Homeಮುಖಪುಟಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ಹಣ್ಣೆಲೆ ಚಿಗುರಿದಾಗ, ಮುಕ್ತಿ, ಶರಪಂಜರ, ಮಿನುಗುತಾರೆ ಚಿತ್ರಗಳ ಮೂಲಕ ಗಮನ ಸೆಳೆದ ನಟಿ ಕಲ್ಪನಾರವರು ಕಣ್ಮರೆಯಾಗಿ ಇಂದಿಗೆ 41 ವರ್ಷ. ಆ ನೆನಪಿನಲ್ಲಿ ಅವರ ಕುರಿತು ಒಂದಿಷ್ಟು...

- Advertisement -
- Advertisement -

ಅಪರೂಪದ ಪಾತ್ರಗಳ ಮೂಲಕ ಕನ್ನಡ ನಾಡಿನಾಚೆಗೂ ತಮ್ಮ ಛಾಪು ಮೂಡಿಸಿದ ಮೇರು ತಾರೆ ಕಲ್ಪನಾ. ಅವರು ನಮ್ಮನ್ನಗಲಿ ಈ ಹೊತ್ತಿಗೆ (ಮೇ 12) ನಲವತ್ತೊಂದು ವರ್ಷ.

***

“ನನ್ನ ಇದುವರೆಗಿನ ಈ ಚಿತ್ರರಂಗದ ಅನುಭವವನ್ನು ಯಾವುದಾದರೊಂದು ಶಿಲ್ಪದಲ್ಲಿ ಕಡೆಯಬೇಕೆಂಬ ಮಹದಾಸೆ ಇತ್ತು. ಆ ಯೋಗ್ಯತೆಯನ್ನು ಕಲ್ಪನಾಳಲ್ಲಿ ಗುರುತಿಸಿದೆ. ಆಕೆಗೆ ನನ್ನ ಶಕ್ತಿಯನ್ನು ಧಾರೆ ಎರೆದೆ. ಅವಳು ಅದನ್ನು ಪ್ರೀತಿ, ಭಕ್ತಿಯಿಂದ ಸ್ವೀಕರಿಸಿ ನನ್ನ ಕಲ್ಪನೆಯ ಶಿಲ್ಪವಾಗಿದ್ದಾಳೆ. ಅಲ್ಲದೆ ನನ್ನ ಬಗ್ಗೆ ಅತ್ಯಂತ ಕೃತಜ್ಞತಾ ಭಾವ ಇರಿಸಿದ್ದಾಳೆ’ ಎಂದು ಕಲ್ಪನಾ ಕುರಿತಾಗಿ ಹೇಳಿದ್ದರು ನಿರ್ದೇಶಕ ಪುಟ್ಟಣ್ಣ ಕಣಗಾಲ್. ಕನ್ನಡ ಚಿತ್ರರಂಗ ಕಂಡ ಪ್ರಮುಖ ನಾಯಕನಟಿ ಕಲ್ಪನಾ ಕಣ್ಮರೆಯಾಗಿ (1979, ಮೇ 12) ಇಂದಿಗೆ 41 ವರ್ಷಗಳು ಸಂದವು.

‘ಸಾಕುಮಗಳು’ (1963) ಚಿತ್ರದೊಂದಿಗೆ ಬೆಳ್ಳಿತೆರೆ ಪ್ರವೇಶಿಸಿದ ಕಲ್ಪನಾ ಸುಮಾರು ಒಂದು ದಶಕಗಳ ಕಾಲ ಕನ್ನಡ ಚಿತ್ರಜಗತ್ತಿನಲ್ಲಿ ರಾರಾಜಿಸಿದರು. ಏಕಮೇವಾದ್ವಿತೀಯ ನಟಿ ಎನಿಸಿಕೊಂಡ ನಟಿ ’ಮಿನುಗುತಾರೆ’ಯಾಗಿದ್ದು ದುರಂತ ಪಾತ್ರಗಳ ಮೂಲಕವೇ. ನಿರ್ದೇಶಕ ಎಂ.ಆರ್.ವಿಠ್ಠಲ್ ತಮ್ಮ ’ಹಣ್ಣೆಲೆ ಚಿಗುರಿದಾಗ’ (1968) ಚಿತ್ರದ ’ಮಾಲತಿ’ ಪಾತ್ರಕ್ಕೆ ಕಲ್ಪನಾರನ್ನು ಆಯ್ಕೆ ಮಾಡಿಕೊಂಡಿದ್ದರು. ಕಲ್ಪನಾರ ಪ್ರತಿಭೆಯ ಬಗ್ಗೆ ಅರಿವಿದ್ದ ಅವರು ವಸ್ತ್ರಾಲಂಕಾರ, ವರ್ಣಾಲಂಕಾರದ ಬಗ್ಗೆ ಆಕೆಗೆ ಸಂಪೂರ್ಣ ಸ್ವಾತಂತ್ರ ನೀಡಿದ್ದರು. ಚಿತ್ರ ಯಶಸ್ವಿಯಾಗಿ ಕಲ್ಪನಾರ ಪಾತ್ರನಿರ್ವಹಣೆ ಪ್ರಶಂಸೆಗೆ ಪ್ರಾಪ್ತವಾಯಿತು.

ಚಿನ್ನದ ಗೊಂಬೆ ಚಿತ್ರದಲ್ಲಿ ಬಿ.ಜಯಾ, ಕಲ್ಪನ (ಫೋಟೋ: ಪ್ರಗತಿ ಅಶ್ವತ್ಥ ನಾರಾಯಣ)

ಆದರೆ, ’ಸಂಪ್ರದಾಯಸ್ಥರ ಮನೆತದಲ್ಲಿನ ತರುಣ ವಿಧವೆ ಹಾಗೆ ಕಾಣಿಸಿಕೊಳ್ಳುವುದು ಸಾಧ್ಯವಿಲ್ಲ’ ಎಂಬ ವಿವಾದದ ಬಿರುಗಾಳಿಯನ್ನೇ ಎಬ್ಬಿಸಿತು. ಈ ಟೀಕೆಯನ್ನು ಒಂದು ಸವಾಲಾಗಿ ಪರಿಗಣಿಸಿದ ಕಲ್ಪನಾ ಚಲನಚಿತ್ರ ಪತ್ರಿಕೆಯೊಂದಕ್ಕೆ ಸುದೀರ್ಘ ಲೇಖನವನ್ನೇ ಬರೆದರು. ಒಂದು ಪ್ರೌಢ ಪ್ರಬಂಧದಂತಿದ್ದ ಆ ಲೇಖನ ಕಲ್ಪನಾ ಅವರ ಅಧ್ಯಯನಶೀಲತೆ, ವಾದ-ವೈಖರಿ, ದಿಟ್ಟತನ ಮುಂತಾದವು ಟೀಕಾಕಾರರನ್ನು ಮೌನವಾಗಿಸಿತ್ತು. ಅಂದಿನ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಆಸಕ್ತಿಯಿಂದ ಚಿತ್ರವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಖ್ಯಾತ ಹಿಂದಿ ನಿರ್ದೇಶಕ, ನಿರ್ಮಾಪಕ ವಿ.ಶಾಂತಾರಾಂ, ’ನಾನು ನೋಡಿದ ಅತ್ಯುತ್ತಮ ಭಾರತೀಯ ಚಿತ್ರಗಳಲ್ಲಿ ಇದೂ ಒಂದು’ ಎಂದು ನುಡಿದಿದ್ದರು.

ವೇಶ್ಯೆಯೊಬ್ಬಳ ಮಗಳಾಗಿ ನಟಿಸಿದ ಕಲ್ಪನಾರ ’ಮುಕ್ತಿ’ ಚಿತ್ರವೂ ಅಪಾರ ಮನ್ನಣೆ ಪಡೆದುಕೊಂಡಿತು. ಲಂಡನ್ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಚಿತ್ರದ ಬಗ್ಗೆ ಅಲ್ಲಿನ ಪತ್ರಿಕೆಗಳು ಹೃದಯಸ್ಪರ್ಶಿ ವಿಮರ್ಶೆ ಬರೆದಿದ್ದವು. ಅಮೆರಿಕಾದಲ್ಲಿ ವಿದ್ಯಾರ್ಥಿಗಳಿಗೆಂದೇ ವಿಶೇಷವಾಗಿ ಪ್ರದರ್ಶಿಸಿದ 23 ಭಾರತೀಯ ಚಿತ್ರಗಳಲ್ಲಿ ಈ ಚಿತ್ರವೂ ಇತ್ತು ಎನ್ನುವುದು ಮತ್ತೊಂದು ಹೆಗ್ಗಳಿಕೆ. ಎನ್.ಲಕ್ಷ್ಮೀನಾರಾಯಣ ಅವರಂತಹ ಉತ್ಕೃಷ್ಟ ನಿರ್ದೇಶಕರ ಮನಸ್ಸಿನಲ್ಲಿ ನಾಯಕಿ ಪಾತ್ರವೆಂದರೆ ಅದು ಕಲ್ಪನಾ ಎನ್ನುವಷ್ಟರ ಮಟ್ಟಿಗೆ ಪ್ರಭಾವ ಬೀರಿದ ನಟಿಯಾಗಿದ್ದರು ಆಕೆ. ಲಕ್ಷ್ಮೀನಾರಾಯಣ ಅವರು ನಿರ್ದೇಶಿಸಿದ ಆರು ಚಿತ್ರಗಳಲ್ಲಿ ಮೂರು ಚಿತ್ರಗಳಲ್ಲಷ್ಟೇ ನಾಯಕಿ ಪಾತ್ರಗಳಿದ್ದುದು. ಈ ಮೂರೂ ಚಿತ್ರಗಳಿಗೆ ಕಲ್ಪನಾ ನಾಯಕಿಯಾಗಿದ್ದರು!

“ನಾ ಬಂದೆ, ನಾ ನೋಡ್ದೆ, ನಾ ಗೆದ್ದೆ…’ ಎನ್ನುತ್ತಲೇ ಪ್ರೇಕ್ಷಕರನ್ನು ದಟ್ಟವಾಗಿ ಸೆರೆ ಹಿಡಿದ ಚಿತ್ರ ’ಶರಪಂಜರ’. ಈ ಚಿತ್ರದ ಮೊದಲ ಪ್ರತಿ ಮದರಾಸಿನಲ್ಲಿ ಪ್ರದರ್ಶಿತವಾದಾಗ ಅನೇಕ ಹಿಂದಿ, ತಮಿಳು, ತೆಲುಗು ಕಲಾವಿದರು ಹಾಗೂ ತಂತ್ರಜ್ಞರಿಂದ ಚಿತ್ರಮಂದಿರ ಭರ್ತಿಯಾಗಿತ್ತು. ಚಿತ್ರ ವೀಕ್ಷಿಸಿದ ಹಿಂದಿ ತಾರೆ ಶರ್ಮಿಳಾ ಟ್ಯಾಗೋರ್, ’ಕಲ್ಪನಾರ ಪಾತ್ರವನ್ನು ಅಷ್ಟೇ ಚೆನ್ನಾಗಿ ಮಾಡಲು ನನ್ನಿಂದ ಆದೀತೋ, ಇಲ್ಲವೋ?’ ಎಂದು ಉದ್ಘರಿಸಿದ್ದರು. ನೇರ, ನಿಷ್ಠುರ ವ್ಯಕ್ತಿತ್ವದ ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ.ಶಿವರಾಮ ಕಾರಂತರು ಯಾರನ್ನೂ ಸುಮ್ಮನೆ ಹೊಗಳುವವರಲ್ಲ. ಅಂತಹ ಕಾರಂತರು, ’ಕೋಟಿ ಚೆನ್ನಯ’ ತುಳು ಚಿತ್ರದಲ್ಲಿನ ಕಲ್ಪನಾರ ಪಾತ್ರವನ್ನು ಮೆಚ್ಚಿಕೊಂಡು ಕಲ್ಪನಾರಿಗೊಂದು ಸುದೀರ್ಘ ಪತ್ರ ಬರೆದಿದ್ದರು. ಚಿತ್ರವೊಂದನ್ನು ನಿರ್ದೇಶಿಸುತ್ತಿರುವುದಾಗಿಯೂ, ತಾವು ಅದರಲ್ಲಿ ಮುಖ್ಯ ಪಾತ್ರ ವಹಿಸಲು ಸಾಧ್ಯವೇ?’ ಎಂದು ಪತ್ರದಲ್ಲಿ ಬರೆದಿದ್ದರಂತೆ. ಕಾರಂತರ ಕರೆಗೆ ಮನ್ನಣೆ ನೀಡಿದ ಕಲ್ಪನಾ, ಅವರು ನಿರ್ದೇಶಿಸಿದ ಏಕೈಕ ವಾಕ್ಚಿತ್ರ ’ಮಲಯ ಮಕ್ಕಳು’ಗೆ ನಾಯಕಿಯಾದರು.

ಹೀಗೆ, ನಾಡಿನ ಹಾಗೂ ದೇಶ-ವಿದೇಶಗಳಲ್ಲಿಯೂ ತಮ್ಮ ಪಾತ್ರಗಳಿಗೆ ಮನ್ನಣೆ ಪಡೆದ ನಟಿ ಬದುಕಿಗೆ ವಿದಾಯ ಹೇಳಿದಾಗ ಅವರಿಗೆ ಮೂವತ್ತಾರು ವರ್ಷವಷ್ಟೆ. 1963ರಲ್ಲಿ ಚಿತ್ರಜಗತ್ತನ್ನು ಪ್ರವೇಶಿಸಿ 1978ರವರೆಗೆ ಹದಿನೈದು ವರ್ಷಗಳಲ್ಲಿ 51 ನಿರ್ದೇಶಕರ 78 ಚಿತ್ರಗಳಲ್ಲಿ ನಟಿಸಿದರು. ಈ ಪಟ್ಟಿಯಲ್ಲಿ ತಮಿಳು, ತೆಲುಗು, ಮಲಯಾಳಂ, ತುಳು ಚಿತ್ರಗಳೂ ಸೇರಿವೆ. ಪಂಚಭಾಷೆಗಳಲ್ಲಿ ಅಭಿನಯಿಸಿದ ನಟಿ ಬೆಳ್ಳಿತೆರೆಯ ಧ್ರುವತಾರೆಯಾಗಿ ಮಿಂಚಿದರು.

***


ಇದನ್ನೂ ಓದಿ: ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ‘ಅಮ್ಮ’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...