Homeಮುಖಪುಟ'ಬಾಲಕಿ ಆಘಾತಗೊಂಡಿಲ್ಲ' ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

‘ಬಾಲಕಿ ಆಘಾತಗೊಂಡಿಲ್ಲ’ ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

"ದೌರ್ಜನ್ಯ ನಡೆದಿದ್ದರೆ ಬಾಲಕಿ ಭಯಭೀತಳಾಗಬೇಕಿತ್ತು, ಸಹಜವಾಗಿ ವರ್ತಿಸುತ್ತಿರಲಿಲ್ಲ" ಎಂದ ನ್ಯಾಯಾಲಯ

- Advertisement -
- Advertisement -

“ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದರೆ, ಆಕೆ ಭಯಭೀತಳಾಗಬೇಕಿತ್ತು. ಸಹಜವಾಗಿ ವರ್ತಿಸುತ್ತಿರಲಿಲ್ಲ ಮತ್ತು ಆಟವಾಡುತ್ತಿರಲಿಲ್ಲ” ಎಂದಿರುವ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ, ಅಪ್ರಾಪ್ತ ಬಾಲಕಿಯ ಅತ್ಯಾಚಾರ ಆರೋಪಿಯನ್ನು ಇತ್ತೀಚೆಗೆ ದೋಷಮುಕ್ತಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ನ್ಯಾಯಮೂರ್ತಿ ಗೋವಿಂದ್ ಸನಪ್ ಅವರ ಏಕ ಸದಸ್ಯ ಪೀಠ ಬಾಲಕಿಯ ತಾಯಿಯ ಆರೋಪವನ್ನು ಗಮನಿಸಿದೆ. ಆಕೆ (ತಾಯಿ) ಹೇಳಿದಂತೆ ಸಮಾಜ ಮಂದಿರದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಆಕೆ (ತಾಯಿ) ಘಟನಾ ಸ್ಥಳಕ್ಕೆ ಹೋದಾಗ ಬಾಲಕಿ ಆಟವಾಡುತ್ತಿದ್ದಳು.

“ತಾನು ಘಟನಾ ಸ್ಥಳಕ್ಕೆ ಹೋದಾಗ ಸಂತ್ರಸ್ಥೆ ಆಟವಾಡುತ್ತಿದ್ದಳು ಎಂದು ಬಾಲಕಿಯ ತಾಯಿ ಹೇಳಿದ್ದಾರೆ. ಒಂದು ವೇಳೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದರೆ, ಅದು ಗಂಭೀರ ವಿಷಯವಾಗಿದೆ. ಅಂತಹ ಕೃತ್ಯ ನಿಸ್ಸಂಶಯವಾಗಿ ಆಕೆಯನ್ನು ಭಯಭೀತಗೊಳಿಸಬೇಕಿತ್ತು. ಅಲ್ಲದೆ, ಭಾರೀ ನೋವು, ಸಂಕಟ ಮತ್ತು ಆಘಾತ ಉಂಟುಮಾಡಬೇಕಿತ್ತು” ಎಂದು ಆಗಸ್ಟ್ 14 ರಂದು ನೀಡಿದ ಆದೇಶದಲ್ಲಿ ನ್ಯಾಯಾಧೀಶರು ಹೇಳಿದ್ದಾರೆ. ಈ ಆದೇಶ ಪ್ರತಿ ಕಳೆದ ಗುರುವಾರ ಲಭ್ಯವಾಗಿದೆ ಎಂದು ಲೈವ್ ಲಾ ವರದಿ ಹೇಳಿದೆ.

ಸಾಮಾನ್ಯವಾಗಿ, ಇಂತಹ ಕೃತ್ಯದ (ಲೈಂಗಿಕ ದೌರ್ಜನ್ಯ) ನಂತರ ಸಂತ್ರಸ್ತೆ ಘಟನಾ ಸ್ಥಳದಿಂದ ಮನೆಗೆ ಓಡಿ ಹೋಗಿ ತನ್ನ ತಾಯಿಗೆ ಘಟನೆಯನ್ನು ವಿವರಿಸುತ್ತಾಳೆ ಎಂದೂ ನ್ಯಾಯಾಧೀಶರು ಹೇಳಿದ್ದಾರೆ.

2019ರ ಮಾರ್ಚ್‍ನಲ್ಲಿ ನಡೆದ ಪ್ರಕರಣದಲ್ಲಿ ಎಂಟು ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಅಮರಾವತಿ ಜಿಲ್ಲೆಯ ಅಚಲಪುರ ನಿವಾಸಿ ವಿಜಯ್ ಜವಾಂಜಲ್ ಮೇಲಿತ್ತು. ಪೋಕ್ಸೊ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376ಎಬಿ ಅಡಿಯಲ್ಲಿ ವಿಚಾರಣಾ ನ್ಯಾಯಾಲಯ, ಆರೋಪಿಗೆ 20 ವರ್ಷಗಳ ಕಠಿಣ ಜೈಲುಶಿಕ್ಷೆ ವಿಧಿಸಿತ್ತು.

ಪ್ರಾಸಿಕ್ಯೂಷನ್ ಪ್ರಕಾರ, 3ನೇ ತರಗತಿ ವಿದ್ಯಾರ್ಥಿನಿ ಮನೆ ಪಕ್ಕದ ಸಮುದಾಯದ ಮಂದಿರದ ಬಳಿಗೆ ಆಟವಾಡಲು ಹೋಗಿದ್ದಳು. ದೂರು ನೀಡಿದ ತಾಯಿಗೆ ಮಗಳು ಪತ್ತೆಯಾಗಿರಲಿಲ್ಲ. ಸ್ವಲ್ಪಹೊತ್ತಿನ ಬಳಿಕ, ಬಾಲಕಿ ಅದೇ ಆವರಣದಲ್ಲಿ ಆಟವಾಡುವುದು ಕಂಡುಬಂದಿತ್ತು. ತಾಯಿ ಆಕೆಯನ್ನು ಶಾಲೆಗೆ ಬಿಟ್ಟು ಬಂದಿದ್ದರು. ಶಾಲೆಯಿಂದ ಮರಳಿದ ಬಳಿಕ ಬಾಲಕಿ ಮಂಕು ಕವಿದಂತಿದ್ದಳು ಹಾಗೂ ಸಹಜವಾಗಿರಲಿಲ್ಲ. ಆರೋಪಿ ಸಿಹಿತಿಂಡಿ ನೀಡುವ ನೆಪದಲ್ಲಿ ಕರೆದೊಯ್ದು ಗುಪ್ತಾಂಗವನ್ನು ಸ್ಪರ್ಶಿಸಿದ ಹಾಗೂ ಆಗ ಅತೀವ ನೋವು ಆಗಿತ್ತು ಎಂದು ಬಾಲಕಿ ತಾಯಿಗೆ ಹೇಳಿದ್ದಳು. ತಾಯಿ ಅಸೇಗಾಂವ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದರು.

“ಆರೋಪಿ ನನ್ನ ಮಗಳು ಆಟವಾಡುತ್ತಿದ್ದಾಗ ಪಕ್ಕದಲ್ಲೇ ಕುಳಿತಿದ್ದ” ಎಂದು ತಾಯಿ ಸಾಕ್ಷ್ಯ ನುಡಿದಿದ್ದರು. ಆದರೆ ಈ ಬಗ್ಗೆ ಎಚ್ಚರಿಕೆಯಿಂದ ಪರಿಶೀಲನೆ ನಡೆಸಿ ಮಗುವಿಗೆ ಯಾವುದೇ ಬಗೆಯ ಕಿರುಕುಳ ನೀಡಿಲ್ಲ ಎನ್ನುವ ನಿರ್ಧಾರಕ್ಕೆ ಕೋರ್ಟ್ ಬಂದಿದೆ. ಏಕೆಂದರೆ, ಆರೋಪಿಯ ಹೆಸರನ್ನು ಹೇಳುವಂತೆ ತಾಯಿ ತನಗೆ ಕಿರುಕುಳ ನೀಡಿದ್ದಾಗಿ ಬಾಲಕಿ ಸಾಕ್ಷ್ಯ ನುಡಿದಿರುವುದೇ ತಾಯಿಯ ಸಾಕ್ಷ್ಯವನ್ನು ನಾಶಪಡಿಸಿದಂತಾಗಿದೆ” ಎಂದು ನ್ಯಾಯಮೂರ್ತಿ ಸನಪ್ ಹೇಳಿದ್ದಾರೆ.

ತಮ್ಮ ಜಮೀನಿನಲ್ಲಿ ಹುಲ್ಲು ಕಟಾವು ಮಾಡಿದ್ದಕ್ಕಾಗಿ ಬಾಲಕಿಯ ತಂದೆಗೆ ಕಪಾಳಮೋಕ್ಷ ಮಾಡಿದ್ದೆ. ಆ ಕಾರಣಕ್ಕೆ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂಬ ಮೇಲ್ಮನವಿದಾರ ಅಥವಾ ಆರೋಪಿಯ ಪ್ರತಿವಾದವನ್ನು ಪೀಠವು ಪರಿಗಣಿಸಿದೆ. ವಿಚಾರಣಾ ನ್ಯಾಯಾಲಯವು ಪ್ರಮುಖ ಸಂಗತಿಗಳನ್ನು ಪರಿಗಣಿಸಲು ವಿಫಲವಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಕೃಪೆ : ಲೈವ್ ಲಾ

ಇದನ್ನೂ ಓದಿ : ನಗರಗಳಲ್ಲಿ ಒಳಚರಂಡಿ, ಸೆಪ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಶೇ.92ರಷ್ಟು ಕಾರ್ಮಿಕರು ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗದವರು : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...