Homeಮುಖಪುಟಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ಹಣ್ಣೆಲೆ ಚಿಗುರಿದಾಗ, ಮುಕ್ತಿ, ಶರಪಂಜರ, ಮಿನುಗುತಾರೆ ಚಿತ್ರಗಳ ಮೂಲಕ ಗಮನ ಸೆಳೆದ ನಟಿ ಕಲ್ಪನಾರವರು ಕಣ್ಮರೆಯಾಗಿ ಇಂದಿಗೆ 41 ವರ್ಷ. ಆ ನೆನಪಿನಲ್ಲಿ ಅವರ ಕುರಿತು ಒಂದಿಷ್ಟು...

- Advertisement -
- Advertisement -

ಅಪರೂಪದ ಪಾತ್ರಗಳ ಮೂಲಕ ಕನ್ನಡ ನಾಡಿನಾಚೆಗೂ ತಮ್ಮ ಛಾಪು ಮೂಡಿಸಿದ ಮೇರು ತಾರೆ ಕಲ್ಪನಾ. ಅವರು ನಮ್ಮನ್ನಗಲಿ ಈ ಹೊತ್ತಿಗೆ (ಮೇ 12) ನಲವತ್ತೊಂದು ವರ್ಷ.

***

“ನನ್ನ ಇದುವರೆಗಿನ ಈ ಚಿತ್ರರಂಗದ ಅನುಭವವನ್ನು ಯಾವುದಾದರೊಂದು ಶಿಲ್ಪದಲ್ಲಿ ಕಡೆಯಬೇಕೆಂಬ ಮಹದಾಸೆ ಇತ್ತು. ಆ ಯೋಗ್ಯತೆಯನ್ನು ಕಲ್ಪನಾಳಲ್ಲಿ ಗುರುತಿಸಿದೆ. ಆಕೆಗೆ ನನ್ನ ಶಕ್ತಿಯನ್ನು ಧಾರೆ ಎರೆದೆ. ಅವಳು ಅದನ್ನು ಪ್ರೀತಿ, ಭಕ್ತಿಯಿಂದ ಸ್ವೀಕರಿಸಿ ನನ್ನ ಕಲ್ಪನೆಯ ಶಿಲ್ಪವಾಗಿದ್ದಾಳೆ. ಅಲ್ಲದೆ ನನ್ನ ಬಗ್ಗೆ ಅತ್ಯಂತ ಕೃತಜ್ಞತಾ ಭಾವ ಇರಿಸಿದ್ದಾಳೆ’ ಎಂದು ಕಲ್ಪನಾ ಕುರಿತಾಗಿ ಹೇಳಿದ್ದರು ನಿರ್ದೇಶಕ ಪುಟ್ಟಣ್ಣ ಕಣಗಾಲ್. ಕನ್ನಡ ಚಿತ್ರರಂಗ ಕಂಡ ಪ್ರಮುಖ ನಾಯಕನಟಿ ಕಲ್ಪನಾ ಕಣ್ಮರೆಯಾಗಿ (1979, ಮೇ 12) ಇಂದಿಗೆ 41 ವರ್ಷಗಳು ಸಂದವು.

‘ಸಾಕುಮಗಳು’ (1963) ಚಿತ್ರದೊಂದಿಗೆ ಬೆಳ್ಳಿತೆರೆ ಪ್ರವೇಶಿಸಿದ ಕಲ್ಪನಾ ಸುಮಾರು ಒಂದು ದಶಕಗಳ ಕಾಲ ಕನ್ನಡ ಚಿತ್ರಜಗತ್ತಿನಲ್ಲಿ ರಾರಾಜಿಸಿದರು. ಏಕಮೇವಾದ್ವಿತೀಯ ನಟಿ ಎನಿಸಿಕೊಂಡ ನಟಿ ’ಮಿನುಗುತಾರೆ’ಯಾಗಿದ್ದು ದುರಂತ ಪಾತ್ರಗಳ ಮೂಲಕವೇ. ನಿರ್ದೇಶಕ ಎಂ.ಆರ್.ವಿಠ್ಠಲ್ ತಮ್ಮ ’ಹಣ್ಣೆಲೆ ಚಿಗುರಿದಾಗ’ (1968) ಚಿತ್ರದ ’ಮಾಲತಿ’ ಪಾತ್ರಕ್ಕೆ ಕಲ್ಪನಾರನ್ನು ಆಯ್ಕೆ ಮಾಡಿಕೊಂಡಿದ್ದರು. ಕಲ್ಪನಾರ ಪ್ರತಿಭೆಯ ಬಗ್ಗೆ ಅರಿವಿದ್ದ ಅವರು ವಸ್ತ್ರಾಲಂಕಾರ, ವರ್ಣಾಲಂಕಾರದ ಬಗ್ಗೆ ಆಕೆಗೆ ಸಂಪೂರ್ಣ ಸ್ವಾತಂತ್ರ ನೀಡಿದ್ದರು. ಚಿತ್ರ ಯಶಸ್ವಿಯಾಗಿ ಕಲ್ಪನಾರ ಪಾತ್ರನಿರ್ವಹಣೆ ಪ್ರಶಂಸೆಗೆ ಪ್ರಾಪ್ತವಾಯಿತು.

ಚಿನ್ನದ ಗೊಂಬೆ ಚಿತ್ರದಲ್ಲಿ ಬಿ.ಜಯಾ, ಕಲ್ಪನ (ಫೋಟೋ: ಪ್ರಗತಿ ಅಶ್ವತ್ಥ ನಾರಾಯಣ)

ಆದರೆ, ’ಸಂಪ್ರದಾಯಸ್ಥರ ಮನೆತದಲ್ಲಿನ ತರುಣ ವಿಧವೆ ಹಾಗೆ ಕಾಣಿಸಿಕೊಳ್ಳುವುದು ಸಾಧ್ಯವಿಲ್ಲ’ ಎಂಬ ವಿವಾದದ ಬಿರುಗಾಳಿಯನ್ನೇ ಎಬ್ಬಿಸಿತು. ಈ ಟೀಕೆಯನ್ನು ಒಂದು ಸವಾಲಾಗಿ ಪರಿಗಣಿಸಿದ ಕಲ್ಪನಾ ಚಲನಚಿತ್ರ ಪತ್ರಿಕೆಯೊಂದಕ್ಕೆ ಸುದೀರ್ಘ ಲೇಖನವನ್ನೇ ಬರೆದರು. ಒಂದು ಪ್ರೌಢ ಪ್ರಬಂಧದಂತಿದ್ದ ಆ ಲೇಖನ ಕಲ್ಪನಾ ಅವರ ಅಧ್ಯಯನಶೀಲತೆ, ವಾದ-ವೈಖರಿ, ದಿಟ್ಟತನ ಮುಂತಾದವು ಟೀಕಾಕಾರರನ್ನು ಮೌನವಾಗಿಸಿತ್ತು. ಅಂದಿನ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಆಸಕ್ತಿಯಿಂದ ಚಿತ್ರವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಖ್ಯಾತ ಹಿಂದಿ ನಿರ್ದೇಶಕ, ನಿರ್ಮಾಪಕ ವಿ.ಶಾಂತಾರಾಂ, ’ನಾನು ನೋಡಿದ ಅತ್ಯುತ್ತಮ ಭಾರತೀಯ ಚಿತ್ರಗಳಲ್ಲಿ ಇದೂ ಒಂದು’ ಎಂದು ನುಡಿದಿದ್ದರು.

ವೇಶ್ಯೆಯೊಬ್ಬಳ ಮಗಳಾಗಿ ನಟಿಸಿದ ಕಲ್ಪನಾರ ’ಮುಕ್ತಿ’ ಚಿತ್ರವೂ ಅಪಾರ ಮನ್ನಣೆ ಪಡೆದುಕೊಂಡಿತು. ಲಂಡನ್ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಚಿತ್ರದ ಬಗ್ಗೆ ಅಲ್ಲಿನ ಪತ್ರಿಕೆಗಳು ಹೃದಯಸ್ಪರ್ಶಿ ವಿಮರ್ಶೆ ಬರೆದಿದ್ದವು. ಅಮೆರಿಕಾದಲ್ಲಿ ವಿದ್ಯಾರ್ಥಿಗಳಿಗೆಂದೇ ವಿಶೇಷವಾಗಿ ಪ್ರದರ್ಶಿಸಿದ 23 ಭಾರತೀಯ ಚಿತ್ರಗಳಲ್ಲಿ ಈ ಚಿತ್ರವೂ ಇತ್ತು ಎನ್ನುವುದು ಮತ್ತೊಂದು ಹೆಗ್ಗಳಿಕೆ. ಎನ್.ಲಕ್ಷ್ಮೀನಾರಾಯಣ ಅವರಂತಹ ಉತ್ಕೃಷ್ಟ ನಿರ್ದೇಶಕರ ಮನಸ್ಸಿನಲ್ಲಿ ನಾಯಕಿ ಪಾತ್ರವೆಂದರೆ ಅದು ಕಲ್ಪನಾ ಎನ್ನುವಷ್ಟರ ಮಟ್ಟಿಗೆ ಪ್ರಭಾವ ಬೀರಿದ ನಟಿಯಾಗಿದ್ದರು ಆಕೆ. ಲಕ್ಷ್ಮೀನಾರಾಯಣ ಅವರು ನಿರ್ದೇಶಿಸಿದ ಆರು ಚಿತ್ರಗಳಲ್ಲಿ ಮೂರು ಚಿತ್ರಗಳಲ್ಲಷ್ಟೇ ನಾಯಕಿ ಪಾತ್ರಗಳಿದ್ದುದು. ಈ ಮೂರೂ ಚಿತ್ರಗಳಿಗೆ ಕಲ್ಪನಾ ನಾಯಕಿಯಾಗಿದ್ದರು!

“ನಾ ಬಂದೆ, ನಾ ನೋಡ್ದೆ, ನಾ ಗೆದ್ದೆ…’ ಎನ್ನುತ್ತಲೇ ಪ್ರೇಕ್ಷಕರನ್ನು ದಟ್ಟವಾಗಿ ಸೆರೆ ಹಿಡಿದ ಚಿತ್ರ ’ಶರಪಂಜರ’. ಈ ಚಿತ್ರದ ಮೊದಲ ಪ್ರತಿ ಮದರಾಸಿನಲ್ಲಿ ಪ್ರದರ್ಶಿತವಾದಾಗ ಅನೇಕ ಹಿಂದಿ, ತಮಿಳು, ತೆಲುಗು ಕಲಾವಿದರು ಹಾಗೂ ತಂತ್ರಜ್ಞರಿಂದ ಚಿತ್ರಮಂದಿರ ಭರ್ತಿಯಾಗಿತ್ತು. ಚಿತ್ರ ವೀಕ್ಷಿಸಿದ ಹಿಂದಿ ತಾರೆ ಶರ್ಮಿಳಾ ಟ್ಯಾಗೋರ್, ’ಕಲ್ಪನಾರ ಪಾತ್ರವನ್ನು ಅಷ್ಟೇ ಚೆನ್ನಾಗಿ ಮಾಡಲು ನನ್ನಿಂದ ಆದೀತೋ, ಇಲ್ಲವೋ?’ ಎಂದು ಉದ್ಘರಿಸಿದ್ದರು. ನೇರ, ನಿಷ್ಠುರ ವ್ಯಕ್ತಿತ್ವದ ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ.ಶಿವರಾಮ ಕಾರಂತರು ಯಾರನ್ನೂ ಸುಮ್ಮನೆ ಹೊಗಳುವವರಲ್ಲ. ಅಂತಹ ಕಾರಂತರು, ’ಕೋಟಿ ಚೆನ್ನಯ’ ತುಳು ಚಿತ್ರದಲ್ಲಿನ ಕಲ್ಪನಾರ ಪಾತ್ರವನ್ನು ಮೆಚ್ಚಿಕೊಂಡು ಕಲ್ಪನಾರಿಗೊಂದು ಸುದೀರ್ಘ ಪತ್ರ ಬರೆದಿದ್ದರು. ಚಿತ್ರವೊಂದನ್ನು ನಿರ್ದೇಶಿಸುತ್ತಿರುವುದಾಗಿಯೂ, ತಾವು ಅದರಲ್ಲಿ ಮುಖ್ಯ ಪಾತ್ರ ವಹಿಸಲು ಸಾಧ್ಯವೇ?’ ಎಂದು ಪತ್ರದಲ್ಲಿ ಬರೆದಿದ್ದರಂತೆ. ಕಾರಂತರ ಕರೆಗೆ ಮನ್ನಣೆ ನೀಡಿದ ಕಲ್ಪನಾ, ಅವರು ನಿರ್ದೇಶಿಸಿದ ಏಕೈಕ ವಾಕ್ಚಿತ್ರ ’ಮಲಯ ಮಕ್ಕಳು’ಗೆ ನಾಯಕಿಯಾದರು.

ಹೀಗೆ, ನಾಡಿನ ಹಾಗೂ ದೇಶ-ವಿದೇಶಗಳಲ್ಲಿಯೂ ತಮ್ಮ ಪಾತ್ರಗಳಿಗೆ ಮನ್ನಣೆ ಪಡೆದ ನಟಿ ಬದುಕಿಗೆ ವಿದಾಯ ಹೇಳಿದಾಗ ಅವರಿಗೆ ಮೂವತ್ತಾರು ವರ್ಷವಷ್ಟೆ. 1963ರಲ್ಲಿ ಚಿತ್ರಜಗತ್ತನ್ನು ಪ್ರವೇಶಿಸಿ 1978ರವರೆಗೆ ಹದಿನೈದು ವರ್ಷಗಳಲ್ಲಿ 51 ನಿರ್ದೇಶಕರ 78 ಚಿತ್ರಗಳಲ್ಲಿ ನಟಿಸಿದರು. ಈ ಪಟ್ಟಿಯಲ್ಲಿ ತಮಿಳು, ತೆಲುಗು, ಮಲಯಾಳಂ, ತುಳು ಚಿತ್ರಗಳೂ ಸೇರಿವೆ. ಪಂಚಭಾಷೆಗಳಲ್ಲಿ ಅಭಿನಯಿಸಿದ ನಟಿ ಬೆಳ್ಳಿತೆರೆಯ ಧ್ರುವತಾರೆಯಾಗಿ ಮಿಂಚಿದರು.

***


ಇದನ್ನೂ ಓದಿ: ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ‘ಅಮ್ಮ’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...