್ತು. ಅಲ್ಲದೆ, ಭಾರೀ ನೋವು, ಸಂಕಟ ಮತ್ತು ಆಘಾತ ಉಂಟುಮಾಡಬೇಕಿತ್ತು” ಎಂದು ಆಗಸ್ಟ್ 14 ರಂದು ನೀಡಿದ ಆದೇಶದಲ್ಲಿ ನ್ಯಾಯಾಧೀಶರು ಹೇಳಿದ್ದಾರೆ. ಈ ಆದೇಶ ಪ್ರತಿ ಕಳೆದ ಗುರುವಾರ ಲಭ್ಯವಾಗಿದೆ ಎಂದು ಲೈವ್ ಲಾ ವರದಿ ಹೇಳಿದೆ.

ಸಾಮಾನ್ಯವಾಗಿ, ಇಂತಹ ಕೃತ್ಯದ (ಲೈಂಗಿಕ ದೌರ್ಜನ್ಯ) ನಂತರ ಸಂತ್ರಸ್ತೆ ಘಟನಾ ಸ್ಥಳದಿಂದ ಮನೆಗೆ ಓಡಿ ಹೋಗಿ ತನ್ನ ತಾಯಿಗೆ ಘಟನೆಯನ್ನು ವಿವರಿಸುತ್ತಾಳೆ ಎಂದೂ ನ್ಯಾಯಾಧೀಶರು ಹೇಳಿದ್ದಾರೆ.

2019ರ ಮಾರ್ಚ್‍ನಲ್ಲಿ ನಡೆದ ಪ್ರಕರಣದಲ್ಲಿ ಎಂಟು ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಅಮರಾವತಿ ಜಿಲ್ಲೆಯ ಅಚಲಪುರ ನಿವಾಸಿ ವಿಜಯ್ ಜವಾಂಜಲ್ ಮೇಲಿತ್ತು. ಪೋಕ್ಸೊ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376ಎಬಿ ಅಡಿಯಲ್ಲಿ ವಿಚಾರಣಾ ನ್ಯಾಯಾಲಯ, ಆರೋಪಿಗೆ 20 ವರ್ಷಗಳ ಕಠಿಣ ಜೈಲುಶಿಕ್ಷೆ ವಿಧಿಸಿತ್ತು.

ಪ್ರಾಸಿಕ್ಯೂಷನ್ ಪ್ರಕಾರ, 3ನೇ ತರಗತಿ ವಿದ್ಯಾರ್ಥಿನಿ ಮನೆ ಪಕ್ಕದ ಸಮುದಾಯದ ಮಂದಿರದ ಬಳಿಗೆ ಆಟವಾಡಲು ಹೋಗಿದ್ದಳು. ದೂರು ನೀಡಿದ ತಾಯಿಗೆ ಮಗಳು ಪತ್ತೆಯಾಗಿರಲಿಲ್ಲ. ಸ್ವಲ್ಪಹೊತ್ತಿನ ಬಳಿಕ, ಬಾಲಕಿ ಅದೇ ಆವರಣದಲ್ಲಿ ಆಟವಾಡುವುದು ಕಂಡುಬಂದಿತ್ತು. ತಾಯಿ ಆಕೆಯನ್ನು ಶಾಲೆಗೆ ಬಿಟ್ಟು ಬಂದಿದ್ದರು. ಶಾಲೆಯಿಂದ ಮರಳಿದ ಬಳಿಕ ಬಾಲಕಿ ಮಂಕು ಕವಿದಂತಿದ್ದಳು ಹಾಗೂ ಸಹಜವಾಗಿರಲಿಲ್ಲ. ಆರೋಪಿ ಸಿಹಿತಿಂಡಿ ನೀಡುವ ನೆಪದಲ್ಲಿ ಕರೆದೊಯ್ದು ಗುಪ್ತಾಂಗವನ್ನು ಸ್ಪರ್ಶಿಸಿದ ಹಾಗೂ ಆಗ ಅತೀವ ನೋವು ಆಗಿತ್ತು ಎಂದು ಬಾಲಕಿ ತಾಯಿಗೆ ಹೇಳಿದ್ದಳು. ತಾಯಿ ಅಸೇಗಾಂವ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದರು.

“ಆರೋಪಿ ನನ್ನ ಮಗಳು ಆಟವಾಡುತ್ತಿದ್ದಾಗ ಪಕ್ಕದಲ್ಲೇ ಕುಳಿತಿದ್ದ” ಎಂದು ತಾಯಿ ಸಾಕ್ಷ್ಯ ನುಡಿದಿದ್ದರು. ಆದರೆ ಈ ಬಗ್ಗೆ ಎಚ್ಚರಿಕೆಯಿಂದ ಪರಿಶೀಲನೆ ನಡೆಸಿ ಮಗುವಿಗೆ ಯಾವುದೇ ಬಗೆಯ ಕಿರುಕುಳ ನೀಡಿಲ್ಲ ಎನ್ನುವ ನಿರ್ಧಾರಕ್ಕೆ ಕೋರ್ಟ್ ಬಂದಿದೆ. ಏಕೆಂದರೆ, ಆರೋಪಿಯ ಹೆಸರನ್ನು ಹೇಳುವಂತೆ ತಾಯಿ ತನಗೆ ಕಿರುಕುಳ ನೀಡಿದ್ದಾಗಿ ಬಾಲಕಿ ಸಾಕ್ಷ್ಯ ನುಡಿದಿರುವುದೇ ತಾಯಿಯ ಸಾಕ್ಷ್ಯವನ್ನು ನಾಶಪಡಿಸಿದಂತಾಗಿದೆ” ಎಂದು ನ್ಯಾಯಮೂರ್ತಿ ಸನಪ್ ಹೇಳಿದ್ದಾರೆ.

ತಮ್ಮ ಜಮೀನಿನಲ್ಲಿ ಹುಲ್ಲು ಕಟಾವು ಮಾಡಿದ್ದಕ್ಕಾಗಿ ಬಾಲಕಿಯ ತಂದೆಗೆ ಕಪಾಳಮೋಕ್ಷ ಮಾಡಿದ್ದೆ. ಆ ಕಾರಣಕ್ಕೆ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂಬ ಮೇಲ್ಮನವಿದಾರ ಅಥವಾ ಆರೋಪಿಯ ಪ್ರತಿವಾದವನ್ನು ಪೀಠವು ಪರಿಗಣಿಸಿದೆ. ವಿಚಾರಣಾ ನ್ಯಾಯಾಲಯವು ಪ್ರಮುಖ ಸಂಗತಿಗಳನ್ನು ಪರಿಗಣಿಸಲು ವಿಫಲವಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಕೃಪೆ : ಲೈವ್ ಲಾ

ಇದನ್ನೂ ಓದಿ : ನಗರಗಳಲ್ಲಿ ಒಳಚರಂಡಿ, ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಶೇ.92ರಷ್ಟು ಕಾರ್ಮಿಕರು ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗದವರು : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...