Homeಮುಖಪುಟಅಲ್ಪಸಂಖ್ಯಾತ ಶಾಲೆಗಳು ಮತ್ತು ಆರ್‌ಟಿಇ: 2014ರ ತೀರ್ಪಿನ ಕುರಿತು ವಿಸ್ತೃತ ಪೀಠದ ಪರಿಶೀಲನೆ ಕೋರಿದ ಸುಪ್ರೀಂ...

ಅಲ್ಪಸಂಖ್ಯಾತ ಶಾಲೆಗಳು ಮತ್ತು ಆರ್‌ಟಿಇ: 2014ರ ತೀರ್ಪಿನ ಕುರಿತು ವಿಸ್ತೃತ ಪೀಠದ ಪರಿಶೀಲನೆ ಕೋರಿದ ಸುಪ್ರೀಂ ಕೋರ್ಟ್ 

- Advertisement -
- Advertisement -

ಅಲ್ಪಸಂಖ್ಯಾತ ಶಾಲೆಗಳನ್ನು ಆರ್‌ಟಿಇ ಕಾಯ್ದೆಯ ವ್ಯಾಪ್ತಿಯಿಂದ ಹೊರಗಿಟ್ಟಿದ್ದ 2014ರ ತೀರ್ಪಿನ ನಿಖರತೆಯನ್ನು ಅನುಮಾನಿಸಿರುವ ಸುಪ್ರೀಂ ಕೋರ್ಟ್, ಈ ವಿಷಯವನ್ನು ಸೋಮವಾರ (ಸೆ.1) ವಿಸ್ಕೃತ ಪೀಠಕ್ಕೆ ಉಲ್ಲೇಖಿಸಿದೆ.

ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗದ ಅಧ್ಯಯನ ವರದಿ ಸೇರಿದಂತೆ ವಿವಿಧ ದಾಖಲೆಗಳನ್ನು ಉಲ್ಲೇಖಿಸಿದ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಮನಮೋಹನ್ ಅವರನ್ನು ಒಳಗೊಂಡ ಪೀಠ,  ಈ ಹೊರಗಿಡುವಿಕೆಯು ದುರುಪಯೋಗಕ್ಕೆ ಫಲವತ್ತಾದ ನೆಲವನ್ನು ಸೃಷ್ಟಿಸಿದೆ ಎಂದು ಹೇಳಿ ಬೇಸರ ವ್ಯಕ್ತಪಡಿಸಿದೆ ಎಂದು ವರದಿಗಳು ಹೇಳಿವೆ.

‘ಪ್ರಮತಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ (ಸುಪ್ರಾ) ನಿರ್ಧಾರವು ಸಾರ್ವತ್ರಿಕ ಪ್ರಾಥಮಿಕ ಶಿಕ್ಷಣದ ಅಡಿಪಾಯವನ್ನೇ ಗೊತ್ತಾಗದಂತೆ ಅಪಾಯಕ್ಕೆ ಸಿಲುಕಿಸಿರಬಹುದು ಎಂಬುದನ್ನು ನಾವು ಅತ್ಯಂತ ವಿನಮ್ರತೆಯಿಂದ ಶೀಘ್ರವಾಗಿ ಪರಿಶೀಲಿಸಲು ಬಯಸುತ್ತೇವೆ. ಆರ್‌ಟಿಇ ಕಾಯ್ದೆಯಿಂದ ಅಲ್ಪಸಂಖ್ಯಾತ ಸಂಸ್ಥೆಗಳಿಗೆ ವಿನಾಯಿತಿ ನೀಡುವುದರಿಂದ ಸಾಮಾನ್ಯ ಶಾಲಾ ದೃಷ್ಟಿಕೋನವು ಛಿದ್ರಗೊಳ್ಳುತ್ತದೆ ಮತ್ತು 21ಎ ವಿಧಿಯಿಂದ ಕಲ್ಪಿಸಲಾದ ಒಳಗೊಳ್ಳುವಿಕೆ ಮತ್ತು ಸಾರ್ವತ್ರಿಕತೆಯ ಕಲ್ಪನೆಯು ದುರ್ಬಲಗೊಳ್ಳುತ್ತದೆ” ಎಂದು ಪೀಠ ಹೇಳಿದೆ.

ಸಂವಿಧಾನದ ವಿಧಿ 21ಎ ಶಿಕ್ಷಣದ ಹಕ್ಕಿನ ಬಗ್ಗೆ ವಿವರಿಸುತ್ತದೆ. ಸರ್ಕಾರ ಆರರಿಂದ ಹದಿನಾಲ್ಕು ವರ್ಷ ವಯಸ್ಸಿನ ಎಲ್ಲಾ ಮಕ್ಕಳಿಗೆ ಕಾನೂನಿನ ಪ್ರಕಾರ ನಿರ್ಧರಿಸಬಹುದಾದ ರೀತಿಯಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಒದಗಿಸಬೇಕು ಎಂದು ಹೇಳುತ್ತದೆ. ಆರ್‌ಟಿಇ ಕಾಯ್ದೆಯು ಮಕ್ಕಳಿಗೆ ಮೂಲಭೂತ ಸೌಕರ್ಯ, ತರಬೇತಿ ಪಡೆದ ಶಿಕ್ಷಕರು, ಪುಸ್ತಕಗಳು, ಸಮವಸ್ತ್ರಗಳು ಮತ್ತು ಮಧ್ಯಾಹ್ನದ ಊಟದಂತಹ ವಿವಿಧ ಹಕ್ಕುಗಳನ್ನು ಖಾತ್ರಿಪಡಿಸಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಕೆಲವು ಅಲ್ಪಸಂಖ್ಯಾತ ಶಾಲೆಗಳು ಆರ್‌ಟಿಇ ಕಾಯ್ದೆಯಿಂದ ಆದೇಶಿಸಲಾದ ಕೆಲವು ಸೌಲಭ್ಯಗಳನ್ನು ಒದಗಿಸುತ್ತಿರಬಹುದು. ಆದರೆ, ಇನ್ನೂ ಕೆಲವು ಶಾಲೆಗಳು ತಮ್ಮ ವಿದ್ಯಾರ್ಥಿಗಳಿಗೆ ಅಂತಹ ಕಡ್ಡಾಯ ಸೌಲಭ್ಯಗಳನ್ನು ಪಡೆಯದೆ ಬಿಡಬಹುದು. ಈ ವಿದ್ಯಾರ್ಥಿಗಳಲ್ಲಿ ಅನೇಕರಿಗೆ, ಅಂತಹ ಪ್ರಯೋಜನಗಳು ಕೇವಲ ಸೌಲಭ್ಯಗಳಲ್ಲ, ಅದು ಸಮಾನತೆ ಮತ್ತು ಮನ್ನಣೆಯ ದೃಢೀಕರಣಗಳಾಗಿವೆ” ಎಂದು ಸುಪ್ರೀಂ ಕೋರ್ಟ್ ಒತ್ತಿ ಹೇಳಿದೆ.

ಭೌತಿಕ ನಿಬಂಧನೆಗಳ ಹೊರತಾಗಿ, ಆರ್‌ಟಿಇ ಕಾಯ್ದೆಯು ಅಧಿಸೂಚಿತ ಶೈಕ್ಷಣಿಕ ಪ್ರಾಧಿಕಾರಗಳ ಮೂಲಕ ಸಾಮಾನ್ಯ ಪಠ್ಯಕ್ರಮದ ಮಾನದಂಡಗಳನ್ನು ಖಾತ್ರಿಪಡಿಸುತ್ತದೆ. ಇದು ಪ್ರತಿ ಮಗುವಿಗೆ ಸಾಂವಿಧಾನಿಕ ಮೌಲ್ಯಗಳ ಆಧಾರದ ಮೇಲೆ ಗುಣಮಟ್ಟದ ಶಿಕ್ಷಣವನ್ನು ಖಾತರಿಪಡಿಸುತ್ತದೆ ಎಂದು ಪೀಠ ಹೇಳಿದೆ.

“ಆದಾಗ್ಯೂ, ಅಲ್ಪಸಂಖ್ಯಾತ ಸಂಸ್ಥೆಗಳು ಅಂತಹ ಏಕರೂಪದ ಮಾರ್ಗಸೂಚಿಗಳಿಲ್ಲದೆ ಕಾರ್ಯನಿರ್ವಹಿಸುತ್ತವೆ. ಮಕ್ಕಳು ಮತ್ತು ಅವರ ಪೋಷಕರಿಗೆ ಏನು ಮತ್ತು ಹೇಗೆ ಕಲಿಸಲಾಗುತ್ತದೆ ಎಂಬುದರ ಬಗ್ಗೆ ಅನಿಶ್ಚಿತತೆ ಉಂಟಾಗುತ್ತದೆ ಮತ್ತು ಸಾರ್ವತ್ರಿಕ ಕಲಿಕೆಯ ರಾಷ್ಟ್ರೀಯ ಚೌಕಟ್ಟಿನಿಂದ ಹೆಚ್ಚಾಗಿ ಸಂಪರ್ಕ ಕಡಿತಗೊಳ್ಳುತ್ತದೆ” ಎಂದು ಪೀಠ ಅಭಿಪ್ರಾಯಪಟ್ಟಿದೆ.

ಜಾತಿ, ವರ್ಗ, ಧರ್ಮ ಮತ್ತು ಸಮುದಾಯವನ್ನು ಲೆಕ್ಕಿಸದೆ ಮಕ್ಕಳನ್ನು ಒಗ್ಗೂಡಿಸುವ ಬದಲು, ಪರಿಸ್ಥಿತಿಯು ಹಂಚಿಕೆಯ ಕಲಿಕಾ ಸ್ಥಳಗಳ ಪರಿವರ್ತಕ ಸಾಮರ್ಥ್ಯವನ್ನು ‘ವಿಭಜಿಸುತ್ತದೆ ಮತ್ತು ದುರ್ಬಲಗೊಳಿಸುತ್ತದೆ’ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಸಮಾನ ಮತ್ತು ಒಗ್ಗಟ್ಟಿನ ಸಮಾಜವನ್ನು ನಿರ್ಮಿಸುವುದು ಗುರಿಯಾಗಿದ್ದರೆ, ಅಂತಹ ವಿನಾಯಿತಿಗಳು ನಮ್ಮನ್ನು ವಿರುದ್ಧ ದಿಕ್ಕಿನಲ್ಲಿ ಸಾಗಿಸುತ್ತವೆ. ಸಾಂಸ್ಕೃತಿಕ ಮತ್ತು ಧಾರ್ಮಿಕ ಸ್ವಾತಂತ್ರ್ಯಗಳನ್ನು ರಕ್ಷಿಸುವ ಪ್ರಯತ್ನವಾಗಿ ಪ್ರಾರಂಭವಾದದ್ದು ಅಜಾಗರೂಕತೆಯಿಂದ ನಿಯಂತ್ರಕ ಲೋಪದೋಷವನ್ನು ಸೃಷ್ಟಿಸಿದೆ. ಇದು ಆರ್‌ಟಿಇ ಕಾಯ್ದೆಯಿಂದ ನಿಗದಿಪಡಿಸಲಾದ ಆಡಳಿತವನ್ನು ಬೈಪಾಸ್ ಮಾಡಲು ಅಲ್ಪಸಂಖ್ಯಾತ ಸ್ಥಾನಮಾನವನ್ನು ಬಯಸುವ ಸಂಸ್ಥೆಗಳಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಹೇಳಿದ ಸುಪ್ರೀಂ ಕೋರ್ಟ್, ವಿಸ್ಕೃತ ಪೀಠದ ಪರಿಗಣನೆಗೆ ನಾಲ್ಕು ಪ್ರಶ್ನೆಗಳನ್ನು ರೂಪಿಸಿದೆ.

ಮೊದಲನೆಯದಾಗಿ, ಸಂವಿಧಾನದ 30ನೇ ವಿಧಿಯ ಷರತ್ತು (1) ರ ಅಡಿಯಲ್ಲಿ ಬರುವ ಅನುದಾನಿತ ಅಥವಾ ಅನುದಾನರಹಿತ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳನ್ನು ಸಂಪೂರ್ಣ ಆರ್‌ಟಿಇ ಕಾಯ್ದೆಯ ವ್ಯಾಪ್ತಿಯಿಂದ ವಿನಾಯಿತಿ ನೀಡುವ ಪ್ರಮತಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನ ತೀರ್ಪು ಮರುಪರಿಶೀಲನೆಯ ಅಗತ್ಯವಿದೆಯೇ ಎಂಬುದು.

ಸಂವಿಧಾನದ 30ನೇ ವಿಧಿಯು ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮತ್ತು ನಿರ್ವಹಿಸುವ ಹಕ್ಕನ್ನು ವಿವರಿಸುತ್ತದೆ.

ಎರಡನೆಯ ಪ್ರಶ್ನೆಯೆಂದರೆ, ಆರ್‌ಟಿಇ ಕಾಯ್ದೆಯು ಸಂವಿಧಾನದ 30(1) ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಧಾರ್ಮಿಕ ಅಥವಾ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ಉಲ್ಲಂಘಿಸುತ್ತದೆಯೇ? ಆರ್‌ಟಿಇ ಕಾಯ್ದೆಯ ಸೆಕ್ಷನ್ 12(1)(ಸಿ) ಸಂವಿಧಾನದ 30ನೇ ವಿಧಿಯಿಂದ ರಕ್ಷಿಸಲ್ಪಟ್ಟ ಅಲ್ಪಸಂಖ್ಯಾತರ ಹಕ್ಕುಗಳ ಮೇಲೆ ಅತಿಕ್ರಮಣ ಮಾಡುವ ದುಷ್ಪರಿಣಾಮದಿಂದ ಬಳಲುತ್ತಿದೆಯೇ? ಅಂತಹ ಅತಿಕ್ರಮಣ ತಡೆಯಲು, ಸೆಕ್ಷನ್ 12(1)(ಸಿ) ಅನ್ನು ದುರ್ಬಲ ವರ್ಗಗಳು ಮತ್ತು ಅನನುಕೂಲಕರ ಗುಂಪುಗಳಿಗೆ ಸೇರಿದ ನಿರ್ದಿಷ್ಟ ಅಲ್ಪಸಂಖ್ಯಾತ ಸಮುದಾಯದ ಮಕ್ಕಳನ್ನು ಸೇರಿಸಲು ಬದಲಾಯಿಸಬೇಕಿತ್ತೇ? ಎಂಬುವುದಾಗಿದೆ.

ಆರ್‌ಟಿಇ ಕಾಯ್ದೆಯ ಸೆಕ್ಷನ್ 12(1)(ಸಿ) ಕೆಲವು ಷರತ್ತುಗಳಿಗೆ ಒಳಪಟ್ಟು, ಒಂದು ಶಾಲೆಯು ‘ಅಲ್ಪಸಂಖ್ಯಾತ ವರ್ಗದ ಕನಿಷ್ಠ ಇಪ್ಪತ್ತೈದು ಪ್ರತಿಶತದಷ್ಟು ದುರ್ಬಲ ವರ್ಗ ಮತ್ತು ಅನಾನುಕೂಲಕರ ಗುಂಪಿಗೆ ಸೇರಿದ ಮಕ್ಕಳನ್ನು I ತರಗತಿಯಲ್ಲಿ ಸೇರಿಸಿಕೊಳ್ಳಬೇಕು ಮತ್ತು ಅದು ಪೂರ್ಣಗೊಳ್ಳುವವರೆಗೆ ಉಚಿತ ಮತ್ತು ಕಡ್ಡಾಯ ಪ್ರಾಥಮಿಕ ಶಿಕ್ಷಣವನ್ನು ನೀಡಬೇಕು’ ಎಂದು ನಿರ್ದೇಶಿಸುತ್ತದೆ.

“ಆರ್‌ಟಿಇ ಕಾಯ್ದೆ ಅನುದಾನಿತ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ ಎಂದು ಪ್ರಮತಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನಲ್ಲಿ ಮಾಡಿದ ಘೋಷಣೆಯ ಸಂದರ್ಭದಲ್ಲಿ ಸಂವಿಧಾನದ 29(2) ನೇ ವಿಧಿಯನ್ನು ಪರಿಗಣಿಸದಿರುವುದರಿಂದ ಏನು ಪರಿಣಾಮ ಬೀರುತ್ತದೆ?” ಎಂಬ ಮತ್ತೊಂದು ಪ್ರಶ್ನೆ ಕೇಳಲಾಗಿದೆ.

“ಯಾವುದೇ ನಾಗರಿಕನಿಗೆ ರಾಜ್ಯವು ನಿರ್ವಹಿಸುವ ಯಾವುದೇ ಶಿಕ್ಷಣ ಸಂಸ್ಥೆಗೆ ಅಥವಾ ರಾಜ್ಯ ನಿಧಿಯಿಂದ ನೆರವು ಪಡೆಯುವ ಯಾವುದೇ ಶಿಕ್ಷಣ ಸಂಸ್ಥೆಗೆ ಧರ್ಮ, ಜನಾಂಗ, ಜಾತಿ, ಭಾಷೆ ಅಥವಾ ಅವುಗಳಲ್ಲಿ ಯಾವುದಾದರೂ ಆಧಾರದ ಮೇಲೆ ಪ್ರವೇಶ ನಿರಾಕರಿಸಬಾರದು” ಎಂದು 29 (2) ನೇ ವಿಧಿ ಹೇಳುತ್ತದೆ.

ನಾಲ್ಕನೇ ಪ್ರಶ್ನೆಯೆಂದರೆ, ಪ್ರಮತಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನಲ್ಲಿ ಆರ್‌ಟಿಇ ಕಾಯ್ದೆಯ ಸೆಕ್ಷನ್ 12(1)(ಸಿ) ಹೊರತುಪಡಿಸಿ ಇತರ ನಿಬಂಧನೆಗಳ ಸಂವಿಧಾನಬಾಹಿರತೆಯ ಬಗ್ಗೆ ಯಾವುದೇ ಚರ್ಚೆ ನಡೆಯದಿದ್ದರೆ, ಕಾಯ್ದೆಯ ಸಂಪೂರ್ಣ ಭಾಗವನ್ನು ಸಂವಿಧಾನದ 30ನೇ ವಿಧಿಯಿಂದ ರಕ್ಷಿಸಲ್ಪಟ್ಟ ಅಲ್ಪಸಂಖ್ಯಾತರ ಹಕ್ಕುಗಳ ಅತಿಕ್ರಮಣ ಎಂದು ಘೋಷಿಸಬೇಕೇ?

ಧಾರ್ಮಿಕ ಅಥವಾ ಭಾಷಾವಾರು ಅಲ್ಪಸಂಖ್ಯಾತರು ಸ್ಥಾಪಿಸಿದ ಮತ್ತು ನಿರ್ವಹಿಸುವ ಶಾಲೆಗಳನ್ನು ಹೊರತುಪಡಿಸಿ ಎಲ್ಲಾ ಶಾಲೆಗಳು ಆರ್‌ಟಿಇ ಕಾಯ್ದೆಯ ನಿಬಂಧನೆಗಳನ್ನು ಪಾಲಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಭಾರತ ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ನಮಗೆ ಇರುವ ಅಧಿಕಾರವನ್ನು ನಾವು ಬಳಸಿಕೊಳ್ಳುತ್ತೇವೆ ಮತ್ತು ಐದು ವರ್ಷಗಳಿಗಿಂತ ಕಡಿಮೆ ಸೇವೆಯನ್ನು ಹೊಂದಿರುವ ಶಿಕ್ಷಕರು, ಟಿಇಟಿ (ಶಿಕ್ಷಕರ ಅರ್ಹತಾ ಪರೀಕ್ಷೆ)ಯಲ್ಲಿ ಅರ್ಹತೆ ಪಡೆಯದೆ ನಿವೃತ್ತಿ ವಯಸ್ಸು ತಲುಪುವವರೆಗೆ ಸೇವೆಯಲ್ಲಿ ಮುಂದುವರಿಯಬಹುದು ಎಂದು ನಿರ್ದೇಶಿಸುತ್ತೇವೆ” ಎಂದು ಪೀಠ ಹೇಳಿದೆ.

“ಆರ್‌ಟಿಇ ಕಾಯ್ದೆ ಜಾರಿಗೆ ಬರುವ ಮೊದಲು ನೇಮಕಗೊಂಡ ಮತ್ತು ನಿವೃತ್ತಿ ಹೊಂದಲು 5 ವರ್ಷಗಳಿಗಿಂತ ಹೆಚ್ಚು ಸಮಯ ಹೊಂದಿರುವ ಸೇವಾ ನಿರತ ಶಿಕ್ಷಕರು ಸೇವೆಯಲ್ಲಿ ಮುಂದುವರಿಯುವ ದಿನಾಂಕದಿಂದ 2 ವರ್ಷಗಳ ಒಳಗೆ ಟಿಇಟಿಯಲ್ಲಿ ಅರ್ಹತೆ ಪಡೆಯುವ ಬಾಧ್ಯತೆಯಡಿಯಲ್ಲಿರುತ್ತಾರೆ” ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...