Homeಮುಖಪುಟಅಲ್ಪಸಂಖ್ಯಾತ ಶಾಲೆಗಳು ಮತ್ತು ಆರ್‌ಟಿಇ: 2014ರ ತೀರ್ಪಿನ ಕುರಿತು ವಿಸ್ತೃತ ಪೀಠದ ಪರಿಶೀಲನೆ ಕೋರಿದ ಸುಪ್ರೀಂ...

ಅಲ್ಪಸಂಖ್ಯಾತ ಶಾಲೆಗಳು ಮತ್ತು ಆರ್‌ಟಿಇ: 2014ರ ತೀರ್ಪಿನ ಕುರಿತು ವಿಸ್ತೃತ ಪೀಠದ ಪರಿಶೀಲನೆ ಕೋರಿದ ಸುಪ್ರೀಂ ಕೋರ್ಟ್ 

- Advertisement -
- Advertisement -

ಅಲ್ಪಸಂಖ್ಯಾತ ಶಾಲೆಗಳನ್ನು ಆರ್‌ಟಿಇ ಕಾಯ್ದೆಯ ವ್ಯಾಪ್ತಿಯಿಂದ ಹೊರಗಿಟ್ಟಿದ್ದ 2014ರ ತೀರ್ಪಿನ ನಿಖರತೆಯನ್ನು ಅನುಮಾನಿಸಿರುವ ಸುಪ್ರೀಂ ಕೋರ್ಟ್, ಈ ವಿಷಯವನ್ನು ಸೋಮವಾರ (ಸೆ.1) ವಿಸ್ಕೃತ ಪೀಠಕ್ಕೆ ಉಲ್ಲೇಖಿಸಿದೆ.

ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗದ ಅಧ್ಯಯನ ವರದಿ ಸೇರಿದಂತೆ ವಿವಿಧ ದಾಖಲೆಗಳನ್ನು ಉಲ್ಲೇಖಿಸಿದ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಮನಮೋಹನ್ ಅವರನ್ನು ಒಳಗೊಂಡ ಪೀಠ,  ಈ ಹೊರಗಿಡುವಿಕೆಯು ದುರುಪಯೋಗಕ್ಕೆ ಫಲವತ್ತಾದ ನೆಲವನ್ನು ಸೃಷ್ಟಿಸಿದೆ ಎಂದು ಹೇಳಿ ಬೇಸರ ವ್ಯಕ್ತಪಡಿಸಿದೆ ಎಂದು ವರದಿಗಳು ಹೇಳಿವೆ.

‘ಪ್ರಮತಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ (ಸುಪ್ರಾ) ನಿರ್ಧಾರವು ಸಾರ್ವತ್ರಿಕ ಪ್ರಾಥಮಿಕ ಶಿಕ್ಷಣದ ಅಡಿಪಾಯವನ್ನೇ ಗೊತ್ತಾಗದಂತೆ ಅಪಾಯಕ್ಕೆ ಸಿಲುಕಿಸಿರಬಹುದು ಎಂಬುದನ್ನು ನಾವು ಅತ್ಯಂತ ವಿನಮ್ರತೆಯಿಂದ ಶೀಘ್ರವಾಗಿ ಪರಿಶೀಲಿಸಲು ಬಯಸುತ್ತೇವೆ. ಆರ್‌ಟಿಇ ಕಾಯ್ದೆಯಿಂದ ಅಲ್ಪಸಂಖ್ಯಾತ ಸಂಸ್ಥೆಗಳಿಗೆ ವಿನಾಯಿತಿ ನೀಡುವುದರಿಂದ ಸಾಮಾನ್ಯ ಶಾಲಾ ದೃಷ್ಟಿಕೋನವು ಛಿದ್ರಗೊಳ್ಳುತ್ತದೆ ಮತ್ತು 21ಎ ವಿಧಿಯಿಂದ ಕಲ್ಪಿಸಲಾದ ಒಳಗೊಳ್ಳುವಿಕೆ ಮತ್ತು ಸಾರ್ವತ್ರಿಕತೆಯ ಕಲ್ಪನೆಯು ದುರ್ಬಲಗೊಳ್ಳುತ್ತದೆ” ಎಂದು ಪೀಠ ಹೇಳಿದೆ.

ಸಂವಿಧಾನದ ವಿಧಿ 21ಎ ಶಿಕ್ಷಣದ ಹಕ್ಕಿನ ಬಗ್ಗೆ ವಿವರಿಸುತ್ತದೆ. ಸರ್ಕಾರ ಆರರಿಂದ ಹದಿನಾಲ್ಕು ವರ್ಷ ವಯಸ್ಸಿನ ಎಲ್ಲಾ ಮಕ್ಕಳಿಗೆ ಕಾನೂನಿನ ಪ್ರಕಾರ ನಿರ್ಧರಿಸಬಹುದಾದ ರೀತಿಯಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಒದಗಿಸಬೇಕು ಎಂದು ಹೇಳುತ್ತದೆ. ಆರ್‌ಟಿಇ ಕಾಯ್ದೆಯು ಮಕ್ಕಳಿಗೆ ಮೂಲಭೂತ ಸೌಕರ್ಯ, ತರಬೇತಿ ಪಡೆದ ಶಿಕ್ಷಕರು, ಪುಸ್ತಕಗಳು, ಸಮವಸ್ತ್ರಗಳು ಮತ್ತು ಮಧ್ಯಾಹ್ನದ ಊಟದಂತಹ ವಿವಿಧ ಹಕ್ಕುಗಳನ್ನು ಖಾತ್ರಿಪಡಿಸಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಕೆಲವು ಅಲ್ಪಸಂಖ್ಯಾತ ಶಾಲೆಗಳು ಆರ್‌ಟಿಇ ಕಾಯ್ದೆಯಿಂದ ಆದೇಶಿಸಲಾದ ಕೆಲವು ಸೌಲಭ್ಯಗಳನ್ನು ಒದಗಿಸುತ್ತಿರಬಹುದು. ಆದರೆ, ಇನ್ನೂ ಕೆಲವು ಶಾಲೆಗಳು ತಮ್ಮ ವಿದ್ಯಾರ್ಥಿಗಳಿಗೆ ಅಂತಹ ಕಡ್ಡಾಯ ಸೌಲಭ್ಯಗಳನ್ನು ಪಡೆಯದೆ ಬಿಡಬಹುದು. ಈ ವಿದ್ಯಾರ್ಥಿಗಳಲ್ಲಿ ಅನೇಕರಿಗೆ, ಅಂತಹ ಪ್ರಯೋಜನಗಳು ಕೇವಲ ಸೌಲಭ್ಯಗಳಲ್ಲ, ಅದು ಸಮಾನತೆ ಮತ್ತು ಮನ್ನಣೆಯ ದೃಢೀಕರಣಗಳಾಗಿವೆ” ಎಂದು ಸುಪ್ರೀಂ ಕೋರ್ಟ್ ಒತ್ತಿ ಹೇಳಿದೆ.

ಭೌತಿಕ ನಿಬಂಧನೆಗಳ ಹೊರತಾಗಿ, ಆರ್‌ಟಿಇ ಕಾಯ್ದೆಯು ಅಧಿಸೂಚಿತ ಶೈಕ್ಷಣಿಕ ಪ್ರಾಧಿಕಾರಗಳ ಮೂಲಕ ಸಾಮಾನ್ಯ ಪಠ್ಯಕ್ರಮದ ಮಾನದಂಡಗಳನ್ನು ಖಾತ್ರಿಪಡಿಸುತ್ತದೆ. ಇದು ಪ್ರತಿ ಮಗುವಿಗೆ ಸಾಂವಿಧಾನಿಕ ಮೌಲ್ಯಗಳ ಆಧಾರದ ಮೇಲೆ ಗುಣಮಟ್ಟದ ಶಿಕ್ಷಣವನ್ನು ಖಾತರಿಪಡಿಸುತ್ತದೆ ಎಂದು ಪೀಠ ಹೇಳಿದೆ.

“ಆದಾಗ್ಯೂ, ಅಲ್ಪಸಂಖ್ಯಾತ ಸಂಸ್ಥೆಗಳು ಅಂತಹ ಏಕರೂಪದ ಮಾರ್ಗಸೂಚಿಗಳಿಲ್ಲದೆ ಕಾರ್ಯನಿರ್ವಹಿಸುತ್ತವೆ. ಮಕ್ಕಳು ಮತ್ತು ಅವರ ಪೋಷಕರಿಗೆ ಏನು ಮತ್ತು ಹೇಗೆ ಕಲಿಸಲಾಗುತ್ತದೆ ಎಂಬುದರ ಬಗ್ಗೆ ಅನಿಶ್ಚಿತತೆ ಉಂಟಾಗುತ್ತದೆ ಮತ್ತು ಸಾರ್ವತ್ರಿಕ ಕಲಿಕೆಯ ರಾಷ್ಟ್ರೀಯ ಚೌಕಟ್ಟಿನಿಂದ ಹೆಚ್ಚಾಗಿ ಸಂಪರ್ಕ ಕಡಿತಗೊಳ್ಳುತ್ತದೆ” ಎಂದು ಪೀಠ ಅಭಿಪ್ರಾಯಪಟ್ಟಿದೆ.

ಜಾತಿ, ವರ್ಗ, ಧರ್ಮ ಮತ್ತು ಸಮುದಾಯವನ್ನು ಲೆಕ್ಕಿಸದೆ ಮಕ್ಕಳನ್ನು ಒಗ್ಗೂಡಿಸುವ ಬದಲು, ಪರಿಸ್ಥಿತಿಯು ಹಂಚಿಕೆಯ ಕಲಿಕಾ ಸ್ಥಳಗಳ ಪರಿವರ್ತಕ ಸಾಮರ್ಥ್ಯವನ್ನು ‘ವಿಭಜಿಸುತ್ತದೆ ಮತ್ತು ದುರ್ಬಲಗೊಳಿಸುತ್ತದೆ’ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಸಮಾನ ಮತ್ತು ಒಗ್ಗಟ್ಟಿನ ಸಮಾಜವನ್ನು ನಿರ್ಮಿಸುವುದು ಗುರಿಯಾಗಿದ್ದರೆ, ಅಂತಹ ವಿನಾಯಿತಿಗಳು ನಮ್ಮನ್ನು ವಿರುದ್ಧ ದಿಕ್ಕಿನಲ್ಲಿ ಸಾಗಿಸುತ್ತವೆ. ಸಾಂಸ್ಕೃತಿಕ ಮತ್ತು ಧಾರ್ಮಿಕ ಸ್ವಾತಂತ್ರ್ಯಗಳನ್ನು ರಕ್ಷಿಸುವ ಪ್ರಯತ್ನವಾಗಿ ಪ್ರಾರಂಭವಾದದ್ದು ಅಜಾಗರೂಕತೆಯಿಂದ ನಿಯಂತ್ರಕ ಲೋಪದೋಷವನ್ನು ಸೃಷ್ಟಿಸಿದೆ. ಇದು ಆರ್‌ಟಿಇ ಕಾಯ್ದೆಯಿಂದ ನಿಗದಿಪಡಿಸಲಾದ ಆಡಳಿತವನ್ನು ಬೈಪಾಸ್ ಮಾಡಲು ಅಲ್ಪಸಂಖ್ಯಾತ ಸ್ಥಾನಮಾನವನ್ನು ಬಯಸುವ ಸಂಸ್ಥೆಗಳಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಹೇಳಿದ ಸುಪ್ರೀಂ ಕೋರ್ಟ್, ವಿಸ್ಕೃತ ಪೀಠದ ಪರಿಗಣನೆಗೆ ನಾಲ್ಕು ಪ್ರಶ್ನೆಗಳನ್ನು ರೂಪಿಸಿದೆ.

ಮೊದಲನೆಯದಾಗಿ, ಸಂವಿಧಾನದ 30ನೇ ವಿಧಿಯ ಷರತ್ತು (1) ರ ಅಡಿಯಲ್ಲಿ ಬರುವ ಅನುದಾನಿತ ಅಥವಾ ಅನುದಾನರಹಿತ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳನ್ನು ಸಂಪೂರ್ಣ ಆರ್‌ಟಿಇ ಕಾಯ್ದೆಯ ವ್ಯಾಪ್ತಿಯಿಂದ ವಿನಾಯಿತಿ ನೀಡುವ ಪ್ರಮತಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನ ತೀರ್ಪು ಮರುಪರಿಶೀಲನೆಯ ಅಗತ್ಯವಿದೆಯೇ ಎಂಬುದು.

ಸಂವಿಧಾನದ 30ನೇ ವಿಧಿಯು ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮತ್ತು ನಿರ್ವಹಿಸುವ ಹಕ್ಕನ್ನು ವಿವರಿಸುತ್ತದೆ.

ಎರಡನೆಯ ಪ್ರಶ್ನೆಯೆಂದರೆ, ಆರ್‌ಟಿಇ ಕಾಯ್ದೆಯು ಸಂವಿಧಾನದ 30(1) ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಧಾರ್ಮಿಕ ಅಥವಾ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ಉಲ್ಲಂಘಿಸುತ್ತದೆಯೇ? ಆರ್‌ಟಿಇ ಕಾಯ್ದೆಯ ಸೆಕ್ಷನ್ 12(1)(ಸಿ) ಸಂವಿಧಾನದ 30ನೇ ವಿಧಿಯಿಂದ ರಕ್ಷಿಸಲ್ಪಟ್ಟ ಅಲ್ಪಸಂಖ್ಯಾತರ ಹಕ್ಕುಗಳ ಮೇಲೆ ಅತಿಕ್ರಮಣ ಮಾಡುವ ದುಷ್ಪರಿಣಾಮದಿಂದ ಬಳಲುತ್ತಿದೆಯೇ? ಅಂತಹ ಅತಿಕ್ರಮಣ ತಡೆಯಲು, ಸೆಕ್ಷನ್ 12(1)(ಸಿ) ಅನ್ನು ದುರ್ಬಲ ವರ್ಗಗಳು ಮತ್ತು ಅನನುಕೂಲಕರ ಗುಂಪುಗಳಿಗೆ ಸೇರಿದ ನಿರ್ದಿಷ್ಟ ಅಲ್ಪಸಂಖ್ಯಾತ ಸಮುದಾಯದ ಮಕ್ಕಳನ್ನು ಸೇರಿಸಲು ಬದಲಾಯಿಸಬೇಕಿತ್ತೇ? ಎಂಬುವುದಾಗಿದೆ.

ಆರ್‌ಟಿಇ ಕಾಯ್ದೆಯ ಸೆಕ್ಷನ್ 12(1)(ಸಿ) ಕೆಲವು ಷರತ್ತುಗಳಿಗೆ ಒಳಪಟ್ಟು, ಒಂದು ಶಾಲೆಯು ‘ಅಲ್ಪಸಂಖ್ಯಾತ ವರ್ಗದ ಕನಿಷ್ಠ ಇಪ್ಪತ್ತೈದು ಪ್ರತಿಶತದಷ್ಟು ದುರ್ಬಲ ವರ್ಗ ಮತ್ತು ಅನಾನುಕೂಲಕರ ಗುಂಪಿಗೆ ಸೇರಿದ ಮಕ್ಕಳನ್ನು I ತರಗತಿಯಲ್ಲಿ ಸೇರಿಸಿಕೊಳ್ಳಬೇಕು ಮತ್ತು ಅದು ಪೂರ್ಣಗೊಳ್ಳುವವರೆಗೆ ಉಚಿತ ಮತ್ತು ಕಡ್ಡಾಯ ಪ್ರಾಥಮಿಕ ಶಿಕ್ಷಣವನ್ನು ನೀಡಬೇಕು’ ಎಂದು ನಿರ್ದೇಶಿಸುತ್ತದೆ.

“ಆರ್‌ಟಿಇ ಕಾಯ್ದೆ ಅನುದಾನಿತ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ ಎಂದು ಪ್ರಮತಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನಲ್ಲಿ ಮಾಡಿದ ಘೋಷಣೆಯ ಸಂದರ್ಭದಲ್ಲಿ ಸಂವಿಧಾನದ 29(2) ನೇ ವಿಧಿಯನ್ನು ಪರಿಗಣಿಸದಿರುವುದರಿಂದ ಏನು ಪರಿಣಾಮ ಬೀರುತ್ತದೆ?” ಎಂಬ ಮತ್ತೊಂದು ಪ್ರಶ್ನೆ ಕೇಳಲಾಗಿದೆ.

“ಯಾವುದೇ ನಾಗರಿಕನಿಗೆ ರಾಜ್ಯವು ನಿರ್ವಹಿಸುವ ಯಾವುದೇ ಶಿಕ್ಷಣ ಸಂಸ್ಥೆಗೆ ಅಥವಾ ರಾಜ್ಯ ನಿಧಿಯಿಂದ ನೆರವು ಪಡೆಯುವ ಯಾವುದೇ ಶಿಕ್ಷಣ ಸಂಸ್ಥೆಗೆ ಧರ್ಮ, ಜನಾಂಗ, ಜಾತಿ, ಭಾಷೆ ಅಥವಾ ಅವುಗಳಲ್ಲಿ ಯಾವುದಾದರೂ ಆಧಾರದ ಮೇಲೆ ಪ್ರವೇಶ ನಿರಾಕರಿಸಬಾರದು” ಎಂದು 29 (2) ನೇ ವಿಧಿ ಹೇಳುತ್ತದೆ.

ನಾಲ್ಕನೇ ಪ್ರಶ್ನೆಯೆಂದರೆ, ಪ್ರಮತಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನಲ್ಲಿ ಆರ್‌ಟಿಇ ಕಾಯ್ದೆಯ ಸೆಕ್ಷನ್ 12(1)(ಸಿ) ಹೊರತುಪಡಿಸಿ ಇತರ ನಿಬಂಧನೆಗಳ ಸಂವಿಧಾನಬಾಹಿರತೆಯ ಬಗ್ಗೆ ಯಾವುದೇ ಚರ್ಚೆ ನಡೆಯದಿದ್ದರೆ, ಕಾಯ್ದೆಯ ಸಂಪೂರ್ಣ ಭಾಗವನ್ನು ಸಂವಿಧಾನದ 30ನೇ ವಿಧಿಯಿಂದ ರಕ್ಷಿಸಲ್ಪಟ್ಟ ಅಲ್ಪಸಂಖ್ಯಾತರ ಹಕ್ಕುಗಳ ಅತಿಕ್ರಮಣ ಎಂದು ಘೋಷಿಸಬೇಕೇ?

ಧಾರ್ಮಿಕ ಅಥವಾ ಭಾಷಾವಾರು ಅಲ್ಪಸಂಖ್ಯಾತರು ಸ್ಥಾಪಿಸಿದ ಮತ್ತು ನಿರ್ವಹಿಸುವ ಶಾಲೆಗಳನ್ನು ಹೊರತುಪಡಿಸಿ ಎಲ್ಲಾ ಶಾಲೆಗಳು ಆರ್‌ಟಿಇ ಕಾಯ್ದೆಯ ನಿಬಂಧನೆಗಳನ್ನು ಪಾಲಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಭಾರತ ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ನಮಗೆ ಇರುವ ಅಧಿಕಾರವನ್ನು ನಾವು ಬಳಸಿಕೊಳ್ಳುತ್ತೇವೆ ಮತ್ತು ಐದು ವರ್ಷಗಳಿಗಿಂತ ಕಡಿಮೆ ಸೇವೆಯನ್ನು ಹೊಂದಿರುವ ಶಿಕ್ಷಕರು, ಟಿಇಟಿ (ಶಿಕ್ಷಕರ ಅರ್ಹತಾ ಪರೀಕ್ಷೆ)ಯಲ್ಲಿ ಅರ್ಹತೆ ಪಡೆಯದೆ ನಿವೃತ್ತಿ ವಯಸ್ಸು ತಲುಪುವವರೆಗೆ ಸೇವೆಯಲ್ಲಿ ಮುಂದುವರಿಯಬಹುದು ಎಂದು ನಿರ್ದೇಶಿಸುತ್ತೇವೆ” ಎಂದು ಪೀಠ ಹೇಳಿದೆ.

“ಆರ್‌ಟಿಇ ಕಾಯ್ದೆ ಜಾರಿಗೆ ಬರುವ ಮೊದಲು ನೇಮಕಗೊಂಡ ಮತ್ತು ನಿವೃತ್ತಿ ಹೊಂದಲು 5 ವರ್ಷಗಳಿಗಿಂತ ಹೆಚ್ಚು ಸಮಯ ಹೊಂದಿರುವ ಸೇವಾ ನಿರತ ಶಿಕ್ಷಕರು ಸೇವೆಯಲ್ಲಿ ಮುಂದುವರಿಯುವ ದಿನಾಂಕದಿಂದ 2 ವರ್ಷಗಳ ಒಳಗೆ ಟಿಇಟಿಯಲ್ಲಿ ಅರ್ಹತೆ ಪಡೆಯುವ ಬಾಧ್ಯತೆಯಡಿಯಲ್ಲಿರುತ್ತಾರೆ” ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...