Homeಮುಖಪುಟಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ಮರೆಯಲಾಗದ ಮಿನುಗುತಾರೆ ಕಲ್ಪನಾ ನಮ್ಮನಗಲಿದ ದಿನವಿಂದು

ಹಣ್ಣೆಲೆ ಚಿಗುರಿದಾಗ, ಮುಕ್ತಿ, ಶರಪಂಜರ, ಮಿನುಗುತಾರೆ ಚಿತ್ರಗಳ ಮೂಲಕ ಗಮನ ಸೆಳೆದ ನಟಿ ಕಲ್ಪನಾರವರು ಕಣ್ಮರೆಯಾಗಿ ಇಂದಿಗೆ 41 ವರ್ಷ. ಆ ನೆನಪಿನಲ್ಲಿ ಅವರ ಕುರಿತು ಒಂದಿಷ್ಟು...

- Advertisement -
- Advertisement -

ಅಪರೂಪದ ಪಾತ್ರಗಳ ಮೂಲಕ ಕನ್ನಡ ನಾಡಿನಾಚೆಗೂ ತಮ್ಮ ಛಾಪು ಮೂಡಿಸಿದ ಮೇರು ತಾರೆ ಕಲ್ಪನಾ. ಅವರು ನಮ್ಮನ್ನಗಲಿ ಈ ಹೊತ್ತಿಗೆ (ಮೇ 12) ನಲವತ್ತೊಂದು ವರ್ಷ.

***

“ನನ್ನ ಇದುವರೆಗಿನ ಈ ಚಿತ್ರರಂಗದ ಅನುಭವವನ್ನು ಯಾವುದಾದರೊಂದು ಶಿಲ್ಪದಲ್ಲಿ ಕಡೆಯಬೇಕೆಂಬ ಮಹದಾಸೆ ಇತ್ತು. ಆ ಯೋಗ್ಯತೆಯನ್ನು ಕಲ್ಪನಾಳಲ್ಲಿ ಗುರುತಿಸಿದೆ. ಆಕೆಗೆ ನನ್ನ ಶಕ್ತಿಯನ್ನು ಧಾರೆ ಎರೆದೆ. ಅವಳು ಅದನ್ನು ಪ್ರೀತಿ, ಭಕ್ತಿಯಿಂದ ಸ್ವೀಕರಿಸಿ ನನ್ನ ಕಲ್ಪನೆಯ ಶಿಲ್ಪವಾಗಿದ್ದಾಳೆ. ಅಲ್ಲದೆ ನನ್ನ ಬಗ್ಗೆ ಅತ್ಯಂತ ಕೃತಜ್ಞತಾ ಭಾವ ಇರಿಸಿದ್ದಾಳೆ’ ಎಂದು ಕಲ್ಪನಾ ಕುರಿತಾಗಿ ಹೇಳಿದ್ದರು ನಿರ್ದೇಶಕ ಪುಟ್ಟಣ್ಣ ಕಣಗಾಲ್. ಕನ್ನಡ ಚಿತ್ರರಂಗ ಕಂಡ ಪ್ರಮುಖ ನಾಯಕನಟಿ ಕಲ್ಪನಾ ಕಣ್ಮರೆಯಾಗಿ (1979, ಮೇ 12) ಇಂದಿಗೆ 41 ವರ್ಷಗಳು ಸಂದವು.

‘ಸಾಕುಮಗಳು’ (1963) ಚಿತ್ರದೊಂದಿಗೆ ಬೆಳ್ಳಿತೆರೆ ಪ್ರವೇಶಿಸಿದ ಕಲ್ಪನಾ ಸುಮಾರು ಒಂದು ದಶಕಗಳ ಕಾಲ ಕನ್ನಡ ಚಿತ್ರಜಗತ್ತಿನಲ್ಲಿ ರಾರಾಜಿಸಿದರು. ಏಕಮೇವಾದ್ವಿತೀಯ ನಟಿ ಎನಿಸಿಕೊಂಡ ನಟಿ ’ಮಿನುಗುತಾರೆ’ಯಾಗಿದ್ದು ದುರಂತ ಪಾತ್ರಗಳ ಮೂಲಕವೇ. ನಿರ್ದೇಶಕ ಎಂ.ಆರ್.ವಿಠ್ಠಲ್ ತಮ್ಮ ’ಹಣ್ಣೆಲೆ ಚಿಗುರಿದಾಗ’ (1968) ಚಿತ್ರದ ’ಮಾಲತಿ’ ಪಾತ್ರಕ್ಕೆ ಕಲ್ಪನಾರನ್ನು ಆಯ್ಕೆ ಮಾಡಿಕೊಂಡಿದ್ದರು. ಕಲ್ಪನಾರ ಪ್ರತಿಭೆಯ ಬಗ್ಗೆ ಅರಿವಿದ್ದ ಅವರು ವಸ್ತ್ರಾಲಂಕಾರ, ವರ್ಣಾಲಂಕಾರದ ಬಗ್ಗೆ ಆಕೆಗೆ ಸಂಪೂರ್ಣ ಸ್ವಾತಂತ್ರ ನೀಡಿದ್ದರು. ಚಿತ್ರ ಯಶಸ್ವಿಯಾಗಿ ಕಲ್ಪನಾರ ಪಾತ್ರನಿರ್ವಹಣೆ ಪ್ರಶಂಸೆಗೆ ಪ್ರಾಪ್ತವಾಯಿತು.

ಚಿನ್ನದ ಗೊಂಬೆ ಚಿತ್ರದಲ್ಲಿ ಬಿ.ಜಯಾ, ಕಲ್ಪನ (ಫೋಟೋ: ಪ್ರಗತಿ ಅಶ್ವತ್ಥ ನಾರಾಯಣ)

ಆದರೆ, ’ಸಂಪ್ರದಾಯಸ್ಥರ ಮನೆತದಲ್ಲಿನ ತರುಣ ವಿಧವೆ ಹಾಗೆ ಕಾಣಿಸಿಕೊಳ್ಳುವುದು ಸಾಧ್ಯವಿಲ್ಲ’ ಎಂಬ ವಿವಾದದ ಬಿರುಗಾಳಿಯನ್ನೇ ಎಬ್ಬಿಸಿತು. ಈ ಟೀಕೆಯನ್ನು ಒಂದು ಸವಾಲಾಗಿ ಪರಿಗಣಿಸಿದ ಕಲ್ಪನಾ ಚಲನಚಿತ್ರ ಪತ್ರಿಕೆಯೊಂದಕ್ಕೆ ಸುದೀರ್ಘ ಲೇಖನವನ್ನೇ ಬರೆದರು. ಒಂದು ಪ್ರೌಢ ಪ್ರಬಂಧದಂತಿದ್ದ ಆ ಲೇಖನ ಕಲ್ಪನಾ ಅವರ ಅಧ್ಯಯನಶೀಲತೆ, ವಾದ-ವೈಖರಿ, ದಿಟ್ಟತನ ಮುಂತಾದವು ಟೀಕಾಕಾರರನ್ನು ಮೌನವಾಗಿಸಿತ್ತು. ಅಂದಿನ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಆಸಕ್ತಿಯಿಂದ ಚಿತ್ರವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಖ್ಯಾತ ಹಿಂದಿ ನಿರ್ದೇಶಕ, ನಿರ್ಮಾಪಕ ವಿ.ಶಾಂತಾರಾಂ, ’ನಾನು ನೋಡಿದ ಅತ್ಯುತ್ತಮ ಭಾರತೀಯ ಚಿತ್ರಗಳಲ್ಲಿ ಇದೂ ಒಂದು’ ಎಂದು ನುಡಿದಿದ್ದರು.

ವೇಶ್ಯೆಯೊಬ್ಬಳ ಮಗಳಾಗಿ ನಟಿಸಿದ ಕಲ್ಪನಾರ ’ಮುಕ್ತಿ’ ಚಿತ್ರವೂ ಅಪಾರ ಮನ್ನಣೆ ಪಡೆದುಕೊಂಡಿತು. ಲಂಡನ್ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಚಿತ್ರದ ಬಗ್ಗೆ ಅಲ್ಲಿನ ಪತ್ರಿಕೆಗಳು ಹೃದಯಸ್ಪರ್ಶಿ ವಿಮರ್ಶೆ ಬರೆದಿದ್ದವು. ಅಮೆರಿಕಾದಲ್ಲಿ ವಿದ್ಯಾರ್ಥಿಗಳಿಗೆಂದೇ ವಿಶೇಷವಾಗಿ ಪ್ರದರ್ಶಿಸಿದ 23 ಭಾರತೀಯ ಚಿತ್ರಗಳಲ್ಲಿ ಈ ಚಿತ್ರವೂ ಇತ್ತು ಎನ್ನುವುದು ಮತ್ತೊಂದು ಹೆಗ್ಗಳಿಕೆ. ಎನ್.ಲಕ್ಷ್ಮೀನಾರಾಯಣ ಅವರಂತಹ ಉತ್ಕೃಷ್ಟ ನಿರ್ದೇಶಕರ ಮನಸ್ಸಿನಲ್ಲಿ ನಾಯಕಿ ಪಾತ್ರವೆಂದರೆ ಅದು ಕಲ್ಪನಾ ಎನ್ನುವಷ್ಟರ ಮಟ್ಟಿಗೆ ಪ್ರಭಾವ ಬೀರಿದ ನಟಿಯಾಗಿದ್ದರು ಆಕೆ. ಲಕ್ಷ್ಮೀನಾರಾಯಣ ಅವರು ನಿರ್ದೇಶಿಸಿದ ಆರು ಚಿತ್ರಗಳಲ್ಲಿ ಮೂರು ಚಿತ್ರಗಳಲ್ಲಷ್ಟೇ ನಾಯಕಿ ಪಾತ್ರಗಳಿದ್ದುದು. ಈ ಮೂರೂ ಚಿತ್ರಗಳಿಗೆ ಕಲ್ಪನಾ ನಾಯಕಿಯಾಗಿದ್ದರು!

“ನಾ ಬಂದೆ, ನಾ ನೋಡ್ದೆ, ನಾ ಗೆದ್ದೆ…’ ಎನ್ನುತ್ತಲೇ ಪ್ರೇಕ್ಷಕರನ್ನು ದಟ್ಟವಾಗಿ ಸೆರೆ ಹಿಡಿದ ಚಿತ್ರ ’ಶರಪಂಜರ’. ಈ ಚಿತ್ರದ ಮೊದಲ ಪ್ರತಿ ಮದರಾಸಿನಲ್ಲಿ ಪ್ರದರ್ಶಿತವಾದಾಗ ಅನೇಕ ಹಿಂದಿ, ತಮಿಳು, ತೆಲುಗು ಕಲಾವಿದರು ಹಾಗೂ ತಂತ್ರಜ್ಞರಿಂದ ಚಿತ್ರಮಂದಿರ ಭರ್ತಿಯಾಗಿತ್ತು. ಚಿತ್ರ ವೀಕ್ಷಿಸಿದ ಹಿಂದಿ ತಾರೆ ಶರ್ಮಿಳಾ ಟ್ಯಾಗೋರ್, ’ಕಲ್ಪನಾರ ಪಾತ್ರವನ್ನು ಅಷ್ಟೇ ಚೆನ್ನಾಗಿ ಮಾಡಲು ನನ್ನಿಂದ ಆದೀತೋ, ಇಲ್ಲವೋ?’ ಎಂದು ಉದ್ಘರಿಸಿದ್ದರು. ನೇರ, ನಿಷ್ಠುರ ವ್ಯಕ್ತಿತ್ವದ ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ.ಶಿವರಾಮ ಕಾರಂತರು ಯಾರನ್ನೂ ಸುಮ್ಮನೆ ಹೊಗಳುವವರಲ್ಲ. ಅಂತಹ ಕಾರಂತರು, ’ಕೋಟಿ ಚೆನ್ನಯ’ ತುಳು ಚಿತ್ರದಲ್ಲಿನ ಕಲ್ಪನಾರ ಪಾತ್ರವನ್ನು ಮೆಚ್ಚಿಕೊಂಡು ಕಲ್ಪನಾರಿಗೊಂದು ಸುದೀರ್ಘ ಪತ್ರ ಬರೆದಿದ್ದರು. ಚಿತ್ರವೊಂದನ್ನು ನಿರ್ದೇಶಿಸುತ್ತಿರುವುದಾಗಿಯೂ, ತಾವು ಅದರಲ್ಲಿ ಮುಖ್ಯ ಪಾತ್ರ ವಹಿಸಲು ಸಾಧ್ಯವೇ?’ ಎಂದು ಪತ್ರದಲ್ಲಿ ಬರೆದಿದ್ದರಂತೆ. ಕಾರಂತರ ಕರೆಗೆ ಮನ್ನಣೆ ನೀಡಿದ ಕಲ್ಪನಾ, ಅವರು ನಿರ್ದೇಶಿಸಿದ ಏಕೈಕ ವಾಕ್ಚಿತ್ರ ’ಮಲಯ ಮಕ್ಕಳು’ಗೆ ನಾಯಕಿಯಾದರು.

ಹೀಗೆ, ನಾಡಿನ ಹಾಗೂ ದೇಶ-ವಿದೇಶಗಳಲ್ಲಿಯೂ ತಮ್ಮ ಪಾತ್ರಗಳಿಗೆ ಮನ್ನಣೆ ಪಡೆದ ನಟಿ ಬದುಕಿಗೆ ವಿದಾಯ ಹೇಳಿದಾಗ ಅವರಿಗೆ ಮೂವತ್ತಾರು ವರ್ಷವಷ್ಟೆ. 1963ರಲ್ಲಿ ಚಿತ್ರಜಗತ್ತನ್ನು ಪ್ರವೇಶಿಸಿ 1978ರವರೆಗೆ ಹದಿನೈದು ವರ್ಷಗಳಲ್ಲಿ 51 ನಿರ್ದೇಶಕರ 78 ಚಿತ್ರಗಳಲ್ಲಿ ನಟಿಸಿದರು. ಈ ಪಟ್ಟಿಯಲ್ಲಿ ತಮಿಳು, ತೆಲುಗು, ಮಲಯಾಳಂ, ತುಳು ಚಿತ್ರಗಳೂ ಸೇರಿವೆ. ಪಂಚಭಾಷೆಗಳಲ್ಲಿ ಅಭಿನಯಿಸಿದ ನಟಿ ಬೆಳ್ಳಿತೆರೆಯ ಧ್ರುವತಾರೆಯಾಗಿ ಮಿಂಚಿದರು.

***


ಇದನ್ನೂ ಓದಿ: ಸ್ಯಾಂಡಲ್‍ವುಡ್: ಅಬ್ಬರದ ಮಧ್ಯೆ ಕಣ್ಮರೆಯಾಗುತ್ತಿರುವ ‘ಅಮ್ಮ’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...