Homeಮುಖಪುಟಅಪ್ರಾಪ್ತ NEET ಆಕಾಂಕ್ಷಿಯನ್ನು ಒತ್ತೆಯಾಳಾಗಿ ಇರಿಸಿ ಅತ್ಯಾಚಾರ; ಇಬ್ಬರು ಶಿಕ್ಷಕರ ಬಂಧನ

ಅಪ್ರಾಪ್ತ NEET ಆಕಾಂಕ್ಷಿಯನ್ನು ಒತ್ತೆಯಾಳಾಗಿ ಇರಿಸಿ ಅತ್ಯಾಚಾರ; ಇಬ್ಬರು ಶಿಕ್ಷಕರ ಬಂಧನ

- Advertisement -
- Advertisement -

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ಗೆ ತಯಾರಿ ನಡೆಸುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಆರು ತಿಂಗಳ ಕಾಲ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ ಇಬ್ಬರು ಶಿಕ್ಷಕರು ಒತ್ತೆಯಾಳಾಗಿ ಇಟ್ಟುಕೊಂಡು ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಅಪ್ರಾಪ್ತ NEET

ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ರಸಾಯನಶಾಸ್ತ್ರ ಬೋಧಿಸುತ್ತಿರುವ ವಿಕಾಸ್ ಪೋರ್ವಾಲ್ (39) ಮತ್ತು ಜೀವಶಾಸ್ತ್ರ ಕಲಿಸುತ್ತಿರುವ ಸಾಹಿಲ್ ಸಿದ್ದಿಕಿ (32) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪ್ರಾಪ್ತ NEET

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇಬ್ಬರ ವಿರುದ್ಧ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ, ಅಕ್ರಮ ಬಂಧನ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಸಿದ್ದೀಕಿ ಬೇರೊಬ್ಬ ವಿದ್ಯಾರ್ಥಿಯ ಜೊತೆಗೆ ಲೈಂಗಿಕವಾಗಿ ವರ್ತಿಸುತ್ತಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಹಿಡಿಯಲಾಗಿದ್ದು, ಅದು ಬಹಿರಂಗವಾದ ನಂತರ ಆತನನ್ನು ಇತ್ತಿಚೆಗೆ ಬಂಧಿಸಲಾಗಿತ್ತು.

ಸಂತ್ರಸ್ತ ವಿದ್ಯಾರ್ಥಿ ಫತೇಪುರ್‌ ಮೂಲದವರಾಗಿದ್ದು, ಘಟನೆ ಸಂಭವಿಸಿದಾಗ ಅವರು 17 ವರ್ಷ ವಯಸ್ಸಿನವರಾಗಿದ್ದರು. ಅವರು ನೀಡಿರುವ ದೂರಿನಲ್ಲಿ, ಡಿಸೆಂಬರ್ 2022 ರಲ್ಲಿ, ಸಿದ್ದಿಕಿ ತನ್ನನ್ನು ಕಲ್ಯಾಣಪುರದ ಮಕ್ಡಿ- ಖೇರಾ ಪ್ರದೇಶದ ಸ್ನೇಹಿತರ ಸ್ಥಳಕ್ಕೆ ಹೊಸ ವರ್ಷದ ಕೂಟಕ್ಕೆ ಆಹ್ವಾನಿಸಿದ್ದನು. ಜೊತೆಗೆ ಅಲ್ಲಿಗೆ ಇತರ ವಿದ್ಯಾರ್ಥಿಗಳು ಕೂಡಾ ಇರುತ್ತಾರೆ ಎಂದು ಹೇಳಿದ್ದನು ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಅದಾಗ್ಯೂ, ಸಿದ್ದಿಕಿಯ ಫ್ಲಾಟ್‌ಗೆ ಬಂದಾಗ ಅವರಿಗೆ ಅಲ್ಲಿ ಯಾರೂ ಕಾಣಲಿಲ್ಲ ಎಂದು ಹೇಳಿದ್ದಾರೆ. ಈ ವೇಳೆ ಸಿದ್ದಿಕಿ ತಂಪು ಪಾನೀಯಕ್ಕೆ ನಿದ್ರೆಯ ಮಾತ್ರೆಯನ್ನು ಬೆರೆಸಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಅವರು ಆರೋಪಿಸಿದ್ದಾರೆ. ಅಷ್ಟೆ ಅಲ್ಲದೆ, ದುಷ್ಕರ್ಮಿಯು ಈ ಕೃತ್ಯವನ್ನು ವಿಡಿಯೋ ರೆಕಾರ್ಡಿಂಗ್ ಕೂಡ ಮಾಡಿದ್ದಾನೆ ಎಂದು ಅವರು ಹೇಳಿದ್ದಾರೆ.

ಅಷ್ಟೆ ಅಲ್ಲದೆ ಆರು ತಿಂಗಳ ಕಾಲ ದುಷ್ಕರ್ಮಿಯು ಫ್ಲಾಟ್‌ನಲ್ಲಿ ತನ್ನನ್ನು ಒತ್ತೆಯಾಳಾಗಿಟ್ಟುಕೊಂಡಿದ್ದು ಪದೇ ಪದೇ ಅತ್ಯಾಚಾರವೆಸಗಿದ್ದಾನೆ ಎಂದು ಅವರು ಹೇಳಿದ್ದಾರೆ. ಒಂದು ವೇಳೆ ಈ ಕೃತ್ಯವನ್ನು ಬಹಿರಂಗ ಪಡಿಸಿದರೆ ತನ್ನ ಕೈಯ್ಯಲ್ಲಿ ಇರುವ ವಿಡಿಯೊ ಕ್ಲಿಪ್‌ಗಳನ್ನು ಶೇರ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ದುಷ್ಕರ್ಮಿಯು ಪಾರ್ಟಿಗಳಿಗೆ ಹಾಜರಾಗುವಂತೆ ಆಕೆಯನ್ನು ಬಲವಂತಪಡಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಈ ರೀತಿಯ ಸಭೆಯೊಂದರಲ್ಲಿ ಬಾಲಕಿಯು ಪೋರ್ವಾಲ್‌ನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದರು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ‘ಮಹಾರಾಷ್ಟ್ರದ ಜನರು ಇದನ್ನು ಇಷ್ಟಪಡುವುದಿಲ್ಲ..’; ಬಿಜೆಪಿಯ ‘ಬಾಟಂಗೆ ತೋ ಕಟೆಂಗೆ’ ಘೋಷಣೆ ತಿರಸ್ಕರಿಸಿದ ಅಜಿತ್ ಪವಾರ್

‘ಮಹಾರಾಷ್ಟ್ರದ ಜನರು ಇದನ್ನು ಇಷ್ಟಪಡುವುದಿಲ್ಲ..’; ಬಿಜೆಪಿಯ ‘ಬಾಟಂಗೆ ತೋ ಕಟೆಂಗೆ’ ಘೋಷಣೆ ತಿರಸ್ಕರಿಸಿದ ಅಜಿತ್ ಪವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...