Homeಮುಖಪುಟಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ಹಣ್ಣೆಲೆ ಚಿಗುರಿದಾಗ, ಮುಕ್ತಿ, ಶರಪಂಜರ, ಮಿನುಗುತಾರೆ ಚಿತ್ರಗಳ ಮೂಲಕ ಗಮನ ಸೆಳೆದ ನಟಿ ಕಲ್ಪನಾರವರು ಕಣ್ಮರೆಯಾಗಿ ಇಂದಿಗೆ 41 ವರ್ಷ. ಆ ನೆನಪಿನಲ್ಲಿ ಅವರ ಕುರಿತು ಒಂದಿಷ್ಟು...

- Advertisement -
- Advertisement -

ಅಪರೂಪದ ಪಾತ್ರಗಳ ಮೂಲಕ ಕನ್ನಡ ನಾಡಿನಾಚೆಗೂ ತಮ್ಮ ಛಾಪು ಮೂಡಿಸಿದ ಮೇರು ತಾರೆ ಕಲ್ಪನಾ. ಅವರು ನಮ್ಮನ್ನಗಲಿ ಈ ಹೊತ್ತಿಗೆ (ಮೇ 12) ನಲವತ್ತೊಂದು ವರ್ಷ.

***

“ನನ್ನ ಇದುವರೆಗಿನ ಈ ಚಿತ್ರರಂಗದ ಅನುಭವವನ್ನು ಯಾವುದಾದರೊಂದು ಶಿಲ್ಪದಲ್ಲಿ ಕಡೆಯಬೇಕೆಂಬ ಮಹದಾಸೆ ಇತ್ತು. ಆ ಯೋಗ್ಯತೆಯನ್ನು ಕಲ್ಪನಾಳಲ್ಲಿ ಗುರುತಿಸಿದೆ. ಆಕೆಗೆ ನನ್ನ ಶಕ್ತಿಯನ್ನು ಧಾರೆ ಎರೆದೆ. ಅವಳು ಅದನ್ನು ಪ್ರೀತಿ, ಭಕ್ತಿಯಿಂದ ಸ್ವೀಕರಿಸಿ ನನ್ನ ಕಲ್ಪನೆಯ ಶಿಲ್ಪವಾಗಿದ್ದಾಳೆ. ಅಲ್ಲದೆ ನನ್ನ ಬಗ್ಗೆ ಅತ್ಯಂತ ಕೃತಜ್ಞತಾ ಭಾವ ಇರಿಸಿದ್ದಾಳೆ’ ಎಂದು ಕಲ್ಪನಾ ಕುರಿತಾಗಿ ಹೇಳಿದ್ದರು ನಿರ್ದೇಶಕ ಪುಟ್ಟಣ್ಣ ಕಣಗಾಲ್. ಕನ್ನಡ ಚಿತ್ರರಂಗ ಕಂಡ ಪ್ರಮುಖ ನಾಯಕನಟಿ ಕಲ್ಪನಾ ಕಣ್ಮರೆಯಾಗಿ (1979, ಮೇ 12) ಇಂದಿಗೆ 41 ವರ್ಷಗಳು ಸಂದವು.

‘ಸಾಕುಮಗಳು’ (1963) ಚಿತ್ರದೊಂದಿಗೆ ಬೆಳ್ಳಿತೆರೆ ಪ್ರವೇಶಿಸಿದ ಕಲ್ಪನಾ ಸುಮಾರು ಒಂದು ದಶಕಗಳ ಕಾಲ ಕನ್ನಡ ಚಿತ್ರಜಗತ್ತಿನಲ್ಲಿ ರಾರಾಜಿಸಿದರು. ಏಕಮೇವಾದ್ವಿತೀಯ ನಟಿ ಎನಿಸಿಕೊಂಡ ನಟಿ ’ಮಿನುಗುತಾರೆ’ಯಾಗಿದ್ದು ದುರಂತ ಪಾತ್ರಗಳ ಮೂಲಕವೇ. ನಿರ್ದೇಶಕ ಎಂ.ಆರ್.ವಿಠ್ಠಲ್ ತಮ್ಮ ’ಹಣ್ಣೆಲೆ ಚಿಗುರಿದಾಗ’ (1968) ಚಿತ್ರದ ’ಮಾಲತಿ’ ಪಾತ್ರಕ್ಕೆ ಕಲ್ಪನಾರನ್ನು ಆಯ್ಕೆ ಮಾಡಿಕೊಂಡಿದ್ದರು. ಕಲ್ಪನಾರ ಪ್ರತಿಭೆಯ ಬಗ್ಗೆ ಅರಿವಿದ್ದ ಅವರು ವಸ್ತ್ರಾಲಂಕಾರ, ವರ್ಣಾಲಂಕಾರದ ಬಗ್ಗೆ ಆಕೆಗೆ ಸಂಪೂರ್ಣ ಸ್ವಾತಂತ್ರ ನೀಡಿದ್ದರು. ಚಿತ್ರ ಯಶಸ್ವಿಯಾಗಿ ಕಲ್ಪನಾರ ಪಾತ್ರನಿರ್ವಹಣೆ ಪ್ರಶಂಸೆಗೆ ಪ್ರಾಪ್ತವಾಯಿತು.

ಚಿನ್ನದ ಗೊಂಬೆ ಚಿತ್ರದಲ್ಲಿ ಬಿ.ಜಯಾ, ಕಲ್ಪನ (ಫೋಟೋ: ಪ್ರಗತಿ ಅಶ್ವತ್ಥ ನಾರಾಯಣ)

ಆದರೆ, ’ಸಂಪ್ರದಾಯಸ್ಥರ ಮನೆತದಲ್ಲಿನ ತರುಣ ವಿಧವೆ ಹಾಗೆ ಕಾಣಿಸಿಕೊಳ್ಳುವುದು ಸಾಧ್ಯವಿಲ್ಲ’ ಎಂಬ ವಿವಾದದ ಬಿರುಗಾಳಿಯನ್ನೇ ಎಬ್ಬಿಸಿತು. ಈ ಟೀಕೆಯನ್ನು ಒಂದು ಸವಾಲಾಗಿ ಪರಿಗಣಿಸಿದ ಕಲ್ಪನಾ ಚಲನಚಿತ್ರ ಪತ್ರಿಕೆಯೊಂದಕ್ಕೆ ಸುದೀರ್ಘ ಲೇಖನವನ್ನೇ ಬರೆದರು. ಒಂದು ಪ್ರೌಢ ಪ್ರಬಂಧದಂತಿದ್ದ ಆ ಲೇಖನ ಕಲ್ಪನಾ ಅವರ ಅಧ್ಯಯನಶೀಲತೆ, ವಾದ-ವೈಖರಿ, ದಿಟ್ಟತನ ಮುಂತಾದವು ಟೀಕಾಕಾರರನ್ನು ಮೌನವಾಗಿಸಿತ್ತು. ಅಂದಿನ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಆಸಕ್ತಿಯಿಂದ ಚಿತ್ರವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಖ್ಯಾತ ಹಿಂದಿ ನಿರ್ದೇಶಕ, ನಿರ್ಮಾಪಕ ವಿ.ಶಾಂತಾರಾಂ, ’ನಾನು ನೋಡಿದ ಅತ್ಯುತ್ತಮ ಭಾರತೀಯ ಚಿತ್ರಗಳಲ್ಲಿ ಇದೂ ಒಂದು’ ಎಂದು ನುಡಿದಿದ್ದರು.

ವೇಶ್ಯೆಯೊಬ್ಬಳ ಮಗಳಾಗಿ ನಟಿಸಿದ ಕಲ್ಪನಾರ ’ಮುಕ್ತಿ’ ಚಿತ್ರವೂ ಅಪಾರ ಮನ್ನಣೆ ಪಡೆದುಕೊಂಡಿತು. ಲಂಡನ್ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಚಿತ್ರದ ಬಗ್ಗೆ ಅಲ್ಲಿನ ಪತ್ರಿಕೆಗಳು ಹೃದಯಸ್ಪರ್ಶಿ ವಿಮರ್ಶೆ ಬರೆದಿದ್ದವು. ಅಮೆರಿಕಾದಲ್ಲಿ ವಿದ್ಯಾರ್ಥಿಗಳಿಗೆಂದೇ ವಿಶೇಷವಾಗಿ ಪ್ರದರ್ಶಿಸಿದ 23 ಭಾರತೀಯ ಚಿತ್ರಗಳಲ್ಲಿ ಈ ಚಿತ್ರವೂ ಇತ್ತು ಎನ್ನುವುದು ಮತ್ತೊಂದು ಹೆಗ್ಗಳಿಕೆ. ಎನ್.ಲಕ್ಷ್ಮೀನಾರಾಯಣ ಅವರಂತಹ ಉತ್ಕೃಷ್ಟ ನಿರ್ದೇಶಕರ ಮನಸ್ಸಿನಲ್ಲಿ ನಾಯಕಿ ಪಾತ್ರವೆಂದರೆ ಅದು ಕಲ್ಪನಾ ಎನ್ನುವಷ್ಟರ ಮಟ್ಟಿಗೆ ಪ್ರಭಾವ ಬೀರಿದ ನಟಿಯಾಗಿದ್ದರು ಆಕೆ. ಲಕ್ಷ್ಮೀನಾರಾಯಣ ಅವರು ನಿರ್ದೇಶಿಸಿದ ಆರು ಚಿತ್ರಗಳಲ್ಲಿ ಮೂರು ಚಿತ್ರಗಳಲ್ಲಷ್ಟೇ ನಾಯಕಿ ಪಾತ್ರಗಳಿದ್ದುದು. ಈ ಮೂರೂ ಚಿತ್ರಗಳಿಗೆ ಕಲ್ಪನಾ ನಾಯಕಿಯಾಗಿದ್ದರು!

“ನಾ ಬಂದೆ, ನಾ ನೋಡ್ದೆ, ನಾ ಗೆದ್ದೆ…’ ಎನ್ನುತ್ತಲೇ ಪ್ರೇಕ್ಷಕರನ್ನು ದಟ್ಟವಾಗಿ ಸೆರೆ ಹಿಡಿದ ಚಿತ್ರ ’ಶರಪಂಜರ’. ಈ ಚಿತ್ರದ ಮೊದಲ ಪ್ರತಿ ಮದರಾಸಿನಲ್ಲಿ ಪ್ರದರ್ಶಿತವಾದಾಗ ಅನೇಕ ಹಿಂದಿ, ತಮಿಳು, ತೆಲುಗು ಕಲಾವಿದರು ಹಾಗೂ ತಂತ್ರಜ್ಞರಿಂದ ಚಿತ್ರಮಂದಿರ ಭರ್ತಿಯಾಗಿತ್ತು. ಚಿತ್ರ ವೀಕ್ಷಿಸಿದ ಹಿಂದಿ ತಾರೆ ಶರ್ಮಿಳಾ ಟ್ಯಾಗೋರ್, ’ಕಲ್ಪನಾರ ಪಾತ್ರವನ್ನು ಅಷ್ಟೇ ಚೆನ್ನಾಗಿ ಮಾಡಲು ನನ್ನಿಂದ ಆದೀತೋ, ಇಲ್ಲವೋ?’ ಎಂದು ಉದ್ಘರಿಸಿದ್ದರು. ನೇರ, ನಿಷ್ಠುರ ವ್ಯಕ್ತಿತ್ವದ ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ.ಶಿವರಾಮ ಕಾರಂತರು ಯಾರನ್ನೂ ಸುಮ್ಮನೆ ಹೊಗಳುವವರಲ್ಲ. ಅಂತಹ ಕಾರಂತರು, ’ಕೋಟಿ ಚೆನ್ನಯ’ ತುಳು ಚಿತ್ರದಲ್ಲಿನ ಕಲ್ಪನಾರ ಪಾತ್ರವನ್ನು ಮೆಚ್ಚಿಕೊಂಡು ಕಲ್ಪನಾರಿಗೊಂದು ಸುದೀರ್ಘ ಪತ್ರ ಬರೆದಿದ್ದರು. ಚಿತ್ರವೊಂದನ್ನು ನಿರ್ದೇಶಿಸುತ್ತಿರುವುದಾಗಿಯೂ, ತಾವು ಅದರಲ್ಲಿ ಮುಖ್ಯ ಪಾತ್ರ ವಹಿಸಲು ಸಾಧ್ಯವೇ?’ ಎಂದು ಪತ್ರದಲ್ಲಿ ಬರೆದಿದ್ದರಂತೆ. ಕಾರಂತರ ಕರೆಗೆ ಮನ್ನಣೆ ನೀಡಿದ ಕಲ್ಪನಾ, ಅವರು ನಿರ್ದೇಶಿಸಿದ ಏಕೈಕ ವಾಕ್ಚಿತ್ರ ’ಮಲಯ ಮಕ್ಕಳು’ಗೆ ನಾಯಕಿಯಾದರು.

ಹೀಗೆ, ನಾಡಿನ ಹಾಗೂ ದೇಶ-ವಿದೇಶಗಳಲ್ಲಿಯೂ ತಮ್ಮ ಪಾತ್ರಗಳಿಗೆ ಮನ್ನಣೆ ಪಡೆದ ನಟಿ ಬದುಕಿಗೆ ವಿದಾಯ ಹೇಳಿದಾಗ ಅವರಿಗೆ ಮೂವತ್ತಾರು ವರ್ಷವಷ್ಟೆ. 1963ರಲ್ಲಿ ಚಿತ್ರಜಗತ್ತನ್ನು ಪ್ರವೇಶಿಸಿ 1978ರವರೆಗೆ ಹದಿನೈದು ವರ್ಷಗಳಲ್ಲಿ 51 ನಿರ್ದೇಶಕರ 78 ಚಿತ್ರಗಳಲ್ಲಿ ನಟಿಸಿದರು. ಈ ಪಟ್ಟಿಯಲ್ಲಿ ತಮಿಳು, ತೆಲುಗು, ಮಲಯಾಳಂ, ತುಳು ಚಿತ್ರಗಳೂ ಸೇರಿವೆ. ಪಂಚಭಾಷೆಗಳಲ್ಲಿ ಅಭಿನಯಿಸಿದ ನಟಿ ಬೆಳ್ಳಿತೆರೆಯ ಧ್ರುವತಾರೆಯಾಗಿ ಮಿಂಚಿದರು.

***


ಇದನ್ನೂ ಓದಿ: ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ‘ಅಮ್ಮ’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...