Homeಮುಖಪುಟ'ಬಾಂಗ್ಲಾ ಮೂಲದ ಅಲ್ಪಸಂಖ್ಯಾತ ಸಮುದಾಯದಿಂದ ಕಾಂಗ್ರೆಸ್‌ಗೆ ಹೆಚ್ಚಿನ ಮತ..'; ಅಸ್ಸಾಂ ಸಿಎಂ ದ್ವೇಷ ಭಾಷಣ

‘ಬಾಂಗ್ಲಾ ಮೂಲದ ಅಲ್ಪಸಂಖ್ಯಾತ ಸಮುದಾಯದಿಂದ ಕಾಂಗ್ರೆಸ್‌ಗೆ ಹೆಚ್ಚಿನ ಮತ..’; ಅಸ್ಸಾಂ ಸಿಎಂ ದ್ವೇಷ ಭಾಷಣ

- Advertisement -
- Advertisement -

ಲೋಕಸಭಾ ಚುನಾವಣೆ ನಂತರವೂ ಬಿಜೆಪಿ ನಾಯಕರ ದ್ಷೇಷ ಭಾಷಣ ಮುಂದುವರಿದಿದ್ದು, “ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸದೆ ಬಾಂಗ್ಲಾದೇಶ ಮೂಲದ ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಈ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಮತ ನೀಡಿದ್ದಾರೆ” ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ವಿವಾದಾತ್ಮಕ ಹೇಳಿಕೆ ಹೇಳಿದ್ದಾರೆ. “ಅಸ್ಸಾಂನಲ್ಲಿ ಕೋಮುವಾದದಲ್ಲಿ ತೊಡಗಿರುವ ಏಕೈಕ ಸಮುದಾಯ ಇದಾಗಿದೆ” ಎಂದು ಅವರು ಕೋಮು ಪ್ರಚೋದಕ ಹೇಳಿಕೆ ನೀಡಿದ್ದಾರೆ.

ಪಕ್ಷದ ರಾಜ್ಯ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ವಿಜೇತ ಅಭ್ಯರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಡಳಿತಾರೂಢ ಮೈತ್ರಿಕೂಟವು ಸುಮಾರು ಶೇಕಡಾ 47 ರಷ್ಟು ಮತಗಳನ್ನು ಗಳಿಸಿದೆ. ಆದರೆ, ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಶೇಕಡಾ 39 ರಷ್ಟು ಮತಗಳನ್ನು ಗಳಿಸಿವೆ.

ಬಿಜೆಪಿ-ಎಜಿಪಿ-ಯುಪಿಪಿಎಲ್ ಸಮ್ಮಿಶ್ರವು ರಾಜ್ಯದ 14 ಲೋಕಸಭಾ ಸ್ಥಾನಗಳಲ್ಲಿ 11 ಸ್ಥಾನಗಳನ್ನು ಗೆದ್ದುಕೊಂಡಿದೆ, ಉಳಿದ ಮೂರನ್ನು ಕಾಂಗ್ರೆಸ್ ಗೆದ್ದುಕೊಂಡಿದೆ.

”ಕಾಂಗ್ರೆಸ್‌ನ ಶೇಕಡಾ 39 ಮತಗಳನ್ನು ವಿಶ್ಲೇಷಿಸಿದರೆ, ಅದು ರಾಜ್ಯಾದ್ಯಂತ ಹರಡಿಲ್ಲ; ಅದರಲ್ಲಿ ಶೇಕಡಾ 50 ರಷ್ಟು ಅಲ್ಪಸಂಖ್ಯಾತರ ಪ್ರಾಬಲ್ಯವಿರುವ 21 ವಿಧಾನಸಭಾ ಕ್ಷೇತ್ರಗಳಲ್ಲಿ ಕೇಂದ್ರೀಕೃತವಾಗಿದೆ. ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಈ ಕ್ಷೇತ್ರಗಳಲ್ಲಿ ಬಿಜೆಪಿ ಶೇಕಡಾ 3 ರಷ್ಟು ಮತಗಳನ್ನು ಪಡೆದುಕೊಂಡಿದೆ” ಅವರು ಸಮರ್ಥಿಸಿಕೊಂಡರು.

“ಹಿಂದೂಗಳು ಕೋಮುವಾದಕ್ಕೆ ಒಳಗಾಗುವುದಿಲ್ಲ ಎಂಬುದನ್ನು ಇದು ಸಾಬೀತುಪಡಿಸುತ್ತದೆ. ಅಸ್ಸಾಂನಲ್ಲಿ ಯಾರಾದರೂ ಕೋಮುವಾದವನ್ನು ನಡೆಸಿದರೆ ಅದು ಒಂದೇ ಸಮುದಾಯ, ಒಂದು ಧರ್ಮ, ಬೇರೆ ಯಾವುದೇ ಧರ್ಮದವರು ಅದನ್ನು ಮಾಡುವುದಿಲ್ಲ” ಎಂದು ಮುಖ್ಯಮಂತ್ರಿ ಯಾವುದೇ ಧರ್ಮವನ್ನು ಹೆಸರಿಸದೆ ದ್ವೇಷ ಭಾಷಣ ಮಾಡಿದ್ದಾರೆ.

ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ರಸ್ತೆಯಿಲ್ಲದಿರಬಹುದು, ವಿದ್ಯುತ್ ಇಲ್ಲದಿರಬಹುದು. ಆದರೆ, ಅವರು ಕಾಂಗ್ರೆಸ್‌ಗೆ ಹೆಚ್ಚಿನ ಮತ ನೀಡಿದ್ದಾರೆ ಎಂದು ಹೇಳಿದರು.

ಇದಕ್ಕೆ ವ್ಯತಿರಿಕ್ತವಾಗಿ, ಬಿಜೆಪಿ ಅಸ್ಸಾಮಿ ಜನರು ಮತ್ತು ಬುಡಕಟ್ಟು ಜನಾಂಗದವರಿಗಾಗಿ ಕೆಲಸ ಮಾಡುತ್ತಿದ್ದರೂ, ಈ ಸಮುದಾಯಗಳು ಕೇಸರಿ ಪಕ್ಷಕ್ಕೆ 100 ಪ್ರತಿಶತ ಮತ ನೀಡಿಲ್ಲ ಎಂದು ಅವರು ಹೇಳಿದರು.

“ಕರೀಂಗಂಜ್ ಹೊರತುಪಡಿಸಿ, ಬಾಂಗ್ಲಾದೇಶ ಮೂಲದ ಬಹುಸಂಖ್ಯಾತರನ್ನು ಹೊಂದಿರುವ ಕೇಂದ್ರಗಳನ್ನು ನಾವು ಪರಿಗಣಿಸಿದರೆ, ಶೇಕಡಾ 99 ರಷ್ಟು ಮತಗಳು ಕಾಂಗ್ರೆಸ್‌ಗೆ ಬಂದಿವೆ” ಎಂದು ಅವರು ಹೇಳಿದರು.

“ಅವರು (ಅಲ್ಪಸಂಖ್ಯಾತ ಜನರು) (ಪ್ರಧಾನಿ ನರೇಂದ್ರ) ಮೋದಿಯವರು ನೀಡಿದ ಮನೆಗಳಲ್ಲಿ ವಾಸಿಸುತ್ತಿರಬಹುದು, ಮೋದಿ ಅವರು ಒದಗಿಸಿದ ವಿದ್ಯುತ್ ಮತ್ತು ನೈರ್ಮಲ್ಯ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಾರೆ. ಆದರೆ ಅವರು ಮತ ಚಲಾಯಿಸಲು ಹೋದಾಗ ಅವರು ಕಾಂಗ್ರೆಸ್‌ಗೆ ಮತ ಹಾಕುತ್ತಾರೆ” ಎಂದು ಶರ್ಮಾ ಹೇಳಿದ್ದಾರೆ.

ಬಾಂಗ್ಲಾದೇಶ ಮೂಲದ ಸಮುದಾಯವು ಕಾಂಗ್ರೆಸ್‌ಗೆ ಮತ ಹಾಕುತ್ತದೆ. ಏಕೆಂದರೆ, ಅವರು “ಮುಂದಿನ 10 ವರ್ಷಗಳಲ್ಲಿ ರಾಜ್ಯವನ್ನು ನಿಯಂತ್ರಿಸಲು” ಬಯಸುತ್ತಾರೆ ಎಂದು ಅವರು ಸಮರ್ಥಿಸಿಕೊಂಡರು.

ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವಾಗಿನಿಂದ ಬಿಜೆಪಿ ಸರ್ಕಾರ ನಿಷ್ಕ್ರಿಯವಾಗಿದ್ದಾಗ ಸಮುದಾಯದ ಸದಸ್ಯರು ಬಾರ್ಪೇಟಾದ ಹಳ್ಳಿಯಾದ ಲಖಿಂಪುರದ ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದರು; ಕೊಕ್ರಜಾರ್‌ನಲ್ಲಿ ಭೂಮಿಯನ್ನು ಅತಿಕ್ರಮಿಸಲು ಪ್ರಯತ್ನಿಸಿದರು ಎಂದು ಶರ್ಮಾ ಆರೋಪಿಸಿದರು.

‘ಬಿಜೆಪಿ ಸರ್ಕಾರ ಇಲ್ಲದಿರುವಾಗ ಇಂತಹ ದಾಳಿಗಳು ಎಷ್ಟು ನಡೆಯುತ್ತವೆ ಎಂಬುದನ್ನು ಊಹಿಸಬಹುದು’ ಎಂದು ಅವರು ಹೇಳಿದರು.

ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು 126 ವಿಧಾನಸಭಾ ಕ್ಷೇತ್ರಗಳ ಪೈಕಿ 92 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ. ಇದು ರಾಜ್ಯದಲ್ಲಿ ಯಾವುದೇ ಆಡಳಿತಾರೂಢ ಮೈತ್ರಿಕೂಟಕ್ಕೆ ಇದುವರೆಗೆ ಅತ್ಯಧಿಕವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

“ಈ ಬಾರಿ, ನಾವು ಶೇಕಡಾ 47 ರಷ್ಟು ಮತಗಳನ್ನು ಪಡೆದಿದ್ದೇವೆ. 2026ರ ರಾಜ್ಯ ಚುನಾವಣೆಯಲ್ಲಿ ಶೇಕಡಾ 50 ರಷ್ಟು ಮತಗಳನ್ನು ಪಡೆಯುವುದು ನಮ್ಮ ಗುರಿಯಾಗಿದೆ” ಎಂದು ಬಿಜೆಪಿ ನಾಯಕ ಹೇಳಿದರು.

ಬಿಜೆಪಿಯು ರಾಷ್ಟ್ರ ನಿರ್ಮಾಣಕ್ಕಾಗಿ ರಾಜಕೀಯದಲ್ಲಿದೆ; ಆ ಕ್ಷೇತ್ರಗಳಿಂದ ತನ್ನ ಅಭ್ಯರ್ಥಿ ಗೆದ್ದಿರಲಿ ಅಥವಾ ಗೆಲ್ಲದಿರಲಿ, ಎಲ್ಲ ಭಾಗಗಳ ಅಭಿವೃದ್ಧಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದರು.

ಇದನ್ನೂ ಓದಿ; ‘ದಯವಿಟ್ಟು ನ್ಯಾಯ ಕೊಡಿಸಿ, ನೀವೇ ನಮ್ಮ ಕೊನೆಯ ಭರವಸೆ..’; ಪ್ರಧಾನಿ ಮೋದಿಗೆ ಮನವಿ ಮಾಡಿದ ನೀಟ್ ಆಕಾಂಕ್ಷಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...