Homeಮುಖಪುಟಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ಹಣ್ಣೆಲೆ ಚಿಗುರಿದಾಗ, ಮುಕ್ತಿ, ಶರಪಂಜರ, ಮಿನುಗುತಾರೆ ಚಿತ್ರಗಳ ಮೂಲಕ ಗಮನ ಸೆಳೆದ ನಟಿ ಕಲ್ಪನಾರವರು ಕಣ್ಮರೆಯಾಗಿ ಇಂದಿಗೆ 41 ವರ್ಷ. ಆ ನೆನಪಿನಲ್ಲಿ ಅವರ ಕುರಿತು ಒಂದಿಷ್ಟು...

- Advertisement -
- Advertisement -

ಅಪರೂಪದ ಪಾತ್ರಗಳ ಮೂಲಕ ಕನ್ನಡ ನಾಡಿನಾಚೆಗೂ ತಮ್ಮ ಛಾಪು ಮೂಡಿಸಿದ ಮೇರು ತಾರೆ ಕಲ್ಪನಾ. ಅವರು ನಮ್ಮನ್ನಗಲಿ ಈ ಹೊತ್ತಿಗೆ (ಮೇ 12) ನಲವತ್ತೊಂದು ವರ್ಷ.

***

“ನನ್ನ ಇದುವರೆಗಿನ ಈ ಚಿತ್ರರಂಗದ ಅನುಭವವನ್ನು ಯಾವುದಾದರೊಂದು ಶಿಲ್ಪದಲ್ಲಿ ಕಡೆಯಬೇಕೆಂಬ ಮಹದಾಸೆ ಇತ್ತು. ಆ ಯೋಗ್ಯತೆಯನ್ನು ಕಲ್ಪನಾಳಲ್ಲಿ ಗುರುತಿಸಿದೆ. ಆಕೆಗೆ ನನ್ನ ಶಕ್ತಿಯನ್ನು ಧಾರೆ ಎರೆದೆ. ಅವಳು ಅದನ್ನು ಪ್ರೀತಿ, ಭಕ್ತಿಯಿಂದ ಸ್ವೀಕರಿಸಿ ನನ್ನ ಕಲ್ಪನೆಯ ಶಿಲ್ಪವಾಗಿದ್ದಾಳೆ. ಅಲ್ಲದೆ ನನ್ನ ಬಗ್ಗೆ ಅತ್ಯಂತ ಕೃತಜ್ಞತಾ ಭಾವ ಇರಿಸಿದ್ದಾಳೆ’ ಎಂದು ಕಲ್ಪನಾ ಕುರಿತಾಗಿ ಹೇಳಿದ್ದರು ನಿರ್ದೇಶಕ ಪುಟ್ಟಣ್ಣ ಕಣಗಾಲ್. ಕನ್ನಡ ಚಿತ್ರರಂಗ ಕಂಡ ಪ್ರಮುಖ ನಾಯಕನಟಿ ಕಲ್ಪನಾ ಕಣ್ಮರೆಯಾಗಿ (1979, ಮೇ 12) ಇಂದಿಗೆ 41 ವರ್ಷಗಳು ಸಂದವು.

‘ಸಾಕುಮಗಳು’ (1963) ಚಿತ್ರದೊಂದಿಗೆ ಬೆಳ್ಳಿತೆರೆ ಪ್ರವೇಶಿಸಿದ ಕಲ್ಪನಾ ಸುಮಾರು ಒಂದು ದಶಕಗಳ ಕಾಲ ಕನ್ನಡ ಚಿತ್ರಜಗತ್ತಿನಲ್ಲಿ ರಾರಾಜಿಸಿದರು. ಏಕಮೇವಾದ್ವಿತೀಯ ನಟಿ ಎನಿಸಿಕೊಂಡ ನಟಿ ’ಮಿನುಗುತಾರೆ’ಯಾಗಿದ್ದು ದುರಂತ ಪಾತ್ರಗಳ ಮೂಲಕವೇ. ನಿರ್ದೇಶಕ ಎಂ.ಆರ್.ವಿಠ್ಠಲ್ ತಮ್ಮ ’ಹಣ್ಣೆಲೆ ಚಿಗುರಿದಾಗ’ (1968) ಚಿತ್ರದ ’ಮಾಲತಿ’ ಪಾತ್ರಕ್ಕೆ ಕಲ್ಪನಾರನ್ನು ಆಯ್ಕೆ ಮಾಡಿಕೊಂಡಿದ್ದರು. ಕಲ್ಪನಾರ ಪ್ರತಿಭೆಯ ಬಗ್ಗೆ ಅರಿವಿದ್ದ ಅವರು ವಸ್ತ್ರಾಲಂಕಾರ, ವರ್ಣಾಲಂಕಾರದ ಬಗ್ಗೆ ಆಕೆಗೆ ಸಂಪೂರ್ಣ ಸ್ವಾತಂತ್ರ ನೀಡಿದ್ದರು. ಚಿತ್ರ ಯಶಸ್ವಿಯಾಗಿ ಕಲ್ಪನಾರ ಪಾತ್ರನಿರ್ವಹಣೆ ಪ್ರಶಂಸೆಗೆ ಪ್ರಾಪ್ತವಾಯಿತು.

ಚಿನ್ನದ ಗೊಂಬೆ ಚಿತ್ರದಲ್ಲಿ ಬಿ.ಜಯಾ, ಕಲ್ಪನ (ಫೋಟೋ: ಪ್ರಗತಿ ಅಶ್ವತ್ಥ ನಾರಾಯಣ)

ಆದರೆ, ’ಸಂಪ್ರದಾಯಸ್ಥರ ಮನೆತದಲ್ಲಿನ ತರುಣ ವಿಧವೆ ಹಾಗೆ ಕಾಣಿಸಿಕೊಳ್ಳುವುದು ಸಾಧ್ಯವಿಲ್ಲ’ ಎಂಬ ವಿವಾದದ ಬಿರುಗಾಳಿಯನ್ನೇ ಎಬ್ಬಿಸಿತು. ಈ ಟೀಕೆಯನ್ನು ಒಂದು ಸವಾಲಾಗಿ ಪರಿಗಣಿಸಿದ ಕಲ್ಪನಾ ಚಲನಚಿತ್ರ ಪತ್ರಿಕೆಯೊಂದಕ್ಕೆ ಸುದೀರ್ಘ ಲೇಖನವನ್ನೇ ಬರೆದರು. ಒಂದು ಪ್ರೌಢ ಪ್ರಬಂಧದಂತಿದ್ದ ಆ ಲೇಖನ ಕಲ್ಪನಾ ಅವರ ಅಧ್ಯಯನಶೀಲತೆ, ವಾದ-ವೈಖರಿ, ದಿಟ್ಟತನ ಮುಂತಾದವು ಟೀಕಾಕಾರರನ್ನು ಮೌನವಾಗಿಸಿತ್ತು. ಅಂದಿನ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಆಸಕ್ತಿಯಿಂದ ಚಿತ್ರವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಖ್ಯಾತ ಹಿಂದಿ ನಿರ್ದೇಶಕ, ನಿರ್ಮಾಪಕ ವಿ.ಶಾಂತಾರಾಂ, ’ನಾನು ನೋಡಿದ ಅತ್ಯುತ್ತಮ ಭಾರತೀಯ ಚಿತ್ರಗಳಲ್ಲಿ ಇದೂ ಒಂದು’ ಎಂದು ನುಡಿದಿದ್ದರು.

ವೇಶ್ಯೆಯೊಬ್ಬಳ ಮಗಳಾಗಿ ನಟಿಸಿದ ಕಲ್ಪನಾರ ’ಮುಕ್ತಿ’ ಚಿತ್ರವೂ ಅಪಾರ ಮನ್ನಣೆ ಪಡೆದುಕೊಂಡಿತು. ಲಂಡನ್ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಚಿತ್ರದ ಬಗ್ಗೆ ಅಲ್ಲಿನ ಪತ್ರಿಕೆಗಳು ಹೃದಯಸ್ಪರ್ಶಿ ವಿಮರ್ಶೆ ಬರೆದಿದ್ದವು. ಅಮೆರಿಕಾದಲ್ಲಿ ವಿದ್ಯಾರ್ಥಿಗಳಿಗೆಂದೇ ವಿಶೇಷವಾಗಿ ಪ್ರದರ್ಶಿಸಿದ 23 ಭಾರತೀಯ ಚಿತ್ರಗಳಲ್ಲಿ ಈ ಚಿತ್ರವೂ ಇತ್ತು ಎನ್ನುವುದು ಮತ್ತೊಂದು ಹೆಗ್ಗಳಿಕೆ. ಎನ್.ಲಕ್ಷ್ಮೀನಾರಾಯಣ ಅವರಂತಹ ಉತ್ಕೃಷ್ಟ ನಿರ್ದೇಶಕರ ಮನಸ್ಸಿನಲ್ಲಿ ನಾಯಕಿ ಪಾತ್ರವೆಂದರೆ ಅದು ಕಲ್ಪನಾ ಎನ್ನುವಷ್ಟರ ಮಟ್ಟಿಗೆ ಪ್ರಭಾವ ಬೀರಿದ ನಟಿಯಾಗಿದ್ದರು ಆಕೆ. ಲಕ್ಷ್ಮೀನಾರಾಯಣ ಅವರು ನಿರ್ದೇಶಿಸಿದ ಆರು ಚಿತ್ರಗಳಲ್ಲಿ ಮೂರು ಚಿತ್ರಗಳಲ್ಲಷ್ಟೇ ನಾಯಕಿ ಪಾತ್ರಗಳಿದ್ದುದು. ಈ ಮೂರೂ ಚಿತ್ರಗಳಿಗೆ ಕಲ್ಪನಾ ನಾಯಕಿಯಾಗಿದ್ದರು!

“ನಾ ಬಂದೆ, ನಾ ನೋಡ್ದೆ, ನಾ ಗೆದ್ದೆ…’ ಎನ್ನುತ್ತಲೇ ಪ್ರೇಕ್ಷಕರನ್ನು ದಟ್ಟವಾಗಿ ಸೆರೆ ಹಿಡಿದ ಚಿತ್ರ ’ಶರಪಂಜರ’. ಈ ಚಿತ್ರದ ಮೊದಲ ಪ್ರತಿ ಮದರಾಸಿನಲ್ಲಿ ಪ್ರದರ್ಶಿತವಾದಾಗ ಅನೇಕ ಹಿಂದಿ, ತಮಿಳು, ತೆಲುಗು ಕಲಾವಿದರು ಹಾಗೂ ತಂತ್ರಜ್ಞರಿಂದ ಚಿತ್ರಮಂದಿರ ಭರ್ತಿಯಾಗಿತ್ತು. ಚಿತ್ರ ವೀಕ್ಷಿಸಿದ ಹಿಂದಿ ತಾರೆ ಶರ್ಮಿಳಾ ಟ್ಯಾಗೋರ್, ’ಕಲ್ಪನಾರ ಪಾತ್ರವನ್ನು ಅಷ್ಟೇ ಚೆನ್ನಾಗಿ ಮಾಡಲು ನನ್ನಿಂದ ಆದೀತೋ, ಇಲ್ಲವೋ?’ ಎಂದು ಉದ್ಘರಿಸಿದ್ದರು. ನೇರ, ನಿಷ್ಠುರ ವ್ಯಕ್ತಿತ್ವದ ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ.ಶಿವರಾಮ ಕಾರಂತರು ಯಾರನ್ನೂ ಸುಮ್ಮನೆ ಹೊಗಳುವವರಲ್ಲ. ಅಂತಹ ಕಾರಂತರು, ’ಕೋಟಿ ಚೆನ್ನಯ’ ತುಳು ಚಿತ್ರದಲ್ಲಿನ ಕಲ್ಪನಾರ ಪಾತ್ರವನ್ನು ಮೆಚ್ಚಿಕೊಂಡು ಕಲ್ಪನಾರಿಗೊಂದು ಸುದೀರ್ಘ ಪತ್ರ ಬರೆದಿದ್ದರು. ಚಿತ್ರವೊಂದನ್ನು ನಿರ್ದೇಶಿಸುತ್ತಿರುವುದಾಗಿಯೂ, ತಾವು ಅದರಲ್ಲಿ ಮುಖ್ಯ ಪಾತ್ರ ವಹಿಸಲು ಸಾಧ್ಯವೇ?’ ಎಂದು ಪತ್ರದಲ್ಲಿ ಬರೆದಿದ್ದರಂತೆ. ಕಾರಂತರ ಕರೆಗೆ ಮನ್ನಣೆ ನೀಡಿದ ಕಲ್ಪನಾ, ಅವರು ನಿರ್ದೇಶಿಸಿದ ಏಕೈಕ ವಾಕ್ಚಿತ್ರ ’ಮಲಯ ಮಕ್ಕಳು’ಗೆ ನಾಯಕಿಯಾದರು.

ಹೀಗೆ, ನಾಡಿನ ಹಾಗೂ ದೇಶ-ವಿದೇಶಗಳಲ್ಲಿಯೂ ತಮ್ಮ ಪಾತ್ರಗಳಿಗೆ ಮನ್ನಣೆ ಪಡೆದ ನಟಿ ಬದುಕಿಗೆ ವಿದಾಯ ಹೇಳಿದಾಗ ಅವರಿಗೆ ಮೂವತ್ತಾರು ವರ್ಷವಷ್ಟೆ. 1963ರಲ್ಲಿ ಚಿತ್ರಜಗತ್ತನ್ನು ಪ್ರವೇಶಿಸಿ 1978ರವರೆಗೆ ಹದಿನೈದು ವರ್ಷಗಳಲ್ಲಿ 51 ನಿರ್ದೇಶಕರ 78 ಚಿತ್ರಗಳಲ್ಲಿ ನಟಿಸಿದರು. ಈ ಪಟ್ಟಿಯಲ್ಲಿ ತಮಿಳು, ತೆಲುಗು, ಮಲಯಾಳಂ, ತುಳು ಚಿತ್ರಗಳೂ ಸೇರಿವೆ. ಪಂಚಭಾಷೆಗಳಲ್ಲಿ ಅಭಿನಯಿಸಿದ ನಟಿ ಬೆಳ್ಳಿತೆರೆಯ ಧ್ರುವತಾರೆಯಾಗಿ ಮಿಂಚಿದರು.

***


ಇದನ್ನೂ ಓದಿ: ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ‘ಅಮ್ಮ’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...