Homeಮುಖಪುಟಕಿರುಕುಳದಿಂದ ಮನನೊಂದು ಮುಸ್ಲಿಂ ವ್ಯಾಪಾರಿ ಆತ್ಮಹತ್ಯೆ ಆರೋಪ : ತನಿಖೆಗೆ ಆದೇಶಿಸಿದ ಅಲ್ಪಸಂಖ್ಯಾತರ ಆಯೋಗ

ಕಿರುಕುಳದಿಂದ ಮನನೊಂದು ಮುಸ್ಲಿಂ ವ್ಯಾಪಾರಿ ಆತ್ಮಹತ್ಯೆ ಆರೋಪ : ತನಿಖೆಗೆ ಆದೇಶಿಸಿದ ಅಲ್ಪಸಂಖ್ಯಾತರ ಆಯೋಗ

- Advertisement -
- Advertisement -

ಬಂದಾ ಪಟ್ಟಣದ 38 ವರ್ಷದ ಮುಸ್ಲಿಂ ಹೂವಿನ ವ್ಯಾಪಾರಿಯೊಬ್ಬರು ಸಹ ವರ್ತಕರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಮಹಾರಾಷ್ಟ್ರ ರಾಜ್ಯ ಅಲ್ಪಸಂಖ್ಯಾತರ ಆಯೋಗವು ಸಿಂಧುದುರ್ಗ ಜಿಲ್ಲಾ ಪೊಲೀಸರಿಗೆ ನಿರ್ದೇಶಿಸಿದೆ.

ಅಫ್ತಾಬ್ ಶೇಖ್ ಎಂಬ ವರ್ತಕ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ, “ನನಗೆ ಗ್ರಾಮದ ಐವರು ವರ್ತಕರು ಕಿರುಕುಳ ನೀಡಿದ್ದಾರೆ” ಎಂದು ಆರೋಪಿಸಿ ಮೊಬೈಲ್ ನಲ್ಲಿ ವಿಡಿಯೋವೊಂದನ್ನು ಚಿತ್ರೀಕರಿಸಿದ್ದಾರೆ. ಆ ವಿಡಿಯೋ ಅವರ ಕುಟುಂಬ ಸದಸ್ಯರ ಗಮನಕ್ಕೆ ಬಂದಿದೆ ಎಂದು ವರದಿಗಳು ಹೇಳಿವೆ.

ಆರೋಪಿಗಳ ಬಗ್ಗೆ ಸ್ಪಷ್ಟ ಪುರಾವೆಗಳಿದ್ದರೂ, ಪೊಲೀಸರು ಪ್ರಕರಣ ದಾಖಲಿಸುವಲ್ಲಿ ವಿಫಲರಾಗಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಆರೋಪಿಗಳನ್ನು ಬಂಧಿಸುವವರೆಗೆ ಶೇಖ್ ಅವರ ಶವವನ್ನು ಶವಾಗಾರದಿಂದ ತೆಗೆದುಕೊಂಡು ಹೋಗಲು ನಿರಾಕರಿಸಿದ್ದಾರೆ.

ಬಂದಾ ಪಟ್ಟಣದ ಮುಸ್ಲಿಂ ವಾಡಿಯ ನಿವಾಸಿ ಶೇಖ್ ಅವರ ಮೃತದೇಹ, ಅಕ್ಟೋಬರ್ 29 ರಂದು ಅವರು ಮಲಗುವ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರು ಕೋಣೆಯ ಬಾಗಿಲಿಗೆ ಒಳಗಡೆಯಿಂದ ಬೀಗ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ.

ಶೇಖ್ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಗಮನಕ್ಕೆ ಬಂದ ಕೂಡಲೇ ಅವರ ಪತ್ನಿ, ಅವರ ಸಹೋದರ ಅಬ್ದುಲ್ ರಝಾಕ್ ಅವರಿಗೆ ಮಾಹಿತಿ ನೀಡಿದ್ದರು. ರಝಾಕ್ ಅವರು ಬಂದು ಬಾಗಿಲು ಒಡೆದು ಶೇಖ್ ಅವರನ್ನು ನೇಣಿನಿಂದ ಇಳಿಸಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದರು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಗೋವಾದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ವೈದ್ಯರು ಅವರು ಸಾವಿಗೀಡಾಗಿರುವ ಬಗ್ಗೆ ಘೋಷಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಮಹಾರಾಷ್ಟ್ರದ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮುಂಬೈ ಸದಸ್ಯ ವಾಸಿಂ ಖ್ವಾಜಾಭಾಯಿ ಬುರ್ಹಾನ್ ಅವರು ಶನಿವಾರ ಪೊಲೀಸರಿಗೆ ಬರೆದ ಪತ್ರದಲ್ಲಿ, ಶೇಖ್ ಅವರನ್ನು ಹಿಂಸಿಸಿರುವುದು ಮತ್ತು ಬೆದರಿಕೆ ಹಾಕಿರುವುದು ವಿಡಿಯೋದಿಂದ ಗೊತ್ತಾಗಿದೆ. ಇದು ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿರಬಹುದು ಎಂದು ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕು ಎಂದು ಬುರ್ಹಾನ್ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಶೇಖ್ ಅವರ ಸಂಬಂಧಿಕರು ದೂರು ದಾಖಲಿಸಿದ್ದರೂ, ಯಾವುದೇ ಪ್ರಕರಣ ದಾಖಲಾಗಿಲ್ಲ ಮತ್ತು ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ ಎಂದು ಬುರ್ಹಾನ್ ತಮ್ಮ ಪತ್ರದಲ್ಲಿ ಹೇಳಿದ್ದಾರೆ. ಸಿಂಧುದುರ್ಗ ಜಿಲ್ಲಾ ಪೊಲೀಸ್ ಆಡಳಿತವು ಯಾರ ಒತ್ತಡದಲ್ಲಿ ಕೆಲಸ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಗಾಝಿಯಾಬಾದ್ : ಮುಸ್ಲಿಂ ಬಾಲಕಿ, ಆಕೆಯ ಕುಟುಂಬದ ಮೇಲೆ ಹಿಂದುತ್ವ ಗುಂಪುಗಳಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಂದಣಿಯಾಗದ ಆರ್‌ಎಸ್‌ಎಸ್ ಮುಖ್ಯಸ್ಥರಿಗೆ ಪ್ರಧಾನಿಗೆ ಸಮನಾದ ಪ್ರೋಟೋಕಾಲ್ ಏಕೆ?..ಪ್ರಿಯಾಂಕ್ ಖರ್ಗೆ

ತನ್ನದು ನೋಂದಾಯಿತ ಸಂಸ್ಥೆಯಲ್ಲ ಎಂದು ಆರ್‌ಎಸ್‌ಎಸ್ ಲಿಖಿತ ರೂಪದಲ್ಲಿ ಅಧಿಕೃತವಾಗಿ ತಿಳಿಸಿದೆ. ನೋಂದಾಯಿಸದ ಸಂಸ್ಥೆಯೊಂದರ ಮುಖ್ಯಸ್ಥರು ಪ್ರಧಾನಿ ಮತ್ತು ಗೃಹ ಸಚಿವರಿಗೆ ಸಮಾನವಾಗಿ ಅಡ್ವಾನ್ಸಡ್‌ ಸೆಕ್ಯುರಿಟಿ ಲಿಯಾಸನ್ ಪ್ರೋಟೋಕಾಲ್ ಏಕೆ ಪಡೆಯುತ್ತಾರೆ? ಎಂದು...

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ : ನ.6ಕ್ಕೆ ವಿಚಾರಣೆ ಮುಂದೂಡಿಕೆ

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರಾನ್ ಹೈದರ್, ಗುಲ್ಫಿಶಾ ಫಾತಿಮಾ, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಂ ಖಾನ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ...

ಶಬರಿಮಲೆ ಬೇಸ್ ಕ್ಯಾಂಪ್‌ನಲ್ಲಿ ₹ 6.12 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಿರುವ ಕೇರಳ ಸರ್ಕಾರ

ಪತ್ತನಂತಿಟ್ಟ: ಶಬರಿಮಲೆ ಸಮೀಪದ ನಿಲಕ್ಕಲ್‌ನಲ್ಲಿ ₹ 6.12ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಕೇರಳ ಆರೋಗ್ಯ ಇಲಾಖೆ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ.  ಶಬರಿಮಲೆ ತೀರ್ಥಯಾತ್ರೆ ಆರಂಭವಾಗುವ ಕೆಲವೇ ದಿನಗಳ ಮೊದಲು...

ಭೀಕರ ಅಪಘಾತದಲ್ಲಿ ಮೂವರು ಸಹೋದರಿಯರು ಸಾವು : ದುರಂತ ಸ್ಥಳದಲ್ಲಿ ಹೆತ್ತವರ ಆಕ್ರಂದನ

"ದಯವಿಟ್ಟು ನಮ್ಮ ಮಕ್ಕಳನ್ನು ವಾಪಸ್ ತಂದುಕೊಡಿ" ಎಂದು ತೆಲಂಗಾಣ ಅಪಘಾತದ ಸ್ಥಳದಲ್ಲಿ ನೆರೆದಿದ್ದ ಸಾವಿರಾರು ಜನರ ಮುಂದೆ ಮೂವರು ಹೆಣ್ಣು ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಹೃದಯ ವಿದ್ರಾವಕವಾಗಿತ್ತು ಎಂದು ವರದಿಗಳು ಹೇಳಿವೆ. ಇಂದು...

ತನ್ನನ್ನು ಹೈಕೋರ್ಟ್ ನ್ಯಾಯಾಧೀಶನಾಗಿ ನೇಮಿಸಲು ನಿರ್ದೇಶಿಸುವಂತೆ ಕೋರಿದ ವ್ಯಕ್ತಿ : ವ್ಯವಸ್ಥೆಯ ಅಣಕ ಎಂದ ಸುಪ್ರೀಂ ಕೋರ್ಟ್

ತನ್ನನ್ನು ತೆಲಂಗಾಣ ಹೈಕೋರ್ಟ್ ನ್ಯಾಯಾಧೀಶನಾಗಿ ನೇಮಿಸುವಂತೆ ನಿರ್ದೇಶನ ನೀಡಲು ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ (ನ.3) ನಿರಾಕರಿಸಿದ್ದು, "ಇದು ವ್ಯವಸ್ಥೆಯ ಅಣಕ" ಎಂದಿದೆ. ಸಿಜೆಐ ಬಿ.ಆರ್ ಗವಾಯಿ...

ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಬಿಹಾರದಲ್ಲಿನ ಅಧಿಕಾರ ವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ ಎಂದು ಮುಖ್ಯಮಂತ್ರಿ...

ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ : ಆರೋಪಿಗಳ ಪತ್ತೆಗೆ 7 ತಂಡ ರಚನೆ

ಮೂವರು ವ್ಯಕ್ತಿಗಳು ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಕೊಯಮತ್ತೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಳಿಕ ಭಾನುವಾರ (ನ.2) ತಡರಾತ್ರಿ ನಡೆದಿದೆ. ಮಧುರೈ ಮೂಲದ ವಿದ್ಯಾರ್ಥಿನಿ ಕೊಯಮತ್ತೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದರು....

ರಾಹುಲ್, ತೇಜಸ್ವಿ, ಅಖಿಲೇಶ್, ‘ಪಪ್ಪು, ತಪ್ಪು, ಅಕ್ಕು’ ಗಾಂಧಿಯವರ ಮೂರು ಹೊಸ ಮಂಗಗಳು ಎಂದ ಯೋಗಿ ಆದಿತ್ಯನಾಥ್

ಇಂಡಿಯಾ ಬ್ಲಾಕ್ ನಾಯಕರನ್ನು 'ಪಪ್ಪು', 'ತಪ್ಪು' ಮತ್ತು 'ಅಕ್ಕು' ಮಹಾತ್ಮಾ ಗಾಂಧಿಯವರ ಮೂರು ಹೊಸ ಮಂಗಗಳು" ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟೀಕಿಸಿದರು.  2025ನೇ ಸಾಲಿನ ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ...

ಉತ್ತರ ಪ್ರದೇಶ| ಮಥುರಾದಲ್ಲಿ 10 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಹಳ್ಳಿಯೊಂದರಲ್ಲಿ 10 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಭಾನುವಾರ (ನವೆಂಬರ್ 2, 2025) ತಿಳಿಸಿದ್ದಾರೆ. ಶನಿವಾರ (ನವೆಂಬರ್ 1, 2025), ಸಂತ್ರಸ್ತ ಬಾಲಕಿ...

ಕಣ್ಣೂರ್ | ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವು

ಕೇರಳದ ಕಣ್ಣೂರಿನ ಪಯ್ಯಂಬಲಂ ಬೀಚ್‌ಗೆ ಪ್ರವಾಸಕ್ಕೆ ತೆರಳಿದ ಕರ್ನಾಟಕದ ಮೂವರು ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ (ನ.2) ನಡೆದಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರದ ಅಫ್ನಾನ್ ಅಹ್ಮದ್ (26), ಬೀದರ್‌ನ ಮೊಹಮ್ಮದ್ ರೆಹಾನುದ್ದೀನ್...