Homeಮುಖಪುಟಅಪ್ರಾಪ್ತ NEET ಆಕಾಂಕ್ಷಿಯನ್ನು ಒತ್ತೆಯಾಳಾಗಿ ಇರಿಸಿ ಅತ್ಯಾಚಾರ; ಇಬ್ಬರು ಶಿಕ್ಷಕರ ಬಂಧನ

ಅಪ್ರಾಪ್ತ NEET ಆಕಾಂಕ್ಷಿಯನ್ನು ಒತ್ತೆಯಾಳಾಗಿ ಇರಿಸಿ ಅತ್ಯಾಚಾರ; ಇಬ್ಬರು ಶಿಕ್ಷಕರ ಬಂಧನ

- Advertisement -
- Advertisement -

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ಗೆ ತಯಾರಿ ನಡೆಸುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಆರು ತಿಂಗಳ ಕಾಲ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ ಇಬ್ಬರು ಶಿಕ್ಷಕರು ಒತ್ತೆಯಾಳಾಗಿ ಇಟ್ಟುಕೊಂಡು ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಅಪ್ರಾಪ್ತ NEET

ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ರಸಾಯನಶಾಸ್ತ್ರ ಬೋಧಿಸುತ್ತಿರುವ ವಿಕಾಸ್ ಪೋರ್ವಾಲ್ (39) ಮತ್ತು ಜೀವಶಾಸ್ತ್ರ ಕಲಿಸುತ್ತಿರುವ ಸಾಹಿಲ್ ಸಿದ್ದಿಕಿ (32) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪ್ರಾಪ್ತ NEET

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇಬ್ಬರ ವಿರುದ್ಧ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ, ಅಕ್ರಮ ಬಂಧನ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಸಿದ್ದೀಕಿ ಬೇರೊಬ್ಬ ವಿದ್ಯಾರ್ಥಿಯ ಜೊತೆಗೆ ಲೈಂಗಿಕವಾಗಿ ವರ್ತಿಸುತ್ತಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಹಿಡಿಯಲಾಗಿದ್ದು, ಅದು ಬಹಿರಂಗವಾದ ನಂತರ ಆತನನ್ನು ಇತ್ತಿಚೆಗೆ ಬಂಧಿಸಲಾಗಿತ್ತು.

ಸಂತ್ರಸ್ತ ವಿದ್ಯಾರ್ಥಿ ಫತೇಪುರ್‌ ಮೂಲದವರಾಗಿದ್ದು, ಘಟನೆ ಸಂಭವಿಸಿದಾಗ ಅವರು 17 ವರ್ಷ ವಯಸ್ಸಿನವರಾಗಿದ್ದರು. ಅವರು ನೀಡಿರುವ ದೂರಿನಲ್ಲಿ, ಡಿಸೆಂಬರ್ 2022 ರಲ್ಲಿ, ಸಿದ್ದಿಕಿ ತನ್ನನ್ನು ಕಲ್ಯಾಣಪುರದ ಮಕ್ಡಿ- ಖೇರಾ ಪ್ರದೇಶದ ಸ್ನೇಹಿತರ ಸ್ಥಳಕ್ಕೆ ಹೊಸ ವರ್ಷದ ಕೂಟಕ್ಕೆ ಆಹ್ವಾನಿಸಿದ್ದನು. ಜೊತೆಗೆ ಅಲ್ಲಿಗೆ ಇತರ ವಿದ್ಯಾರ್ಥಿಗಳು ಕೂಡಾ ಇರುತ್ತಾರೆ ಎಂದು ಹೇಳಿದ್ದನು ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಅದಾಗ್ಯೂ, ಸಿದ್ದಿಕಿಯ ಫ್ಲಾಟ್‌ಗೆ ಬಂದಾಗ ಅವರಿಗೆ ಅಲ್ಲಿ ಯಾರೂ ಕಾಣಲಿಲ್ಲ ಎಂದು ಹೇಳಿದ್ದಾರೆ. ಈ ವೇಳೆ ಸಿದ್ದಿಕಿ ತಂಪು ಪಾನೀಯಕ್ಕೆ ನಿದ್ರೆಯ ಮಾತ್ರೆಯನ್ನು ಬೆರೆಸಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಅವರು ಆರೋಪಿಸಿದ್ದಾರೆ. ಅಷ್ಟೆ ಅಲ್ಲದೆ, ದುಷ್ಕರ್ಮಿಯು ಈ ಕೃತ್ಯವನ್ನು ವಿಡಿಯೋ ರೆಕಾರ್ಡಿಂಗ್ ಕೂಡ ಮಾಡಿದ್ದಾನೆ ಎಂದು ಅವರು ಹೇಳಿದ್ದಾರೆ.

ಅಷ್ಟೆ ಅಲ್ಲದೆ ಆರು ತಿಂಗಳ ಕಾಲ ದುಷ್ಕರ್ಮಿಯು ಫ್ಲಾಟ್‌ನಲ್ಲಿ ತನ್ನನ್ನು ಒತ್ತೆಯಾಳಾಗಿಟ್ಟುಕೊಂಡಿದ್ದು ಪದೇ ಪದೇ ಅತ್ಯಾಚಾರವೆಸಗಿದ್ದಾನೆ ಎಂದು ಅವರು ಹೇಳಿದ್ದಾರೆ. ಒಂದು ವೇಳೆ ಈ ಕೃತ್ಯವನ್ನು ಬಹಿರಂಗ ಪಡಿಸಿದರೆ ತನ್ನ ಕೈಯ್ಯಲ್ಲಿ ಇರುವ ವಿಡಿಯೊ ಕ್ಲಿಪ್‌ಗಳನ್ನು ಶೇರ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ದುಷ್ಕರ್ಮಿಯು ಪಾರ್ಟಿಗಳಿಗೆ ಹಾಜರಾಗುವಂತೆ ಆಕೆಯನ್ನು ಬಲವಂತಪಡಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಈ ರೀತಿಯ ಸಭೆಯೊಂದರಲ್ಲಿ ಬಾಲಕಿಯು ಪೋರ್ವಾಲ್‌ನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದರು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ‘ಮಹಾರಾಷ್ಟ್ರದ ಜನರು ಇದನ್ನು ಇಷ್ಟಪಡುವುದಿಲ್ಲ..’; ಬಿಜೆಪಿಯ ‘ಬಾಟಂಗೆ ತೋ ಕಟೆಂಗೆ’ ಘೋಷಣೆ ತಿರಸ್ಕರಿಸಿದ ಅಜಿತ್ ಪವಾರ್

‘ಮಹಾರಾಷ್ಟ್ರದ ಜನರು ಇದನ್ನು ಇಷ್ಟಪಡುವುದಿಲ್ಲ..’; ಬಿಜೆಪಿಯ ‘ಬಾಟಂಗೆ ತೋ ಕಟೆಂಗೆ’ ಘೋಷಣೆ ತಿರಸ್ಕರಿಸಿದ ಅಜಿತ್ ಪವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...