Homeಮುಖಪುಟಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ಹಣ್ಣೆಲೆ ಚಿಗುರಿದಾಗ, ಮುಕ್ತಿ, ಶರಪಂಜರ, ಮಿನುಗುತಾರೆ ಚಿತ್ರಗಳ ಮೂಲಕ ಗಮನ ಸೆಳೆದ ನಟಿ ಕಲ್ಪನಾರವರು ಕಣ್ಮರೆಯಾಗಿ ಇಂದಿಗೆ 41 ವರ್ಷ. ಆ ನೆನಪಿನಲ್ಲಿ ಅವರ ಕುರಿತು ಒಂದಿಷ್ಟು...

- Advertisement -
- Advertisement -

ಅಪರೂಪದ ಪಾತ್ರಗಳ ಮೂಲಕ ಕನ್ನಡ ನಾಡಿನಾಚೆಗೂ ತಮ್ಮ ಛಾಪು ಮೂಡಿಸಿದ ಮೇರು ತಾರೆ ಕಲ್ಪನಾ. ಅವರು ನಮ್ಮನ್ನಗಲಿ ಈ ಹೊತ್ತಿಗೆ (ಮೇ 12) ನಲವತ್ತೊಂದು ವರ್ಷ.

***

“ನನ್ನ ಇದುವರೆಗಿನ ಈ ಚಿತ್ರರಂಗದ ಅನುಭವವನ್ನು ಯಾವುದಾದರೊಂದು ಶಿಲ್ಪದಲ್ಲಿ ಕಡೆಯಬೇಕೆಂಬ ಮಹದಾಸೆ ಇತ್ತು. ಆ ಯೋಗ್ಯತೆಯನ್ನು ಕಲ್ಪನಾಳಲ್ಲಿ ಗುರುತಿಸಿದೆ. ಆಕೆಗೆ ನನ್ನ ಶಕ್ತಿಯನ್ನು ಧಾರೆ ಎರೆದೆ. ಅವಳು ಅದನ್ನು ಪ್ರೀತಿ, ಭಕ್ತಿಯಿಂದ ಸ್ವೀಕರಿಸಿ ನನ್ನ ಕಲ್ಪನೆಯ ಶಿಲ್ಪವಾಗಿದ್ದಾಳೆ. ಅಲ್ಲದೆ ನನ್ನ ಬಗ್ಗೆ ಅತ್ಯಂತ ಕೃತಜ್ಞತಾ ಭಾವ ಇರಿಸಿದ್ದಾಳೆ’ ಎಂದು ಕಲ್ಪನಾ ಕುರಿತಾಗಿ ಹೇಳಿದ್ದರು ನಿರ್ದೇಶಕ ಪುಟ್ಟಣ್ಣ ಕಣಗಾಲ್. ಕನ್ನಡ ಚಿತ್ರರಂಗ ಕಂಡ ಪ್ರಮುಖ ನಾಯಕನಟಿ ಕಲ್ಪನಾ ಕಣ್ಮರೆಯಾಗಿ (1979, ಮೇ 12) ಇಂದಿಗೆ 41 ವರ್ಷಗಳು ಸಂದವು.

‘ಸಾಕುಮಗಳು’ (1963) ಚಿತ್ರದೊಂದಿಗೆ ಬೆಳ್ಳಿತೆರೆ ಪ್ರವೇಶಿಸಿದ ಕಲ್ಪನಾ ಸುಮಾರು ಒಂದು ದಶಕಗಳ ಕಾಲ ಕನ್ನಡ ಚಿತ್ರಜಗತ್ತಿನಲ್ಲಿ ರಾರಾಜಿಸಿದರು. ಏಕಮೇವಾದ್ವಿತೀಯ ನಟಿ ಎನಿಸಿಕೊಂಡ ನಟಿ ’ಮಿನುಗುತಾರೆ’ಯಾಗಿದ್ದು ದುರಂತ ಪಾತ್ರಗಳ ಮೂಲಕವೇ. ನಿರ್ದೇಶಕ ಎಂ.ಆರ್.ವಿಠ್ಠಲ್ ತಮ್ಮ ’ಹಣ್ಣೆಲೆ ಚಿಗುರಿದಾಗ’ (1968) ಚಿತ್ರದ ’ಮಾಲತಿ’ ಪಾತ್ರಕ್ಕೆ ಕಲ್ಪನಾರನ್ನು ಆಯ್ಕೆ ಮಾಡಿಕೊಂಡಿದ್ದರು. ಕಲ್ಪನಾರ ಪ್ರತಿಭೆಯ ಬಗ್ಗೆ ಅರಿವಿದ್ದ ಅವರು ವಸ್ತ್ರಾಲಂಕಾರ, ವರ್ಣಾಲಂಕಾರದ ಬಗ್ಗೆ ಆಕೆಗೆ ಸಂಪೂರ್ಣ ಸ್ವಾತಂತ್ರ ನೀಡಿದ್ದರು. ಚಿತ್ರ ಯಶಸ್ವಿಯಾಗಿ ಕಲ್ಪನಾರ ಪಾತ್ರನಿರ್ವಹಣೆ ಪ್ರಶಂಸೆಗೆ ಪ್ರಾಪ್ತವಾಯಿತು.

ಚಿನ್ನದ ಗೊಂಬೆ ಚಿತ್ರದಲ್ಲಿ ಬಿ.ಜಯಾ, ಕಲ್ಪನ (ಫೋಟೋ: ಪ್ರಗತಿ ಅಶ್ವತ್ಥ ನಾರಾಯಣ)

ಆದರೆ, ’ಸಂಪ್ರದಾಯಸ್ಥರ ಮನೆತದಲ್ಲಿನ ತರುಣ ವಿಧವೆ ಹಾಗೆ ಕಾಣಿಸಿಕೊಳ್ಳುವುದು ಸಾಧ್ಯವಿಲ್ಲ’ ಎಂಬ ವಿವಾದದ ಬಿರುಗಾಳಿಯನ್ನೇ ಎಬ್ಬಿಸಿತು. ಈ ಟೀಕೆಯನ್ನು ಒಂದು ಸವಾಲಾಗಿ ಪರಿಗಣಿಸಿದ ಕಲ್ಪನಾ ಚಲನಚಿತ್ರ ಪತ್ರಿಕೆಯೊಂದಕ್ಕೆ ಸುದೀರ್ಘ ಲೇಖನವನ್ನೇ ಬರೆದರು. ಒಂದು ಪ್ರೌಢ ಪ್ರಬಂಧದಂತಿದ್ದ ಆ ಲೇಖನ ಕಲ್ಪನಾ ಅವರ ಅಧ್ಯಯನಶೀಲತೆ, ವಾದ-ವೈಖರಿ, ದಿಟ್ಟತನ ಮುಂತಾದವು ಟೀಕಾಕಾರರನ್ನು ಮೌನವಾಗಿಸಿತ್ತು. ಅಂದಿನ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಆಸಕ್ತಿಯಿಂದ ಚಿತ್ರವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಖ್ಯಾತ ಹಿಂದಿ ನಿರ್ದೇಶಕ, ನಿರ್ಮಾಪಕ ವಿ.ಶಾಂತಾರಾಂ, ’ನಾನು ನೋಡಿದ ಅತ್ಯುತ್ತಮ ಭಾರತೀಯ ಚಿತ್ರಗಳಲ್ಲಿ ಇದೂ ಒಂದು’ ಎಂದು ನುಡಿದಿದ್ದರು.

ವೇಶ್ಯೆಯೊಬ್ಬಳ ಮಗಳಾಗಿ ನಟಿಸಿದ ಕಲ್ಪನಾರ ’ಮುಕ್ತಿ’ ಚಿತ್ರವೂ ಅಪಾರ ಮನ್ನಣೆ ಪಡೆದುಕೊಂಡಿತು. ಲಂಡನ್ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಚಿತ್ರದ ಬಗ್ಗೆ ಅಲ್ಲಿನ ಪತ್ರಿಕೆಗಳು ಹೃದಯಸ್ಪರ್ಶಿ ವಿಮರ್ಶೆ ಬರೆದಿದ್ದವು. ಅಮೆರಿಕಾದಲ್ಲಿ ವಿದ್ಯಾರ್ಥಿಗಳಿಗೆಂದೇ ವಿಶೇಷವಾಗಿ ಪ್ರದರ್ಶಿಸಿದ 23 ಭಾರತೀಯ ಚಿತ್ರಗಳಲ್ಲಿ ಈ ಚಿತ್ರವೂ ಇತ್ತು ಎನ್ನುವುದು ಮತ್ತೊಂದು ಹೆಗ್ಗಳಿಕೆ. ಎನ್.ಲಕ್ಷ್ಮೀನಾರಾಯಣ ಅವರಂತಹ ಉತ್ಕೃಷ್ಟ ನಿರ್ದೇಶಕರ ಮನಸ್ಸಿನಲ್ಲಿ ನಾಯಕಿ ಪಾತ್ರವೆಂದರೆ ಅದು ಕಲ್ಪನಾ ಎನ್ನುವಷ್ಟರ ಮಟ್ಟಿಗೆ ಪ್ರಭಾವ ಬೀರಿದ ನಟಿಯಾಗಿದ್ದರು ಆಕೆ. ಲಕ್ಷ್ಮೀನಾರಾಯಣ ಅವರು ನಿರ್ದೇಶಿಸಿದ ಆರು ಚಿತ್ರಗಳಲ್ಲಿ ಮೂರು ಚಿತ್ರಗಳಲ್ಲಷ್ಟೇ ನಾಯಕಿ ಪಾತ್ರಗಳಿದ್ದುದು. ಈ ಮೂರೂ ಚಿತ್ರಗಳಿಗೆ ಕಲ್ಪನಾ ನಾಯಕಿಯಾಗಿದ್ದರು!

“ನಾ ಬಂದೆ, ನಾ ನೋಡ್ದೆ, ನಾ ಗೆದ್ದೆ…’ ಎನ್ನುತ್ತಲೇ ಪ್ರೇಕ್ಷಕರನ್ನು ದಟ್ಟವಾಗಿ ಸೆರೆ ಹಿಡಿದ ಚಿತ್ರ ’ಶರಪಂಜರ’. ಈ ಚಿತ್ರದ ಮೊದಲ ಪ್ರತಿ ಮದರಾಸಿನಲ್ಲಿ ಪ್ರದರ್ಶಿತವಾದಾಗ ಅನೇಕ ಹಿಂದಿ, ತಮಿಳು, ತೆಲುಗು ಕಲಾವಿದರು ಹಾಗೂ ತಂತ್ರಜ್ಞರಿಂದ ಚಿತ್ರಮಂದಿರ ಭರ್ತಿಯಾಗಿತ್ತು. ಚಿತ್ರ ವೀಕ್ಷಿಸಿದ ಹಿಂದಿ ತಾರೆ ಶರ್ಮಿಳಾ ಟ್ಯಾಗೋರ್, ’ಕಲ್ಪನಾರ ಪಾತ್ರವನ್ನು ಅಷ್ಟೇ ಚೆನ್ನಾಗಿ ಮಾಡಲು ನನ್ನಿಂದ ಆದೀತೋ, ಇಲ್ಲವೋ?’ ಎಂದು ಉದ್ಘರಿಸಿದ್ದರು. ನೇರ, ನಿಷ್ಠುರ ವ್ಯಕ್ತಿತ್ವದ ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ.ಶಿವರಾಮ ಕಾರಂತರು ಯಾರನ್ನೂ ಸುಮ್ಮನೆ ಹೊಗಳುವವರಲ್ಲ. ಅಂತಹ ಕಾರಂತರು, ’ಕೋಟಿ ಚೆನ್ನಯ’ ತುಳು ಚಿತ್ರದಲ್ಲಿನ ಕಲ್ಪನಾರ ಪಾತ್ರವನ್ನು ಮೆಚ್ಚಿಕೊಂಡು ಕಲ್ಪನಾರಿಗೊಂದು ಸುದೀರ್ಘ ಪತ್ರ ಬರೆದಿದ್ದರು. ಚಿತ್ರವೊಂದನ್ನು ನಿರ್ದೇಶಿಸುತ್ತಿರುವುದಾಗಿಯೂ, ತಾವು ಅದರಲ್ಲಿ ಮುಖ್ಯ ಪಾತ್ರ ವಹಿಸಲು ಸಾಧ್ಯವೇ?’ ಎಂದು ಪತ್ರದಲ್ಲಿ ಬರೆದಿದ್ದರಂತೆ. ಕಾರಂತರ ಕರೆಗೆ ಮನ್ನಣೆ ನೀಡಿದ ಕಲ್ಪನಾ, ಅವರು ನಿರ್ದೇಶಿಸಿದ ಏಕೈಕ ವಾಕ್ಚಿತ್ರ ’ಮಲಯ ಮಕ್ಕಳು’ಗೆ ನಾಯಕಿಯಾದರು.

ಹೀಗೆ, ನಾಡಿನ ಹಾಗೂ ದೇಶ-ವಿದೇಶಗಳಲ್ಲಿಯೂ ತಮ್ಮ ಪಾತ್ರಗಳಿಗೆ ಮನ್ನಣೆ ಪಡೆದ ನಟಿ ಬದುಕಿಗೆ ವಿದಾಯ ಹೇಳಿದಾಗ ಅವರಿಗೆ ಮೂವತ್ತಾರು ವರ್ಷವಷ್ಟೆ. 1963ರಲ್ಲಿ ಚಿತ್ರಜಗತ್ತನ್ನು ಪ್ರವೇಶಿಸಿ 1978ರವರೆಗೆ ಹದಿನೈದು ವರ್ಷಗಳಲ್ಲಿ 51 ನಿರ್ದೇಶಕರ 78 ಚಿತ್ರಗಳಲ್ಲಿ ನಟಿಸಿದರು. ಈ ಪಟ್ಟಿಯಲ್ಲಿ ತಮಿಳು, ತೆಲುಗು, ಮಲಯಾಳಂ, ತುಳು ಚಿತ್ರಗಳೂ ಸೇರಿವೆ. ಪಂಚಭಾಷೆಗಳಲ್ಲಿ ಅಭಿನಯಿಸಿದ ನಟಿ ಬೆಳ್ಳಿತೆರೆಯ ಧ್ರುವತಾರೆಯಾಗಿ ಮಿಂಚಿದರು.

***


ಇದನ್ನೂ ಓದಿ: ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ‘ಅಮ್ಮ’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...