ಹಾವೇರಿ ಮೂಲದ ಅಪ್ರಾಪ್ತ ಬಾಲಕಿಯ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರ ಸಹಿತ 42 ಜನ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನೂ ಹಲವರ ಬಂಧನ ನಡೆಯಲಿದೆ ಎನ್ನಲಾಗಿದ್ದು, ಪೊಲೀಸರು ಬರೋಬ್ಬರಿ 30 ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದ 15 ವರ್ಷದ ಬಾಲಕಿ ತನ್ನ ತಾಯಿ ನಿಧನರಾದ ನಂತರ ತನ್ನ ಚಿಕ್ಕಮ್ಮನೊಂದಿಗೆ ಕ್ರಷರ್ ಕೆಲಸಕ್ಕೆಂದು ಶೃಂಗೇರಿ ತಾಲೂಕಿನ ಕುಂಚೇಬೈಲು ಸಮೀಪದಲ್ಲಿರುವ ಗೋಚುವಳ್ಳಿ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಅಲ್ಲಿನ ಕೆಲಸಗಾರನೊಬ್ಬ ಬಾಲಕಿಯನ್ನು ಪುಸಲಾಯಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದನು. ನಂತರ ಆತನ ಸ್ನೇಹಿತರೂ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಲೈಂಗಿಕ ದೌರ್ಜನ್ಯದ ವಿಷಯವನ್ನು ಬಾಯಿ ಬಿಟ್ಟರೆ ಸಾಮಾಜಿಕ ಜಾಲತಾಣಗಳಲ್ಲಿ ಪೊಟೊಗಳನ್ನು ವೈರಲ್ ಮಾಡುವುದಾಗಿ ಬಾಲಕಿಯನ್ನು ಹೆದರಿಸಿದ್ದರು.
ನಂತರ ಬಾಲಕಿಯ ಮೇಲೆ ನಿರಂತರವಾಗಿ 1 ವರ್ಷದಿಂದ ಅತ್ಯಾಚಾರ ನಡೆಯುತ್ತಲೇ ಬಂದಿದೆ. ಇದನ್ನು ಬಾಲಕಿಯ ಚಿಕ್ಕಮ್ಮ ಗೀತಾ ದಂಧೆಯನ್ನಾಗಿ ಮಾಡಿಕೊಂಡು ಹಣ ಸಂಪಾದಿಸುತ್ತಿದ್ದರು ಎಂದೂ ಸಹ ಹೇಳಲಾಗಿತ್ತು.
ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ – ಶೃಂಗೇರಿಯಲ್ಲಿ ದಾಖಲಾದ ಮೊದಲ ಪ್ರಕರಣವೆ ಸುಳ್ಳು?
ಈ ಬಗ್ಗೆ ಜನವರಿ 30 ರಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸಂತೋಷ್ ಎಂಬವರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಅವರು ಚಿಕ್ಕಮಗಳೂರಿನ ಶೃಂಗೇರಿ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ಶೃಂಗೇರಿ ತಾಲೂಕಿನ ಕಿಕ್ರೆ ಗ್ರಾಮದ ಸ್ಮಾಲ್ ಅಭಿ, ಆನೆಗುಂದ ಗ್ರಾಮದ ರಾಜೇಶ್, ಅಮಿತ್, ಗಿರೀಶ್, ಹೊಳೆಕೊಪ್ಪ ಗ್ರಾಮದ ಮಣಿಕಂಠ, ವಿಕಾಸ್, ನೆಮ್ಮಾರ್ ಸಂಪತ್, ಶೃಂಗೇರಿಯ ನಾರಾಯಣ್ ಗೌಡ, ಅಶ್ವತ್ಗೌಡ, ಅಭಿಗೌಡ, ಕುರುಬಗೆರೆ ಸಂತೋಷ್, ಹೆಗ್ಗದ್ದೆಯ ಧೀಕ್ಷಿತ್, ಹೇರೂರಿನ ಸಂತೋಷ್, ಕಿಗ್ಗಾದ ನಿರಂಜನ್, ಬಸ್ ಚಾಲಕ ಖಾಂಡ್ಯ ಯೋಗೀಶ್ ಸೇರಿದಂತೆ ಹಲವು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಪ್ರಕರಣ ಸಂಬಂಧ ಬಾಲಕಿಯ ಚಿಕ್ಕಮ್ಮ ಗೀತಾಳನ್ನು 16ನೇ ಆರೋಪಿಯನ್ನಾಗಿ ಪ್ರಕರಣ ದಾಖಲಿಸಲಾಗಿತ್ತು. ಅಲ್ಲದೇ ಬಾಲ ಕಾರ್ಮಿಕರನ್ನು ಕ್ರಷರ್ ನಲ್ಲಿ ಕೆಲಸಕ್ಕೆ ನೇಮಿಸಿಕೊಂಡ ಆರೋಪದಡಿಯಲ್ಲಿ ಕ್ರಷರ್ ಮಾಲಕನ್ನು 17ನೇ ಆರೋಪಿ ಎಂದು ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಪೊಲೀಸರು ಐದು ತಿಂಗಳಲ್ಲಿ ಹಲವು ಬಾರಿ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಹೆಚ್ಚಿನ ಆರೋಪಿಗಳಿದ್ದಾರೆ ಎನ್ನಲಾಗಿದ್ದು, ಅವರ ಬಂಧನಕ್ಕೆ ಪೊಲೀಸರು ತಯಾರಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ಪ್ರಕರಣ ದಾರಿ ತಪ್ಪುತ್ತಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕವು ಈ ಹಿಂದೆ ಪ್ರತಿಭಟನೆ ಕೂಡಾ ಮಾಡಿತ್ತು. ಪ್ರಕರಣದಲ್ಲಿ ಮನಸೋ ಇಚ್ಚೆ ವರ್ತಿಸಿದರು ಎಂಬ ಕಾರಣಕ್ಕೆ ಸಬ್ಇನ್ಸ್ಪೆಕ್ಟರ್ ವರ್ಗಾವಣೆ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಅವರನ್ನು ಅಮಾನತು ಮಾಡಲಾಗಿತ್ತು. ಪ್ರಸ್ತುತ ತನಿಖೆಯನ್ನು ಎಎಸ್ಪಿ ಶೃತಿ ಅವರಿಗೆ ವಹಿಸಲಾಗಿದೆ.
ಇದನ್ನೂ ಓದಿ: ಶೃಂಗೇರಿ ಅಪ್ರಾಪ್ತ ಬಾಲಕಿ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು; ಸಂಪೂರ್ಣ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಶೃಂಗೇರಿ ಘಟನೆಯ ಸಿಸಿಟಿವಿ ವಿಡಿಯೋ ನೋಡಿ: ಮಸೀದಿಯಿಂದ ಧ್ವಜ ಕದ್ದುಕೊಂಡು ಹೋದದ್ದು ಯಾರು?
ವಿಡಿಯೊ ನೋಡಿ: ಮಹಿಳೆಯರು ಆಟೋ ಓಡಿಸಬಾರದೇ?: ಚಿಕ್ಕ ವಯಸ್ಸಿನಲ್ಲಿಯೇ ಆಟೋ ಓಡಿಸಿ ಸಂಸಾರ ನಿಭಾಯಿಸುತ್ತಿರುವ ಅಮ್ಮುವಿನ ಕಥೆ
ಕಳೆದ ನಾಲ್ಕೈದು ವರ್ಷಗಳಿಂದ ಅಮ್ಮು ಆಟೋ ಓಡಿಸು ಸಂಸಾರ ಸಾಗಿಸುತ್ತಿದ್ದಾರೆ. ಹೋಟೆಲ್, ಆಸ್ಪತ್ರೆ, ಮಾಲ್ ಸೇರಿದಂತೆ ಬೇರೆ ಕಡೆಗಳಲ್ಲಿ ಹೆಲ್ಪರ್ ಆಗಿ ಕೆಲಸ ಮಾಡಿರುವ ಅಮ್ಮು 8-10 ಸಾವಿರ ರೂಗಳಿಂದ ಸಂಸಾರ ನಡೆಸುವುದು ಕಷ್ಟವಾಗಿ ಆಟೋ ಓಡಿಸಲು ಆರಂಭಿಸಿದರು. ಅಮ್ಮ, ಮಕ್ಕಳು ತಮ್ಮ ಸೇರಿದಂತೆ 8 ಜನರ ಕುಟುಂಬವನ್ನು ಒಬ್ಬರೇ ನಿಭಾಯಿಸುತ್ತಿದ್ದಾರೆ.