Homeಕರ್ನಾಟಕಅಪ್ರಾಪ್ತ ಬಾಲಕಿಯ ಅತ್ಯಾಚಾರ: ಬಿಜೆಪಿ, ಸಂಘಪರಿವಾರದ ಕಾರ್ಯಕರ್ತರು ಸೇರಿ 42 ಜನರ ಬಂಧನ

ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಬಿಜೆಪಿ, ಸಂಘಪರಿವಾರದ ಕಾರ್ಯಕರ್ತರು ಸೇರಿ 42 ಜನರ ಬಂಧನ

- Advertisement -
- Advertisement -

ಹಾವೇರಿ ಮೂಲದ ಅಪ್ರಾಪ್ತ ಬಾಲಕಿಯ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರ ಸಹಿತ 42 ಜನ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನೂ ಹಲವರ ಬಂಧನ ನಡೆಯಲಿದೆ ಎನ್ನಲಾಗಿದ್ದು, ಪೊಲೀಸರು ಬರೋಬ್ಬರಿ 30 ಚಾರ್ಜ್‌‌ಶೀಟ್‌ ಸಲ್ಲಿಸಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದ 15 ವರ್ಷದ ಬಾಲಕಿ ತನ್ನ ತಾಯಿ ನಿಧನರಾದ ನಂತರ ತನ್ನ ಚಿಕ್ಕಮ್ಮನೊಂದಿಗೆ ಕ್ರಷರ್‌ ಕೆಲಸಕ್ಕೆಂದು ಶೃಂಗೇರಿ ತಾಲೂಕಿನ ಕುಂಚೇಬೈಲು ಸಮೀಪದಲ್ಲಿರುವ ಗೋಚುವಳ್ಳಿ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಅಲ್ಲಿನ ಕೆಲಸಗಾರನೊಬ್ಬ ಬಾಲಕಿಯನ್ನು ಪುಸಲಾಯಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದನು. ನಂತರ ಆತನ ಸ್ನೇಹಿತರೂ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಲೈಂಗಿಕ ದೌರ್ಜನ್ಯದ ವಿಷಯವನ್ನು ಬಾಯಿ ಬಿಟ್ಟರೆ ಸಾಮಾಜಿಕ ಜಾಲತಾಣಗಳಲ್ಲಿ ಪೊಟೊಗಳನ್ನು ವೈರಲ್ ಮಾಡುವುದಾಗಿ ಬಾಲಕಿಯನ್ನು ಹೆದರಿಸಿದ್ದರು.

ನಂತರ ಬಾಲಕಿಯ ಮೇಲೆ ನಿರಂತರವಾಗಿ 1 ವರ್ಷದಿಂದ ಅತ್ಯಾಚಾರ ನಡೆಯುತ್ತಲೇ ಬಂದಿದೆ. ಇದನ್ನು ಬಾಲಕಿಯ ಚಿಕ್ಕಮ್ಮ ಗೀತಾ ದಂಧೆಯನ್ನಾಗಿ ಮಾಡಿಕೊಂಡು ಹಣ ಸಂಪಾದಿಸುತ್ತಿದ್ದರು ಎಂದೂ ಸಹ ಹೇಳಲಾಗಿತ್ತು.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ – ಶೃಂಗೇರಿಯಲ್ಲಿ ದಾಖಲಾದ ಮೊದಲ ಪ್ರಕರಣವೆ ಸುಳ್ಳು?

ಈ ಬಗ್ಗೆ ಜನವರಿ 30 ರಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸಂತೋಷ್‌ ಎಂಬವರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಅವರು ಚಿಕ್ಕಮಗಳೂರಿನ ಶೃಂಗೇರಿ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ಶೃಂಗೇರಿ ತಾಲೂಕಿನ ಕಿಕ್ರೆ ಗ್ರಾಮದ ಸ್ಮಾಲ್ ಅಭಿ, ಆನೆಗುಂದ ಗ್ರಾಮದ ರಾಜೇಶ್, ಅಮಿತ್, ಗಿರೀಶ್, ಹೊಳೆಕೊಪ್ಪ ಗ್ರಾಮದ ಮಣಿಕಂಠ, ವಿಕಾಸ್, ನೆಮ್ಮಾರ್ ಸಂಪತ್, ಶೃಂಗೇರಿಯ ನಾರಾಯಣ್ ಗೌಡ, ಅಶ್ವತ್‍ಗೌಡ, ಅಭಿಗೌಡ, ಕುರುಬಗೆರೆ ಸಂತೋಷ್, ಹೆಗ್ಗದ್ದೆಯ ಧೀಕ್ಷಿತ್, ಹೇರೂರಿನ ಸಂತೋಷ್, ಕಿಗ್ಗಾದ ನಿರಂಜನ್, ಬಸ್ ಚಾಲಕ ಖಾಂಡ್ಯ ಯೋಗೀಶ್ ಸೇರಿದಂತೆ ಹಲವು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಪ್ರಕರಣ ಸಂಬಂಧ ಬಾಲಕಿಯ ಚಿಕ್ಕಮ್ಮ ಗೀತಾಳನ್ನು 16ನೇ ಆರೋಪಿಯನ್ನಾಗಿ ಪ್ರಕರಣ ದಾಖಲಿಸಲಾಗಿತ್ತು. ಅಲ್ಲದೇ ಬಾಲ ಕಾರ್ಮಿಕರನ್ನು ಕ್ರಷರ್ ನಲ್ಲಿ ಕೆಲಸಕ್ಕೆ ನೇಮಿಸಿಕೊಂಡ ಆರೋಪದಡಿಯಲ್ಲಿ ಕ್ರಷರ್ ಮಾಲಕನ್ನು 17ನೇ ಆರೋಪಿ ಎಂದು ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು.

ಪೊಲೀಸರು ಐದು ತಿಂಗಳಲ್ಲಿ ಹಲವು ಬಾರಿ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಹೆಚ್ಚಿನ ಆರೋಪಿಗಳಿದ್ದಾರೆ ಎನ್ನಲಾಗಿದ್ದು, ಅವರ ಬಂಧನಕ್ಕೆ ಪೊಲೀಸರು ತಯಾರಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣ ದಾರಿ ತಪ್ಪುತ್ತಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕವು ಈ ಹಿಂದೆ ಪ್ರತಿಭಟನೆ ಕೂಡಾ ಮಾಡಿತ್ತು. ಪ್ರಕರಣದಲ್ಲಿ ಮನಸೋ ಇಚ್ಚೆ ವರ್ತಿಸಿದರು ಎಂಬ ಕಾರಣಕ್ಕೆ ಸಬ್‍ಇನ್ಸ್‍ಪೆಕ್ಟರ್ ವರ್ಗಾವಣೆ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಯ ಸರ್ಕಲ್ ಇನ್ಸ್‍ಪೆಕ್ಟರ್ ಅವರನ್ನು ಅಮಾನತು ಮಾಡಲಾಗಿತ್ತು. ಪ್ರಸ್ತುತ ತನಿಖೆಯನ್ನು ಎಎಸ್ಪಿ ಶೃತಿ ಅವರಿಗೆ ವಹಿಸಲಾಗಿದೆ.

ಇದನ್ನೂ ಓದಿ: ಶೃಂಗೇರಿ ಅಪ್ರಾಪ್ತ ಬಾಲಕಿ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು; ಸಂಪೂರ್ಣ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಶೃಂಗೇರಿ ಘಟನೆಯ ಸಿಸಿಟಿವಿ ವಿಡಿಯೋ ನೋಡಿ: ಮಸೀದಿಯಿಂದ ಧ್ವಜ ಕದ್ದುಕೊಂಡು ಹೋದದ್ದು ಯಾರು?

ವಿಡಿಯೊ ನೋಡಿ: ಮಹಿಳೆಯರು ಆಟೋ ಓಡಿಸಬಾರದೇ?: ಚಿಕ್ಕ ವಯಸ್ಸಿನಲ್ಲಿಯೇ ಆಟೋ ಓಡಿಸಿ ಸಂಸಾರ ನಿಭಾಯಿಸುತ್ತಿರುವ ಅಮ್ಮುವಿನ ಕಥೆ
ಕಳೆದ ನಾಲ್ಕೈದು ವರ್ಷಗಳಿಂದ ಅಮ್ಮು ಆಟೋ ಓಡಿಸು ಸಂಸಾರ ಸಾಗಿಸುತ್ತಿದ್ದಾರೆ. ಹೋಟೆಲ್‌, ಆಸ್ಪತ್ರೆ, ಮಾಲ್‌ ಸೇರಿದಂತೆ ಬೇರೆ ಕಡೆಗಳಲ್ಲಿ ಹೆಲ್ಪರ್‌ ಆಗಿ ಕೆಲಸ ಮಾಡಿರುವ ಅಮ್ಮು 8-10 ಸಾವಿರ ರೂಗಳಿಂದ ಸಂಸಾರ ನಡೆಸುವುದು ಕಷ್ಟವಾಗಿ ಆಟೋ ಓಡಿಸಲು ಆರಂಭಿಸಿದರು. ಅಮ್ಮ, ಮಕ್ಕಳು ತಮ್ಮ ಸೇರಿದಂತೆ 8 ಜನರ ಕುಟುಂಬವನ್ನು ಒಬ್ಬರೇ ನಿಭಾಯಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...