Homeಮುಖಪುಟ'ಬಾಂಗ್ಲಾ ಮೂಲದ ಅಲ್ಪಸಂಖ್ಯಾತ ಸಮುದಾಯದಿಂದ ಕಾಂಗ್ರೆಸ್‌ಗೆ ಹೆಚ್ಚಿನ ಮತ..'; ಅಸ್ಸಾಂ ಸಿಎಂ ದ್ವೇಷ ಭಾಷಣ

‘ಬಾಂಗ್ಲಾ ಮೂಲದ ಅಲ್ಪಸಂಖ್ಯಾತ ಸಮುದಾಯದಿಂದ ಕಾಂಗ್ರೆಸ್‌ಗೆ ಹೆಚ್ಚಿನ ಮತ..’; ಅಸ್ಸಾಂ ಸಿಎಂ ದ್ವೇಷ ಭಾಷಣ

- Advertisement -
- Advertisement -

ಲೋಕಸಭಾ ಚುನಾವಣೆ ನಂತರವೂ ಬಿಜೆಪಿ ನಾಯಕರ ದ್ಷೇಷ ಭಾಷಣ ಮುಂದುವರಿದಿದ್ದು, “ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸದೆ ಬಾಂಗ್ಲಾದೇಶ ಮೂಲದ ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಈ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಮತ ನೀಡಿದ್ದಾರೆ” ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ವಿವಾದಾತ್ಮಕ ಹೇಳಿಕೆ ಹೇಳಿದ್ದಾರೆ. “ಅಸ್ಸಾಂನಲ್ಲಿ ಕೋಮುವಾದದಲ್ಲಿ ತೊಡಗಿರುವ ಏಕೈಕ ಸಮುದಾಯ ಇದಾಗಿದೆ” ಎಂದು ಅವರು ಕೋಮು ಪ್ರಚೋದಕ ಹೇಳಿಕೆ ನೀಡಿದ್ದಾರೆ.

ಪಕ್ಷದ ರಾಜ್ಯ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ವಿಜೇತ ಅಭ್ಯರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಡಳಿತಾರೂಢ ಮೈತ್ರಿಕೂಟವು ಸುಮಾರು ಶೇಕಡಾ 47 ರಷ್ಟು ಮತಗಳನ್ನು ಗಳಿಸಿದೆ. ಆದರೆ, ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಶೇಕಡಾ 39 ರಷ್ಟು ಮತಗಳನ್ನು ಗಳಿಸಿವೆ.

ಬಿಜೆಪಿ-ಎಜಿಪಿ-ಯುಪಿಪಿಎಲ್ ಸಮ್ಮಿಶ್ರವು ರಾಜ್ಯದ 14 ಲೋಕಸಭಾ ಸ್ಥಾನಗಳಲ್ಲಿ 11 ಸ್ಥಾನಗಳನ್ನು ಗೆದ್ದುಕೊಂಡಿದೆ, ಉಳಿದ ಮೂರನ್ನು ಕಾಂಗ್ರೆಸ್ ಗೆದ್ದುಕೊಂಡಿದೆ.

”ಕಾಂಗ್ರೆಸ್‌ನ ಶೇಕಡಾ 39 ಮತಗಳನ್ನು ವಿಶ್ಲೇಷಿಸಿದರೆ, ಅದು ರಾಜ್ಯಾದ್ಯಂತ ಹರಡಿಲ್ಲ; ಅದರಲ್ಲಿ ಶೇಕಡಾ 50 ರಷ್ಟು ಅಲ್ಪಸಂಖ್ಯಾತರ ಪ್ರಾಬಲ್ಯವಿರುವ 21 ವಿಧಾನಸಭಾ ಕ್ಷೇತ್ರಗಳಲ್ಲಿ ಕೇಂದ್ರೀಕೃತವಾಗಿದೆ. ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಈ ಕ್ಷೇತ್ರಗಳಲ್ಲಿ ಬಿಜೆಪಿ ಶೇಕಡಾ 3 ರಷ್ಟು ಮತಗಳನ್ನು ಪಡೆದುಕೊಂಡಿದೆ” ಅವರು ಸಮರ್ಥಿಸಿಕೊಂಡರು.

“ಹಿಂದೂಗಳು ಕೋಮುವಾದಕ್ಕೆ ಒಳಗಾಗುವುದಿಲ್ಲ ಎಂಬುದನ್ನು ಇದು ಸಾಬೀತುಪಡಿಸುತ್ತದೆ. ಅಸ್ಸಾಂನಲ್ಲಿ ಯಾರಾದರೂ ಕೋಮುವಾದವನ್ನು ನಡೆಸಿದರೆ ಅದು ಒಂದೇ ಸಮುದಾಯ, ಒಂದು ಧರ್ಮ, ಬೇರೆ ಯಾವುದೇ ಧರ್ಮದವರು ಅದನ್ನು ಮಾಡುವುದಿಲ್ಲ” ಎಂದು ಮುಖ್ಯಮಂತ್ರಿ ಯಾವುದೇ ಧರ್ಮವನ್ನು ಹೆಸರಿಸದೆ ದ್ವೇಷ ಭಾಷಣ ಮಾಡಿದ್ದಾರೆ.

ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ರಸ್ತೆಯಿಲ್ಲದಿರಬಹುದು, ವಿದ್ಯುತ್ ಇಲ್ಲದಿರಬಹುದು. ಆದರೆ, ಅವರು ಕಾಂಗ್ರೆಸ್‌ಗೆ ಹೆಚ್ಚಿನ ಮತ ನೀಡಿದ್ದಾರೆ ಎಂದು ಹೇಳಿದರು.

ಇದಕ್ಕೆ ವ್ಯತಿರಿಕ್ತವಾಗಿ, ಬಿಜೆಪಿ ಅಸ್ಸಾಮಿ ಜನರು ಮತ್ತು ಬುಡಕಟ್ಟು ಜನಾಂಗದವರಿಗಾಗಿ ಕೆಲಸ ಮಾಡುತ್ತಿದ್ದರೂ, ಈ ಸಮುದಾಯಗಳು ಕೇಸರಿ ಪಕ್ಷಕ್ಕೆ 100 ಪ್ರತಿಶತ ಮತ ನೀಡಿಲ್ಲ ಎಂದು ಅವರು ಹೇಳಿದರು.

“ಕರೀಂಗಂಜ್ ಹೊರತುಪಡಿಸಿ, ಬಾಂಗ್ಲಾದೇಶ ಮೂಲದ ಬಹುಸಂಖ್ಯಾತರನ್ನು ಹೊಂದಿರುವ ಕೇಂದ್ರಗಳನ್ನು ನಾವು ಪರಿಗಣಿಸಿದರೆ, ಶೇಕಡಾ 99 ರಷ್ಟು ಮತಗಳು ಕಾಂಗ್ರೆಸ್‌ಗೆ ಬಂದಿವೆ” ಎಂದು ಅವರು ಹೇಳಿದರು.

“ಅವರು (ಅಲ್ಪಸಂಖ್ಯಾತ ಜನರು) (ಪ್ರಧಾನಿ ನರೇಂದ್ರ) ಮೋದಿಯವರು ನೀಡಿದ ಮನೆಗಳಲ್ಲಿ ವಾಸಿಸುತ್ತಿರಬಹುದು, ಮೋದಿ ಅವರು ಒದಗಿಸಿದ ವಿದ್ಯುತ್ ಮತ್ತು ನೈರ್ಮಲ್ಯ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಾರೆ. ಆದರೆ ಅವರು ಮತ ಚಲಾಯಿಸಲು ಹೋದಾಗ ಅವರು ಕಾಂಗ್ರೆಸ್‌ಗೆ ಮತ ಹಾಕುತ್ತಾರೆ” ಎಂದು ಶರ್ಮಾ ಹೇಳಿದ್ದಾರೆ.

ಬಾಂಗ್ಲಾದೇಶ ಮೂಲದ ಸಮುದಾಯವು ಕಾಂಗ್ರೆಸ್‌ಗೆ ಮತ ಹಾಕುತ್ತದೆ. ಏಕೆಂದರೆ, ಅವರು “ಮುಂದಿನ 10 ವರ್ಷಗಳಲ್ಲಿ ರಾಜ್ಯವನ್ನು ನಿಯಂತ್ರಿಸಲು” ಬಯಸುತ್ತಾರೆ ಎಂದು ಅವರು ಸಮರ್ಥಿಸಿಕೊಂಡರು.

ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವಾಗಿನಿಂದ ಬಿಜೆಪಿ ಸರ್ಕಾರ ನಿಷ್ಕ್ರಿಯವಾಗಿದ್ದಾಗ ಸಮುದಾಯದ ಸದಸ್ಯರು ಬಾರ್ಪೇಟಾದ ಹಳ್ಳಿಯಾದ ಲಖಿಂಪುರದ ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದರು; ಕೊಕ್ರಜಾರ್‌ನಲ್ಲಿ ಭೂಮಿಯನ್ನು ಅತಿಕ್ರಮಿಸಲು ಪ್ರಯತ್ನಿಸಿದರು ಎಂದು ಶರ್ಮಾ ಆರೋಪಿಸಿದರು.

‘ಬಿಜೆಪಿ ಸರ್ಕಾರ ಇಲ್ಲದಿರುವಾಗ ಇಂತಹ ದಾಳಿಗಳು ಎಷ್ಟು ನಡೆಯುತ್ತವೆ ಎಂಬುದನ್ನು ಊಹಿಸಬಹುದು’ ಎಂದು ಅವರು ಹೇಳಿದರು.

ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು 126 ವಿಧಾನಸಭಾ ಕ್ಷೇತ್ರಗಳ ಪೈಕಿ 92 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ. ಇದು ರಾಜ್ಯದಲ್ಲಿ ಯಾವುದೇ ಆಡಳಿತಾರೂಢ ಮೈತ್ರಿಕೂಟಕ್ಕೆ ಇದುವರೆಗೆ ಅತ್ಯಧಿಕವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

“ಈ ಬಾರಿ, ನಾವು ಶೇಕಡಾ 47 ರಷ್ಟು ಮತಗಳನ್ನು ಪಡೆದಿದ್ದೇವೆ. 2026ರ ರಾಜ್ಯ ಚುನಾವಣೆಯಲ್ಲಿ ಶೇಕಡಾ 50 ರಷ್ಟು ಮತಗಳನ್ನು ಪಡೆಯುವುದು ನಮ್ಮ ಗುರಿಯಾಗಿದೆ” ಎಂದು ಬಿಜೆಪಿ ನಾಯಕ ಹೇಳಿದರು.

ಬಿಜೆಪಿಯು ರಾಷ್ಟ್ರ ನಿರ್ಮಾಣಕ್ಕಾಗಿ ರಾಜಕೀಯದಲ್ಲಿದೆ; ಆ ಕ್ಷೇತ್ರಗಳಿಂದ ತನ್ನ ಅಭ್ಯರ್ಥಿ ಗೆದ್ದಿರಲಿ ಅಥವಾ ಗೆಲ್ಲದಿರಲಿ, ಎಲ್ಲ ಭಾಗಗಳ ಅಭಿವೃದ್ಧಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದರು.

ಇದನ್ನೂ ಓದಿ; ‘ದಯವಿಟ್ಟು ನ್ಯಾಯ ಕೊಡಿಸಿ, ನೀವೇ ನಮ್ಮ ಕೊನೆಯ ಭರವಸೆ..’; ಪ್ರಧಾನಿ ಮೋದಿಗೆ ಮನವಿ ಮಾಡಿದ ನೀಟ್ ಆಕಾಂಕ್ಷಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...