Homeಮುಖಪುಟಅಲ್ಪಸಂಖ್ಯಾತ ಶಾಲೆಗಳು ಮತ್ತು ಆರ್‌ಟಿಇ: 2014ರ ತೀರ್ಪಿನ ಕುರಿತು ವಿಸ್ತೃತ ಪೀಠದ ಪರಿಶೀಲನೆ ಕೋರಿದ ಸುಪ್ರೀಂ...

ಅಲ್ಪಸಂಖ್ಯಾತ ಶಾಲೆಗಳು ಮತ್ತು ಆರ್‌ಟಿಇ: 2014ರ ತೀರ್ಪಿನ ಕುರಿತು ವಿಸ್ತೃತ ಪೀಠದ ಪರಿಶೀಲನೆ ಕೋರಿದ ಸುಪ್ರೀಂ ಕೋರ್ಟ್ 

- Advertisement -
- Advertisement -

ಅಲ್ಪಸಂಖ್ಯಾತ ಶಾಲೆಗಳನ್ನು ಆರ್‌ಟಿಇ ಕಾಯ್ದೆಯ ವ್ಯಾಪ್ತಿಯಿಂದ ಹೊರಗಿಟ್ಟಿದ್ದ 2014ರ ತೀರ್ಪಿನ ನಿಖರತೆಯನ್ನು ಅನುಮಾನಿಸಿರುವ ಸುಪ್ರೀಂ ಕೋರ್ಟ್, ಈ ವಿಷಯವನ್ನು ಸೋಮವಾರ (ಸೆ.1) ವಿಸ್ಕೃತ ಪೀಠಕ್ಕೆ ಉಲ್ಲೇಖಿಸಿದೆ.

ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗದ ಅಧ್ಯಯನ ವರದಿ ಸೇರಿದಂತೆ ವಿವಿಧ ದಾಖಲೆಗಳನ್ನು ಉಲ್ಲೇಖಿಸಿದ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಮನಮೋಹನ್ ಅವರನ್ನು ಒಳಗೊಂಡ ಪೀಠ,  ಈ ಹೊರಗಿಡುವಿಕೆಯು ದುರುಪಯೋಗಕ್ಕೆ ಫಲವತ್ತಾದ ನೆಲವನ್ನು ಸೃಷ್ಟಿಸಿದೆ ಎಂದು ಹೇಳಿ ಬೇಸರ ವ್ಯಕ್ತಪಡಿಸಿದೆ ಎಂದು ವರದಿಗಳು ಹೇಳಿವೆ.

‘ಪ್ರಮತಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ (ಸುಪ್ರಾ) ನಿರ್ಧಾರವು ಸಾರ್ವತ್ರಿಕ ಪ್ರಾಥಮಿಕ ಶಿಕ್ಷಣದ ಅಡಿಪಾಯವನ್ನೇ ಗೊತ್ತಾಗದಂತೆ ಅಪಾಯಕ್ಕೆ ಸಿಲುಕಿಸಿರಬಹುದು ಎಂಬುದನ್ನು ನಾವು ಅತ್ಯಂತ ವಿನಮ್ರತೆಯಿಂದ ಶೀಘ್ರವಾಗಿ ಪರಿಶೀಲಿಸಲು ಬಯಸುತ್ತೇವೆ. ಆರ್‌ಟಿಇ ಕಾಯ್ದೆಯಿಂದ ಅಲ್ಪಸಂಖ್ಯಾತ ಸಂಸ್ಥೆಗಳಿಗೆ ವಿನಾಯಿತಿ ನೀಡುವುದರಿಂದ ಸಾಮಾನ್ಯ ಶಾಲಾ ದೃಷ್ಟಿಕೋನವು ಛಿದ್ರಗೊಳ್ಳುತ್ತದೆ ಮತ್ತು 21ಎ ವಿಧಿಯಿಂದ ಕಲ್ಪಿಸಲಾದ ಒಳಗೊಳ್ಳುವಿಕೆ ಮತ್ತು ಸಾರ್ವತ್ರಿಕತೆಯ ಕಲ್ಪನೆಯು ದುರ್ಬಲಗೊಳ್ಳುತ್ತದೆ” ಎಂದು ಪೀಠ ಹೇಳಿದೆ.

ಸಂವಿಧಾನದ ವಿಧಿ 21ಎ ಶಿಕ್ಷಣದ ಹಕ್ಕಿನ ಬಗ್ಗೆ ವಿವರಿಸುತ್ತದೆ. ಸರ್ಕಾರ ಆರರಿಂದ ಹದಿನಾಲ್ಕು ವರ್ಷ ವಯಸ್ಸಿನ ಎಲ್ಲಾ ಮಕ್ಕಳಿಗೆ ಕಾನೂನಿನ ಪ್ರಕಾರ ನಿರ್ಧರಿಸಬಹುದಾದ ರೀತಿಯಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಒದಗಿಸಬೇಕು ಎಂದು ಹೇಳುತ್ತದೆ. ಆರ್‌ಟಿಇ ಕಾಯ್ದೆಯು ಮಕ್ಕಳಿಗೆ ಮೂಲಭೂತ ಸೌಕರ್ಯ, ತರಬೇತಿ ಪಡೆದ ಶಿಕ್ಷಕರು, ಪುಸ್ತಕಗಳು, ಸಮವಸ್ತ್ರಗಳು ಮತ್ತು ಮಧ್ಯಾಹ್ನದ ಊಟದಂತಹ ವಿವಿಧ ಹಕ್ಕುಗಳನ್ನು ಖಾತ್ರಿಪಡಿಸಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಕೆಲವು ಅಲ್ಪಸಂಖ್ಯಾತ ಶಾಲೆಗಳು ಆರ್‌ಟಿಇ ಕಾಯ್ದೆಯಿಂದ ಆದೇಶಿಸಲಾದ ಕೆಲವು ಸೌಲಭ್ಯಗಳನ್ನು ಒದಗಿಸುತ್ತಿರಬಹುದು. ಆದರೆ, ಇನ್ನೂ ಕೆಲವು ಶಾಲೆಗಳು ತಮ್ಮ ವಿದ್ಯಾರ್ಥಿಗಳಿಗೆ ಅಂತಹ ಕಡ್ಡಾಯ ಸೌಲಭ್ಯಗಳನ್ನು ಪಡೆಯದೆ ಬಿಡಬಹುದು. ಈ ವಿದ್ಯಾರ್ಥಿಗಳಲ್ಲಿ ಅನೇಕರಿಗೆ, ಅಂತಹ ಪ್ರಯೋಜನಗಳು ಕೇವಲ ಸೌಲಭ್ಯಗಳಲ್ಲ, ಅದು ಸಮಾನತೆ ಮತ್ತು ಮನ್ನಣೆಯ ದೃಢೀಕರಣಗಳಾಗಿವೆ” ಎಂದು ಸುಪ್ರೀಂ ಕೋರ್ಟ್ ಒತ್ತಿ ಹೇಳಿದೆ.

ಭೌತಿಕ ನಿಬಂಧನೆಗಳ ಹೊರತಾಗಿ, ಆರ್‌ಟಿಇ ಕಾಯ್ದೆಯು ಅಧಿಸೂಚಿತ ಶೈಕ್ಷಣಿಕ ಪ್ರಾಧಿಕಾರಗಳ ಮೂಲಕ ಸಾಮಾನ್ಯ ಪಠ್ಯಕ್ರಮದ ಮಾನದಂಡಗಳನ್ನು ಖಾತ್ರಿಪಡಿಸುತ್ತದೆ. ಇದು ಪ್ರತಿ ಮಗುವಿಗೆ ಸಾಂವಿಧಾನಿಕ ಮೌಲ್ಯಗಳ ಆಧಾರದ ಮೇಲೆ ಗುಣಮಟ್ಟದ ಶಿಕ್ಷಣವನ್ನು ಖಾತರಿಪಡಿಸುತ್ತದೆ ಎಂದು ಪೀಠ ಹೇಳಿದೆ.

“ಆದಾಗ್ಯೂ, ಅಲ್ಪಸಂಖ್ಯಾತ ಸಂಸ್ಥೆಗಳು ಅಂತಹ ಏಕರೂಪದ ಮಾರ್ಗಸೂಚಿಗಳಿಲ್ಲದೆ ಕಾರ್ಯನಿರ್ವಹಿಸುತ್ತವೆ. ಮಕ್ಕಳು ಮತ್ತು ಅವರ ಪೋಷಕರಿಗೆ ಏನು ಮತ್ತು ಹೇಗೆ ಕಲಿಸಲಾಗುತ್ತದೆ ಎಂಬುದರ ಬಗ್ಗೆ ಅನಿಶ್ಚಿತತೆ ಉಂಟಾಗುತ್ತದೆ ಮತ್ತು ಸಾರ್ವತ್ರಿಕ ಕಲಿಕೆಯ ರಾಷ್ಟ್ರೀಯ ಚೌಕಟ್ಟಿನಿಂದ ಹೆಚ್ಚಾಗಿ ಸಂಪರ್ಕ ಕಡಿತಗೊಳ್ಳುತ್ತದೆ” ಎಂದು ಪೀಠ ಅಭಿಪ್ರಾಯಪಟ್ಟಿದೆ.

ಜಾತಿ, ವರ್ಗ, ಧರ್ಮ ಮತ್ತು ಸಮುದಾಯವನ್ನು ಲೆಕ್ಕಿಸದೆ ಮಕ್ಕಳನ್ನು ಒಗ್ಗೂಡಿಸುವ ಬದಲು, ಪರಿಸ್ಥಿತಿಯು ಹಂಚಿಕೆಯ ಕಲಿಕಾ ಸ್ಥಳಗಳ ಪರಿವರ್ತಕ ಸಾಮರ್ಥ್ಯವನ್ನು ‘ವಿಭಜಿಸುತ್ತದೆ ಮತ್ತು ದುರ್ಬಲಗೊಳಿಸುತ್ತದೆ’ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಸಮಾನ ಮತ್ತು ಒಗ್ಗಟ್ಟಿನ ಸಮಾಜವನ್ನು ನಿರ್ಮಿಸುವುದು ಗುರಿಯಾಗಿದ್ದರೆ, ಅಂತಹ ವಿನಾಯಿತಿಗಳು ನಮ್ಮನ್ನು ವಿರುದ್ಧ ದಿಕ್ಕಿನಲ್ಲಿ ಸಾಗಿಸುತ್ತವೆ. ಸಾಂಸ್ಕೃತಿಕ ಮತ್ತು ಧಾರ್ಮಿಕ ಸ್ವಾತಂತ್ರ್ಯಗಳನ್ನು ರಕ್ಷಿಸುವ ಪ್ರಯತ್ನವಾಗಿ ಪ್ರಾರಂಭವಾದದ್ದು ಅಜಾಗರೂಕತೆಯಿಂದ ನಿಯಂತ್ರಕ ಲೋಪದೋಷವನ್ನು ಸೃಷ್ಟಿಸಿದೆ. ಇದು ಆರ್‌ಟಿಇ ಕಾಯ್ದೆಯಿಂದ ನಿಗದಿಪಡಿಸಲಾದ ಆಡಳಿತವನ್ನು ಬೈಪಾಸ್ ಮಾಡಲು ಅಲ್ಪಸಂಖ್ಯಾತ ಸ್ಥಾನಮಾನವನ್ನು ಬಯಸುವ ಸಂಸ್ಥೆಗಳಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಹೇಳಿದ ಸುಪ್ರೀಂ ಕೋರ್ಟ್, ವಿಸ್ಕೃತ ಪೀಠದ ಪರಿಗಣನೆಗೆ ನಾಲ್ಕು ಪ್ರಶ್ನೆಗಳನ್ನು ರೂಪಿಸಿದೆ.

ಮೊದಲನೆಯದಾಗಿ, ಸಂವಿಧಾನದ 30ನೇ ವಿಧಿಯ ಷರತ್ತು (1) ರ ಅಡಿಯಲ್ಲಿ ಬರುವ ಅನುದಾನಿತ ಅಥವಾ ಅನುದಾನರಹಿತ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳನ್ನು ಸಂಪೂರ್ಣ ಆರ್‌ಟಿಇ ಕಾಯ್ದೆಯ ವ್ಯಾಪ್ತಿಯಿಂದ ವಿನಾಯಿತಿ ನೀಡುವ ಪ್ರಮತಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನ ತೀರ್ಪು ಮರುಪರಿಶೀಲನೆಯ ಅಗತ್ಯವಿದೆಯೇ ಎಂಬುದು.

ಸಂವಿಧಾನದ 30ನೇ ವಿಧಿಯು ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮತ್ತು ನಿರ್ವಹಿಸುವ ಹಕ್ಕನ್ನು ವಿವರಿಸುತ್ತದೆ.

ಎರಡನೆಯ ಪ್ರಶ್ನೆಯೆಂದರೆ, ಆರ್‌ಟಿಇ ಕಾಯ್ದೆಯು ಸಂವಿಧಾನದ 30(1) ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಧಾರ್ಮಿಕ ಅಥವಾ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ಉಲ್ಲಂಘಿಸುತ್ತದೆಯೇ? ಆರ್‌ಟಿಇ ಕಾಯ್ದೆಯ ಸೆಕ್ಷನ್ 12(1)(ಸಿ) ಸಂವಿಧಾನದ 30ನೇ ವಿಧಿಯಿಂದ ರಕ್ಷಿಸಲ್ಪಟ್ಟ ಅಲ್ಪಸಂಖ್ಯಾತರ ಹಕ್ಕುಗಳ ಮೇಲೆ ಅತಿಕ್ರಮಣ ಮಾಡುವ ದುಷ್ಪರಿಣಾಮದಿಂದ ಬಳಲುತ್ತಿದೆಯೇ? ಅಂತಹ ಅತಿಕ್ರಮಣ ತಡೆಯಲು, ಸೆಕ್ಷನ್ 12(1)(ಸಿ) ಅನ್ನು ದುರ್ಬಲ ವರ್ಗಗಳು ಮತ್ತು ಅನನುಕೂಲಕರ ಗುಂಪುಗಳಿಗೆ ಸೇರಿದ ನಿರ್ದಿಷ್ಟ ಅಲ್ಪಸಂಖ್ಯಾತ ಸಮುದಾಯದ ಮಕ್ಕಳನ್ನು ಸೇರಿಸಲು ಬದಲಾಯಿಸಬೇಕಿತ್ತೇ? ಎಂಬುವುದಾಗಿದೆ.

ಆರ್‌ಟಿಇ ಕಾಯ್ದೆಯ ಸೆಕ್ಷನ್ 12(1)(ಸಿ) ಕೆಲವು ಷರತ್ತುಗಳಿಗೆ ಒಳಪಟ್ಟು, ಒಂದು ಶಾಲೆಯು ‘ಅಲ್ಪಸಂಖ್ಯಾತ ವರ್ಗದ ಕನಿಷ್ಠ ಇಪ್ಪತ್ತೈದು ಪ್ರತಿಶತದಷ್ಟು ದುರ್ಬಲ ವರ್ಗ ಮತ್ತು ಅನಾನುಕೂಲಕರ ಗುಂಪಿಗೆ ಸೇರಿದ ಮಕ್ಕಳನ್ನು I ತರಗತಿಯಲ್ಲಿ ಸೇರಿಸಿಕೊಳ್ಳಬೇಕು ಮತ್ತು ಅದು ಪೂರ್ಣಗೊಳ್ಳುವವರೆಗೆ ಉಚಿತ ಮತ್ತು ಕಡ್ಡಾಯ ಪ್ರಾಥಮಿಕ ಶಿಕ್ಷಣವನ್ನು ನೀಡಬೇಕು’ ಎಂದು ನಿರ್ದೇಶಿಸುತ್ತದೆ.

“ಆರ್‌ಟಿಇ ಕಾಯ್ದೆ ಅನುದಾನಿತ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ ಎಂದು ಪ್ರಮತಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನಲ್ಲಿ ಮಾಡಿದ ಘೋಷಣೆಯ ಸಂದರ್ಭದಲ್ಲಿ ಸಂವಿಧಾನದ 29(2) ನೇ ವಿಧಿಯನ್ನು ಪರಿಗಣಿಸದಿರುವುದರಿಂದ ಏನು ಪರಿಣಾಮ ಬೀರುತ್ತದೆ?” ಎಂಬ ಮತ್ತೊಂದು ಪ್ರಶ್ನೆ ಕೇಳಲಾಗಿದೆ.

“ಯಾವುದೇ ನಾಗರಿಕನಿಗೆ ರಾಜ್ಯವು ನಿರ್ವಹಿಸುವ ಯಾವುದೇ ಶಿಕ್ಷಣ ಸಂಸ್ಥೆಗೆ ಅಥವಾ ರಾಜ್ಯ ನಿಧಿಯಿಂದ ನೆರವು ಪಡೆಯುವ ಯಾವುದೇ ಶಿಕ್ಷಣ ಸಂಸ್ಥೆಗೆ ಧರ್ಮ, ಜನಾಂಗ, ಜಾತಿ, ಭಾಷೆ ಅಥವಾ ಅವುಗಳಲ್ಲಿ ಯಾವುದಾದರೂ ಆಧಾರದ ಮೇಲೆ ಪ್ರವೇಶ ನಿರಾಕರಿಸಬಾರದು” ಎಂದು 29 (2) ನೇ ವಿಧಿ ಹೇಳುತ್ತದೆ.

ನಾಲ್ಕನೇ ಪ್ರಶ್ನೆಯೆಂದರೆ, ಪ್ರಮತಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನಲ್ಲಿ ಆರ್‌ಟಿಇ ಕಾಯ್ದೆಯ ಸೆಕ್ಷನ್ 12(1)(ಸಿ) ಹೊರತುಪಡಿಸಿ ಇತರ ನಿಬಂಧನೆಗಳ ಸಂವಿಧಾನಬಾಹಿರತೆಯ ಬಗ್ಗೆ ಯಾವುದೇ ಚರ್ಚೆ ನಡೆಯದಿದ್ದರೆ, ಕಾಯ್ದೆಯ ಸಂಪೂರ್ಣ ಭಾಗವನ್ನು ಸಂವಿಧಾನದ 30ನೇ ವಿಧಿಯಿಂದ ರಕ್ಷಿಸಲ್ಪಟ್ಟ ಅಲ್ಪಸಂಖ್ಯಾತರ ಹಕ್ಕುಗಳ ಅತಿಕ್ರಮಣ ಎಂದು ಘೋಷಿಸಬೇಕೇ?

ಧಾರ್ಮಿಕ ಅಥವಾ ಭಾಷಾವಾರು ಅಲ್ಪಸಂಖ್ಯಾತರು ಸ್ಥಾಪಿಸಿದ ಮತ್ತು ನಿರ್ವಹಿಸುವ ಶಾಲೆಗಳನ್ನು ಹೊರತುಪಡಿಸಿ ಎಲ್ಲಾ ಶಾಲೆಗಳು ಆರ್‌ಟಿಇ ಕಾಯ್ದೆಯ ನಿಬಂಧನೆಗಳನ್ನು ಪಾಲಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಭಾರತ ಸಂವಿಧಾನದ 142ನೇ ವಿಧಿಯ ಅಡಿಯಲ್ಲಿ ನಮಗೆ ಇರುವ ಅಧಿಕಾರವನ್ನು ನಾವು ಬಳಸಿಕೊಳ್ಳುತ್ತೇವೆ ಮತ್ತು ಐದು ವರ್ಷಗಳಿಗಿಂತ ಕಡಿಮೆ ಸೇವೆಯನ್ನು ಹೊಂದಿರುವ ಶಿಕ್ಷಕರು, ಟಿಇಟಿ (ಶಿಕ್ಷಕರ ಅರ್ಹತಾ ಪರೀಕ್ಷೆ)ಯಲ್ಲಿ ಅರ್ಹತೆ ಪಡೆಯದೆ ನಿವೃತ್ತಿ ವಯಸ್ಸು ತಲುಪುವವರೆಗೆ ಸೇವೆಯಲ್ಲಿ ಮುಂದುವರಿಯಬಹುದು ಎಂದು ನಿರ್ದೇಶಿಸುತ್ತೇವೆ” ಎಂದು ಪೀಠ ಹೇಳಿದೆ.

“ಆರ್‌ಟಿಇ ಕಾಯ್ದೆ ಜಾರಿಗೆ ಬರುವ ಮೊದಲು ನೇಮಕಗೊಂಡ ಮತ್ತು ನಿವೃತ್ತಿ ಹೊಂದಲು 5 ವರ್ಷಗಳಿಗಿಂತ ಹೆಚ್ಚು ಸಮಯ ಹೊಂದಿರುವ ಸೇವಾ ನಿರತ ಶಿಕ್ಷಕರು ಸೇವೆಯಲ್ಲಿ ಮುಂದುವರಿಯುವ ದಿನಾಂಕದಿಂದ 2 ವರ್ಷಗಳ ಒಳಗೆ ಟಿಇಟಿಯಲ್ಲಿ ಅರ್ಹತೆ ಪಡೆಯುವ ಬಾಧ್ಯತೆಯಡಿಯಲ್ಲಿರುತ್ತಾರೆ” ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...