Homeಮುಖಪುಟಅಪ್ರಾಪ್ತ NEET ಆಕಾಂಕ್ಷಿಯನ್ನು ಒತ್ತೆಯಾಳಾಗಿ ಇರಿಸಿ ಅತ್ಯಾಚಾರ; ಇಬ್ಬರು ಶಿಕ್ಷಕರ ಬಂಧನ

ಅಪ್ರಾಪ್ತ NEET ಆಕಾಂಕ್ಷಿಯನ್ನು ಒತ್ತೆಯಾಳಾಗಿ ಇರಿಸಿ ಅತ್ಯಾಚಾರ; ಇಬ್ಬರು ಶಿಕ್ಷಕರ ಬಂಧನ

- Advertisement -
- Advertisement -

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ಗೆ ತಯಾರಿ ನಡೆಸುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಆರು ತಿಂಗಳ ಕಾಲ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ ಇಬ್ಬರು ಶಿಕ್ಷಕರು ಒತ್ತೆಯಾಳಾಗಿ ಇಟ್ಟುಕೊಂಡು ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಅಪ್ರಾಪ್ತ NEET

ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ರಸಾಯನಶಾಸ್ತ್ರ ಬೋಧಿಸುತ್ತಿರುವ ವಿಕಾಸ್ ಪೋರ್ವಾಲ್ (39) ಮತ್ತು ಜೀವಶಾಸ್ತ್ರ ಕಲಿಸುತ್ತಿರುವ ಸಾಹಿಲ್ ಸಿದ್ದಿಕಿ (32) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪ್ರಾಪ್ತ NEET

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇಬ್ಬರ ವಿರುದ್ಧ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ, ಅಕ್ರಮ ಬಂಧನ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಸಿದ್ದೀಕಿ ಬೇರೊಬ್ಬ ವಿದ್ಯಾರ್ಥಿಯ ಜೊತೆಗೆ ಲೈಂಗಿಕವಾಗಿ ವರ್ತಿಸುತ್ತಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಹಿಡಿಯಲಾಗಿದ್ದು, ಅದು ಬಹಿರಂಗವಾದ ನಂತರ ಆತನನ್ನು ಇತ್ತಿಚೆಗೆ ಬಂಧಿಸಲಾಗಿತ್ತು.

ಸಂತ್ರಸ್ತ ವಿದ್ಯಾರ್ಥಿ ಫತೇಪುರ್‌ ಮೂಲದವರಾಗಿದ್ದು, ಘಟನೆ ಸಂಭವಿಸಿದಾಗ ಅವರು 17 ವರ್ಷ ವಯಸ್ಸಿನವರಾಗಿದ್ದರು. ಅವರು ನೀಡಿರುವ ದೂರಿನಲ್ಲಿ, ಡಿಸೆಂಬರ್ 2022 ರಲ್ಲಿ, ಸಿದ್ದಿಕಿ ತನ್ನನ್ನು ಕಲ್ಯಾಣಪುರದ ಮಕ್ಡಿ- ಖೇರಾ ಪ್ರದೇಶದ ಸ್ನೇಹಿತರ ಸ್ಥಳಕ್ಕೆ ಹೊಸ ವರ್ಷದ ಕೂಟಕ್ಕೆ ಆಹ್ವಾನಿಸಿದ್ದನು. ಜೊತೆಗೆ ಅಲ್ಲಿಗೆ ಇತರ ವಿದ್ಯಾರ್ಥಿಗಳು ಕೂಡಾ ಇರುತ್ತಾರೆ ಎಂದು ಹೇಳಿದ್ದನು ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಅದಾಗ್ಯೂ, ಸಿದ್ದಿಕಿಯ ಫ್ಲಾಟ್‌ಗೆ ಬಂದಾಗ ಅವರಿಗೆ ಅಲ್ಲಿ ಯಾರೂ ಕಾಣಲಿಲ್ಲ ಎಂದು ಹೇಳಿದ್ದಾರೆ. ಈ ವೇಳೆ ಸಿದ್ದಿಕಿ ತಂಪು ಪಾನೀಯಕ್ಕೆ ನಿದ್ರೆಯ ಮಾತ್ರೆಯನ್ನು ಬೆರೆಸಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಅವರು ಆರೋಪಿಸಿದ್ದಾರೆ. ಅಷ್ಟೆ ಅಲ್ಲದೆ, ದುಷ್ಕರ್ಮಿಯು ಈ ಕೃತ್ಯವನ್ನು ವಿಡಿಯೋ ರೆಕಾರ್ಡಿಂಗ್ ಕೂಡ ಮಾಡಿದ್ದಾನೆ ಎಂದು ಅವರು ಹೇಳಿದ್ದಾರೆ.

ಅಷ್ಟೆ ಅಲ್ಲದೆ ಆರು ತಿಂಗಳ ಕಾಲ ದುಷ್ಕರ್ಮಿಯು ಫ್ಲಾಟ್‌ನಲ್ಲಿ ತನ್ನನ್ನು ಒತ್ತೆಯಾಳಾಗಿಟ್ಟುಕೊಂಡಿದ್ದು ಪದೇ ಪದೇ ಅತ್ಯಾಚಾರವೆಸಗಿದ್ದಾನೆ ಎಂದು ಅವರು ಹೇಳಿದ್ದಾರೆ. ಒಂದು ವೇಳೆ ಈ ಕೃತ್ಯವನ್ನು ಬಹಿರಂಗ ಪಡಿಸಿದರೆ ತನ್ನ ಕೈಯ್ಯಲ್ಲಿ ಇರುವ ವಿಡಿಯೊ ಕ್ಲಿಪ್‌ಗಳನ್ನು ಶೇರ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ದುಷ್ಕರ್ಮಿಯು ಪಾರ್ಟಿಗಳಿಗೆ ಹಾಜರಾಗುವಂತೆ ಆಕೆಯನ್ನು ಬಲವಂತಪಡಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಈ ರೀತಿಯ ಸಭೆಯೊಂದರಲ್ಲಿ ಬಾಲಕಿಯು ಪೋರ್ವಾಲ್‌ನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದರು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ‘ಮಹಾರಾಷ್ಟ್ರದ ಜನರು ಇದನ್ನು ಇಷ್ಟಪಡುವುದಿಲ್ಲ..’; ಬಿಜೆಪಿಯ ‘ಬಾಟಂಗೆ ತೋ ಕಟೆಂಗೆ’ ಘೋಷಣೆ ತಿರಸ್ಕರಿಸಿದ ಅಜಿತ್ ಪವಾರ್

‘ಮಹಾರಾಷ್ಟ್ರದ ಜನರು ಇದನ್ನು ಇಷ್ಟಪಡುವುದಿಲ್ಲ..’; ಬಿಜೆಪಿಯ ‘ಬಾಟಂಗೆ ತೋ ಕಟೆಂಗೆ’ ಘೋಷಣೆ ತಿರಸ್ಕರಿಸಿದ ಅಜಿತ್ ಪವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...